AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತಿ ಬಳಿಕ ಪಿಂಚಣಿ ಸಿಗಲ್ಲವಾ? ವೃದ್ಧಾಪ್ಯದಲ್ಲಿ ಉತ್ತಮ ಮಾಸಿಕ ಆದಾಯ ಸೃಷ್ಟಿಸಲು ಏನು ಮಾಡಬೇಕು?

Retirement Plan: ಸರ್ಕಾರಿ ಉದ್ಯೋಗಿಗಳಾದರೆ ಪಿಂಚಣಿ ಸಿಗುತ್ತದೆ. ಖಾಸಗಿ ವಲಯದ ಉದ್ಯೋಗಿಗಳಿಗೆ ಈ ಅವಕಾಶ ಇರುವುದಿಲ್ಲ. ಅವರ ನಿವೃತ್ತಿ ಯೋಜನೆಯನ್ನು ಅವರೇ ಕೈಗೊಳ್ಳಬೇಕು. ನೀವು ವೃತ್ತಿಯ ಆರಂಭಿಕ ದಿನಗಳಿಂದಲೇ ನಿವೃತ್ತಿ ಬಗ್ಗೆ ಯೋಜನೆ ಕೈಗೊಳ್ಳಬೇಕು. ಹೆಚ್ಚಿನ ಜನರು ಈ ಆಲೋಚನೆ ಮಾಡಿರುವುದಿಲ್ಲ. ಇನ್ನೂ ಕೆಲವರು ನಿವೃತ್ತಿ ಆಗುವವರೆಗೂ ವೃದ್ಧಾಪ್ಯ ಜೀವನದ ಬಗ್ಗೆ ಯೋಚಿಸಿರುವುದಿಲ್ಲ. ನೀವು ನಿವೃತ್ತಿಯ ದಿನಗಳನ್ನು ಎದುರುನೋಡುತ್ತಿದ್ದರೆ ಮುಂದಿನ ದಾರಿಗಳೇನು?

ನಿವೃತ್ತಿ ಬಳಿಕ ಪಿಂಚಣಿ ಸಿಗಲ್ಲವಾ? ವೃದ್ಧಾಪ್ಯದಲ್ಲಿ ಉತ್ತಮ ಮಾಸಿಕ ಆದಾಯ ಸೃಷ್ಟಿಸಲು ಏನು ಮಾಡಬೇಕು?
ಪಿಂಚಣಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 26, 2023 | 2:11 PM

Share

ನಿಮ್ಮ ಉದ್ಯೋಗದ ಅವಧಿ ಮುಗಿಯುತ್ತಾ ಬರುತ್ತಿದೆಯಾ? ಸರ್ಕಾರಿ ಉದ್ಯೋಗಿಗಳಾದರೆ ಪಿಂಚಣಿ ಸಿಗುತ್ತದೆ. ಹಣದುಬ್ಬರದ ಹೊಡೆತ ತಡೆದುಕೊಳ್ಳಲು ವರ್ಷಕ್ಕೆ ಎರಡು ಬಾರಿ ಡಿಯರ್ನೆಸ್ ರಿಲೀಫ್ (DR- Dearness Relief) ಅನ್ನೂ ನೀಡಲಾಗುತ್ತದೆ. ಹೀಗಾಗಿ, ಸರ್ಕಾರಿ ಉದ್ಯೋಗಿಗಳ ಪಿಂಚಣಿ ಮೊತ್ತ ಹೆಚ್ಚುತ್ತಾ ಹೋಗುತ್ತದೆ. ಆದರೆ, ಖಾಸಗಿ ವಲಯದ ಉದ್ಯೋಗಿಗಳಿಗೆ ಈ ಅವಕಾಶ ಇರುವುದಿಲ್ಲ. ಅವರ ನಿವೃತ್ತಿ ಯೋಜನೆಯನ್ನು ಅವರೇ ಕೈಗೊಳ್ಳಬೇಕು. ನೀವು ವೃತ್ತಿಯ ಆರಂಭಿಕ ದಿನಗಳಿಂದಲೇ ನಿವೃತ್ತಿ ಬಗ್ಗೆ ಯೋಜನೆ ಕೈಗೊಳ್ಳಬೇಕು. ಹೆಚ್ಚಿನ ಜನರು ಈ ಆಲೋಚನೆ ಮಾಡಿರುವುದಿಲ್ಲ. ಇನ್ನೂ ಕೆಲವರು ನಿವೃತ್ತಿ ಆಗುವವರೆಗೂ ವೃದ್ಧಾಪ್ಯ ಜೀವನದ ಬಗ್ಗೆ ಯೋಚಿಸಿರುವುದಿಲ್ಲ. ನೀವು ನಿವೃತ್ತಿಯ ದಿನಗಳನ್ನು ಎದುರುನೋಡುತ್ತಿದ್ದರೆ ಮುಂದಿನ ದಾರಿಗಳೇನು?

ನಿವೃತ್ತಿಯ ಸಮೀಪ ಇದ್ದರೆ ಪಿಂಚಣಿಗಾಗಿ ಹೀಗೆ ಮಾಡಿ…

ಮೊದಲಿಗೆ ನಿಮ್ಮ ಬಳಿ ಎಷ್ಟು ಹೂಡಿಕೆ ಮತ್ತು ಉಳಿತಾಯ ಹಣ ಇದೆ ಎಂಬುದು ಲೆಕ್ಕ ಹಾಕಿ. ಇನ್ಷೂರೆನ್ಸ್ ಪಾಲಿಸಿಗಳಿಂದ ಹಿಡಿದು ಪಿಪಿಎಫ್, ಎಫ್​ಡಿ ಇತ್ಯಾದಿ ಯಾವುದೇ ಹೂಡಿಕೆಯಂತ್ರಗಳಲ್ಲಿ ನಿಮ್ಮ ಹಣದ ಮೊತ್ತ ತಿಳಿಯಿರಿ. ಸ್ಥಿರಾಸ್ತಿ ಇದ್ದು ಅದರ ಮೌಲ್ಯ ಎಷ್ಟು, ಅದರಿಂದ ಬರುವ ಬಾಡಿಗೆ ಆದಾಯ ಎಷ್ಟು ಇತ್ಯಾದಿ ಎಲ್ಲವನ್ನೂ ಎಣಿಸಿ.

ಇದನ್ನೂ ಓದಿ: ಹೊಸ ಮನೆ ಖರೀದಿಸುವ ಮುನ್ನ ಈ ಏಳು ಅಂಶಗಳನ್ನು ಪರಿಗಣಿಸಿ; ಇದು ಜೀವಮಾನದ ಸಾಧನೆ ಎಂಬುದು ನೆನಪಿರಲಿ

ಪಿಪಿಎಫ್, ಠೇವಣಿ ಇತ್ಯಾದಿ ಹೂಡಿಕೆ ಯೋಜನೆಗಳಲ್ಲಿ ನಿಮ್ಮಲ್ಲಿರುವ ಒಟ್ಟು ಹಣ 50 ಲಕ್ಷಕ್ಕೂ ಹೆಚ್ಚಿದ್ದರೆ ನಿವೃತ್ತಿ ಬಳಿಕ ತಿಂಗಳಿಗೆ 20ರಿಂದ 30 ಸಾವಿರ ರೂನಷ್ಟು ಪಿಂಚಣಿ ಸಿಗುವಂತೆ ಮಾಡಬಹುದು. ಆದರೆ, ಯಾವುದಕ್ಕೆ ಹೂಡಿಕೆ ಮಾಡಬೇಕು ಎಂಬುದು ಮುಖ್ಯ. ನಿವೃತ್ತಿ ಸಂದರ್ಭದಲ್ಲಿ ನೇರವಾಗಿ ಷೇರುಗಳ ಮೇಲೆ ಹೂಡಿಕೆ ಮಾಡುವುದು ರಿಸ್ಕಿ ಎನಿಸುತ್ತದೆ. ಅದರ ಬದಲು ಮ್ಯೂಚುವಲ್ ಫಂಡ್ ಎಸ್​ಐಪಿ ಪಡೆಯಬಹುದು.

ಒಂದೇ ರೀತಿಯ ಮ್ಯೂಚುವಲ್ ಫಂಡ್ ಆಯ್ಕೆ ಮಾಡಿಕೊಳ್ಳುವ ಬದಲು ವಿವಿಧ ರೀತಿಯ ಎಂಎಫ್​ಗಳಲ್ಲಿ ಹೂಡಿಕೆ ಮಾಡಿ. ಸಿಸ್ಟಮ್ಯಾಟಿಕ್ ವಿತ್​ಡ್ರಾಯಲ್ ಪ್ಲಾನ್ (ಎಸ್​ಡಬ್ಲ್ಯುಪಿ) ಅನ್ನು ಆರಂಭಿಸಿ. ಇದರಿಂದ, ಅಧಿಕ ರಿಸ್ಕ್ ಇಲ್ಲದೇ ತಕ್ಕಮಟ್ಟಿಗೆ ಮಾಸಿಕ ವರಮಾನ ಸಿಗುತ್ತದೆ.

ಇದನ್ನೂ ಓದಿ: ಇನ್ಷೂರೆನ್ಸ್ ಪಾಲಿಸಿ ಕಟ್ಟದೇ ಲ್ಯಾಪ್ಸ್ ಆಗಿದೆಯಾ? ಮರುಚಾಲನೆಗೆ ಡಂಡಕಟ್ಟಬೇಕಾ? ಈ ವಿವರ ಓದಿ

ಎಲ್​ಐಸಿಯ ರಿಟೈರ್ಮೆಂಟ್ ಪ್ಲಾನ್​ಗಳಿವೆ. ಆದರೆ, ಇದರಿಂದ ಹೆಚ್ಚಿನ ರಿಟರ್ನ್ ಸಿಗುವುದಿಲ್ಲ. ವಿಸ್ತೃತವಾದ ಮ್ಯೂಚುವಲ್ ಫಂಡ್​ಗಳಲ್ಲಿ ಹೂಡಿಕೆ ಮಾಡಿದರೆ ವರ್ಷಕ್ಕೆ ಶೇ. 12ರಷ್ಟು ರಿಟರ್ನ್ ನಿರೀಕ್ಷಿಸಬಹುದು. ನಿವೃತ್ತಿ ಬಳಿಕ ಈ ಹೂಡಿಕೆಗಳಿಂದ ನಿಮಗೆ ಸಿಗುವ ಮಾಸಿಕ ಆದಾಯ ಸಾಕಾಗುತ್ತಿಲ್ಲವೆಂದರೆ, ಬೇರೆ ದಾರಿ ಅವಲೋಕಿಸಿ. ನಿಮ್ಮಲ್ಲಿ ಸ್ಥಿರಾಸ್ತಿ ಇದ್ದು ಅದರಿಂದ ಮಾಸಿಕ ಆದಾಯ ಬರುತ್ತಿಲ್ಲವಾದರೆ, ಅದನ್ನು ಮಾರಿ ಆ ಹಣವನ್ನು ಹೂಡಿಕೆಗೆ ಬಳಸಬಹುದು. ಇವೆಲ್ಲವನ್ನೂ ನಿರ್ಧರಿಸುವ ಮುನ್ನ ನೀವು ಸೂಕ್ತ ಹಣಕಾಸು ತಜ್ಞರೊಬ್ಬರನ್ನು ಸಂಪರ್ಕಿಸುವುದು ಉತ್ತಮ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ