AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mutual Funds: ಫ್ಲೆಕ್ಸಿಕ್ಯಾಪ್, ಮಲ್ಟಿಕ್ಯಾಪ್, ಮಲ್ಟಿ ಅಸೆಟ್ ಫಂಡ್​ಗಳ ನಡುವೆ ಏನು ವ್ಯತ್ಯಾಸ?

Difference between Multi Cap Funds, Flexi Cap Funds and Multi Asset Funds: ಮ್ಯೂಚುವಲ್ ಫಂಡ್​ಗಳಲ್ಲಿ ವೈವಿಧ್ಯತೆ ಇದೆ. ವಿವಿಧ ರೀತಿಯ ಫಂಡ್​ಗಳಲ್ಲಿ ಮಲ್ಟಿ ಕ್ಯಾಪ್, ಫ್ಲೆಕ್ಸಿ ಕ್ಯಾಪ್, ಮಲ್ಟಿ ಅಸೆಟ್ ಫಂಡ್​ಗಳೂ ಇವೆ. ಮಲ್ಟಿಕ್ಯಾಪ್ ಫಂಡ್​ಗಳು ಎಲ್ಲಾ ರೀತಿಯ ಸ್ಟಾಕುಗಳಿಗೆ ಸಮಾನ ಆದ್ಯತೆ ಕೊಡುತ್ತವೆ. ಫ್ಲೆಕ್ಸಿ ಕ್ಯಾಪ್ ಫಂಡ್​ಗಳು ಸೂಕ್ತವೆನಿಸುವ ಸ್ಟಾಕ್​ಗಳನ್ನು ಆಯ್ದುಕೊಳ್ಳುವ ಸ್ವಾತಂತ್ರ್ಯ ಹೊಂದಿವೆ. ಮಲ್ಟಿ ಅಸೆಟ್ ಫಂಡ್​ಗಳು ಬೇರೆ ಬೇರೆ ರೀತಿಯ ಸ್ವತ್ತುಗಳ ಮೇಲೆ ಹೂಡಿಕೆ ಮಾಡಲು ಸ್ವತಂತ್ರವಿರುತ್ತವೆ.

Mutual Funds: ಫ್ಲೆಕ್ಸಿಕ್ಯಾಪ್, ಮಲ್ಟಿಕ್ಯಾಪ್, ಮಲ್ಟಿ ಅಸೆಟ್ ಫಂಡ್​ಗಳ ನಡುವೆ ಏನು ವ್ಯತ್ಯಾಸ?
ಮ್ಯೂಚುವಲ್ ಫಂಡ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 20, 2026 | 5:19 PM

Share

ನವದೆಹಲಿ, ಜನವರಿ 20: ಷೇರು ಮಾರುಕಟ್ಟೆ (Stock Market) ಕಳೆದ ಒಂದು ವರ್ಷದಿಂದ ಸಿಕ್ಕಾಪಟ್ಟೆ ಅಲುಗಾಡುತ್ತಿದೆ. ಜಾಗತಿಕ ವಿದ್ಯಮಾನಗಳು ಬಜಾರನ್ನು ಕಂಗೆಡಿಸಿವೆ. ಇದೇ ವೇಳೆ ಗೊಂದಲಕ್ಕೊಳಗಾಗಿರುವ ಹೂಡಿಕೆದಾರರು, ಸುರಕ್ಷತೆಗೆ ಬೇರೆ ಮಾರ್ಗೋಪಾಯ ಕಂಡುಕೊಂಡಿದ್ದಾರೆ. ಮಲ್ಟಿಕ್ಯಾಪ್ ಫಂಡ್​ಗಳು, ಫ್ಲೆಕ್ಸಿಕ್ಯಾಪ್ ಫಂಡ್​ಗಳು ಹಾಗೂ ಮಲ್ಟಿ ಅಸೆಟ್ ಫಂಡ್​ಗಳ ಜನಪ್ರಿಯತೆ ಹೆಚ್ಚುತ್ತಿದೆ. ಈ ಮೂರೂ ಫಂಡ್​ಗಳು ಮ್ಯೂಚುವಲ್ ಫಂಡ್​ನ (Mutual Funds) ಪ್ರಾಕಾರಗಳೇ ಆಗಿವೆ. ಆದರೆ, ಯಾವುದರಲ್ಲಿ ಹೂಡಿಕೆ ಮಾಡಲಾಗುತ್ತದೆ ಎಂಬುದು ವ್ಯತ್ಯಾಸ ಇರುತ್ತದೆ.

ಮಲ್ಟಿಕ್ಯಾಪ್ ಫಂಡ್ ಎಂದರೇನು?

ಮಲ್ಟಿ ಕ್ಯಾಪ್ ಫಂಡ್ ಎಂದರೆ ಲಾರ್ಜ್ ಕ್ಯಾಪ್, ಮಿಡ್ ಕ್ಯಾಪ್ ಮತ್ತು ಸ್ಮಾಲ್ ಕ್ಯಾಪ್ ಈ ಮೂರು ವಿಭಾಗಗಳಲ್ಲಿ ಕನಿಷ್ಠ ಶೇ. 25ರಷ್ಟು ಹೂಡಿಕೆ ಮಾಡಬೇಕು. ಅಂದರೆ ಮಲ್ಟಿಕ್ಯಾಪ್ ಮ್ಯೂಚುವಲ್ ಫಂಡ್​ಗಳು ಈಕ್ವಿಟಿಯಲ್ಲಿ ಕನಿಷ್ಠ 75ರಷ್ಟಾದರೂ ಹೂಡಿಕೆ ಮಾಡಬೇಕು.

ಇಲ್ಲಿ ಲಾರ್ಜ್ ಕ್ಯಾಪ್ ಎಂದರೆ ಷೇರು ಮಾರುಕಟ್ಟೆಯಲ್ಲಿ ಲಿಸ್ಟ್ ಆಗಿರುವ ಷೇರುಗಳಲ್ಲಿ ಟಾಪ್-100 ಷೇರುಗಳನ್ನು ಲಾರ್ಜ್ ಕ್ಯಾಪ್ ಎನ್ನಲಾಗುತ್ತದೆ. 101ರಿಂದ 250ನೇ ಸ್ಥಾನದಲ್ಲಿರುವ ಷೇರುಗಳನ್ನು ಮಿಡ್​ಕ್ಯಾಪ್ ಎನ್ನಲಾಗುತ್ತದೆ. ಅದಕ್ಕಿಂತ ಕೆಳಗಿರುವಂಥವು ಸ್ಮಾಲ್ ಕ್ಯಾಪ್ ಎನಿಸುತ್ತವೆ. ಇಲ್ಲಿ ಮಲ್ಟಿಕ್ಯಾಪ್ ಫಂಡ್​ಗಳು ಲಾರ್ಜ್ ಕ್ಯಾಪ್ ಸ್ಟಾಕ್​ಗಳಲ್ಲಿ ಶೇ. 25ರಷ್ಟಾದರೂ ಹೂಡಿಕೆ ಮಾಡಬೇಕು. ಮಿಡ್​ಕ್ಯಾಪ್ ಹಾಗೂ ಸ್ಮಾಲ್​ಕ್ಯಾಪ್ ಸ್ಟಾಕ್​ಗಳ ಮೇಲೂ ತಲಾ ಶೇ. 25ರಷ್ಟಾದರೂ ಹೂಡಿಕೆ ಮಾಡಬೇಕು.

ಇದನ್ನೂ ಓದಿ: 1 ಲಕ್ಷ ರೂನಿಂದ 2.71 ಕೋಟಿ ರೂ; ಭಾರತದ ಅತ್ಯಂತ ಹಳೆಯ ಫಂಡ್​ನಿಂದ ಭರ್ಜರಿ ಆದಾಯ

ಫ್ಲೆಕ್ಸಿ ಕ್ಯಾಪ್ ಫಂಡ್​ಗಳೆಂದರೆ?

ಇಲ್ಲಿ ಮ್ಯೂಚುವಲ್ ಫಂಡ್​ಗಳು ಲಾರ್ಜ್ ಇರಲಿ, ಮಿಡ್ ಇರಲಿ, ಸ್ಮಾಲ್ ಇರಲಿ ಯಾವುದೇ ಸ್ಟಾಕ್​ನಲ್ಲಿ ಹೂಡಿಕೆ ಮಾಡಲು ಸ್ವತಂತ್ರವಾಗಿರುತ್ತವೆ. ಆದರೆ, ಈಕ್ವಿಟಿಗಳಲ್ಲಿ ಒಟ್ಟಾರೆ ಶೇ. 65ರಷ್ಟಾದರೂ ಹೂಡಿಕೆ ಮಾಡಬೇಕು. ಮಲ್ಟಿಕ್ಯಾಪ್​ಗೆ ಹೋಲಿಸಿದರೆ ಫ್ಲೆಕ್ಸಿ ಕ್ಯಾಪ್ ಫಂಡ್​ಗಳಲ್ಲಿ ಮ್ಯಾನೇಜರ್​ಗಳಿಗೆ ಹೆಚ್ಚು ಸ್ವಾತಂತ್ರ್ಯ ಇರುತ್ತದೆ.

ಮಲ್ಟಿ ಅಸೆಟ್ ಫಂಡ್​ಗಳೆಂದರೆ ಏನು?

ಮಲ್ಟಿ ಅಸೆಟ್ ಫಂಡ್​ಗಳು ಈಕ್ವಿಟಿಯೂ ಸೇರಿದಂತೆ ಬೇರೆ ಬೇರೆ ಅಸೆಟ್ ಕ್ಲಾಸ್​ಗಳಲ್ಲಿ ಹೂಡಿಕೆ ಮಾಡಬಹುದು. ಈಕ್ವಿಟಿ, ಡೆಟ್, ಚಿನ್ನ, REITs (ರಿಯಲ್ ಎಸ್ಟೇಟ್ ಇನ್ವೆಸ್ಟ್​ಮೆಂಟ್ ಟ್ರಸ್ಟ್), InvITs (ಇನ್​ಫ್ರಾಸ್ಟ್ರಕ್ಚರ್ ಇನ್ವೆಸ್ಟ್​ಮೆಂಟ್ ಟ್ರಸ್ಟ್), ಅಂತಾರಾಷ್ಟ್ರೀಯ ಸ್ವತ್ತುಗಳು ಹೀಗೆ ಬೇರೆ ಬೇರೆ ರೀತಿಯ ಸ್ವತ್ತುಗಳ ಮೇಲೆ ಹೂಡಿಕೆ ಮಾಡಬಹುದು. ಕನಿಷ್ಠ ಮೂರು ಸ್ವತ್ತುಗಳಲ್ಲಿ ಒಂದೊಂದರಲ್ಲೂ ಕನಿಷ್ಠ ಶೇ. 10ರಷ್ಟಾದರೂ ಹೂಡಿಕೆ ಮಾಡಬೇಕು ಎನ್ನುವ ನಿಯಮ ಇರುತ್ತದೆ.

ಇದನ್ನೂ ಓದಿ: 2010ರಿಂದ ತಿಂಗಳಿಗೆ 15,000 ರೂ ಹೂಡಿಕೆ; ಇವತ್ತು ನೀವು ಕೋಟ್ಯಾಧಿಪತಿ; ಸಿಂಪಲ್ 15x15x15 ಫಾರ್ಮುಲಾದಿಂದ ಸಾಧ್ಯ

ಉದಾಹರಣೆಗೆ, ಈಕ್ವಿಟಿಗಳಲ್ಲಿ ಕನಿಷ್ಠ ಶೇ. 10, ಚಿನ್ನದ ಮೇಲೆ ಶೇ. 10, ಬಾಂಡ್​ಗಳ ಮೇಲೆ ಶೇ. 10 ಹೀಗೆ ಹೂಡಿಕೆಗಳನ್ನು ಹಂಚಬಹುದು. ಅನಿಶ್ಚಿತ ಸಂದರ್ಭಗಳಲ್ಲಿ ಸುರಕ್ಷಿತ ಹೂಡಿಕೆ ಬಯಸುವವರಿಗೆ ಮಲ್ಟಿ ಅಸೆಟ್ ಫಂಡ್ ಬಹಳ ಅನುಕೂಲ ಕೊಡುತ್ತದೆ.

ಫ್ಲೆಕ್ಸಿಕ್ಯಾಪ್ ಫಂಡ್​ಗಳು ಹಾಗೂ ಮಲ್ಟಿ ಅಸೆಟ್ ಫಂಡ್​ಗಳು ಬಹಳ ಜನಪ್ರಿಯತೆ ಪಡೆಯುತ್ತಿವೆ. ಎರಡೂ ರೀತಿಯ ಫಂಡ್​ಗಳು ಪ್ರಸಕ್ತ ಸಂದರ್ಭಗಳಿಗೆ ಹೇಳಿ ಮಾಡಿಸಿದ್ದಂತಿವೆ ಎನ್ನುವುದು ತಜ್ಞರ ಅನಿಸಿಕೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರಾಜೀನಾಮೆ ಬೆನ್ನಲ್ಲೇ ಡಾ.ರಾಜ್​ಕುಮಾರ್ ಮಾತು ನೆನೆದ ಸಿದ್ರಾಮಯ್ಯ
ರಾಜೀನಾಮೆ ಬೆನ್ನಲ್ಲೇ ಡಾ.ರಾಜ್​ಕುಮಾರ್ ಮಾತು ನೆನೆದ ಸಿದ್ರಾಮಯ್ಯ
ಸಿದ್ದರಾಮಯ್ಯ ರಾಜೀನಾಮೆಗೆ ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ!
ಸಿದ್ದರಾಮಯ್ಯ ರಾಜೀನಾಮೆಗೆ ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ!
ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಫಸ್ಟ್​​ ರಿಯಾಕ್ಷನ್
ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಫಸ್ಟ್​​ ರಿಯಾಕ್ಷನ್
ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ
ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ
ಎನ್​​ಟಿಆರ್ ಸಮಾಧಿಗೆ ಜೂ ಎನ್​​ಟಿಆರ್ ಭೇಟಿ, ಕಾಲಿಗೆ ಬಿದ್ದ ಅಭಿಮಾನಿ
ಎನ್​​ಟಿಆರ್ ಸಮಾಧಿಗೆ ಜೂ ಎನ್​​ಟಿಆರ್ ಭೇಟಿ, ಕಾಲಿಗೆ ಬಿದ್ದ ಅಭಿಮಾನಿ
ಸಚಿವರೊಂದಿಗೆ ಉಪಹಾರ ಸಭೆಯಲ್ಲಿ ಕಣ್ಣೀರು ಹಾಕಿದ ಸಿದ್ದರಾಮಯ್ಯ
ಸಚಿವರೊಂದಿಗೆ ಉಪಹಾರ ಸಭೆಯಲ್ಲಿ ಕಣ್ಣೀರು ಹಾಕಿದ ಸಿದ್ದರಾಮಯ್ಯ
ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ!: ಕಾಂಗ್ರೆಸ್
ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ!: ಕಾಂಗ್ರೆಸ್
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಒಂದೇ ಕುಟುಂಬದ ನಾಲ್ವರು ಸಜೀವದಹನ
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಒಂದೇ ಕುಟುಂಬದ ನಾಲ್ವರು ಸಜೀವದಹನ
ಗುರು ಸಂಚಾರ ಕುಂಭ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಕುಂಭ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಡಿಕೆ ಶಿವಕುಮಾರ್​ಗೆ ಅಭಿನಂದನೆ ತಿಳಿಸಿದ ಸಿಎಂ ಸಿದ್ದರಾಮಯ್ಯ
ಡಿಕೆ ಶಿವಕುಮಾರ್​ಗೆ ಅಭಿನಂದನೆ ತಿಳಿಸಿದ ಸಿಎಂ ಸಿದ್ದರಾಮಯ್ಯ