AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್ ಖಾತೆಯಲ್ಲಿ ಮಿನಿಮಮ್ ಬ್ಯಾಲನ್ಸ್ ಇಲ್ಲದಿದ್ದರೆ ದಂಡ ಎಷ್ಟು ಕಟ್ಟಬೇಕು? ಶೂನ್ಯ ಬ್ಯಾಲನ್ಸ್ ಇದ್ದರೆ ಏನಾಗುತ್ತದೆ? ಇಲ್ಲಿದೆ ಡೀಟೇಲ್ಸ್

What Happens to SB Accounts Without Minimum Balance: ಮಿನಿಮಮ್ ಬ್ಯಾಲನ್ಸ್ ಇಲ್ಲದ ಖಾತೆಗಳಿಗೆ ಎಲ್ಲಾ ಬ್ಯಾಂಕುಗಳು ದಂಡ ವಿಧಿಸುತ್ತವೆ. ಆದರೆ, ದಂಡದ ಮೊತ್ತ ಎಷ್ಟು ಎಂಬುದು ಆಯಾ ಬ್ಯಾಂಕುಗಳ ನಿರ್ಧಾರಕ್ಕೆ ಬಿಟ್ಟಿದ್ದು. ಕೆಲವೊಮ್ಮೆ ಒಂದೇ ಬ್ಯಾಂಕ್​ನ ಬೇರೆ ಬೇರೆ ಶಾಖೆಗಳಲ್ಲಿ ಈ ಬಗ್ಗೆ ಭಿನ್ನ ನೀತಿಗಳಿರಬಹುದು. ಶೂನ್ಯ ಬ್ಯಾಲನ್ಸ್ ಇರುವ ಅಕೌಂಟ್​ಗಳು ಹಲವಿರುತ್ತವೆ. ಅವುಗಳಿಗೆ ದಂಡ ಹಾಕಿದರೆ ನೆಗಟಿವ್ ಬ್ಯಾಲನ್ಸ್ ಆಗುತ್ತದೆ. ಅಂಥದ್ದಕ್ಕೆ ಅವಕಾಶ ಇದೆಯಾ? ಈ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್ ಏನು ಹೇಳುತ್ತದೆ? ಆರ್​ಬಿಐನ ನಿಯಮಾವಳಿಗಳೇನು, ಬ್ಯಾಂಕ್​ಗಳ ಮುಂದಿರುವ ಆಯ್ಕೆಗಳೇನು ಎಂಬ ವಿವರ ಇಲ್ಲಿದೆ.

ಬ್ಯಾಂಕ್ ಖಾತೆಯಲ್ಲಿ ಮಿನಿಮಮ್ ಬ್ಯಾಲನ್ಸ್ ಇಲ್ಲದಿದ್ದರೆ ದಂಡ ಎಷ್ಟು ಕಟ್ಟಬೇಕು? ಶೂನ್ಯ ಬ್ಯಾಲನ್ಸ್ ಇದ್ದರೆ ಏನಾಗುತ್ತದೆ? ಇಲ್ಲಿದೆ ಡೀಟೇಲ್ಸ್
ಮಿನಿಮಮ್ ಬ್ಯಾಲನ್ಸ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 28, 2023 | 12:15 PM

Share

ಬಹುತೇಕ ಬ್ಯಾಂಕ್​ಗಳ ಸೇವಿಂಗ್ಸ್ ಅಕೌಂಟ್​ಗಳಲ್ಲಿ ಕನಿಷ್ಠ ಬಾಕಿ ಹಣ ಇರಬೇಕು ಎನ್ನುವ ನಿಯಮ ಇರುತ್ತದೆ. ಈ ಮಿನಿಮಮ್ ಬ್ಯಾಲನ್ಸ್ (Minimum Account Balance) ಇಲ್ಲದಿದ್ದರೆ ಪೆನಾಲ್ಟಿ ಹಾಕಲಾಗುತ್ತದೆ. ಆದರೆ, ಶೂನ್ಯ ಬ್ಯಾಲನ್ಸ್ ಇರುವ ಅಕೌಂಟ್​ಗಳು ಹಲವಿರುತ್ತವೆ. ಅವುಗಳಿಗೆ ದಂಡ ಹಾಕಿದರೆ ನೆಗಟಿವ್ ಬ್ಯಾಲನ್ಸ್ ಆಗುತ್ತದೆ. ಅಂಥದ್ದಕ್ಕೆ ಅವಕಾಶ ಇದೆಯಾ? ಈ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್ ಏನು ಹೇಳುತ್ತದೆ? ಆರ್​ಬಿಐನ ನಿಯಮಾವಳಿಗಳೇನು, ಬ್ಯಾಂಕ್​ಗಳ ಮುಂದಿರುವ ಆಯ್ಕೆಗಳೇನು ಎಂಬ ವಿವರ ಇಲ್ಲಿದೆ.

ಮಿನಿಮಮ್ ಬ್ಯಾಲನ್ಸ್ ಇಲ್ಲದ ಖಾತೆಗಳಿಗೆ ಎಲ್ಲಾ ಬ್ಯಾಂಕುಗಳು ದಂಡ ವಿಧಿಸುತ್ತವೆ. ಆದರೆ, ದಂಡದ ಮೊತ್ತ ಎಷ್ಟು ಎಂಬುದು ಆಯಾ ಬ್ಯಾಂಕುಗಳ ನಿರ್ಧಾರಕ್ಕೆ ಬಿಟ್ಟಿದ್ದು. ಕೆಲವೊಮ್ಮೆ ಒಂದೇ ಬ್ಯಾಂಕ್​ನ ಬೇರೆ ಬೇರೆ ಶಾಖೆಗಳಲ್ಲಿ ಈ ಬಗ್ಗೆ ಭಿನ್ನ ನೀತಿಗಳಿರಬಹುದು. ಗ್ರಾಮೀಣ ಭಾಗದ ಬ್ಯಾಂಕುಗಳು ಮಿನಿಮಮ್ ಬ್ಯಾಲನ್ಸ್ ಬಗ್ಗೆ ಹೆಚ್ಚು ಗಮನ ಕೊಡುವುದಿಲ್ಲ. ನಗರದ ಬ್ಯಾಂಕುಗಳಲ್ಲಿ ದಂಡ ವಿಧಿಸುವ ಪ್ರವೃತ್ತಿ ಹೆಚ್ಚು.

ಇದನ್ನೂ ಓದಿ: ಮ್ಯೂಚುವಲ್ ಫಂಡ್ ಹೂಡಿಕೆದಾರರು ನಾಮಿನಿ ಹೆಸರಿಸಲು ಡೆಡ್​ಲೈನ್ ಜನವರಿ 1ಕ್ಕೆ ವಿಸ್ತರಣೆ

ಮಿನಿಮಮ್ ಬ್ಯಾಲನ್ಸ್ ಹೇಗೆ ಎಣಿಸಲಾಗುತ್ತದೆ?

ಎಚ್​ಡಿಎಫ್​ಸಿ, ಎಕ್ಸಿಸ್ ಇತ್ಯಾದಿ ಕೆಲ ಬ್ಯಾಂಕುಗಳಲ್ಲಿ ಸೇವಿಂಗ್ಸ್ ಅಕೌಂಟ್​ಗಳು ಕನಿಷ್ಠ 10,000 ರೂ ಹಣ ಹೊಂದಿರಬೇಕು ಎನ್ನುವ ನಿಯಮ ಇದೆ. ಇನ್ನೂ ಕೆಲ ಬ್ಯಾಂಕುಗಳಲ್ಲಿ ಮಿನಿಮಮ್ ಬ್ಯಾಲನ್ಸ್ 1,000 ಇರುತ್ತದೆ. ಕೆಲ ಬ್ಯಾಂಕುಗಳು ಶೂನ್ಯ ಬ್ಯಾಲನ್ಸ್ ಸೌಲಭ್ಯ ಇರುವ ಎಸ್​ಬಿ ಅಕೌಂಟ್​ಗಳಿಗೆ ಅವಕಾಶ ಕೊಡುತ್ತವೆ.

ಒಂದು ತಿಂಗಳಲ್ಲಿ ಒಂದು ಎಸ್​ಬಿ ಅಕೌಂಟ್​ನ ಮಿನಿಮಮ್ ಬ್ಯಾಲನ್ಸ್ ಎಷ್ಟು ಎಂಬುದನ್ನು ಎಣಿಸಲು ಒಂದು ಕ್ರಮ ಇದೆ. ಪ್ರತೀ ದಿನದ ಅಂತ್ಯದಲ್ಲಿ ಖಾತೆಯಲ್ಲಿ ಎಷ್ಟು ಹಣ ಇದೆ ಎಂಬುದನ್ನು ಪರಿಗಣಿಸಲಾಗುತ್ತದೆ. ಆ ರೀತಿ ಎಲ್ಲಾ ದಿನಗಳಿಗೂ ಎಣಿಸಲಾಗುತ್ತದೆ. ಅದನ್ನು ಒಟ್ಟುಗೂಡಿಸಿ, ಒಂದು ತಿಂಗಳ 30 ಅಥವಾ 31 ದಿನಗಳಿಂದ ಅದನ್ನು ಭಾಗಿಸಿ ಸರಾಸರಿ ಮೊತ್ತವನ್ನು ಪಡೆಯಲಾಗುತ್ತದೆ. ಅದೇ ಮಿನಿಮಮ್ ಬ್ಯಾಲನ್ಸ್ ಆಗಿರುತ್ತದೆ.

ಇದನ್ನೂ ಓದಿ: ಡೀಮ್ಯಾಟ್ ಅಕೌಂಟ್ ಇಲ್ಲದೇ ಮ್ಯೂಚುವಲ್ ಫಂಡ್​ನಲ್ಲಿ ಹೂಡಿಕೆ ಸಾಧ್ಯವಾ? ಫೋಲಿಯೋ ಮೂಲಕ ಇನ್ವೆಸ್ಟ್ ಮಾಡಬಹುದಾ?

ಆರ್​ಬಿಐ ನಿಯಮ ಏನು ಹೇಳುತ್ತದೆ?

ಎಸ್​ಬಿ ಖಾತೆಯಲ್ಲಿ ಹಣವು ಮಿನಿಮಮ್ ಬ್ಯಾಲನ್ಸ್ ಮಟ್ಟಕ್ಕಿಂತ ಕಡಿಮೆ ಹೋದಾಗ ಬ್ಯಾಂಕುಗಳು ಏಕಾಏಕಿ ದಂಡ ಹಾಕುವಂತಿಲ್ಲ. ಅಂತಹ ಸಂದರ್ಭಗಳಲ್ಲಿ ಆ ಗ್ರಾಹಕರಿಗೆ ಎಸ್ಸೆಮ್ಮೆಸ್ ಮೂಲಕವೋ, ಇಮೇಲ್ ಮೂಲಕವೋ ಅಥವಾ ಪತ್ರಗಳ ಮೂಲಕವೂ ಸಂವಹನ ನಡೆಸಿ ನೋಟೀಸ್ ನೀಡಬೇಕು. ಮಿನಿಮಮ್ ಬ್ಯಾಲನ್ಸ್ ತುಂಬಲು ಗ್ರಾಹಕರಿಗೆ ಕನಿಷ್ಠ ಒಂದು ತಿಂಗಳು ಕಾಲಾವಕಾಶ ನೀಡಬೇಕು. ಆ ಬಳಿಕವಷ್ಟೇ ದಂಡ ಹಾಕಬಹುದು ಎಂದು ಆರ್​ಬಿಐ 2014ರಲ್ಲಿ ರೂಪಿಸಿದ ನಿಯಮದಲ್ಲಿ ಸ್ಪಷ್ಟಪಡಿಸಿದೆ.

ಅಷ್ಟೇ ಅಲ್ಲ, ಎಲ್ಲಾ ಪ್ರಕರಣದಲ್ಲೂ ಸಮಾನ ರೀತಿಯಲ್ಲಿ ದಂಡ ವಿಧಿಸುವಂತಿಲ್ಲ, ಅಥವಾ ತೀರಾ ದೊಡ್ಡ ಮಟ್ಟದಲ್ಲಿ ದಂಡ ವಿಧಿಸುವಂತಿಲ್ಲ. ಕನಿಷ್ಠ ಮೊತ್ತಕ್ಕಿಂತ ಎಷ್ಟು ಕಡಿಮೆ ಇದೆ, ಅದಕ್ಕೆ ಅನುಗುಣವಾಗಿ ದಂಡ ವಿಧಿಸಬೇಕು ಎಂದು ಆರ್​ಬಿಐ ನಿಯಮ ಹೇಳುತ್ತದೆ. ಹಾಗೆಯೇ, ಪೆನಾಲ್ಟಿ ಹಣವನ್ನು ಕಟ್ಟಲು ಗ್ರಾಹಕರಿಗೆ ಅನುಕೂಲವಾಗುವ ರೀತಿಯಲ್ಲಿ ಅವಕಾಶಗಳನ್ನು ಕಲ್ಪಿಸಬೇಕು ಎಂದೂ ನಿಯಮವು ಹೇಳುತ್ತದೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್