AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Car Insurance: ಮಳೆ ನೀರು ತುಂಬಿದಾಗ ಕಾರು ಸ್ಟಾರ್ಟ್ ಮಾಡದಿರಿ; ಎಂಜಿನ್ ಕೆಡುತ್ತೆ, ಇನ್ಷೂರೆನ್ಸ್ ಕ್ಲೈಮ್ ಕೂಡ ಅಸಾಧ್ಯ

What To Do When Water Floods Car: ನೀವು ಸಮಗ್ರ ಕಾರು ವಿಮಾ ಪಾಲಿಸಿ ಪಡೆದಿದ್ದರೂ ನೀರು ನುಗ್ಗಿ ಕಾರಿನ ಎಂಜಿನ್ ವಿಫಲವಾದರೆ ಕ್ಲೈಮ್ ಮಾಡಲು ಸಾಧ್ಯವಾಗದೇ ಹೋಗಬಹುದು. ಕಾರಿಗೆ ನೀರು ತುಂಬಿದಾಗ ನೀವು ತೆಗೆದುಕೊಳ್ಳಬಹುದಾದ ಕೆಲ ಕ್ರಮಗಳ ಬಗ್ಗೆ ಮಾಹಿತಿ ಇಲ್ಲಿದೆ...

Car Insurance: ಮಳೆ ನೀರು ತುಂಬಿದಾಗ ಕಾರು ಸ್ಟಾರ್ಟ್ ಮಾಡದಿರಿ; ಎಂಜಿನ್ ಕೆಡುತ್ತೆ, ಇನ್ಷೂರೆನ್ಸ್ ಕ್ಲೈಮ್ ಕೂಡ ಅಸಾಧ್ಯ
ಪ್ರವಾಹ ನೀರಿನಲ್ಲಿ ಕಾರು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 19, 2023 | 12:59 PM

Share

ಮಳೆ ಬಂದು ರಸ್ತೆಯಲ್ಲೆಲ್ಲಾ ನೀರು ತುಂಬಿದ್ದಾಗ ಅಥವಾ ಅಪಾರ್ಟ್ಮೆಂಟ್​ನ ಬೇಸ್ಮೆಂಟ್​ನಲ್ಲಿ ನಿಲ್ಲಿಸಿದ್ದ ಕಾರಿಗೆ ನೀರು ತುಂಬಿದಾಗ ಬಹಳ ಹುಷಾರಾಗಿರಿ. ಯಾವುದೇ ಕಾರಣಕ್ಕೂ ಕಾರಿನ ಎಂಜಿನ್ ಸ್ಟಾರ್ಟ್ ಮಾಡದಿರಿ. ಇದರಿಂದ ಎಂಜಿನ್ ಹಾಳಾಗುತ್ತದೆ. ಇನ್ಷೂರೆನ್ಸ್ ಮಾಡಿಸಿದ್ದರೂ (Car Insurance) ಕ್ಲೈಮ್ ಮಾಡಲು ಸಾಧ್ಯವಾಗುವುದಿಲ್ಲ. ನೀವು ವಾಹನಕ್ಕೆ ಸಮಗ್ರ ವಿಮೆ ಪಾಲಿಸಿ ಮಾಡಿಸಿದ್ದರೂ ಏನೂ ಪ್ರಯೋಜನವಾಗುವುದಿಲ್ಲ. ಇನ್ಷೂರೆನ್ಸ್​ನ ಆನ್​ಲೈನ್ ಮಾರುಕಟ್ಟೆ ಪೋರ್ಟಲ್ ಎನಿಸಿದ ಪಾಲಿಸಿಬಜಾರ್ ಡಾಟ್ ಕಾಮ್​ನ (Policy Bazaar) ಮೋಟಾರ್ ಇನ್ಷೂರೆನ್ಸ್ ಮುಖ್ಯಸ್ಥ ನಿತಿನ್ ಕುಮಾರ್ ಈ ಬಗ್ಗೆ ಒಂದಷ್ಟು ಅಮೂಲ್ಯ ಮಾಹಿತಿ ಹಂಚಿಕೊಂಡಿದ್ದಾರೆ.

‘ನೀವು ಬೇಸ್ಮೆಂಟ್​ನಲ್ಲಿ ಕಾರನ್ನು ಪಾರ್ಕ್ ಮಾಡಿರುತ್ತೀರಿ. ನೀರು ನುಗ್ಗಿ ಅದು ಮುಳುಗಿಹೋಗಿರುತ್ತದೆ. ಆಗ ನೀವು ಇನ್ಷೂರೆನ್ಸ್ ಕಂಪನಿಗೆ ನೇರವಾಗಿ ಮಾಹಿತಿ ಕೊಡಬೇಕು. ಹಾಗು ಸಮೀಪದ ಸರ್ವಿಸ್ ಸೆಂಟರ್ ಅಥವಾ ಗ್ಯಾರೇಜ್​ಗೆ ನಿಮ್ಮ ಕಾರನ್ನು ಟೋವ್ ಮಾಡಬೇಕು. ಒಂದು ವೇಳೆ ನೀವು ಕಾರು ನೀರಿನಲ್ಲಿ ಮುಳುಗಿದ್ದಾಗ ಎಂಜಿನ್ ಸ್ಟಾರ್ಟ್ ಮಾಡಲು ಯತ್ನಿಸಿದರೆ ಆಗ ಎಂಜಿನ್ ಹೈಡ್ರೋಸ್ಟಾಟಿಕ್ ಲಾಕ್ ಆಗಿಹೋಗುತ್ತದೆ. ಇಂಥ ಸಂದರ್ಭದಿಂದ ಎಂಜಿನ್ ಫೈಲ್ಯೂರ್ ಆದರೆ ಅದಕ್ಕೆ ಇನ್ಷೂರೆನ್ಸ್ ಕಂಪನಿ ಕವರ್ ಮಾಡುವುದಿಲ್ಲ. ಯಾಕೆಂದರೆ, ನೀರು ತುಂಬಿದಾಗ ನೀವು ಎಂಜಿನ್ ಸ್ಟಾರ್ಟ್ ಮಾಡಿದರೆ ಅದನ್ನು ಉದ್ದೇಶಪೂರ್ವಕ ಕೃತ್ಯದಿಂದಾಗಿ ಆದ ಹಾನಿ ಎಂದು ಪರಿಗಣಿಸಲಾಗುತ್ತದೆ’ ಎಂದು ನಿತಿನ್ ಕುಮಾರ್ ಹೇಳುತ್ತಾರೆ.

ಇದನ್ನೂ ಓದಿಬೆಂಗಳೂರಿನಲ್ಲಿ ಮರ ಬಿದ್ದು ಸಂಭವಿಸುವ ಹಾನಿಗಳು ವಿಮೆ ವ್ಯಾಪ್ತಿಗೆ ಒಳಪಡುತ್ತವೆಯೇ?

ರನ್ ಆಗುತ್ತಿರುವ ಕಾರಿನ ಎಂಜಿನ್​ಗೆ ನೀರು ನುಗ್ಗಿದಾಗ ಎಂಜಿನ್ ಹಾನಿಯಾಗುತ್ತದೆ. ಅಂಥ ಸಮಯದಲ್ಲಿ ಹೈಡ್ರೋಸ್ಟಾಟಿಕ್ ಲಾಕ್ ಸಂಭವಿಸುತ್ತದೆ. ಒಂದು ವೇಳೆ ಎಂಜಿನ್ ಆಫ್​ನಲ್ಲಿದ್ದಾಗ ನೀರು ನುಗ್ಗಿದರೆ ಆಗ ಹಾನಿಯಾಗುವ ಸಾಧ್ಯತೆ ಇಲ್ಲದೇ ಇರಬಹುದು. ಆದರೂ ಕೂಡ ಎಂಜಿನ್ ಸ್ಟಾರ್ಟ್ ಮಾಡುವ ಮುನ್ನ ವೃತ್ತಿಪರರ ಸಹಾಯ ಪಡೆಯುವುದು ಒಳ್ಳೆಯದು.

ಇನ್ಷೂರೆನ್ಸ್ ಪಡೆಯುವುದರ ಜೊತೆ ಎಚ್ಚರ ವಹಿಸವೇಕಾದ್ದು ಅಗತ್ಯ

ಕಾರಿಗೆ ಸಣ್ಣ ಡ್ಯಾಮೇಜ್ ಆದರೂ ಅದನ್ನು ದುರಸ್ತಿ ಮಾಡಲು ಬಹಳ ಖರ್ಚಾಗುತ್ತದೆ. ಅಪಘಾತವಷ್ಟೇ ಅಲ್ಲ, ಪ್ರವಾಹ ಇತ್ಯಾದಿ ಕಾರಣಕ್ಕೆ ಕಾರಿಗೆ ಬಹಳ ಹಾನಿಯಾಗುವುದಿದೆ. ಈ ಸಂದರ್ಭದಲ್ಲಿ ಸರಿಯಾದ ರೀತಿಯಲ್ಲಿ ಕಾರಿಗೆ ಇನ್ಷೂರೆನ್ಸ್ ಕವರೇಜ್ ಇದ್ದರೆ ಹಾನಿವೆಚ್ಚವನ್ನು ಸರಿದೂಗಿಸಲು ಸಾಧ್ಯ. ಸಮಗ್ರ ಇನ್ಷೂರೆನ್ಸ್ ಪಾಲಿಸಿ ಪಡೆದರೆ ಪ್ರವಾಹ, ಬೆಂಕಿ ಮತ್ತು ಕಳ್ಳತನ ಇತ್ಯಾದಿ ಅವಘಡಗಳನ್ನು ಕವರ್ ಮಾಡಬಹುದು. ಹೊಸ ಕಾರಾದರೆ ಬಹುತೇಕ ಎಲ್ಲಾ ರೀತಿಯ ಹಾನಿಗಳನ್ನು ಕವರ್ ಮಾಡಲಾಗುತ್ತದೆ. ಕಾರು ಹಳೆಯದಾದಷ್ಟೂ ಕವರೇಜ್ ಕಡಿಮೆ ಆಗುತ್ತಾ ಹೋಗುತ್ತದೆ. ಪ್ಲಾಸ್ಟಿಕ್ ಮತ್ತು ರಬ್ಬರ್​ನ ಬಿಡಿಭಾಗಗಳು ಹಾನಿಯಾದರೆ ಅರ್ಧದಷ್ಟು ಮಾತ್ರ ಕ್ಲೈಮ್ ಸಾಧ್ಯ.

ಇದನ್ನೂ ಓದಿತಡವಾಗಿ ಕ್ಲೇಮ್ ಎಂದು ಅಪಘಾತ ವಿಮೆ ತಿರಸ್ಕಾರ: ಪರಿಹಾರ ಕೊಡಲು ಯುನೈಟೆಡ್ ಇಂಡಿಯಾ ವಿಮಾ ಕಂಪನಿಗೆ ಆದೇಶ

ಒಂದು ಸಾಧಾರಣವಾದ ಸಮಗ್ರ ಕಾರ್ ಇನ್ಷೂರೆನ್ಸ್ ಪಾಲಿಸಿ ಇದ್ದರೆ ಎಲ್ಲವೂ ಕವರ್ ಆಗುತ್ತದೆ ಎಂದು ಹೇಳಲು ಆಗುವುದಿಲ್ಲ. ಎಂಜಿನ್ ರಕ್ಷಣೆ, ಝೀರೋ ಡೆಪ್ರಿಶಿಯೇಶನ್, ಕನ್ಸೂಮಬಲ್ಸ್ ಕವರ್, ರೋಡ್​ಸೈಡ್ ಅಸಿಸ್ಟೆನ್ಸ್, ಕೀ ಮತ್ತು ಲಾಕ್ಕವರ್, ವೈಯಕ್ತಿಕ ವಸ್ತುಗಳಿಗೆ ಹಾನಿ ಇತ್ಯಾದಿಗಳಿಗೆ ಪ್ರತ್ಯೇಕವಾಗಿ ಇನ್ಷೂರೆನ್ಸ್ ಆ್ಯಡ್ ಆನ್ ಪಡೆಯುವುದು ಉತ್ತಮ ಎನ್ನುತ್ತಾರೆ ಪಾಲಿಸಿ ಬಜಾರ್​ನ ಇನ್ಷೂರೆನ್ಸ್ ತಜ್ಞರು.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ