LIC Kanyadan Scheme: ಎಲ್​ಐಸಿ ಕನ್ಯಾದಾನ್ ಪಾಲಿಸಿ: ಹೆಣ್ಮಕ್ಕಳ ಓದು ಮತ್ತು ಮದುವೆ ಖರ್ಚಿಗೆ ಉತ್ತಮ ಸ್ಕೀಮ್

Insurance Plan For Girl Child: 1 ವರ್ಷಕ್ಕಿಂತ ಹೆಚ್ಚು ವಯಸ್ಸಿನ ಹೆಣ್ಮಕ್ಕಳ ಹೆಸರಿನಲ್ಲಿ ಪಾಲಕರು ಪಡೆಯಬಹುದಾದ ಎಲ್​ಐಸಿ ಕನ್ಯಾದಾನ್ ಸ್ಕೀಮ್​ನಲ್ಲಿ ಹಲವು ಫೀಚರ್​ಗಳಿದ್ದು, ಹೆಣ್ಮಗುವಿನ ಭವಿಷ್ಯಕ್ಕೆ ಹೇಳಿಮಾಡಿಸಿದ ಯೋಜನೆಯಾಗಿದೆ.

LIC Kanyadan Scheme: ಎಲ್​ಐಸಿ ಕನ್ಯಾದಾನ್ ಪಾಲಿಸಿ: ಹೆಣ್ಮಕ್ಕಳ ಓದು ಮತ್ತು ಮದುವೆ ಖರ್ಚಿಗೆ ಉತ್ತಮ ಸ್ಕೀಮ್
ಎಲ್​ಐಸಿ
Follow us
|

Updated on: Jul 18, 2023 | 1:04 PM

ಹೆಣ್ಮಕ್ಕಳಿಗೆಂದು ಎಲ್​ಐಸಿ ಕೆಲವಾರು ಉತ್ತಮ ಪಾಲಿಸಿಗಳನ್ನು ಹೊಂದಿದೆ. ಎಲ್​ಐಸಿ ಜೀವನ್ ತರುಣ್, ಎಲ್​ಐಸಿ ಕನ್ಯಾದಾನ್ ಪಾಲಿಸಿ, ಎಲ್​ಐಸಿ ಚೈಲ್ಡ್ ಫ್ಯೂಚರ್ ಪ್ಲಾನ್, ಎಲ್​ಐಸಿ ಸಿಂಗಲ್ ಪ್ರೀಮಿಯಮ್ ಚೈಲ್ಡ್ ಪ್ಲಾನ್ ಇತ್ಯಾದಿ ಯೋಜನೆಗಳಿವೆ. ಹೆಣ್ಮಗು ದೊಡ್ಡವಳಾಗಿ ಆಕೆಯ ಶಿಕ್ಷಣವೆಚ್ಚ ಮತ್ತು ವಿವಾಹವೆಚ್ಚಗಳಿಗೆ ಬೇಕರುವ ಹಣದ ಅಗತ್ಯಗಳನ್ನು ಈ ಪಾಲಿಸಿಗಳು ನೀಡುತ್ತವೆ. ಈ ಪೈಕಿ ಎಲ್​ಐಸಿ ಕನ್ಯಾದಾನ್ ಪಾಲಿಸಿ (LIC Kanyadan Policy) ಹೆಚ್ಚು ಗಮನ ಸೆಳೆಯುತ್ತಿದೆ. ಒಂದು ವರ್ಷಕ್ಕಿಂತ ಹೆಚ್ಚು ವಯಸ್ಸಿನ ಹೆಣ್ಮಗುವಿನ ಹೆಸರಿನಲ್ಲಿ ಈ ಸ್ಕೀಮ್ ಪಡೆಯಬಹುದು. ತಂದೆ, ತಾಯಿ ಅಥವಾ ಬೇರೆ ಪಾಲಕರು 18ರಿಂದ 50 ವರ್ಷ ವಯೋಮಾನದವರು ಎಲ್​ಐಸಿ ಕನ್ಯಾದಾನ್ ಪ್ಲಾನ್ ಆರಂಭಿಸಲು ಸಾಧ್ಯ. ಪಾಲಿಸಿ ಅವಧಿ 13ರಿಂದ 25 ವರ್ಷದವರೆಗೂ ಇರುತ್ತದೆ.

ಎಲ್​ಐಸಿ ಕನ್ಯಾದಾನ್ ಪಾಲಿಸಿ 2023 ಮುಖ್ಯಾಂಶಗಳು

  • ಅನಿವಾಸಿ ಭಾರತೀಯ ಸೇರಿದಂತೆ ಯಾವುದೇ ಭಾರತೀಯ ವ್ಯಕ್ತಿ ಈ ಸ್ಕೀಮ್​ನಲ್ಲಿ ಹೂಡಿಕೆ ಮಾಡಬಹುದು.
  • ಪಾಲಿಸಿ ಪಡೆಯಲು ಹೆಣ್ಮಗುವಿನ ವಯಸ್ಸು ಕನಿಷ್ಠ 1 ವರ್ಷ ಆಗಿರಬೇಕು. ಹೆಣ್ಮಗುವಿನ ಹೆಸರಿನಲ್ಲಿ ಪಾಲಕರು ಪಾಲಿಸಿ ಆರಂಭಿಸಬಹುದು. ಪಾಲಕರ ವಯಸ್ಸು 18ರಿಂದ 50 ವರ್ಷ ಇರಬೇಕು.
  • ತಿಂಗಳಿಗೆ, ಮೂರು ತಿಂಗಳಿಗೆ, ಆರು ತಿಂಗಳಿಗೆ ಅಥವಾ ವರ್ಷಕ್ಕೆ ಒಮ್ಮೆ ಪ್ರೀಮಿಯಮ್ ಕಟ್ಟುವ ಅವಕಾಶ ಇರುತ್ತದೆ
  • ದಿನಕ್ಕೆ 75ರೂನಂತೆ ನೀವು ಈ ಪಾಲಿಸಿಗೆ ಹೂಡಿಕೆ ಮಾಡಿದರೆ 25 ವರ್ಷ ಬಳಿಕ 14 ಲಕ್ಷ ರೂ ರಿಟರ್ನ್ ಸಿಗುತ್ತದೆ.
  • ಪಾಲಿಸಿ ಅವಧಿಗಿಂತ ಮುಂಚಿನ 3 ವರ್ಷಗಳವರೆಗೆ ಮಾತ್ರ ಪ್ರೀಮಿಯಮ್ ಪಾವತಿ.
  • ಪಾಲಿಸಿಯ ಫಲಾನುಭವಿ ಅಪಘಾತದಲ್ಲಿ ಮೃತಪಟ್ಟರೆ ಕುಟುಂಬ ಸದಸ್ಯರಿಗೆ 10 ಲಕ್ಷ ರೂ ಪರಿಹಾರ ಸಿಗುತ್ತದೆ
  • ಫಲಾನುಭವಿಗೆ ಸಹಜ ಸಾವು ಸಂಭವಿಸಿದರೆ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಸಿಗುತ್ತದೆ
  • ಸತತ 3 ವರ್ಷ ನೀವು ಪ್ರೀಮಿಯಮ್ ಕಟ್ಟಿದ್ದರೆ ಪಾಲಿಸಿ ಅಡ ಇಟ್ಟು ಸಾಲ ಪಡೆಯಬಹುದು. ನೀವು ಆವರೆಗೆ ಕಟ್ಟಿರುವ ಪ್ರೀಮಿಯಮ್ ಮೊತ್ತಕ್ಕೆ ಅನುಗುಣವಾಗಿ ಸಾಲ ಸಿಗುತ್ತದೆ.
  • ಈ ಪಾಲಿಸಿಯ ಯಾವುದೇ ಮೊತ್ತಕ್ಕೂ ತೆರಿಗೆ ಇರುವುದಿಲ್ಲ. ಟ್ಯಾಕ್ಸ್ ಡಿಡಕ್ಷನ್​ಗೂ ಇದು ಸಹಾಯಕವಾಗುತ್ತದೆ.
  • ಪಾಲಿಸಿದಾರ ಸಾವನ್ನಪ್ಪಿದರೆ ಪ್ರೀಮಿಯಮ್ ಕಟ್ಟುವುದನ್ನು ಮುಂದುವರಿಸುವ ಅವಶ್ಯಕತೆ ಇರುವುದಿಲ್ಲ. ಜೊತೆಗೆ ಕುಟುಂಬಕ್ಕೆ ಪ್ರತೀ ವರ್ಷ 1 ಲಕ್ಷ ರೂ ಪರಿಹಾರ ಸಿಗುತ್ತಿರುತ್ತದೆ.

ಇದನ್ನೂ ಓದಿDhan Vriddhi Policy: ಎಲ್​ಐಸಿ ಧನ ವೃದ್ಧಿ ಯೋಜನೆ; ಇದು ನಿಮ್ಮ ಪಾಲಿನ ಮನಿಪ್ಲಾಂಟ್; ಬೇಕಷ್ಟು ಬೆಳೆಸಿ, ಬೇಕೆಂದಾಗ ಹಿಂಪಡೆಯಿರಿ

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು