Sign In

By signing in or creating an account, you agree with Associated Broadcasting Company's Terms & Conditions and Privacy Policy.

LIC Kanyadan Scheme: ಎಲ್​ಐಸಿ ಕನ್ಯಾದಾನ್ ಪಾಲಿಸಿ: ಹೆಣ್ಮಕ್ಕಳ ಓದು ಮತ್ತು ಮದುವೆ ಖರ್ಚಿಗೆ ಉತ್ತಮ ಸ್ಕೀಮ್

Insurance Plan For Girl Child: 1 ವರ್ಷಕ್ಕಿಂತ ಹೆಚ್ಚು ವಯಸ್ಸಿನ ಹೆಣ್ಮಕ್ಕಳ ಹೆಸರಿನಲ್ಲಿ ಪಾಲಕರು ಪಡೆಯಬಹುದಾದ ಎಲ್​ಐಸಿ ಕನ್ಯಾದಾನ್ ಸ್ಕೀಮ್​ನಲ್ಲಿ ಹಲವು ಫೀಚರ್​ಗಳಿದ್ದು, ಹೆಣ್ಮಗುವಿನ ಭವಿಷ್ಯಕ್ಕೆ ಹೇಳಿಮಾಡಿಸಿದ ಯೋಜನೆಯಾಗಿದೆ.

LIC Kanyadan Scheme: ಎಲ್​ಐಸಿ ಕನ್ಯಾದಾನ್ ಪಾಲಿಸಿ: ಹೆಣ್ಮಕ್ಕಳ ಓದು ಮತ್ತು ಮದುವೆ ಖರ್ಚಿಗೆ ಉತ್ತಮ ಸ್ಕೀಮ್
ಎಲ್​ಐಸಿ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 18, 2023 | 1:04 PM

ಹೆಣ್ಮಕ್ಕಳಿಗೆಂದು ಎಲ್​ಐಸಿ ಕೆಲವಾರು ಉತ್ತಮ ಪಾಲಿಸಿಗಳನ್ನು ಹೊಂದಿದೆ. ಎಲ್​ಐಸಿ ಜೀವನ್ ತರುಣ್, ಎಲ್​ಐಸಿ ಕನ್ಯಾದಾನ್ ಪಾಲಿಸಿ, ಎಲ್​ಐಸಿ ಚೈಲ್ಡ್ ಫ್ಯೂಚರ್ ಪ್ಲಾನ್, ಎಲ್​ಐಸಿ ಸಿಂಗಲ್ ಪ್ರೀಮಿಯಮ್ ಚೈಲ್ಡ್ ಪ್ಲಾನ್ ಇತ್ಯಾದಿ ಯೋಜನೆಗಳಿವೆ. ಹೆಣ್ಮಗು ದೊಡ್ಡವಳಾಗಿ ಆಕೆಯ ಶಿಕ್ಷಣವೆಚ್ಚ ಮತ್ತು ವಿವಾಹವೆಚ್ಚಗಳಿಗೆ ಬೇಕರುವ ಹಣದ ಅಗತ್ಯಗಳನ್ನು ಈ ಪಾಲಿಸಿಗಳು ನೀಡುತ್ತವೆ. ಈ ಪೈಕಿ ಎಲ್​ಐಸಿ ಕನ್ಯಾದಾನ್ ಪಾಲಿಸಿ (LIC Kanyadan Policy) ಹೆಚ್ಚು ಗಮನ ಸೆಳೆಯುತ್ತಿದೆ. ಒಂದು ವರ್ಷಕ್ಕಿಂತ ಹೆಚ್ಚು ವಯಸ್ಸಿನ ಹೆಣ್ಮಗುವಿನ ಹೆಸರಿನಲ್ಲಿ ಈ ಸ್ಕೀಮ್ ಪಡೆಯಬಹುದು. ತಂದೆ, ತಾಯಿ ಅಥವಾ ಬೇರೆ ಪಾಲಕರು 18ರಿಂದ 50 ವರ್ಷ ವಯೋಮಾನದವರು ಎಲ್​ಐಸಿ ಕನ್ಯಾದಾನ್ ಪ್ಲಾನ್ ಆರಂಭಿಸಲು ಸಾಧ್ಯ. ಪಾಲಿಸಿ ಅವಧಿ 13ರಿಂದ 25 ವರ್ಷದವರೆಗೂ ಇರುತ್ತದೆ.

ಎಲ್​ಐಸಿ ಕನ್ಯಾದಾನ್ ಪಾಲಿಸಿ 2023 ಮುಖ್ಯಾಂಶಗಳು

  • ಅನಿವಾಸಿ ಭಾರತೀಯ ಸೇರಿದಂತೆ ಯಾವುದೇ ಭಾರತೀಯ ವ್ಯಕ್ತಿ ಈ ಸ್ಕೀಮ್​ನಲ್ಲಿ ಹೂಡಿಕೆ ಮಾಡಬಹುದು.
  • ಪಾಲಿಸಿ ಪಡೆಯಲು ಹೆಣ್ಮಗುವಿನ ವಯಸ್ಸು ಕನಿಷ್ಠ 1 ವರ್ಷ ಆಗಿರಬೇಕು. ಹೆಣ್ಮಗುವಿನ ಹೆಸರಿನಲ್ಲಿ ಪಾಲಕರು ಪಾಲಿಸಿ ಆರಂಭಿಸಬಹುದು. ಪಾಲಕರ ವಯಸ್ಸು 18ರಿಂದ 50 ವರ್ಷ ಇರಬೇಕು.
  • ತಿಂಗಳಿಗೆ, ಮೂರು ತಿಂಗಳಿಗೆ, ಆರು ತಿಂಗಳಿಗೆ ಅಥವಾ ವರ್ಷಕ್ಕೆ ಒಮ್ಮೆ ಪ್ರೀಮಿಯಮ್ ಕಟ್ಟುವ ಅವಕಾಶ ಇರುತ್ತದೆ
  • ದಿನಕ್ಕೆ 75ರೂನಂತೆ ನೀವು ಈ ಪಾಲಿಸಿಗೆ ಹೂಡಿಕೆ ಮಾಡಿದರೆ 25 ವರ್ಷ ಬಳಿಕ 14 ಲಕ್ಷ ರೂ ರಿಟರ್ನ್ ಸಿಗುತ್ತದೆ.
  • ಪಾಲಿಸಿ ಅವಧಿಗಿಂತ ಮುಂಚಿನ 3 ವರ್ಷಗಳವರೆಗೆ ಮಾತ್ರ ಪ್ರೀಮಿಯಮ್ ಪಾವತಿ.
  • ಪಾಲಿಸಿಯ ಫಲಾನುಭವಿ ಅಪಘಾತದಲ್ಲಿ ಮೃತಪಟ್ಟರೆ ಕುಟುಂಬ ಸದಸ್ಯರಿಗೆ 10 ಲಕ್ಷ ರೂ ಪರಿಹಾರ ಸಿಗುತ್ತದೆ
  • ಫಲಾನುಭವಿಗೆ ಸಹಜ ಸಾವು ಸಂಭವಿಸಿದರೆ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಸಿಗುತ್ತದೆ
  • ಸತತ 3 ವರ್ಷ ನೀವು ಪ್ರೀಮಿಯಮ್ ಕಟ್ಟಿದ್ದರೆ ಪಾಲಿಸಿ ಅಡ ಇಟ್ಟು ಸಾಲ ಪಡೆಯಬಹುದು. ನೀವು ಆವರೆಗೆ ಕಟ್ಟಿರುವ ಪ್ರೀಮಿಯಮ್ ಮೊತ್ತಕ್ಕೆ ಅನುಗುಣವಾಗಿ ಸಾಲ ಸಿಗುತ್ತದೆ.
  • ಈ ಪಾಲಿಸಿಯ ಯಾವುದೇ ಮೊತ್ತಕ್ಕೂ ತೆರಿಗೆ ಇರುವುದಿಲ್ಲ. ಟ್ಯಾಕ್ಸ್ ಡಿಡಕ್ಷನ್​ಗೂ ಇದು ಸಹಾಯಕವಾಗುತ್ತದೆ.
  • ಪಾಲಿಸಿದಾರ ಸಾವನ್ನಪ್ಪಿದರೆ ಪ್ರೀಮಿಯಮ್ ಕಟ್ಟುವುದನ್ನು ಮುಂದುವರಿಸುವ ಅವಶ್ಯಕತೆ ಇರುವುದಿಲ್ಲ. ಜೊತೆಗೆ ಕುಟುಂಬಕ್ಕೆ ಪ್ರತೀ ವರ್ಷ 1 ಲಕ್ಷ ರೂ ಪರಿಹಾರ ಸಿಗುತ್ತಿರುತ್ತದೆ.

ಇದನ್ನೂ ಓದಿDhan Vriddhi Policy: ಎಲ್​ಐಸಿ ಧನ ವೃದ್ಧಿ ಯೋಜನೆ; ಇದು ನಿಮ್ಮ ಪಾಲಿನ ಮನಿಪ್ಲಾಂಟ್; ಬೇಕಷ್ಟು ಬೆಳೆಸಿ, ಬೇಕೆಂದಾಗ ಹಿಂಪಡೆಯಿರಿ

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ