AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LIC Kanyadan Scheme: ಎಲ್​ಐಸಿ ಕನ್ಯಾದಾನ್ ಪಾಲಿಸಿ: ಹೆಣ್ಮಕ್ಕಳ ಓದು ಮತ್ತು ಮದುವೆ ಖರ್ಚಿಗೆ ಉತ್ತಮ ಸ್ಕೀಮ್

Insurance Plan For Girl Child: 1 ವರ್ಷಕ್ಕಿಂತ ಹೆಚ್ಚು ವಯಸ್ಸಿನ ಹೆಣ್ಮಕ್ಕಳ ಹೆಸರಿನಲ್ಲಿ ಪಾಲಕರು ಪಡೆಯಬಹುದಾದ ಎಲ್​ಐಸಿ ಕನ್ಯಾದಾನ್ ಸ್ಕೀಮ್​ನಲ್ಲಿ ಹಲವು ಫೀಚರ್​ಗಳಿದ್ದು, ಹೆಣ್ಮಗುವಿನ ಭವಿಷ್ಯಕ್ಕೆ ಹೇಳಿಮಾಡಿಸಿದ ಯೋಜನೆಯಾಗಿದೆ.

LIC Kanyadan Scheme: ಎಲ್​ಐಸಿ ಕನ್ಯಾದಾನ್ ಪಾಲಿಸಿ: ಹೆಣ್ಮಕ್ಕಳ ಓದು ಮತ್ತು ಮದುವೆ ಖರ್ಚಿಗೆ ಉತ್ತಮ ಸ್ಕೀಮ್
ಎಲ್​ಐಸಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 18, 2023 | 1:04 PM

Share

ಹೆಣ್ಮಕ್ಕಳಿಗೆಂದು ಎಲ್​ಐಸಿ ಕೆಲವಾರು ಉತ್ತಮ ಪಾಲಿಸಿಗಳನ್ನು ಹೊಂದಿದೆ. ಎಲ್​ಐಸಿ ಜೀವನ್ ತರುಣ್, ಎಲ್​ಐಸಿ ಕನ್ಯಾದಾನ್ ಪಾಲಿಸಿ, ಎಲ್​ಐಸಿ ಚೈಲ್ಡ್ ಫ್ಯೂಚರ್ ಪ್ಲಾನ್, ಎಲ್​ಐಸಿ ಸಿಂಗಲ್ ಪ್ರೀಮಿಯಮ್ ಚೈಲ್ಡ್ ಪ್ಲಾನ್ ಇತ್ಯಾದಿ ಯೋಜನೆಗಳಿವೆ. ಹೆಣ್ಮಗು ದೊಡ್ಡವಳಾಗಿ ಆಕೆಯ ಶಿಕ್ಷಣವೆಚ್ಚ ಮತ್ತು ವಿವಾಹವೆಚ್ಚಗಳಿಗೆ ಬೇಕರುವ ಹಣದ ಅಗತ್ಯಗಳನ್ನು ಈ ಪಾಲಿಸಿಗಳು ನೀಡುತ್ತವೆ. ಈ ಪೈಕಿ ಎಲ್​ಐಸಿ ಕನ್ಯಾದಾನ್ ಪಾಲಿಸಿ (LIC Kanyadan Policy) ಹೆಚ್ಚು ಗಮನ ಸೆಳೆಯುತ್ತಿದೆ. ಒಂದು ವರ್ಷಕ್ಕಿಂತ ಹೆಚ್ಚು ವಯಸ್ಸಿನ ಹೆಣ್ಮಗುವಿನ ಹೆಸರಿನಲ್ಲಿ ಈ ಸ್ಕೀಮ್ ಪಡೆಯಬಹುದು. ತಂದೆ, ತಾಯಿ ಅಥವಾ ಬೇರೆ ಪಾಲಕರು 18ರಿಂದ 50 ವರ್ಷ ವಯೋಮಾನದವರು ಎಲ್​ಐಸಿ ಕನ್ಯಾದಾನ್ ಪ್ಲಾನ್ ಆರಂಭಿಸಲು ಸಾಧ್ಯ. ಪಾಲಿಸಿ ಅವಧಿ 13ರಿಂದ 25 ವರ್ಷದವರೆಗೂ ಇರುತ್ತದೆ.

ಎಲ್​ಐಸಿ ಕನ್ಯಾದಾನ್ ಪಾಲಿಸಿ 2023 ಮುಖ್ಯಾಂಶಗಳು

  • ಅನಿವಾಸಿ ಭಾರತೀಯ ಸೇರಿದಂತೆ ಯಾವುದೇ ಭಾರತೀಯ ವ್ಯಕ್ತಿ ಈ ಸ್ಕೀಮ್​ನಲ್ಲಿ ಹೂಡಿಕೆ ಮಾಡಬಹುದು.
  • ಪಾಲಿಸಿ ಪಡೆಯಲು ಹೆಣ್ಮಗುವಿನ ವಯಸ್ಸು ಕನಿಷ್ಠ 1 ವರ್ಷ ಆಗಿರಬೇಕು. ಹೆಣ್ಮಗುವಿನ ಹೆಸರಿನಲ್ಲಿ ಪಾಲಕರು ಪಾಲಿಸಿ ಆರಂಭಿಸಬಹುದು. ಪಾಲಕರ ವಯಸ್ಸು 18ರಿಂದ 50 ವರ್ಷ ಇರಬೇಕು.
  • ತಿಂಗಳಿಗೆ, ಮೂರು ತಿಂಗಳಿಗೆ, ಆರು ತಿಂಗಳಿಗೆ ಅಥವಾ ವರ್ಷಕ್ಕೆ ಒಮ್ಮೆ ಪ್ರೀಮಿಯಮ್ ಕಟ್ಟುವ ಅವಕಾಶ ಇರುತ್ತದೆ
  • ದಿನಕ್ಕೆ 75ರೂನಂತೆ ನೀವು ಈ ಪಾಲಿಸಿಗೆ ಹೂಡಿಕೆ ಮಾಡಿದರೆ 25 ವರ್ಷ ಬಳಿಕ 14 ಲಕ್ಷ ರೂ ರಿಟರ್ನ್ ಸಿಗುತ್ತದೆ.
  • ಪಾಲಿಸಿ ಅವಧಿಗಿಂತ ಮುಂಚಿನ 3 ವರ್ಷಗಳವರೆಗೆ ಮಾತ್ರ ಪ್ರೀಮಿಯಮ್ ಪಾವತಿ.
  • ಪಾಲಿಸಿಯ ಫಲಾನುಭವಿ ಅಪಘಾತದಲ್ಲಿ ಮೃತಪಟ್ಟರೆ ಕುಟುಂಬ ಸದಸ್ಯರಿಗೆ 10 ಲಕ್ಷ ರೂ ಪರಿಹಾರ ಸಿಗುತ್ತದೆ
  • ಫಲಾನುಭವಿಗೆ ಸಹಜ ಸಾವು ಸಂಭವಿಸಿದರೆ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಸಿಗುತ್ತದೆ
  • ಸತತ 3 ವರ್ಷ ನೀವು ಪ್ರೀಮಿಯಮ್ ಕಟ್ಟಿದ್ದರೆ ಪಾಲಿಸಿ ಅಡ ಇಟ್ಟು ಸಾಲ ಪಡೆಯಬಹುದು. ನೀವು ಆವರೆಗೆ ಕಟ್ಟಿರುವ ಪ್ರೀಮಿಯಮ್ ಮೊತ್ತಕ್ಕೆ ಅನುಗುಣವಾಗಿ ಸಾಲ ಸಿಗುತ್ತದೆ.
  • ಈ ಪಾಲಿಸಿಯ ಯಾವುದೇ ಮೊತ್ತಕ್ಕೂ ತೆರಿಗೆ ಇರುವುದಿಲ್ಲ. ಟ್ಯಾಕ್ಸ್ ಡಿಡಕ್ಷನ್​ಗೂ ಇದು ಸಹಾಯಕವಾಗುತ್ತದೆ.
  • ಪಾಲಿಸಿದಾರ ಸಾವನ್ನಪ್ಪಿದರೆ ಪ್ರೀಮಿಯಮ್ ಕಟ್ಟುವುದನ್ನು ಮುಂದುವರಿಸುವ ಅವಶ್ಯಕತೆ ಇರುವುದಿಲ್ಲ. ಜೊತೆಗೆ ಕುಟುಂಬಕ್ಕೆ ಪ್ರತೀ ವರ್ಷ 1 ಲಕ್ಷ ರೂ ಪರಿಹಾರ ಸಿಗುತ್ತಿರುತ್ತದೆ.

ಇದನ್ನೂ ಓದಿDhan Vriddhi Policy: ಎಲ್​ಐಸಿ ಧನ ವೃದ್ಧಿ ಯೋಜನೆ; ಇದು ನಿಮ್ಮ ಪಾಲಿನ ಮನಿಪ್ಲಾಂಟ್; ಬೇಕಷ್ಟು ಬೆಳೆಸಿ, ಬೇಕೆಂದಾಗ ಹಿಂಪಡೆಯಿರಿ

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ