AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LIC Saral Pension Plan: 1 ಲಕ್ಷ ರೂ. ವಾರ್ಷಿಕ ಪಿಂಚಣಿ ಪಡೆಯಲು ನೀವೆಷ್ಟು ಹೂಡಿಕೆ ಮಾಡಬೇಕು?

ಎಲ್​ಐಸಿ ಸರಳ ಪಿಂಚಣಿ ಯೋಜನೆ ವಿವರದ ಪ್ರಕಾರ, 40ರಿಂದ 80 ವರ್ಷ ವಯಸ್ಸಿನವರು ವಾರ್ಷಿಕ ಪಿಂಚಣಿ ಪಡೆಯಲು ಅರ್ಹರಾಗಿರುತ್ತಾರೆ.

LIC Saral Pension Plan: 1 ಲಕ್ಷ ರೂ. ವಾರ್ಷಿಕ ಪಿಂಚಣಿ ಪಡೆಯಲು ನೀವೆಷ್ಟು ಹೂಡಿಕೆ ಮಾಡಬೇಕು?
ಎಲ್​ಐಸಿImage Credit source: PTI
Follow us
TV9 Web
| Updated By: Ganapathi Sharma

Updated on: Oct 29, 2022 | 1:28 PM

ಭಾರತೀಯ ಜೀವ ವಿಮಾ ನಿಗಮವು (LIC) ವೈಯಕ್ತಿಕ ವಾರ್ಷಿಕ ಯೋಜನೆ ‘ಸರಳ ಪಿಂಚಣಿ’ಯನ್ನು (Saral Pension Plan) ಇತ್ತೀಚೆಗೆ ಪರಿಚಯಿಸಿದೆ. ಇದೊಂದು ಸಿಂಗಲ್ ಪ್ರೀಮಿಯಂ ಯೋಜನೆಯಾಗಿದೆ. ಇದು ವಾರ್ಷಿಕ ಶೇಕಡಾ 5ರಷ್ಟು ಖಾತರಿಪಡಿಸಿದ ಬಡ್ಡಿ ಪ್ರಯೋಜನವನ್ನು ಆರಂಭದಿಂದಲೇ ನೀಡಲಿದೆ. ಈ ಯೋಜನೆಯಡಿ ಪಾಲಿಸಿದಾರರು ಪ್ರತಿ ತಿಂಗಳು, ತ್ರೈಮಾಸಿಕ, ಅರ್ಧ ವಾರ್ಷಿಕ ಅಥವಾ ವಾರ್ಷಿಕವಾಗಿ ಪಿಂಚಣಿ ಪಡೆಯಬಹುದಾಗಿದೆ.

ಅರ್ಹತೆಗೆ ಮಾನದಂಡಗಳು

ಎಲ್​ಐಸಿ ಸರಳ ಪಿಂಚಣಿ ಯೋಜನೆ ವಿವರದ ಪ್ರಕಾರ, 40ರಿಂದ 80 ವರ್ಷ ವಯಸ್ಸಿನವರು ವಾರ್ಷಿಕ ಪಿಂಚಣಿ ಪಡೆಯಲು ಅರ್ಹರಾಗಿರುತ್ತಾರೆ.

ಇದನ್ನೂ ಓದಿ
Image
ಟ್ವಿಟರ್​ನಿಂದ ವಜಾಗೊಂಡ ಪರಾಗ್ ಅಗರ್​ವಾಲ್​ಗೆ ಸಿಗಲಿದೆ 346 ಕೋಟಿ ರೂ. ಪರಿಹಾರ
Image
Maruti Suzuki: ಮಾರುತಿ ಸುಜುಕಿ ನಿವ್ವಳ ಲಾಭ ಬರೋಬ್ಬರಿ ನಾಲ್ಕು ಪಟ್ಟು ಹೆಚ್ಚಳ
Image
ಟಿಡಿಎಸ್​ ಸಲ್ಲಿಕೆ ಗಡುವು ನವೆಂಬರ್ 30ಕ್ಕೆ ವಿಸ್ತರಿಸಿದ ಸಿಬಿಡಿಟಿ
Image
RBI MPC meet: ಬೆಲೆ ಏರಿಕೆ, ಹಣದುಬ್ಬರ ತಡೆಯಲಾಗದ್ದಕ್ಕೆ ಏನು ಕಾರಣ ನೀಡಬಹುದು ಆರ್​ಬಿಐ?

ಪಿಂಚಣಿ ಲೆಕ್ಕಾಚಾರ ಹೀಗಿದೆ;

ಎಲ್​ಐಸಿ ವೆಬ್​ಸೈಟ್​​ನಲ್ಲಿ ವಿವರಿಸಿರುವ ಪ್ರಕಾರ, ಪಾಲಿಸಿದಾರರು ಕನಿಷ್ಠ 1,000 ರೂ. ತಿಂಗಳ ಪಿಂಚಣಿ ಅಥವಾ ವಾರ್ಷಿಕ 12,000 ಪಿಂಚಣಿ ಯೋಜನೆಯನ್ನು ಆಯ್ದುಕೊಳ್ಳಬಹುದಾಗಿದೆ. ಈ ಯೋಜನೆಗಾಗಿ ಪಾಲಿಸಿದಾರರು ಒಂದು ಬಾರಿಗೆ 2.50 ಲಕ್ಷ ರೂ. ಪ್ರೀಮಿಯಂ ಪಾವತಿಸಬೇಕಾಗುತ್ತದೆ. 10 ಲಕ್ಷ ರೂ. ಮೊತ್ತದ ಪ್ರೀಮಿಯಂ ಪಾವತಿಸಿದರೆ ವಾರ್ಷಿಕ 50,250 ರೂ. ಪಿಂಚಣಿ ಪಡೆಯಬಹುದಾಗಿದೆ. ಇದೇ ರೀತಿ ವಾರ್ಷಿಕ 1 ಲಕ್ಷ ರೂ. ಪಿಂಚಣಿ ಪಡೆಯಲು ಪಾಲಿಸಿದಾರರು ಒಂದು ಬಾರಿಗೆ 20 ಲಕ್ಷ ರೂ. ಪ್ರೀಮಿಯಂ ಪಾವತಿಸಬೇಕು.

ಸರಳ ಪಿಂಚಣಿ ಯೋಜನೆಯ ಕುರಿತು ಇನ್ನಷ್ಟು…

ಸಾಲದ ಪ್ರಯೋಜನ: ಸರಳ ಪಿಂಚಣಿ ಯೋಜನೆಯಡಿ ಪ್ರೀಮಿಯಂ ಪಾವತಿಸಿದ 6 ತಿಂಗಳ ಬಳಿಕ ಸಾಲದ ಪ್ರಯೋಜನಗಳನ್ನು ಪಡೆಯಬಹುದಾಗಿದೆ.

ಎಕ್ಸಿಟ್ ಪ್ಲಾನ್: ಪ್ರೀಮಿಯಂ ಪಾವತಿಸಿದ 6 ತಿಂಗಳ ಬಳಿಕ ಯೀಜನೆಯಿಂದ ಹಿಂದೆ ಸರಿಯಲು ಅವಕಾಶವಿದೆ.

ಬಡ್ಡಿ ದರ: ಸರಳ ಪಿಂಚಣಿ ಯೋಜನೆಯಲ್ಲಿ ವಾರ್ಷಿಕ ಶೇಕಡಾ 5ರ ಬಡ್ಡಿ ದರ ನಿಗದಿಪಡಿಸಲಾಗಿದೆ.

ಜೀವನಪೂರ್ತಿ ಪಿಂಚಣಿ ಪ್ರಯೋಜನ: ಜೀವನ ಪೂರ್ತಿ ಅನ್ವಯವಾಗುವ ಯೋಜನೆ ಇದಾಗಿದೆ. ಪಾಲಿಸಿದಾರರು ತಮ್ಮ ಜೀವಿತಾವಧಿಯ ಕೊನೆಯವರೆಗೂ ಪಿಂಚಣಿ ಪಡೆಯಲು ಅರ್ಹರಾಗಿರುತ್ತಾರೆ.

ನಾಮನಿರ್ದೇಶಿತರಿಗೆ ಡೆತ್ ಬೆನಿಫಿಟ್: ಎಲ್​ಐಸಿ ಸರಳ ಪಿಂಚಣಿ ಯೋಜನೆಯ ಪಾಲಿಸಿದಾರರ ಮರಣದ ಬಳಿಕ, ನಾಮನಿರ್ದೇಶಿತರಿಗೆ ಮೂಲ ಪ್ರೀಮಿಯಂ ಅಥವಾ ಬೇಸ್ ಪ್ರೀಮಿಯಂ ಅನ್ನು ನೀಡಲಾಗುತ್ತದೆ.

ಮೆಚ್ಯೂರಿಟಿ ಪ್ರಯೋಜವಿಲ್ಲ: ಎಲ್​ಐಸಿ ಸರಳ ಪಿಂಚಣಿ ಯೋಜನೆಯಲ್ಲಿ ಮೆಚ್ಯೂರಿಟಿ ಪ್ರಯೋಜನ ಇರುವುದಿಲ್ಲ ಎಂಬುದನ್ನು ಮುಖ್ಯವಾಗಿ ಗಮನಿಸಬೇಕು. ಪಾಲಿಸಿದಾರರಿಗೆ ಜೀವನಪೂರ್ತಿ ಪಿಂಚಣಿ ನೀಡುವ ಕಾರಣ ಈ ಯೋಜನೆಯಲ್ಲಿ ಮೆಚ್ಯೂರಿಟಿ ಪ್ರಯೋಜನಗಳು ಇರುವುದಿಲ್ಲ.

ಇದನ್ನೂ ಓದಿ: ಎಲ್​ಐಸಿ ‘ಧನ್ ವರ್ಷ 866’ರಲ್ಲಿ ಒಂದು ಬಾರಿ ಹೂಡಿಕೆಗೆ ದುಪ್ಪಟ್ಟು ಗಳಿಕೆ: ಇಲ್ಲಿದೆ ಮಾಹಿತಿ

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ