AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LIC Saral Pension Plan: 1 ಲಕ್ಷ ರೂ. ವಾರ್ಷಿಕ ಪಿಂಚಣಿ ಪಡೆಯಲು ನೀವೆಷ್ಟು ಹೂಡಿಕೆ ಮಾಡಬೇಕು?

ಎಲ್​ಐಸಿ ಸರಳ ಪಿಂಚಣಿ ಯೋಜನೆ ವಿವರದ ಪ್ರಕಾರ, 40ರಿಂದ 80 ವರ್ಷ ವಯಸ್ಸಿನವರು ವಾರ್ಷಿಕ ಪಿಂಚಣಿ ಪಡೆಯಲು ಅರ್ಹರಾಗಿರುತ್ತಾರೆ.

LIC Saral Pension Plan: 1 ಲಕ್ಷ ರೂ. ವಾರ್ಷಿಕ ಪಿಂಚಣಿ ಪಡೆಯಲು ನೀವೆಷ್ಟು ಹೂಡಿಕೆ ಮಾಡಬೇಕು?
ಎಲ್​ಐಸಿImage Credit source: PTI
TV9 Web
| Edited By: |

Updated on: Oct 29, 2022 | 1:28 PM

Share

ಭಾರತೀಯ ಜೀವ ವಿಮಾ ನಿಗಮವು (LIC) ವೈಯಕ್ತಿಕ ವಾರ್ಷಿಕ ಯೋಜನೆ ‘ಸರಳ ಪಿಂಚಣಿ’ಯನ್ನು (Saral Pension Plan) ಇತ್ತೀಚೆಗೆ ಪರಿಚಯಿಸಿದೆ. ಇದೊಂದು ಸಿಂಗಲ್ ಪ್ರೀಮಿಯಂ ಯೋಜನೆಯಾಗಿದೆ. ಇದು ವಾರ್ಷಿಕ ಶೇಕಡಾ 5ರಷ್ಟು ಖಾತರಿಪಡಿಸಿದ ಬಡ್ಡಿ ಪ್ರಯೋಜನವನ್ನು ಆರಂಭದಿಂದಲೇ ನೀಡಲಿದೆ. ಈ ಯೋಜನೆಯಡಿ ಪಾಲಿಸಿದಾರರು ಪ್ರತಿ ತಿಂಗಳು, ತ್ರೈಮಾಸಿಕ, ಅರ್ಧ ವಾರ್ಷಿಕ ಅಥವಾ ವಾರ್ಷಿಕವಾಗಿ ಪಿಂಚಣಿ ಪಡೆಯಬಹುದಾಗಿದೆ.

ಅರ್ಹತೆಗೆ ಮಾನದಂಡಗಳು

ಎಲ್​ಐಸಿ ಸರಳ ಪಿಂಚಣಿ ಯೋಜನೆ ವಿವರದ ಪ್ರಕಾರ, 40ರಿಂದ 80 ವರ್ಷ ವಯಸ್ಸಿನವರು ವಾರ್ಷಿಕ ಪಿಂಚಣಿ ಪಡೆಯಲು ಅರ್ಹರಾಗಿರುತ್ತಾರೆ.

ಇದನ್ನೂ ಓದಿ
Image
ಪರಾಗ್ ಅಗರ್​ವಾಲ್​ಗೆ ಸಿಗಲಿದೆ 346 ಕೋಟಿ ರೂ. ಪರಿಹಾರ
Image
ಮಾರುತಿ ಸುಜುಕಿ ನಿವ್ವಳ ಲಾಭ ಬರೋಬ್ಬರಿ ನಾಲ್ಕು ಪಟ್ಟು ಹೆಚ್ಚಳ
Image
ಟಿಡಿಎಸ್​ ಸಲ್ಲಿಕೆ ಗಡುವು ನವೆಂಬರ್ 30ಕ್ಕೆ ವಿಸ್ತರಿಸಿದ ಸಿಬಿಡಿಟಿ

ಪಿಂಚಣಿ ಲೆಕ್ಕಾಚಾರ ಹೀಗಿದೆ;

ಎಲ್​ಐಸಿ ವೆಬ್​ಸೈಟ್​​ನಲ್ಲಿ ವಿವರಿಸಿರುವ ಪ್ರಕಾರ, ಪಾಲಿಸಿದಾರರು ಕನಿಷ್ಠ 1,000 ರೂ. ತಿಂಗಳ ಪಿಂಚಣಿ ಅಥವಾ ವಾರ್ಷಿಕ 12,000 ಪಿಂಚಣಿ ಯೋಜನೆಯನ್ನು ಆಯ್ದುಕೊಳ್ಳಬಹುದಾಗಿದೆ. ಈ ಯೋಜನೆಗಾಗಿ ಪಾಲಿಸಿದಾರರು ಒಂದು ಬಾರಿಗೆ 2.50 ಲಕ್ಷ ರೂ. ಪ್ರೀಮಿಯಂ ಪಾವತಿಸಬೇಕಾಗುತ್ತದೆ. 10 ಲಕ್ಷ ರೂ. ಮೊತ್ತದ ಪ್ರೀಮಿಯಂ ಪಾವತಿಸಿದರೆ ವಾರ್ಷಿಕ 50,250 ರೂ. ಪಿಂಚಣಿ ಪಡೆಯಬಹುದಾಗಿದೆ. ಇದೇ ರೀತಿ ವಾರ್ಷಿಕ 1 ಲಕ್ಷ ರೂ. ಪಿಂಚಣಿ ಪಡೆಯಲು ಪಾಲಿಸಿದಾರರು ಒಂದು ಬಾರಿಗೆ 20 ಲಕ್ಷ ರೂ. ಪ್ರೀಮಿಯಂ ಪಾವತಿಸಬೇಕು.

ಸರಳ ಪಿಂಚಣಿ ಯೋಜನೆಯ ಕುರಿತು ಇನ್ನಷ್ಟು…

ಸಾಲದ ಪ್ರಯೋಜನ: ಸರಳ ಪಿಂಚಣಿ ಯೋಜನೆಯಡಿ ಪ್ರೀಮಿಯಂ ಪಾವತಿಸಿದ 6 ತಿಂಗಳ ಬಳಿಕ ಸಾಲದ ಪ್ರಯೋಜನಗಳನ್ನು ಪಡೆಯಬಹುದಾಗಿದೆ.

ಎಕ್ಸಿಟ್ ಪ್ಲಾನ್: ಪ್ರೀಮಿಯಂ ಪಾವತಿಸಿದ 6 ತಿಂಗಳ ಬಳಿಕ ಯೀಜನೆಯಿಂದ ಹಿಂದೆ ಸರಿಯಲು ಅವಕಾಶವಿದೆ.

ಬಡ್ಡಿ ದರ: ಸರಳ ಪಿಂಚಣಿ ಯೋಜನೆಯಲ್ಲಿ ವಾರ್ಷಿಕ ಶೇಕಡಾ 5ರ ಬಡ್ಡಿ ದರ ನಿಗದಿಪಡಿಸಲಾಗಿದೆ.

ಜೀವನಪೂರ್ತಿ ಪಿಂಚಣಿ ಪ್ರಯೋಜನ: ಜೀವನ ಪೂರ್ತಿ ಅನ್ವಯವಾಗುವ ಯೋಜನೆ ಇದಾಗಿದೆ. ಪಾಲಿಸಿದಾರರು ತಮ್ಮ ಜೀವಿತಾವಧಿಯ ಕೊನೆಯವರೆಗೂ ಪಿಂಚಣಿ ಪಡೆಯಲು ಅರ್ಹರಾಗಿರುತ್ತಾರೆ.

ನಾಮನಿರ್ದೇಶಿತರಿಗೆ ಡೆತ್ ಬೆನಿಫಿಟ್: ಎಲ್​ಐಸಿ ಸರಳ ಪಿಂಚಣಿ ಯೋಜನೆಯ ಪಾಲಿಸಿದಾರರ ಮರಣದ ಬಳಿಕ, ನಾಮನಿರ್ದೇಶಿತರಿಗೆ ಮೂಲ ಪ್ರೀಮಿಯಂ ಅಥವಾ ಬೇಸ್ ಪ್ರೀಮಿಯಂ ಅನ್ನು ನೀಡಲಾಗುತ್ತದೆ.

ಮೆಚ್ಯೂರಿಟಿ ಪ್ರಯೋಜವಿಲ್ಲ: ಎಲ್​ಐಸಿ ಸರಳ ಪಿಂಚಣಿ ಯೋಜನೆಯಲ್ಲಿ ಮೆಚ್ಯೂರಿಟಿ ಪ್ರಯೋಜನ ಇರುವುದಿಲ್ಲ ಎಂಬುದನ್ನು ಮುಖ್ಯವಾಗಿ ಗಮನಿಸಬೇಕು. ಪಾಲಿಸಿದಾರರಿಗೆ ಜೀವನಪೂರ್ತಿ ಪಿಂಚಣಿ ನೀಡುವ ಕಾರಣ ಈ ಯೋಜನೆಯಲ್ಲಿ ಮೆಚ್ಯೂರಿಟಿ ಪ್ರಯೋಜನಗಳು ಇರುವುದಿಲ್ಲ.

ಇದನ್ನೂ ಓದಿ: ಎಲ್​ಐಸಿ ‘ಧನ್ ವರ್ಷ 866’ರಲ್ಲಿ ಒಂದು ಬಾರಿ ಹೂಡಿಕೆಗೆ ದುಪ್ಪಟ್ಟು ಗಳಿಕೆ: ಇಲ್ಲಿದೆ ಮಾಹಿತಿ

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!