ಯುಪಿಐನಲ್ಲಿ ಕ್ರೆಡಿಟ್ ಕಾರ್ಡ್ ಲಿಂಕ್ ಮಾಡುವ ಫೀಚರ್; ಪ್ರಯೋಜನಗಳೇನು? ಅನನುಕೂಲಗಳೇನು?

Linking Credit Card To UPI: ಯುಪಿಐಗೆ ಕ್ರೆಡಿಟ್ ಕಾರ್ಡನ್ನೂ ಈಗ ಸೇರಿಸಲು ಅವಕಾಶ ಇದೆ. ಮೊದಲಾದರೆ ಬ್ಯಾಂಕ್ ಅಕೌಂಟ್ ಮತ್ತು ಡೆಬಿಟ್ ಕಾರ್ಡನ್ನು ಯುಪಿಐಗೆ ಲಿಂಕ್ ಮಾಡಬಹುದಿತ್ತು. ಈಗ ಕ್ರೆಡಿಟ್ ಕಾರ್ಡ್ ಬಳಕೆಗೆ ಆರ್​ಬಿಐ ಅನುಮತಿಸಿದೆ. ಯುಪಿಐನಲ್ಲಿ ಕ್ರೆಡಿಟ್ ಕಾರ್ಡ್ ಬಳಕೆಯ ಸಾಧಕ ಬಾಧಕಗಳೇನು ಎಂದು ತಿಳಿಯುವುದು ಮುಖ್ಯ.

ಯುಪಿಐನಲ್ಲಿ ಕ್ರೆಡಿಟ್ ಕಾರ್ಡ್ ಲಿಂಕ್ ಮಾಡುವ ಫೀಚರ್; ಪ್ರಯೋಜನಗಳೇನು? ಅನನುಕೂಲಗಳೇನು?
ಯುಪಿಐ
Follow us
|

Updated on: Nov 07, 2023 | 1:50 PM

ರಾಷ್ಟ್ರೀಯ ಪಾವತಿ ನಿಗಮ (NPCI) ರೂಪಿಸಿರುವ ಯುಪಿಐ ಎಂಬ ಡಿಜಿಟಲ್ ಪಾವತಿ ವ್ಯವಸ್ಥೆ (digital payment system) ನಿರಂತರವಾಗಿ ಸುಧಾರಣೆಗಳನ್ನು ಕಾಣುತ್ತಿದೆ. ಕಾಲ ಕಾಲಕ್ಕೆ ಹೊಸ ಫೀಚರ್​ಗಳನ್ನು ಸೇರಿಸುತ್ತಿದೆ. ಬ್ಯಾಂಕುಗಳು ನಿಮಗೆ ಯುಪಿಐನಲ್ಲಿ ಕ್ರೆಡಿಟ್ ಲಿಮಿಟ್ ಕೂಡ ಕೊಡುತ್ತವೆ. ಅದು ಹೊಸ ಫೀಚರ್. ಇದಲ್ಲದೇ, ಯುಪಿಐಗೆ ಕ್ರೆಡಿಟ್ ಕಾರ್ಡನ್ನೂ ಈಗ ಸೇರಿಸಲು ಅವಕಾಶ ಇದೆ. ಮೊದಲಾದರೆ ಬ್ಯಾಂಕ್ ಅಕೌಂಟ್ ಮತ್ತು ಡೆಬಿಟ್ ಕಾರ್ಡನ್ನು ಯುಪಿಐಗೆ ಲಿಂಕ್ ಮಾಡಬಹುದಿತ್ತು. ಈಗ ಕ್ರೆಡಿಟ್ ಕಾರ್ಡ್ ಬಳಕೆಗೆ ಆರ್​ಬಿಐ ಅನುಮತಿಸಿದೆ. ಯುಪಿಐನಲ್ಲಿ ಕ್ರೆಡಿಟ್ ಕಾರ್ಡ್ ಬಳಕೆಯ ಸಾಧಕ ಬಾಧಕಗಳೇನು ಎಂದು ತಿಳಿಯುವುದು ಮುಖ್ಯ.

ಯುಪಿಐಗೆ ಕ್ರೆಡಿಟ್ ಕಾರ್ಡ್ ಲಿಂಕ್ ಮಾಡುವುದರಿಂದ ಅನುಕೂಲಗಳೇನು?

  • ಯುಪಿಐಗೆ ಕ್ರೆಡಿಟ್ ಕಾರ್ಡ್ ಲಿಂಕ್ ಮಾಡುವುದರಿಂದ ನೀವು ಪ್ರತ್ಯೇಕವಾಗಿ ಕ್ರೆಡಿಟ್ ಕಾರ್ಡ್ ಕೊಂಡೊಯ್ಯುವ ಪ್ರಮೇಯ ತಪ್ಪುತ್ತದೆ.
  • ನಿಮ್ಮ ಬ್ಯಾಂಕ್ ಖಾತೆಯಲ್ಲಿ ಹಣ ಇಲ್ಲದಿದ್ದಾಗ ಕ್ರೆಡಿಟ್ ಕಾರ್ಡ್ ಮೂಲಕ ಹಣ ವಹಿವಾಟು ನಡೆಸಬಹುದು.
  • ಯುಪಿಐ ಪಾವತಿ ವ್ಯವಸ್ಥೆ ಇನ್ನಷ್ಟು ಸುಲಭವಾಗುತ್ತದೆ.
  • ಕ್ರೆಡಿಟ್ ಕಾರ್ಡ್ ಕಂಪನಿಗಳಿಂದ ಡಿಸ್ಕೌಂಟ್, ರಿವಾರ್ಡ್ ಇತ್ಯಾದಿ ಲಭ್ಯವಾಗುತ್ತದೆ.

ಇದನ್ನೂ ಓದಿ: Tech Tips: ನೀವು ಯುಪಿಐ ಬಳಸುತ್ತಿದ್ದರೆ ಈ ವಿಷಯ ನೆನಪಿನಲ್ಲಿಡಿ: ಸಣ್ಣ ತಪ್ಪು ಬ್ಯಾಂಕ್ ಖಾತೆಯನ್ನು ಖಾಲಿ ಮಾಡಬಹುದು

ಕ್ರೆಡಿಟ್ ಕಾರ್ಡ್ ಅನನುಕೂಲತೆಗಳೇನು?

  • ಕ್ರೆಡಿಟ್ ಕಾರ್ಡ್ ಎಂಬುದು ನಿಮಗೆ ಸಾಲ ಕೊಡುವ ಒಂದು ಸಾಧನ. ನಿರ್ದಿಷ್ಟ ಅವಧಿಯವರೆಗೆ ಸಾಲ ಉಚಿತ. ಆ ಬಳಿಕ ಬಡ್ಡಿ ಖಚಿತ. ಇದು ಗೊತ್ತಿರಲಿ.
  • ಕ್ರೆಡಿಟ್ ಕಾರ್ಡ್ ಇದ್ದರೆ ನಾವು ಅಗತ್ಯಕ್ಕಿಂತ ಹೆಚ್ಚು ಹಣ ವೆಚ್ಚ ಮಾಡಲು ಪ್ರೇರೇಪಣೆ ಆಗುತ್ತದೆ. ಇದು ಡೇಂಜರ್.

ಒಟ್ಟಾರೆ ಹೇಳುವುದಾದರೆ, ಕ್ರೆಡಿಟ್ ಕಾರ್ಡ್ ಬಳಕೆಯನ್ನು ನಾವು ಹೇಗೆ ನಮ್ಮ ಹತೋಟಿಯಲ್ಲಿ ಇಟ್ಟುಕೊಳ್ಳುತ್ತೀವೋ ಅಷ್ಟೂ ನಮಗೆ ಅದು ಲಾಭಕಾರಿ. ಇಲ್ಲವಾದರೆ ಸಾಲದ ಶೂಲಕ್ಕೆ ಸಿಲುಕಬೇಕಾದೀತು.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ