AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Money Management: ಎಷ್ಟೇ ದುಡಿದರೂ ಹಣ ನಿಲ್ಲುತ್ತಿಲ್ಲವಾ? ಬಾಲ್ಯದ ಅನುಭವ, ಅರಿವಿನ ಕೊರತೆ ಇವೆಲ್ಲವೂ ಕಾರಣ ಇರಬಹುದು

Know How to Control Spending: ಎಷ್ಟೇ ಸಂಪಾದಿಸಿದರೂ ಹಣ ಪೋಲಾಗಿ ಹೋಗುತ್ತಿದ್ದರೆ ಅದು ನಿಮಗೆ ಎಚ್ಚರಿಕೆಯ ಕರೆಗಂಟೆಯಾಗಿದೆ ಎಂಬುದನ್ನು ಅರಿತುಕೊಳ್ಳಿ. ದೊಡ್ಡವರ ವರ್ತನೆ ಸಣ್ಣವರ ಮೇಲೆ ಪ್ರಭಾವ ಬೀರುತ್ತದೆ. ಅಂತೆಯೇ ನಿಮ್ಮ ಖರ್ಚಿನ ಭರಾಟೆ ಅಪ್ಪ ಅಮ್ಮನಿಂದ ಬಳುವಳಿಯಾಗಿ ಬಂದಿರಬಹುದು. ಹಣದ ಹರಿವು ಹರಿದುಹೋಗುವುದನ್ನು ನಿಲ್ಲಿಸಿ ಕೂಡಿಡಲು ಬಜೆಟ್ ಬಹಳ ಮುಖ್ಯ. ನಿಮ್ಮ ನಿತ್ಯದ ಖರ್ಚುವೆಚ್ಚಗಳ ಪಟ್ಟಿ ಮಾಡಿ ಬಜೆಟ್ ಹಾಕಿ.

Money Management: ಎಷ್ಟೇ ದುಡಿದರೂ ಹಣ ನಿಲ್ಲುತ್ತಿಲ್ಲವಾ? ಬಾಲ್ಯದ ಅನುಭವ, ಅರಿವಿನ ಕೊರತೆ ಇವೆಲ್ಲವೂ ಕಾರಣ ಇರಬಹುದು
ಹಣ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 14, 2024 | 9:05 AM

Share

ನಿಮ್ಮಷ್ಟೇ, ಅಥವಾ ನಿಮಗಿಂತ ಕಡಿಮೆ ಆದಾಯ ಪಡೆಯವ ಜನರು ನಿಮಗಿಂತ ಹೆಚ್ಚು ಆಸ್ತಿ ಸಂಪಾದನೆ ಮಾಡಿದ್ದಾರೆಯಾ? ಹೆಚ್ಚು ಸೇವಿಂಗ್ಸ್ (savings) ಕೂಡಿಟ್ಟಿದ್ದಾರೆಯಾ? ನಿಮ್ಮ ಆದಾಯಕ್ಕಿಂತ ಖರ್ಚೇ ಹೆಚ್ಚಾಗಿ ಸೇವಿಂಗ್ ಅನ್ನೋ ಪದವೇ ಮರೆತುಹೋಗಿದೆಯಾ? ಹಾಗಿದ್ದರೆ ಇದು ನಿಮಗೆ ಹಣಕಾಸು ತುರ್ತುಸ್ಥಿತಿಯ ಕರೆಗಂಟೆ (warning bell) ಎಂದೇ ಅರ್ಥ ಮಾಡಿಕೊಳ್ಳಿ. ಈಗಾಗಲೇ ನೀವು ಸಾಲದ ಸುಳಿಗೆ ಸಿಲುಕಿರಬಹುದು, ಅಥವಾ ಸಾಲದ ಸುಳಿಗೆ (debt trap) ಸಿಲುಕುವ ಹೆದ್ದಾರಿಯಲ್ಲಿರಬಹುದು. ಅಷ್ಟಕ್ಕೂ ನಿಮಗಿಂತ ಕಡಿಮೆ ಆದಾಯ ಹೊಂದಿರುವ ಜನರು ನಿಮಗಿಂತ ಹೆಚ್ಚು ಸೇವಿಂಗ್ಸ್ ಕೂಡಿಡಲ ಹೇಗೆ ಸಾಧ್ಯವಾಗುತ್ತದೆ? ಯೋಚಿಸಬೇಕಾದ ಸಂಗತಿ…

ಅಪ್ಪ ಅಪ್ಪನ ವರ್ತನೆಯ ಪ್ರಭಾವ…

ಸಣ್ಣ ಮಕ್ಕಳು ನೋಡಿ ಕಲಿಯುತ್ತಾರೆ. ಮನೆಯಲ್ಲಿ ಅಪ್ಪ ಅಪ್ಪ ಹಣ ಎಷ್ಟು ಖರ್ಚು ಮಾಡುತ್ತಾರೆ, ಹೇಗೆ ವ್ಯಯಿಸುತ್ತಾರೆ, ಯಾವುದಕ್ಕೆ ಹೆಚ್ಚು ವ್ಯಯಿಸುತ್ತಾರೆ ಇವೆಲ್ಲವನ್ನೂ ಮಕ್ಕಳು ಗಮನಿಸುತ್ತಾರೆ. ಅಂತೆಯೇ ನೀವು ಚಿಕ್ಕವರಿದ್ದಾಗ ಅಪ್ಪ ಅಮ್ಮನ ಹಣಕಾಸು ನಿರ್ವಹಣೆಯ ರೀತಿ ಕಂಡು ಬೆಳೆದಿರುತ್ತೀರಿ. ಅದೇ ಗುಣ ನಿಮಗೆ ಸ್ವಾಭಾವಿಕವಾಗಿ ಬಂದಿರಬಹುದು.

ಇದನ್ನೂ ಓದಿ: 50-30-20 Rule: ಅಗತ್ಯಗಳು, ಬಯಕೆಗಳಿಗೆ ಎಷ್ಟು ಹಣ ಬೇಕು? ಉಳಿತಾಯಕ್ಕೆ ಎಷ್ಟು ಬೇಕು? ನಿಮಗಿದೋ 50-30-20 ಸೂತ್ರ

ಚೌಕಟ್ಟು, ಅಥವಾ ಬಜೆಟ್ ಇಲ್ಲದೇ ಹೋದಾಗ….

ನೀವು ಹಣಕಾಸು ಶಿಸ್ತು ಬೆಳೆಸಿಕೊಳ್ಳುವುದು ಮುಖ್ಯ. ತಿಂಗಳ ಬಜೆಟ್, ವರ್ಷದ ಬಜೆಟ್ ಹೀಗೆ ನಿರ್ದಿಷ್ಟ ಅವಧಿಗೆ ಬಜೆಟ್ ಹಾಕಿಕೊಳ್ಳುವುದು ಬಹಳ ಮುಖ್ಯ. ಇಲ್ಲವಾದರೆ ಖರ್ಚುವೆಚ್ಚದ ಹಿಡಿತ ಸಾಧಿಸುವುದು ಕಷ್ಟ. ಸರ್ಕಾರದ ಬಜೆಟ್​ನಲ್ಲಿ ಆದಾಯ ಮತ್ತು ಖರ್ಚಿನ ವಿವರ ಇರುವಂತೆ ನೀವೂ ಕೂಡ ಒಂದು ಬಜೆಟ್ ಹಾಕುವುದು ಉತ್ತಮ. ನಿಮ್ಮ ನಿತ್ಯದ ಖರ್ಚಿನ ವಿವರವನ್ನು ಬರೆದಿಡುವುದನ್ನು ರೂಢಿಸಿಕೊಳ್ಳಿ. ಇದರಿಂದ ನಿಮ್ಮ ಖರ್ಚು ಯಾವ್ಯಾವುದಕ್ಕೆ ಆಗುತ್ತದೆ ಎಂಬ ನಿಖರ ಮಾಹಿತಿ ನಿಮಗೆ ಸಿಗುತ್ತದೆ.

ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಲು ಇದರಿಂದ ಸುಲಭ ಸಾಧ್ಯವಾಗುತ್ತದೆ. ಸೇವಿಂಗ್ಸ್ ಕೂಡಿಡಲು ಇದು ಪ್ರೇರೇಪಿಸಬಹುದು.

ಇವತ್ತಿನದ್ದು ಇವತ್ತಿಗೆ ಎನ್ನುವ ಧೋರಣೆ ತಪ್ಪು

ಇವತ್ತಿನ ಜೀವನ ಎಂಜಾಯ್ ಮಾಡೋಣ, ನಾಳೆಯದ್ದು ನಾಳೆ ನೋಡೋಣ. ನಾಳೆ ಬದುಕಿರುತ್ತೇವೋ ಇಲ್ಲವೋ ಗೊತ್ತಿಲ್ಲ. ಯಾಕೆ ಸುಮ್ಮನೆ ಒದ್ದಾಟ ಎನ್ನುವ ಬಿಂದಾಸ್ ಕಾನ್ಸೆಪ್ಟ್ ನಿಮ್ಮ ತಲೆಯಲ್ಲಿದ್ದರೆ ಮೊದಲು ಕಿತ್ತುಹಾಕಿ. ನಾಳೆಯ ಪರಿಸ್ಥಿತಿ ಹೇಗಿರುತ್ತದೆ ಗೊತ್ತಿಲ್ಲ. ನಾಳೆಯ ಸಂಭಾವ್ಯ ವೆಚ್ಚ ಮತ್ತು ಅಪಾಯಗಳನ್ನು ಎದುರಿಸಲು ನಿಮ್ಮಲ್ಲಿ ಸಾಕಷ್ಟು ಸಂಪನ್ಮೂಲ ಇದೆ ಎಂಬುದು ಖಾತ್ರಿಪಡಿಸಿಕೊಂಡ ಬಳಿಕವಷ್ಟೇ ಬಿಂದಾಸ್ ಆಗಿ ಬದುಕಬಹುದು. ಇಲ್ಲದಿದ್ದರೆ ನಿಮ್ಮ ಸಾವಿಗೆ ನೀವೇ ಗೋರಿ ತೋಡಿಕೊಂಡಂತೆ ಆಗುತ್ತದೆ.

ಇದನ್ನೂ ಓದಿ: SIP Magic: ದಿನಕ್ಕೆ 200 ರೂನಂತೆ ಎಸ್​ಐಪಿಯಲ್ಲಿ ಹೂಡಿಕೆ ಮಾಡಿದರೆ 25 ವರ್ಷಕ್ಕೆ ಎಷ್ಟು ಸಂಪಾದನೆ ಆಗಬಹುದು?

ನಮಗೆ ಗೊತ್ತಿದ್ದೋ ಗೊತ್ತಿಲ್ಲದೆಯೋ ಹೆಚ್ಚು ಖರ್ಚಿನ ಜೀವನಶೈಲಿ ರೂಢಿಸಿಕೊಂಡಿರುತ್ತೇವೆ. ನಿಮ್ಮ ಆದಾಯಕ್ಕಿಂತ ಹೆಚ್ಚು ಖರ್ಚು ಬೇಡುವ ಜೀವನಶೈಲಿ ಇದ್ದರೆ ಮೊದಲು ಅದರಿಂದ ಹೊರಬನ್ನಿ. ಇಲ್ಲದಿದ್ದರೆ ಸಾಲದ ಸುಳಿಗೆ ನೀವು ಸುಲಭವಾಗಿ ಸಿಲುಕಬಹುದು.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ