AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಎನ್​ಪಿಎಸ್ ವಾತ್ಸಲ್ಯ ಸ್ಕೀಮ್ ಲೋಕಾರ್ಪಣೆ; ಮಕ್ಕಳ ಉಜ್ವಲ ಭವಿಷ್ಯಕ್ಕಿರುವ ಈ ಯೋಜನೆ ಬಗ್ಗೆ ಸಮಗ್ರ ಮಾಹಿತಿ

NPS Vatsalya scheme information: ನ್ಯಾಷನಲ್ ಪೆನ್ಷನ್ ಸಿಸ್ಟಂನ ಮುಂದುವರಿದ ಭಾಗವಾದ ಎನ್​ಪಿಎಸ್ ವಾತ್ಸಲ್ಯ ಯೋಜನೆ ಇಂದಿನಿಂದ (ಸೆ. 18) ಚಾಲನೆಗೆ ಬರುತ್ತಿದೆ. 18 ವರ್ಷದೊಳಗಿನ ವಯಸ್ಸಿನ ಮಕ್ಕಳ ಹೆಸರಿನಲ್ಲಿ ಪಾಲಕರು ಈ ಸ್ಕೀಮ್ ಅಡಿ ಅಕೌಂಟ್ ತೆರೆಯಬಹುದು. ವರ್ಷಕ್ಕೆ ಕನಿಷ್ಠ ಒಂದು ಸಾವಿರ ರೂ ಹೂಡಿಕೆ ಅಗತ್ಯ. ಈ ಸ್ಕೀಮ್​ನ ಎಲ್ಲಾ ಪ್ರಮುಖ ಮಾಹಿತಿ ಇಲ್ಲಿದೆ.

ಇಂದು ಎನ್​ಪಿಎಸ್ ವಾತ್ಸಲ್ಯ ಸ್ಕೀಮ್ ಲೋಕಾರ್ಪಣೆ; ಮಕ್ಕಳ ಉಜ್ವಲ ಭವಿಷ್ಯಕ್ಕಿರುವ ಈ  ಯೋಜನೆ ಬಗ್ಗೆ ಸಮಗ್ರ ಮಾಹಿತಿ
ಮಕ್ಕಳು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 18, 2024 | 5:00 AM

Share

ನ್ಯಾಷನಲ್ ಪೆನ್ಷನ್ ಸ್ಕೀಮ್ ಜನಪ್ರಿಯವಾಗುತ್ತಿರುವ ಹೂಡಿಕೆ ಯೋಜನೆಗಳಲ್ಲಿ ಒಂದು. ಇದೇ ಎನ್​ಪಿಎಸ್ ಕಾನ್ಸೆಪ್ಟ್​ನಲ್ಲಿ ಮಕ್ಕಳಿಗೂ ವಿಶೇಷವಾದ ಯೋಜನೆ ರೂಪಿಸಲಾಗಿದೆ. ಅದೇ ಎನ್​ಪಿಎಸ್ ವಾತ್ಸಲ್ಯ ಯೋಜನೆ. ಇತ್ತೀಚಿನ ಬಜೆಟ್​ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎನ್​ಪಿಎಸ್ ವಾತ್ಸಲ್ಯ ಸ್ಕೀಮ್ ಅನ್ನು ಆರಂಭಿಸುವುದಾಗಿ ಘೋಷಿಸಿದ್ದರು. ಇದು ಇವತ್ತು ಸೆಪ್ಟೆಂಬರ್ 18ರಂದು ಚಾಲನೆಗೆ ಬರಲಿದೆ. ಮಕ್ಕಳ ಹೆಸರಿನಲ್ಲಿ ತೆರೆಯಬಹುದಾದ ಈ ಯೋಜನೆಯಿಂದ ನಾನಾ ರೀತಿಯ ಪ್ರಯೋಜನಗಳನ್ನು ಪಡೆಯಲು ಅವಕಾಶ ಇದೆ.

ಎನ್​ಪಿಎಸ್ ವಾತ್ಸಲ್ಯ ಎಂಬುದು ಸರ್ಕಾರೀ ಸ್ವಾಮ್ಯದ ಪೆನ್ಷನ್ ಫಂಡ್ ರೆಗ್ಯುಲೇಟರಿ ಅಂಡ್ ಡೆವಲಪ್ಮೆಂಟ್ ಅಥಾರಿಟಿ (ಪಿಎಫ್​ಆರ್​ಡಿಎ) ಸಂಸ್ಥೆಯಿಂದ ನಿರ್ವಹಿಸಲಾಗುವ ಯೋಜನೆ. ಭಾರತದ ಯಾವುದೇ ನಾಗರಿಕರು ತಮ್ಮ ಮಕ್ಕಳ ಹೆಸರಿನಲ್ಲಿ ಸ್ಕೀಮ್ ಅಕೌಂಟ್ ತೆರೆಯಬಹುದು. ಆ ಮಗು 18 ವರ್ಷ ವಯಸ್ಸಾಗುವವರೆಗೂ ಸ್ಕೀಮ್ ಚಾಲನೆಯಲ್ಲಿರುತ್ತದೆ. ವಯಸ್ಕ ಮಟಕ್ಕೆ ಬಂದ ಬಳಿಕ ಅಕೌಂಟ್ ಅನ್ನು ಮುಂದುವರಿಸಬಹುದು ಅಥವಾ ಅಂತ್ಯಗೊಳಿಸಬಹುದು.

ಇದನ್ನೂ ಓದಿ: POMIS: ಈ ಅಂಚೆ ಕಚೇರಿ ಮಾಸಿಕ ಆದಾಯ ಯೋಜನೆಯಲ್ಲಿ ಪಿಪಿಎಫ್​ಗಿಂತಲೂ ಹೆಚ್ಚು ಬಡ್ಡಿ

ಎನ್​ಪಿಎಸ್ ವಾತ್ಸಲ್ಯ ಸ್ಕೀಮ್​ನ ಪ್ರಮುಖ ಪ್ರಯೋಜನಗಳು

  • ದೀರ್ಘಾವಧಿ ಹೂಡಿಕೆ
  • ಮಗುವಿನ ಭವಿಷ್ಯಕ್ಕೆ ಒಂದು ಹಣಕಾಸು ಭದ್ರತೆ
  • ಪ್ರೌಢಾವಸ್ಥೆಗೆ ಬರುವಾಗಲೇ ಮಕ್ಕಳಲ್ಲಿ ಉಳಿತಾಯ ಮತ್ತು ಹೂಡಿಕೆ ಪ್ರವೃತ್ತಿ ಬೆಳೆಸಲು ಅನುಕೂಲ.
  • ಉನ್ನತ ಶಿಕ್ಷಣಕ್ಕೆ ಹಣ ಕೂಡಿಡಲು ಉತ್ತಮ ಮಾರ್ಗ
  • ರಿಸ್ಕ್​ಗೆ ತಕ್ಕಂತೆ ಫಂಡ್​ಗಳನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ

ಎನ್​ಪಿಎಸ್ ವಾತ್ಸಲ್ಯ ಯೋಜನೆಯಲ್ಲಿ ವರ್ಷಕ್ಕೆ ಮಾಡಬೇಕಾದ ಹೂಡಿಕೆ ಕನಿಷ್ಠ ಒಂದು ಸಾವಿರ ರೂ ಇದೆ. ಅದಕ್ಕಿಂತ ಹೆಚ್ಚಿಗೆ ಎಷ್ಟು ಬೇಕಾದರೂ ಹೂಡಿಕೆ ಮಾಡಲು ಅವಕಾಶ ಇದೆ. ಮಗುವಿನ ಹೆಸರಿನಲ್ಲಿ ಪಾಲಕರು ಹೂಡಿಕೆ ಮಾಡುತ್ತಾರೆ. ಮಗು 18 ವರ್ಷ ವಯಸ್ಸು ಆದ ಬಳಿಕ ಸ್ಕೀಮ್ ಅನ್ನು ಮುಂದುವರಿಸಿಕೊಂಡು ಹೋಗಬಹುದು. ಆದರೆ, ಹೊಸದಾಗಿ ಕೆವೈಸಿ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ.

ಇದನ್ನೂ ಓದಿ: ಸುಕನ್ಯಾ ಸಮೃದ್ಧಿ ಯೋಜನೆ: ಅ. 1ರಿಂದ ಬದಲಾಗಲಿವೆ 2 ನಿಯಮಗಳು, ಗಮನಿಸಿ

ಎನ್​ಪಿಎಸ್ ವಾತ್ಸಲ್ಯ ಯೋಜನೆ ಅಡಿಯಲ್ಲಿ ಅಕೌಂಟ್ ತೆರೆದು ಮೂರು ವರ್ಷಗಳ ಬಳಿಕ ಭಾಗಶಃ ಹಣವನ್ನು ಹಿಂಪಡೆಯುವ ಅವಕಾಶ ಇರುತ್ತದೆ. ಮಗುವಿನ ವಯಸ್ಸು 18 ವರ್ಷ ಆಗುವವರೆಗೂ ಈ ರೀತಿ ಮೂರು ಬಾರಿ ಸ್ವಲ್ಪ ಹಣವನ್ನು ಹಿಂಪಡೆಯಬಹುದು.

18 ವರ್ಷ ವಯಸ್ಸಿನ ಬಳಿಕ ಸ್ಕೀಮ್​ನಿಂದ ಬೇಕಾದರೆ ಹೊರಬರಬಹುದು. ನಿಮ್ಮ ಹೂಡಿಕೆ ಆ ಸಂದರ್ಭದಲ್ಲಿ ಎರಡೂವರೆ ಲಕ್ಷ ರೂಗಿಂತ ಕಡಿಮೆ ಇದ್ದರೆ ಇಡೀ ಹಣವನ್ನು ಹಿಂಪಡೆಯಬಹುದು. ಎರಡೂವರೆ ಲಕ್ಷ ರೂಗಿಂತ ಹೆಚ್ಚಿಗೆ ಇದ್ದರೆ ಶೇ. 20ರಷ್ಟು ಹಣವನ್ನು ಲಂಪ್ಸಮ್ ಆಗಿ ಪಡೆಯಬಹುದು. ಇನ್ನುಳಿದ ಶೇ. 80ರಷ್ಟು ಹಣವನ್ನು ಆ್ಯನುಟಿ ಖರೀದಿಗೆ ಬಳಸಬೇಕು. ಈ ಆ್ಯನುಟಿಯಿಂದ ನಿಯಮಿತವಾಗಿ ಆದಾಯ ಬರುತ್ತಿರುತ್ತದೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ