AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಷನಲ್ ಸೇವಿಂಗ್ಸ್ ಸರ್ಟಿಫಿಕೇಟ್: ಬ್ಯಾಂಕ್ ಎಫ್​ಡಿಗಿಂತ ಹೆಚ್ಚು ಆದಾಯ ತರುವ ಸರ್ಕಾರಿ ಯೋಜನೆ

National Savings Certificate: ಅಂಚೆ ಕಚೇರಿಯಲ್ಲಿ ಮಾಡಿಸಬಹುದಾದ ನ್ಯಾಷನಲ್ ಸೇವಿಂಗ್ಸ್ ಸರ್ಟಿಫಿಕೇಟ್ ಸುರಕ್ಷಿತ ಹೂಡಿಕೆ ಮತ್ತು ಅಧಿಕ ಬಡ್ಡಿ ಕೊಡುವ ಸ್ಕೀಮ್ ಆಗಿದೆ. ಇತರ ಸ್ಮಾಲ್ ಸೇವಿಂಗ್ಸ್ ಸ್ಕೀಮ್​ಗಳಂತೆ ಎನ್​ಎಸ್​ಸಿಗೂ ಮೂರು ತಿಂಗಳಿಗೊಮ್ಮೆ ಬಡ್ಡಿದರ ಪರಿಷ್ಕರಣೆ ಮಾಡಲಾಗುತ್ತದೆ. ಸದ್ಯ ಶೇ. 7.7ರಷ್ಟು ವಾರ್ಷಿಕ ಬಡ್ಡಿದರ ನಿಗದಿ ಮಾಡಲಾಗಿದೆ.

ನ್ಯಾಷನಲ್ ಸೇವಿಂಗ್ಸ್ ಸರ್ಟಿಫಿಕೇಟ್: ಬ್ಯಾಂಕ್ ಎಫ್​ಡಿಗಿಂತ ಹೆಚ್ಚು ಆದಾಯ ತರುವ ಸರ್ಕಾರಿ ಯೋಜನೆ
ಹೂಡಿಕೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 12, 2024 | 12:51 PM

Share

ಸರ್ಕಾರದಿಂದ ನಡೆಸಲಾಗುವ ಸಣ್ಣ ಉಳಿತಾಯ ಯೋಜನೆಗಳಲ್ಲಿ ನ್ಯಾಷನಲ್ ಸೇವಿಂಗ್ಸ್ ಸರ್ಟಿಫಿಕೇಟ್ ಅಥವಾ ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ ಸ್ಕೀಮ್ ಕೂಡ ಒಂದು. ಅಂಚೆ ಕಚೇರಿಯಲ್ಲಿ ಲಭ್ಯ ಇರುವ ಈ ಯೋಜನೆಯಲ್ಲಿ ಸರ್ಕಾರ ಸದ್ಯ ಪ್ರಸಕ್ತ ಕ್ವಾರ್ಟರ್​ಗೆ ಶೇ. 7.7ರ ವಾರ್ಷಿಕ ಬಡ್ಡಿದರ ಫಿಕ್ಸ್ ಮಾಡಿದೆ. ಪ್ರತೀ ಕ್ವಾರ್ಟರ್​ಗೆ ಹಣಕಾ ಸಚಿವಾಲಯ ಈ ಬಡ್ಡಿದರ ಪರಿಷ್ಕರಿಸುತ್ತದೆ. ನ್ಯಾಷನಲ್ ಸೇವಿಂಗ್ಸ್ ಸರ್ಟಿಫಿಕೇಟ್ ಯೋಜನೆಯಲ್ಲಿ ಯಾರು ಬೇಕಾದರೂ ಹಣ ಹೂಡಿಕೆ ಮಾಡಬಹುದು. ಮಾರುಕಟ್ಟೆಗೆ ಜೋಡಿತವಾಗಿಲ್ಲದ ಈ ಹೂಡಿಕೆ ಸುರಕ್ಷಿತವೂ ಹೌದು, ಲಾಭದಾಯಕವೂ ಹೌದು.

ಎನ್​ಎಸ್​ಸಿಯಲ್ಲಿ ಎಷ್ಟು ಹೂಡಿಕೆ ಮಾಡಬಹುದು?

ನ್ಯಾಷನಲ್ ಸೇವಿಂಗ್ಸ್ ಸರ್ಟಿಫಿಕೇಟ್ ಫಿಕ್ಸೆಡ್ ಡೆಪಾಸಿಟ್ ರೀತಿಯದ್ದು. ಕನಿಷ್ಠ 1,000 ರೂ ಹೂಡಿಕೆ ಇದೆ. ಗರಿಷ್ಠ ಮಿತಿ ಇಲ್ಲ. ಒಂದು ಸರ್ಟಿಫಿಕೇಟ್ ಐದು ವರ್ಷಕ್ಕೆ ಮೆಚ್ಯೂರ್ ಆಗುತ್ತದೆ. ಒಬ್ಬ ವ್ಯಕ್ತಿ ಎಷ್ಟು ಬೇಕಾದರೂ ಎನ್​ಎಸ್​ಸಿ ಸರ್ಟಿಫಿಕೇಟ್ ಪಡೆಯಬಹುದು. ಅಂದರೆ ಎಷ್ಟು ಖಾತೆಗಳನ್ನು ಬೇಕಾದರೂ ತೆರೆಯಬಹುದು.

ಇದನ್ನೂ ಓದಿ: ಎನ್​ಪಿಎಸ್ ಸ್ಕೀಮ್ ಮೂಲಕ ತಿಂಗಳಿಗೆ 1 ಲಕ್ಷ ರೂ ಪಿಂಚಣಿ ಪಡೆಯುವುದು ಹೇಗೆ?

ಪ್ರಮುಖ ಬ್ಯಾಂಕುಗಳಲ್ಲಿ ಐದು ವರ್ಷದ ಎಫ್​ಡಿಗೆ ಶೇ. 6.50ರಿಂದ ಶೇ. 7.40ರವರೆಗೂ ಬಡ್ಡಿ ಸಿಗುತ್ತದೆ. ನ್ಯಾಷನಲ್ ಸೇವಿಂಗ್ಸ್ ಸರ್ಟಿಫಿಕೇಟ್​ನಲ್ಲಿನ ಹೂಡಿಕೆಗೆ ಇವಕ್ಕಿಂತಲೂ ಹೆಚ್ಚು ಬಡ್ಡಿ ಸಿಗುತ್ತದೆ.

ತೆರಿಗೆ ಲಾಭ ಕೊಡುವ ಎನ್​ಎಸ್​ಸಿ

ನ್ಯಾಷನಲ್ ಸೇವಿಂಗ್ಸ್ ಸರ್ಟಿಫಿಕೇಟ್ ಅಥವಾ ರಾಷ್ಟ್ರೀಯ ಉಳಿತಾಯ ಪತ್ರದಲ್ಲಿ ಮಾಡುವ ಹೂಡಿಕೆಗೆ ಆದಾಯ ತೆರಿಗೆ ಕಾಯ್ದೆ ಸೆಕ್ಷನ್ 80ಸಿ ಅಡಿಯಲ್ಲಿ ಟ್ಯಾಕ್ಸ್ ಡಿಡಕ್ಷನ್ ಅವಕಾಶ ಇರುತ್ತದೆ. ಈ ಹೂಡಿಕೆಯಿಂದ ಸಿಗುವ ಬಡ್ಡಿ ಆದಾಯಕ್ಕೂ ಟ್ಯಾಕ್ಸ್ ಡಿಡಕ್ಷನ್ ಕ್ಲೇಮ್ ಮಾಡಬಹುದು.

ಮೂರು ತಿಂಗಳಿಗೊಮ್ಮೆ ಇದರಲ್ಲಿನ ಹೂಡಿಕೆಗೆ ಬಡ್ಡಿ ಜಮೆ ಆಗುತ್ತಿರುತ್ತದೆ. ಈ ಮೂಲಕ ಹಣಕ್ಕೆ ಚಕ್ರಬಡ್ಡಿ ಹೆಚ್ಚೆಚ್ಚಾಗಿ ಸೇರುತ್ತಾ ಹೋಗುತ್ತದೆ. ಐದು ವರ್ಷಕ್ಕೆ ಮೆಚ್ಯೂರಿಟಿ ಆದ ಬಳಿಕ ಬಡ್ಡಿ ಸಮೇತ ಇಡೀ ಮೊತ್ತ ನಿಮಗೆ ಸಿಗುತ್ತದೆ. ಅಷ್ಟೂ ಮೊತ್ತಕ್ಕೆ ಟಿಡಿಎಸ್ ಕಡಿತ ಮಾಡಲಾಗುವುದಿಲ್ಲ.

ಇದನ್ನೂ ಓದಿ: 2023-24ರ ಸಾಲಿನಲ್ಲಿ ಇಪಿಎಫ್ ಹಣಕ್ಕೆ ಶೇ. 8.25ರ ಬಡ್ಡಿ; ಹಣಕಾಸು ಸಚಿವಾಲಯದಿಂದ ಅನುಮೋದನೆ

ಉಳಿತಾಯ ಪತ್ರದ ಮೇಲೆ ಸಾಲ

ರಾಷ್ಟ್ರೀಯ ಉಳಿತಾಯ ಪತ್ರ ಒಂದು ಹಣಕಾಸು ಆಸ್ತಿಯಾಗಿದ್ದು, ಅದರ ಆಧಾರದ ಮೇಲೆ ಸಾಲ ಪಡೆಯಬಹುದು. ಬಹುತೇಕ ಬ್ಯಾಂಕುಗಳು ಮತ್ತು ಎನ್​ಬಿಎಫ್​ಸಿಗಳು ನ್ಯಾಷನಲ್ ಸೆಕ್ಯೂರಿಟಿ ಸರ್ಟಿಫಿಕೇಟ್​ಗಳನ್ನು ಅಡವಾಗಿ ಇಟ್ಟು ಸಾಲ ಒದಗಿಸುತ್ತವೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ