AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಕೋಟಿ ರೂ ಇದೆ, ಎಲ್ಲಿ ಹೂಡಿಕೆ ಮಾಡಬೇಕು? ರ‍್ಯಾಪರ್ ಬಾದ್​ಶಾಗೆ ನಿಖಿಲ್ ಕಾಮತ್ ನೀಡಿದ ಸಲಹೆ ಇದು…

Nikhil Kamath podcast with rapper Badshah, actress Kriti Sanon: ನಿಖಿಲ್ ಕಾಮತ್ ಅವರ ಇತ್ತೀಚಿನ ಪಾಡ್​ಕ್ಯಾಸ್ಟ್​​ನಲ್ಲಿ ಗಾಯಕ ಬಾದ್​ಶಾ ಮತ್ತು ನಟಿ ಕೃತಿ ಸನೋನ್ ಭಾಗವಹಿಸಿದ್ದರು. ಈ ವೇಳೆ ಹೂಡಿಕೆದಾರರು, ಉದ್ಯಮಿಗಳಿಗೆ ಝೀರೋಧ ಸಂಸ್ಥಾಪಕರು ಒಂದಷ್ಟು ಕಿವಿಮಾತು ಹೇಳಿದ್ದಾರೆ. ಹೂಡಿಕೆದಾರರು ಯಾವ ಕ್ಷೇತ್ರದಲ್ಲಿ ಗಮನ ಹರಿಸಬೇಕು, ಆಂಟ್ರಪ್ರನ್ಯೂರ್​ಗಳು ಯಾವ ಅಂಶ ಗಮನಿಸಬೇಕು ಎಂಬುದನ್ನು ತಿಳಿಸಿದ್ದಾರೆ.

3 ಕೋಟಿ ರೂ ಇದೆ, ಎಲ್ಲಿ ಹೂಡಿಕೆ ಮಾಡಬೇಕು? ರ‍್ಯಾಪರ್ ಬಾದ್​ಶಾಗೆ ನಿಖಿಲ್ ಕಾಮತ್ ನೀಡಿದ ಸಲಹೆ ಇದು...
ನಿಖಿಲ್ ಕಾಮತ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 01, 2024 | 11:16 AM

Share

ನವದೆಹಲಿ, ಸೆ. 1: ಷೇರು ಮಾರುಕಟ್ಟೆಯ ಬ್ರೋಕರ್ ಸಂಸ್ಥೆಯಾದ ಝೀರೋಧದ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ನಿಯಮಿತವಾಗಿ ಪಾಡ್​ಕ್ಯಾಸ್ಟ್​ಗಳಲ್ಲಿ ಮಾತನಾಡುತ್ತಿರುತ್ತಾರೆ. ವಿಶೇಷ ಅತಿಥಿಗಳನ್ನು ಕರೆಸಿ ಅವರೊಂದಿಗೆ ಹೂಡಿಕೆ ಇತ್ಯಾದಿ ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತಿರುತ್ತಾರೆ. ಅಂತೆಯೇ ಅವರ ಡಬ್ಲ್ಯುಟಿಎಫ್ ಎನ್ನುವ ಪೋಡ್​ಕ್ಯಾಸ್ಟ್ ಬಹಳ ಜನಪ್ರಿಯವಾಗಿದೆ, ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕುತ್ತದೆ. ಕಳೆದ ಬಾರಿಯ ಪಾಡ್​​ಕ್ಯಾಸ್ಟ್​ನಲ್ಲಿ ಅವರು ಬಾಲಿವುಡ್​ನ ರ‍್ಯಾಪ್ ಗಾಯಕ ಬಾದ್​ಶಾ ಮತ್ತು ನಟಿ ಕೃತಿ ಸನೋನ್ ಅವರೊಂದಿಗೆ ಮಾತನಾಡಿದ್ದಾರೆ. ಈ ವೇಳೆ ಹೂಡಿಕೆ ವಿಚಾರವಾಗಿ ರ‍್ಯಾಪರ್ ಬಾದ್​ಶಾ ಕೇಳಿದ ಒಂದು ನೇರ ಹಾಗು ಸರಳ ಪ್ರಶ್ನೆಗೆ ನಿಖಿಲ್ ಕಾಮತ್ ಅಷ್ಟೇ ನೇರವಾಗಿ ಉತ್ತರ ಕೊಟ್ಟಿದ್ದಾರೆ.

3 ಕೋಟಿ ರೂ ಇದ್ದರೆ ಎಲ್ಲಿ ಹೂಡಿಕೆ ಮಾಡಬೇಕು?

ರ‍್ಯಾಪರ್ ಬಾದ್​​ಶಾ ಆ ಎಪಿಸೋಡ್​ನಲ್ಲಿ ಬಹಳ ಸರಳ ಪ್ರಶ್ನೆ ಕೇಳಿದರು. ‘ಒಬ್ಬರ ಬಳಿ 3 ಕೋಟಿ ರೂ ಇದ್ದರೆ, ನಿಶ್ಚಿತ ಲಾಭಕ್ಕಾಗಿ ಅವರು ಆ ಹಣ ಎಲ್ಲಿ ಹೂಡಿಕೆ ಮಾಡಬಹುದು?’ ಎಂದು ಕೇಳಿದ್ದಾರೆ. ಇದಕ್ಕೆ ನಿಖಿಲ್ ಕಾಮತ್ ಅವರು ಮರುಬಳಕೆ ಇಂಧನ ಕ್ಷೇತ್ರ ಮುಂದಿನ ದಿನಗಳಲ್ಲಿ ಎಷ್ಟು ಪ್ರಾಮುಖ್ಯ ಪಡೆಯಲಿದೆ ಎನ್ನುವ ವಿಚಾರವನ್ನು ತಿಳಿಸಿದ್ದಾರೆ.

ಇದನ್ನೂ ಓದಿ: ಮೂವತ್ತು ವರ್ಷ ಮುಗಿಸಿದ ಮ್ಯೂಚುವಲ್ ಫಂಡ್​ಗಳ ಸಾಧನೆ ಹೇಗೆ? ತಿಂಗಳಿಗೆ ಕೇವಲ 1,000 ಹೂಡಿಕೆ ಈಗ ಆಗಿದೆ 2 ಕೋಟಿ ರೂ

ನಿಖಿಲ್ ಕಾಮತ್ ಪ್ರಕಾರ ಸೌರಶಕ್ತಿ ಕಂಪನಿಗಳು, ಎಲೆಕ್ಟ್ರಿಕ್ ಕಾರ್ ಕಂಪನಿಗಳು, ಬ್ಯಾಟರಿ ತಯಾರಕರು ಇಲ್ಲಿ ಹೂಡಿಕೆ ಮಾಡುವುದರಿಂದ ಲಾಭ ಮಾಡಬಹುದು. ಸರ್ಕಾರದಿಂದ ಈ ಕ್ಷೇತ್ರಕ್ಕೆ ಉತ್ತೇಜನ ಕೂಡ ನೀಡುತ್ತದೆ. ಹೀಗಾಗಿ, ಇಲ್ಲಿ ಹೂಡಿಕೆ ಮಾಡಬಹುದು ಎಂದು ಕಾಮತ್ ಅಭಿಪ್ರಾಯಪಟ್ಟಿದ್ದಾರೆ.

ತುಂಬಿಹೋಗಿರುವ ಮಾರುಕಟ್ಟೆ ಬಿಟ್ಟು ಭವಿಷ್ಯದ ಕ್ಷೇತ್ರಗಳತ್ತ ಕಣ್ಣಿಡಬೇಕು

ಈ ಪಾಡ್​ಕ್ಯಾಸ್ಟ್​ನಲ್ಲಿ ನಿಖಿಲ್ ಕಾಮತ್ ಅವರು ಆಂಟ್ರಪ್ರನ್ಯೂರ್ ಅಥವಾ ಉದ್ದಿಮೆದಾರರಿಗೆ ಸಲಹೆ ಕೊಟ್ಟಿದ್ದಾರೆ. ಅವರ ಪ್ರಕಾರ ಉದ್ಯಮಿಗಳು ಸ್ಯಾಚುರೇಟೆಡ್ ಮಾರ್ಕೆಟ್ ಅಥವಾ ತುಂಬಿಹೋಗಿರುವ ಮಾರುಕಟ್ಟೆ ಬದಲು ಮುಂದಿನ ದಶಕದಲ್ಲಿ ಉತ್ತಮ ಬೆಳವಣಿಗೆ ಅವಕಾಶ ಇರುವಂತಹ ಕ್ಷೇತ್ರಗಳತ್ತ ಗಮನ ಹರಿಸಬೇಕು.

ಸ್ಯಾಚುರೇಟೆಡ್ ಮಾರ್ಕೆಟ್ ವಿಚಾರಕ್ಕೆ ಅವರು ಬಾಲಿವುಡ್ ಉದಾರಣೆ ನೀಡಿದ್ದಾರೆ. ಸೆಲಬ್ರಿಟಿಗಳ ಒಡನಾಟಕ್ಕಾಗಿ ಹೂಡಿಕೆದಾರರು ಚಿತ್ರೋದ್ಯಮಕ್ಕೆ ಅಡಿ ಇಡುತ್ತಾರೆ. ಆದರೆ, ಅವರ ಹೂಡಿಕೆ ನಿಷ್ಫಲವಾಗುತ್ತದೆ. ಬಾಲಿವುಡ್​​ಗೆ ಹರಿದುಬರುವ ಹಣ ಹಾಗೆಯೇ ಮುರುಟಿ ಹೋಗುತ್ತದೆ ಎನ್ನುತ್ತಾರೆ ಝೀರೋಧ ಸಹ-ಸಂಸ್ಥಾಪಕರು.

ಇದನ್ನೂ ಓದಿ: ಐದು ವರ್ಷಕ್ಕೆ ಮಾತ್ರ ಹೂಡಿಕೆ ಮಾಡಬೇಕಾ? ಇಲ್ಲಿವೆ ಕೆಲ ಉತ್ತಮ ಆಯ್ಕೆಗಳು

ಕುತೂಹಲ ಹುಟ್ಟಿಸಿತೆಂದು ಬಿಸಿನೆಸ್ ಬೇಡ

ಯಾವುದೇ ಒಂದು ಬಿಸಿನೆಸ್ ಬಗ್ಗೆ ನಿಮಗೆ ಆಸಕ್ತಿ ಹುಟ್ಟಿತೆಂಬ ಕಾರಣಕ್ಕೆ ಬಿಸಿನೆಸ್ ಮಾಡಲು ಹೋಗಬಾರದು. ಪ್ಯಾಶನ್ ಮುಖ್ಯವೇನೋ ಹೌದು. ಆದರೆ, ಆ ಕ್ಷೇತ್ರದಲ್ಲಿ ಸ್ಪರ್ಧೆ ಹೇಗಿದೆ, ಯಶಸ್ಸಿನ ಸಾಧ್ಯತೆ ಎಷ್ಟು ಎಂಬ ಅಂಶಗಳನ್ನು ಅವಲೋಕಿಸುವುದು ಬಹಳ ಮುಖ್ಯ ಎಂದು ನಿಖಿಲ್ ಕಾಮತ್ ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!