AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಸ್ಟ್ ಆಫೀಸ್​ನ ಈ ಸ್ಕೀಮ್​ನಲ್ಲಿದೆ ನರೇಂದ್ರ ಮೋದಿಯ ಉಳಿತಾಯ ಹಣ; ಎನ್​ಎಸ್​ಸಿ ಯೋಜನೆ ಬಗ್ಗೆ ತಿಳಿಯಿರಿ

PM Narendra Modi and NSC: ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಂಡಿರುವ ಏಕೈಕ ಉಳಿತಾಯ ಯೋಜನೆ ನ್ಯಾಷನಲ್ ಸೇವಿಂಗ್ಸ್ ಸರ್ಟಿಫಿಕೇಟ್. ಇದರಲ್ಲಿ ಅವರು ಹೆಚ್ಚೂಕಡಿಮೆ 9 ಲಕ್ಷ ರೂನಷ್ಟು ಹಣ ಹೊಂದಿದ್ದಾರೆ. ಅಂಚೆ ಕಚೇರಿಯಲ್ಲಿ ಮಾಡಿಸಬಹುದಾದ ಈ ಸ್ಕೀಮ್​ನಲ್ಲಿ ಉತ್ತಮ ಎನಿಸುವ ಶೇ. 7.7ರಷ್ಟು ಬಡ್ಡಿ ಸಿಗುತ್ತದೆ.

ಪೋಸ್ಟ್ ಆಫೀಸ್​ನ ಈ ಸ್ಕೀಮ್​ನಲ್ಲಿದೆ ನರೇಂದ್ರ ಮೋದಿಯ ಉಳಿತಾಯ ಹಣ; ಎನ್​ಎಸ್​ಸಿ ಯೋಜನೆ ಬಗ್ಗೆ ತಿಳಿಯಿರಿ
ಎನ್​ಎಸ್​ಸಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Sep 17, 2023 | 4:02 PM

Share

ಇಂದು ಸೆಪ್ಟೆಂಬರ್ 17, ನರೇಂದ್ರ ಮೋದಿ ಅವರ ಜನ್ಮದಿನ. ಬಹಳ ಸಾಧಾರಣ ಆಸ್ತಿವಂತರಾದ ನರೇಂದ್ರ ಮೋದಿ (PM Narendra Modi) ಅವರ ಬಳಿ ಒಂದು ಚಿರಾಸ್ತಿ ಬಿಟ್ಟರೆ ಬಹುತೇಕ ಹಣ ಸೇವಿಂಗ್ಸ್ ಸ್ಕೀಮ್ ಮತ್ತು ಇನ್ಷೂರೆನ್ಸ್ ಸ್ಕೀಮ್​ನದ್ದಾಗಿದೆ. ಪ್ರಧಾನಿಯವರು ನ್ಯಾಷನಲ್ ಸೇವಿಂಗ್ಸ್ ಸರ್ಟಿಫಿಕೇಟ್ ಯೋಜನೆಯಲ್ಲಿ (NSC National Savings Certificate) ಒಂದಷ್ಟು ಉಳಿತಾಯ ಹಣವನ್ನು ತೊಡಗಿಸಿಕೊಂಡಿದ್ದಾರೆ. 2022ರಲ್ಲಿ ಅವರು ಘೋಷಣೆ ಮಾಡಿಕೊಂಡಿರುವ ಆಸ್ತಿವಿವರದ (Declared Assets) ಮಾಹಿತಿ ಪ್ರಕಾರ ಎನ್​ಎಸ್​ಸಿಯಲ್ಲಿ ಮೋದಿ ಅವರ 9,05,105 ರೂ (9 ಲಕ್ಷ) ಹಣ ಇದೆ. ಅವರ ಒಟ್ಟಾರೆ ಘೋಷಿತ ಆಸ್ತಿ 2.24 ಕೋಟಿ ರೂನಲ್ಲಿ ಇದು ಶೇ. 5ಕ್ಕಿಂತಲೂ ಕಡಿಮೆಯೇ.

ಏನಿದು ನ್ಯಾಷನಲ್ ಸೇವಿಂಗ್ಸ್ ಸರ್ಟಿಫಿಕೇಟ್?

ಎನ್​ಎಸ್​ಸಿ ಎಂಬುದು ತೆರಿಗೆ ಡಿಡಕ್ಷನ್​ಗೆ ಅನುವು ಮಾಡಿಕೊಡುವ ಒಂದು ಉಳಿತಾಯ ಯೋಜನೆ. ಬ್ಯಾಂಕ್ ಅಥವಾ ಅಂಚೆ ಕಚೇರಿಯಲ್ಲಿ ಈ ಸ್ಕೀಮ್ ಪಡೆಯಬಹುದು. ಐದು ವರ್ಷಕ್ಕೆ ಮೆಚ್ಯೂರ್ ಆಗುವ ಈ ಸ್ಕೀಮ್​ನಲ್ಲಿ ಕನಿಷ್ಠ ಹೂಡಿಕೆ 1,000 ಇರುತ್ತದೆ. ಗರಿಷ್ಠ ಎಷ್ಟು ಬೇಕಾದರೂ ನೀವು ಹೂಡಿಕೆ ಮಾಡಬಹುದು.

ಇದನ್ನೂ ಓದಿ: PM Vishwakarma: ಪಿಎಂ ವಿಶ್ವಕರ್ಮ ಯೋಜನೆ ಉದ್ಘಾಟನೆ; ಕುಶಲಕರ್ಮಿಗಳಿಗೆಂದಿರುವ ಈ ಸ್ಕೀಮ್ ಪಡೆಯುವುದು ಹೇಗೆ?

ನ್ಯಾಷನಲ್ ಸೇವಿಂಗ್ಸ್ ಸರ್ಟಿಫಿಕೇಟ್ ಬಡ್ಡಿ ಇತ್ಯಾದಿ ವಿವರಗಳು

  • ಎನ್​ಎಸ್​ಸಿಯಲ್ಲಿನ ಹೂಡಿಕೆಗೆ ವರ್ಷಕ್ಕೆ ಶೇ. 7.7ರಷ್ಟು ಬಡ್ಡಿ ಸಿಗುತ್ತದೆ.
  • ಯೋಜನೆ ಅವಧಿ 5 ವರ್ಷ, ಲಾಕಿನ್ ಅವಧಿಯೂ 5 ವರ್ಷವೇ.
  • ಭಾರತದ ಪ್ರಜೆಗಳು ಮಾತ್ರವೇ ಈ ಸ್ಕೀಮ್ ಪಡೆಯಬಹುದು.
  • ಒಬ್ಬ ವ್ಯಕ್ತಿ ಎಷ್ಟು ಬೇಕಾದರೂ ನ್ಯಾಷನಲ್ ಸೇವಿಂಗ್ಸ್ ಸರ್ಟಿಫಿಕೇಟ್ ಪಡೆಯಬಹುದು.
  • ಎನ್​ಎಸ್​ಸಿ ಅನ್ನು ಜಾಮೀನಾಗಿ ಇಟ್ಟು ಯಾವುದೇ ಬ್ಯಾಂಕ್​ನಲ್ಲಿ ಸಾಲ ಪಡೆಯಬಹುದು.

ನ್ಯಾಷನಲ್ ಸೇವಿಂಗ್ಸ್ ಸರ್ಟಿಫಿಕೇಟ್​ನಿಂದ ತೆರಿಗೆ ಲಾಭಗಳು

ಎನ್​ಎಸ್​ಸಿಯಲ್ಲಿ ನೀವು ಮಾಡಿರುವ ಹೂಡಿಕೆಗೆ ಟ್ಯಾಕ್ಸ್ ರಿಬೇಟ್ ಪಡೆಯಬಹುದು. ಒಂದು ವರ್ಷದಲ್ಲಿ 1.5 ಲಕ್ಷ ರೂವರೆಗಿನ ಇಂತಹ ಹೂಡಿಕೆಗೆ ತೆರಿಗೆ ವಿನಾಯಿತಿ ಇರುತ್ತದೆ. ಈ ಹೂಡಿಕೆಯಿಂದ ಸಿಗುವ ಬಡ್ಡಿಹಣವೂ ಒಟ್ಟಾರೆ ಮೊತ್ತಕ್ಕೆ ಸೇರ್ಪಡೆಯಾಗಿ, ಅಷ್ಟಕ್ಕೂ ತೆರಿಗೆ ವಿನಾಯಿತಿ ಲಭ್ಯ ಇರುತ್ತದೆ. ಮೆಚ್ಯೂರ್ ಆದ ಬಳಿಕ ಯಾವುದೇ ತೆರಿಗೆ ಕಡಿತ ಇಲ್ಲದೇ ಪೂರ್ಣ ಮೊತ್ತ ಕೈ ಸೇರುತ್ತದೆ.

ಇದನ್ನೂ ಓದಿ: ತೆರಿಗೆ ಉಳಿಸುವ ನರೇಂದ್ರ ಮೋದಿ ಟ್ರಿಕ್ಸ್; ಇನ್ಫ್ರಾ ಬಾಂಡ್​ಗಳಲ್ಲಿ ಹೂಡಿಕೆ ಮಾಡಿದ್ದ ಪ್ರಧಾನಿ; ಏನಿದು ಈ ಇನ್ಫ್ರಾಸ್ಟ್ರಕ್ಚರ್ ಬಾಂಡ್ಸ್?

ಎನ್​ಎಸ್​ಸಿ ಎಲ್ಲಿ ಪಡೆಯಬಹುದು?

ಅಂಚೆ ಕಚೇರಿ ಅಥವಾ ನಿಗದಿತ ಬ್ಯಾಂಕುಗಳಲ್ಲಿ ನ್ಯಾಷನಲ್ ಸೇವಿಂಗ್ಸ್ ಸರ್ಟಿಫಿಕೇಟ್ ಪಡೆಯಬಹುದು. ಆನ್​ಲೈನ್​ನಲ್ಲಿ ಇದನ್ನು ತೆರೆಯಲು ಸಾಧ್ಯವಿಲ್ಲ. ಕಚೇರಿಗೆ ಹೋಗಿ ಅರ್ಜಿ ಭರ್ತಿ ಮಾಡಿ ಸಲ್ಲಿಸಬೇಕು. 2016ರಿಂದೀಚೆ ಭೌತಿಕವಾದ ಸರ್ಟಿಫಿಕೇಟ್ ಬದಲು ಎಲೆಕ್ಟ್ರಾನಿಕ್ ಪ್ರತಿಯನ್ನು ಕೊಡಲಾಗುತ್ತದೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:01 pm, Sun, 17 September 23

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ