AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Govt Schemes: ಕೇಂದ್ರದ ಈ 3 ಸ್ಕೀಮ್​ಗಳಿಗೆ 8 ವರ್ಷ; ಎಷ್ಟು ಕೋಟಿ ಭಾರತೀಯರನ್ನು ತಲುಪಿವೆ ಈ ಸ್ಕೀಮ್​ಗಳು?

PMJJBY, PMSBY, APY See 8 Years Of Service: ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ, ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ ಮತ್ತು ಅಟಲ್ ಪೆನ್ಷನ್ ಸ್ಕೀಮ್ ಯೋಜನೆಗಳಿಗೆ ಈಗ ಸರಿಯಾಗಿ 8 ವರ್ಷವಾಗಿದೆ. 2015, ಮೇ 9ರಂದು ಈ ಮೂರು ಸ್ಕೀಮ್​ಗಳು ಬಿಡುಗಡೆ ಆಗಿದ್ದವು. 8 ವರ್ಷದಲ್ಲಿ ಎಷ್ಟು ಮಂದಿಯನ್ನು ತಲುಪಿವೆ ಈ ಮೂರು ಯೋಜನೆಗಳು? ಇಲ್ಲಿದೆ ಮಾಹಿತಿ.

Govt Schemes: ಕೇಂದ್ರದ ಈ 3 ಸ್ಕೀಮ್​ಗಳಿಗೆ 8 ವರ್ಷ; ಎಷ್ಟು ಕೋಟಿ ಭಾರತೀಯರನ್ನು ತಲುಪಿವೆ ಈ ಸ್ಕೀಮ್​ಗಳು?
ಹಣ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 09, 2023 | 6:09 PM

Share

ಸಮತೋಲಿತವಾಗಿ ಸಮಾಜ ಮುಂದುವರಿಯಬೇಕಾದರೆ ಎಲ್ಲರೂ ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಮಾನಸಿಕವಾಗಿ ಸುದೃಢವಾಗಿರಬೇಕು. ಬೇರೆ ಬೇರೆ ಕಾರಣಗಳಿಗೆ ಹೆಚ್ಚಿನ ಜನರು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದುಹೋಗುತ್ತಾರೆ. ಇಂಥ ಅಸಹಾಯಕ ಜನರನ್ನು ಮೇಲೆತ್ತಲು ಸರ್ಕಾರಗಳು ಹಲವು ಯೋಜನೆಗಳನ್ನು ರೂಪಿಸುತ್ತವೆ. ಇಂಥ ಯೋಜನೆಗಳಲ್ಲಿ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (PMJJBY), ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ (PMSBY) ಮತ್ತು ಅಟಲ್ ಪಿಂಚಣಿ ಯೋಜನೆ (APY- Atal Pension Yojana) 2015ರಲ್ಲಿ ಆರಂಭಗೊಂಡಂಥವು. ಇದೀಗ ಈ ಮೂರು ಯೋಜನೆಗಳಿಗೆ 8 ವರ್ಷದ ಸಂಭ್ರಮ. ಈ ಸಂದರ್ಭದಲ್ಲಿ ಈ ಯೋಜನೆಗಳು ಎಷ್ಟು ಮಂದಿಯನ್ನು ತಲುಪಿವೆ, ಎಷ್ಟು ಲಾಭಕಾರಿ ಆಗಿವೆ ಎಂಬ ಕುತೂಹಲ ಹಲವರಿಗೆ ಇರಬಹುದು.

ಕೇಂದ್ರ ಹಣಕಾಸು ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ, ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ ಮತ್ತು ಅಟಲ್ ಪೆನ್ಷನ್ ಯೋಜನೆಗಳು ಒಟ್ಟು ಸೇರಿ ಹೊಂದಿರುವ ಗ್ರಾಹಕರ ಸಂಖ್ಯೆ 55.6 ಕೋಟಿ ಅಂತೆ. ಇದರಲ್ಲಿ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಗೆ ಅತ್ಯಧಿಕ ಎನ್​ರೋಲ್ಮೆಂಟ್ ಇದೆಯಂತೆ.

ಸರ್ಕಾರದ ಸೋಷಿಯಲ್ ಸೆಕ್ಯೂರಿಟಿ ಸ್ಕೀಮ್​ಗಳು ಮತ್ತು ಸಬ್​ಸ್ಕ್ರೈಬರ್ಸ್ ಸಂಖ್ಯೆ

  1. ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನಾ: 16.2 ಕೋಟಿ ಗ್ರಾಹಕರು
  2. ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನಾ: 34.2 ಕೋಟಿ ಗ್ರಾಹಕರು
  3. ಅಟಲ್ ಪೆನ್ಷನ್ ಸ್ಕೀಮ್: 5.2 ಕೋಟಿ ಗ್ರಾಹಕರು

ಇದನ್ನೂ ಓದಿLIC Jeevan Azad: ಬಿಸಿದೋಸೆಯಂತೆ ಸೇಲ್ ಆಗುತ್ತಿದೆ ಎಲ್​ಐಸಿಯ ಹೊಸ ಪಾಲಿಸಿ ಜೀವನ್ ಆಜಾದ್; 20 ವರ್ಷದ ಪ್ಲಾನ್​ಗೆ ಪ್ರೀಮಿಯಮ್ ಕಟ್ಟುವುದು 12 ವರ್ಷ ಮಾತ್ರ

ಇದು 2023ರ ಏಪ್ರಿಲ್ 26ರವರೆಗಿನ ಮಾಹಿತಿ. ಜೀವನಜ್ಯೋತಿ ವಿಮಾ ಯೋಜನೆ ಅಡಿ 6.64 ಲಕ್ಷ ಕುಟುಂಬಗಳಿಗೆ 13,290 ಕೋಟಿ ರೂನಷ್ಟು ಹಣ ವಿತರಿಸಲಾಗಿದೆ. ಇನ್ನು ಸುರಕ್ಷಾ ವಿಮಾ ಯೋಜನೆ ಅಡಿ 1.15 ಲಕ್ಷ ಕುಟುಂಬಗಳಿಗೆ 2,302 ಕೋಟಿ ರೂ ನೀಡಲಾಗಿದೆ ಎಂದು ಹಣಕಾಸು ಇಲಾಖೆ ಹೇಳಿದೆ.

ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಬಗ್ಗೆ ಮಾಹಿತಿ

ಇದು ಎಲ್​ಐಸಿ ಪಾಲಿಸಿಯಲ್ಲ. ಕೇಂದ್ರ ಸರ್ಕಾರವೇ ಖುದ್ದಾಗಿ ನಿರ್ವಹಿಸುವ ಜೀವ ವಿಮಾ ಯೋಜನೆ. ಬ್ಯಾಂಕ್ ಖಾತೆ ಹೊಂದಿರುವ 18ರಿಂದ 50 ವರ್ಷ ವಯೋಮಾನದ ಜನರು ಈ ಸ್ಕೀಮ್ ಪಡೆಯಬಹುದು. ಅವರು ಖಾತೆ ಹೊಂದಿರುವ ಬ್ಯಾಂಕ್ ಮುಖಾಂತರವೇ ಈ ಯೋಜನೆ ಸಿಗುತ್ತದೆ. ವರ್ಷಕ್ಕೆ 436 ರೂ ಪ್ರೀಮಿಯಮ್ ಕಟ್ಟಿದರೆ 2 ಲಕ್ಷ ರೂವರೆಗೂ ಡೆತ್ ಇನ್ಷೂರೆನ್ಸ್ ಕವರ್ ಆಗುತ್ತದೆ. ಪ್ರತೀ ವರ್ಷವೂ ಇದನ್ನು ನವೀಕರಿಸಬಹುದು. ಯಾವುದೇ ರೀತಿಯ ಸಾವಾದರೂ ವಾರಸುದಾರರು ಹಣ ಕ್ಲೈಮ್ ಮಾಡಬಹುದು. ಅಂಚೆ ಕಚೇರಿಯಲ್ಲೂ ಈ ಪಾಲಿಸಿ ಪಡೆಯಬಹುದು.

ಪಿಎಂ ಸುರಕ್ಷಾ ಬಿಮಾ ಯೋಜನೆಯ ಬಗ್ಗೆ ಮಾಹಿತಿ

ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ ಅಪಘಾತ ವಿಮೆ ಪಾಲಿಸಿಯಾಗಿದೆ. ಬ್ಯಾಂಕ್ ಅಥವಾ ಅಂಚೆ ಕಚೇರಿಯಲ್ಲಿ ಖಾತೆ ಹೊಂದಿರುವ 18ರಿಂದ 70 ವರ್ಷ ವಯೋಮಾನದ ಜನರು ಈ ಸ್ಕೀಮ್ ಪಡೆಯಬಹುದು. ವರ್ಷಕ್ಕೆ ಕೇವಲ 20 ರೂ ಮಾತ್ರ ಪ್ರೀಮಿಯಮ್ ಕಟ್ಟಬೇಕು. ಅಪಘಾತದಿಂದ ಸಾವಾದರೆ ವಾರಸುದಾರರಿಗೆ 2 ಲಕ್ಷ ರೂ ಸಿಗುತ್ತದೆ. ಅಪಘಾತದಿಂದ ಅಂಗ ಊನವಾದರೆ 1 ಲಕ್ಷ ರೂ ಹಣವನ್ನು ಕ್ಲೈಮ್ ಮಾಡಬಹುದು.

ಇದನ್ನೂ ಓದಿBank Deposits: ಅಧಿಕ ಬಡ್ಡಿ ಕೊಡುವ ಬ್ಯಾಂಕ್​ಗಳಲ್ಲಿ ಹಣ ಇರಿಸಲು ಭಯವೇ? ಆರ್​ಬಿಐ ನಿಯಮ ತಿಳಿದಿರಿ; ಅಪಾಯ ತಪ್ಪಿಸಲು ಈ ಉಪಾಯ ಮಾಡಿ

ಅಟಲ್ ಪೆನ್ಷನ್ ಯೋಜನೆಯ ಬಗ್ಗೆ ಮಾಹಿತಿ

ಅಸಂಘಟಿತ ವಲಯದಲ್ಲಿರುವ ಕಾರ್ಮಿಕರನ್ನು ದೃಷ್ಟಿಯಲ್ಲಿಟ್ಟುಕೊಂಡು ರೂಪಿಸಲಾದ ಸ್ಕೀಮ್ ಅಟಲ್ ಪೆನ್ಷನ್ ಯೋಜನೆ. ತೆರಿಗೆ ಪಾವತಿದಾರರಲ್ಲದ ಹಾಗೂ 18ರಿಂದ 40 ವರ್ಷ ವಯೋಮಾನದ ಮಂದಿಗೆ ಈ ಯೋಜನೆ ಸಿಗುತ್ತದೆ. ನಮ್ಮ ಖಾತೆ ಇರುವ ಬ್ಯಾಂಕ್​ಗಳಲ್ಲಿ ಈ ಸ್ಕೀಮ್ ಪಡೆಯಬಹುದು. ಈ ಯೋಜನೆ ಪ್ರಕಾರ 60 ವರ್ಷ ವಯಸ್ಸಾಗುವವರೆಗೂ ನಿಯಮಿತವಾಗಿ ಖಾತೆಗೆ ಇಂತಿಷ್ಟು ಹಣ ತುಂಬಿಸುತ್ತಾ ಹೋದರೆ 60 ವರ್ಷದ ಬಳಿಕ ತಿಂಗಳಿಗೆ 1ರಿಂದ 6 ಸಾವಿರ ರೂವರೆಗೂ ಪೆನ್ಷನ್ ಬರುತ್ತದೆ.

ಉದಾಹರಣೆಗೆ 18ರ ವಯಸ್ಸಿನಲ್ಲಿ ಪೆನ್ಷನ್ ಯೋಜನೆ ಪಡೆದರೆ 42 ವರ್ಷಗಳ ಕಾಲ ಪ್ರೀಮಿಯಮ್ ಕಟ್ಟಬೇಕು. ತಿಂಗಳಿಗೆ 42 ರೂನಂತೆ 42 ವರ್ಷ ಕಟ್ಟಿದರೆ 60 ವರ್ಷ ವಯಸ್ಸಾದಾಗ 1.7 ಲಕ್ಷ ರೂ ಸಂಗ್ರಹವಾಗುತ್ತದೆ. ಅಲ್ಲಿಂದ ನಿಮಗೆ ತಿಂಗಳಿಗೆ 1,000 ರೂ ಪಿಂಚಣಿ ಸಿಗುತ್ತಾ ಹೋಗುತ್ತದೆ. 5,000 ರೂ ಮಾಸಿಕ ಪಿಂಚಣಿ ಬೇಕೆಂದರೆ ತಿಂಗಳಿಗೆ 210 ರೂ ಕಟ್ಟಬೇಕು.

ನೀವು 40ನೇ ವಯಸ್ಸಿಗೆ ಯೋಜನೆ ಆರಂಭಿಸಿದರೆ 20 ವರ್ಷ ಪ್ರೀಮಿಯಮ್ ಕಟ್ಟಬೇಕು. 5,000 ರೂ ಮಾಸಿಕ ಪಿಂಚಣಿ ಬೇಕೆಂದರೆ ತಿಂಗಳಿಗೆ 1,318 ರೂ ಕಟ್ಟಿಕೊಂಡು ಹೋಗಬೇಕು. 1,000 ರೂ ಪಿಂಚಣಿ ಸಾಕು ಎನಿಸಿದರೆ ತಿಂಗಳಿಗೆ 264 ರೂ ಕಟ್ಟಿದರೆ ಸಾಕು.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ