AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಬೆಂಬಲದ ಪಿಎಂ ವಿದ್ಯಾಲಕ್ಷ್ಮೀ ಯೋಜನೆ; 15 ಲಕ್ಷ ರೂವರೆಗೆ ಸಾಲದ ಅವಕಾಶ

PM Vidya Lakshmi Education Loan Scheme: ಕೇಂದ್ರ ಸರ್ಕಾರ ವಿವಿಧ ವರ್ಗಗಳ ಅಭ್ಯುದಯಕ್ಕೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ವಿದ್ಯಾರ್ಥಿಗಳ ಶಿಕ್ಷಣಕ್ಕೆ ವಿವಿಧ ಸಾಲ ಯೋಜನೆಗಳಿವೆ. ಅದರಲ್ಲಿ ಪಿಎಂ ವಿದ್ಯಾಲಕ್ಷ್ಮೀ ಯೋಜನೆ ಒಂದು. 15 ಲಕ್ಷ ರೂವರೆಗೂ ಸಾಲ ಸಿಗುತ್ತದೆ. ಭಾರತದಲ್ಲಿ ಕೋರ್ಸ್ ಮಾಡುವುದಾದರೆ ಏಳೂವರೆ ಲಕ್ಷ ರೂವರೆಗೂ ಸಾಲ ಕೊಡಲಾಗುತ್ತದೆ. ಒಟ್ಟು 14 ಬ್ಯಾಂಕುಗಳಲ್ಲಿ ಸಾಲ ಸಿಗಲಿದ್ದು ನೀವಿಚ್ಛಿಸುವ ಬ್ಯಾಂಕ್ ಅನ್ನು ಸಾಲಕ್ಕೆ ಆಯ್ಕೆ ಮಾಡಿಕೊಳ್ಳಬಹುದು.

ಸರ್ಕಾರಿ ಬೆಂಬಲದ ಪಿಎಂ ವಿದ್ಯಾಲಕ್ಷ್ಮೀ ಯೋಜನೆ; 15 ಲಕ್ಷ ರೂವರೆಗೆ ಸಾಲದ ಅವಕಾಶ
ಶಿಕ್ಷಣ ಸಾಲ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 31, 2024 | 2:53 PM

Share

ಉನ್ನತ ಶಿಕ್ಷಣ ಇವತ್ತು ಬಹಳ ದುಬಾರಿ. ಉತ್ತಮ ವೃತ್ತಿ ಆರಂಭಿಸಲು ಬಹಳ ಅಗತ್ಯ ಇರುವ ಉನ್ನತ ಶಿಕ್ಷಣವನ್ನು ಹಣವಿಲ್ಲವೆಂಬ ಅಸಹಾಯಕತೆಯಿಂದ ಕೈಬಿಡಲು ಆಗುವುದಿಲ್ಲ. ಸಾಲವಾದರೂ ಸರಿ ಶಿಕ್ಷಣ ಪೂರ್ಣಗೊಳಿಸಬೇಕಾಗುತ್ತದೆ. ಕೇಂದ್ರ ಸರ್ಕಾರ ಇಂಥ ಸಂದರ್ಭಗಳಿಗೆ ಸಹಾಯಕವಾಗುವಂತೆ ಪಿಎಂ ವಿದ್ಯಾಲಕ್ಷ್ಮೀ ಶಿಕ್ಷಣ ಸಾಲ ಯೋಜನೆ (PM Vidya Lakshmi Education Loan Yojana) ಆರಂಭಿಸಿದೆ. 2015ರಿಂದ ಚಾಲನೆಯಲ್ಲಿರುವ ಈ ಸ್ಕೀಮ್​ನಲ್ಲಿ ಭಾರತದ ಯಾವುದೇ ನಾಗರಿಕರು ಸಾಲ ಪಡೆಯಬಹುದಾಗಿದೆ. ಮನೆಯಲ್ಲಿ ಆರ್ಥಿಕ ಸಂಕಷ್ಟದ ಪರಿಸ್ಥಿತಿ ಇರುವ ವಿದ್ಯಾರ್ಥಿಗಳಿಗೆ ಈ ಸಾಲ ಉಪಯುಕ್ತವಾಗುತ್ತದೆ. ಹಣಕಾಸು ತೊಂದರೆಯಿಂದ ಓದಿಗೆ ತೊಂದರೆ ಆಗುವುದನ್ನು ಇದು ತಪ್ಪಿಸುತ್ತದೆ.

ಪಿಎಂ ವಿದ್ಯಾಲಕ್ಷ್ಮೀ ಯೋಜನೆ ಅಡಿಯಲ್ಲಿ ಬ್ಯಾಂಕುಗಳಿಂದ ಸಾಲ ಸಿಗುತ್ತದೆ. ಉನ್ನತ ಶಿಕ್ಷಣದ ಕೋರ್ಸ್ ಭಾರತದಲ್ಲಿಯಾದರೆ ಏಳೂವರೆ ಲಕ್ಷ ರೂವರೆಗೂ ಸಾಲ ಪಡೆಯಬಹುದು. ವಿದೇಶಗಳಲ್ಲಿ ಓದುವುದಾದರೆ 15 ಲಕ್ಷ ರೂವರೆಗೆ ಸಾಲ ಕೊಡಲಾಗುತ್ತದೆ.

ಈ ಯೋಜನೆ ಅಡಿಯಲ್ಲಿ 22 ವಿಧದ ಶಿಕ್ಷಣ ಸಾಲಗಳು ಸಿಗುತ್ತವೆ. 14 ಬ್ಯಾಂಕುಗಳನ್ನು ಈ ಯೋಜನೆಯ ವ್ಯಾಪ್ತಿಗೆ ತರಲಾಗಿದೆ. ಅಂದರೆ ಈ 14 ಬ್ಯಾಂಕ್​ಗಳಲ್ಲಿ ಸಾಲ ಪಡೆಯಬಹುದು. ಎಚ್​ಡಿಎಫ್​ಸಿ ಬ್ಯಾಂಕ್, ಕರ್ಣಾಟಕ ಬ್ಯಾಂಕ್, ಐಸಿಐಸಿಐ, ಎಕ್ಸಿಸ್, ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ, ಐಡಿಬಿಐ ಬ್ಯಾಂಕ್ ಇದರಲ್ಲಿ ಒಳಗೊಂಡಿವೆ.

ಇದನ್ನೂ ಓದಿ: ಪಿಪಿಎಫ್​ನಿಂದ ಟ್ರಿಪಲ್ ಲಾಭ; ಉಳಿತಾಯ, ದೀರ್ಘಾವಧಿ ಹೂಡಿಕೆ, ತೆರಿಗೆ ಲಾಭ

ವಿದ್ಯಾಲಕ್ಷ್ಮೀ ಶಿಕ್ಷಣ ಸಾಲ ಒದಗಿಸುವ ಬ್ಯಾಂಕುಗಳಿವು

  1. ಬ್ಯಾಂಕ್ ಆಫ್ ಇಂಡಿಯಾ
  2. ಕೆನರಾ ಬ್ಯಾಂಕ್
  3. ಐಡಿಬಿಐ ಬ್ಯಾಂಕ್
  4. ಅಭ್ಯುದಯ ಬ್ಯಾಂಕ್
  5. ಎಕ್ಸಿಸ್ ಬ್ಯಾಂಕ್
  6. ಜಿಪಿ ಪಾರ್ಸಿಕ್ ಬ್ಯಾಂಕ್
  7. ಎಚ್​ಡಿಎಫ್​ಸಿ ಬ್ಯಾಂಕ್
  8. ಐಸಿಐಸಿಐ ಬ್ಯಾಂಕ್
  9. ದೇನಾ ಬ್ಯಾಂಕ್
  10. ದೊಂಬಿವಿಲಿ ನಗರಿ ಸಹಕಾರಿ ಬ್ಯಾಂಕ್
  11. ಕೋಟಕ್ ಮಹೀಂದ್ರ ಬ್ಯಾಂಕ್
  12. ಅಲಹಾಬಾದ್ ಬ್ಯಾಂಕ್
  13. ಕರ್ಣಾಟಕ ಬ್ಯಾಂಕ್
  14. ಪಂಜಾಬ್ ನ್ಯಾಷನಲ್ ಬ್ಯಾಂಕ್

ವಿದ್ಯಾಲಕ್ಷ್ಮೀ ಶಿಕ್ಷಣ ಸಾಲ ಪಡೆಯಲು ಅರ್ಹತೆ ಏನು?

ಅಭ್ಯರ್ಥಿಯು ಪ್ಲಸ್ 2 ಅಥವಾ ದ್ವಿತೀಯ ಪಿಯು ಮುಗಿಸಿರಬೇಕು. ಪದವಿ, ಮಾಸ್ಟರ್ಸ್ ಇತ್ಯಾದಿ ಕೋರ್ಸ್​ಗೆ ಅರ್ಜಿ ಸಲ್ಲಿಸಿರಬೇಕು. ಈ ಯೋಜನೆಗೆ ಅಧಿಕೃತ ವೆಬ್​ಸೈಟ್ ಅಭಿವೃದ್ದಿಪಡಿಸಲಾಗಿದೆ. ಅದರ ವಿಳಾಸ ಇಂತಿದೆ: vidyalakshmi.co.in/Students/

ಇದನ್ನೂ ಓದಿ: Post Office Accident Insurance: 520 ರೂಗೆ 10 ಲಕ್ಷ ರೂ; 12 ರೂಗೆ 2 ಲಕ್ಷ ರೂ ಆಕ್ಸಿಡೆಂಟ್ ಕವರೇಜ್ ಕೊಡುವ ಅಂಚೆ ಕಚೇರಿ ಸ್ಕೀಮ್​ಗಳು

ಈ ಪೋರ್ಟಲ್​ನಲ್ಲಿ ರಿಜಿಸ್ಟರ್ ಮಾಡಿಕೊಂಡು, ಕಾಮನ್ ಎಜುಕೇಶನ್ ಲೋನ್ ಅಪ್ಲಿಕೇಶನ್ (ಸೆಲಾಫ್) ಅನ್ನು ಭರ್ತಿ ಮಾಡಿ ಸಲ್ಲಿಸಬೇಕು.

ಈ ಸಾಲಕ್ಕೆ ಬಡ್ಡಿದರ ಬ್ಯಾಂಕಿಂಗ್ ಬ್ಯಂಕಿಗೆ ವ್ಯತ್ಯಾಸ ಇರುತ್ತದೆ. ಸಾಮಾನ್ಯವಾಗಿ ಪರ್ಸನಲ್ ಲೋನ್​ಗಿಂತ ಕಡಿಮೆ ಬಡ್ಡಿ ಇರುತ್ತದೆ. ಜನಸಮರ್ಥ್ ವೆಬ್​ಸೈಟ್ ಮೂಲಕ ಸಾಲಕ್ಕೆ ಅರ್ಜಿ ಸಲ್ಲಿಸಿದರೆ ಒಂದಷ್ಟು ಡಿಸ್ಕೌಂಟ್ ಸಿಗುತ್ತದೆ. ಆದರೆ, ಪೋಷಕರ ಆದಾಯ ವರ್ಷಕ್ಕೆ ನಾಲ್ಕೂವರೆ ಲಕ್ಷ ರೂಗಿಂತ ಕಡಿಮೆ ಇರಬೇಕು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!