AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಬೆಂಬಲದ ಪಿಎಂ ವಿದ್ಯಾಲಕ್ಷ್ಮೀ ಯೋಜನೆ; 15 ಲಕ್ಷ ರೂವರೆಗೆ ಸಾಲದ ಅವಕಾಶ

PM Vidya Lakshmi Education Loan Scheme: ಕೇಂದ್ರ ಸರ್ಕಾರ ವಿವಿಧ ವರ್ಗಗಳ ಅಭ್ಯುದಯಕ್ಕೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ವಿದ್ಯಾರ್ಥಿಗಳ ಶಿಕ್ಷಣಕ್ಕೆ ವಿವಿಧ ಸಾಲ ಯೋಜನೆಗಳಿವೆ. ಅದರಲ್ಲಿ ಪಿಎಂ ವಿದ್ಯಾಲಕ್ಷ್ಮೀ ಯೋಜನೆ ಒಂದು. 15 ಲಕ್ಷ ರೂವರೆಗೂ ಸಾಲ ಸಿಗುತ್ತದೆ. ಭಾರತದಲ್ಲಿ ಕೋರ್ಸ್ ಮಾಡುವುದಾದರೆ ಏಳೂವರೆ ಲಕ್ಷ ರೂವರೆಗೂ ಸಾಲ ಕೊಡಲಾಗುತ್ತದೆ. ಒಟ್ಟು 14 ಬ್ಯಾಂಕುಗಳಲ್ಲಿ ಸಾಲ ಸಿಗಲಿದ್ದು ನೀವಿಚ್ಛಿಸುವ ಬ್ಯಾಂಕ್ ಅನ್ನು ಸಾಲಕ್ಕೆ ಆಯ್ಕೆ ಮಾಡಿಕೊಳ್ಳಬಹುದು.

ಸರ್ಕಾರಿ ಬೆಂಬಲದ ಪಿಎಂ ವಿದ್ಯಾಲಕ್ಷ್ಮೀ ಯೋಜನೆ; 15 ಲಕ್ಷ ರೂವರೆಗೆ ಸಾಲದ ಅವಕಾಶ
ಶಿಕ್ಷಣ ಸಾಲ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 31, 2024 | 2:53 PM

Share

ಉನ್ನತ ಶಿಕ್ಷಣ ಇವತ್ತು ಬಹಳ ದುಬಾರಿ. ಉತ್ತಮ ವೃತ್ತಿ ಆರಂಭಿಸಲು ಬಹಳ ಅಗತ್ಯ ಇರುವ ಉನ್ನತ ಶಿಕ್ಷಣವನ್ನು ಹಣವಿಲ್ಲವೆಂಬ ಅಸಹಾಯಕತೆಯಿಂದ ಕೈಬಿಡಲು ಆಗುವುದಿಲ್ಲ. ಸಾಲವಾದರೂ ಸರಿ ಶಿಕ್ಷಣ ಪೂರ್ಣಗೊಳಿಸಬೇಕಾಗುತ್ತದೆ. ಕೇಂದ್ರ ಸರ್ಕಾರ ಇಂಥ ಸಂದರ್ಭಗಳಿಗೆ ಸಹಾಯಕವಾಗುವಂತೆ ಪಿಎಂ ವಿದ್ಯಾಲಕ್ಷ್ಮೀ ಶಿಕ್ಷಣ ಸಾಲ ಯೋಜನೆ (PM Vidya Lakshmi Education Loan Yojana) ಆರಂಭಿಸಿದೆ. 2015ರಿಂದ ಚಾಲನೆಯಲ್ಲಿರುವ ಈ ಸ್ಕೀಮ್​ನಲ್ಲಿ ಭಾರತದ ಯಾವುದೇ ನಾಗರಿಕರು ಸಾಲ ಪಡೆಯಬಹುದಾಗಿದೆ. ಮನೆಯಲ್ಲಿ ಆರ್ಥಿಕ ಸಂಕಷ್ಟದ ಪರಿಸ್ಥಿತಿ ಇರುವ ವಿದ್ಯಾರ್ಥಿಗಳಿಗೆ ಈ ಸಾಲ ಉಪಯುಕ್ತವಾಗುತ್ತದೆ. ಹಣಕಾಸು ತೊಂದರೆಯಿಂದ ಓದಿಗೆ ತೊಂದರೆ ಆಗುವುದನ್ನು ಇದು ತಪ್ಪಿಸುತ್ತದೆ.

ಪಿಎಂ ವಿದ್ಯಾಲಕ್ಷ್ಮೀ ಯೋಜನೆ ಅಡಿಯಲ್ಲಿ ಬ್ಯಾಂಕುಗಳಿಂದ ಸಾಲ ಸಿಗುತ್ತದೆ. ಉನ್ನತ ಶಿಕ್ಷಣದ ಕೋರ್ಸ್ ಭಾರತದಲ್ಲಿಯಾದರೆ ಏಳೂವರೆ ಲಕ್ಷ ರೂವರೆಗೂ ಸಾಲ ಪಡೆಯಬಹುದು. ವಿದೇಶಗಳಲ್ಲಿ ಓದುವುದಾದರೆ 15 ಲಕ್ಷ ರೂವರೆಗೆ ಸಾಲ ಕೊಡಲಾಗುತ್ತದೆ.

ಈ ಯೋಜನೆ ಅಡಿಯಲ್ಲಿ 22 ವಿಧದ ಶಿಕ್ಷಣ ಸಾಲಗಳು ಸಿಗುತ್ತವೆ. 14 ಬ್ಯಾಂಕುಗಳನ್ನು ಈ ಯೋಜನೆಯ ವ್ಯಾಪ್ತಿಗೆ ತರಲಾಗಿದೆ. ಅಂದರೆ ಈ 14 ಬ್ಯಾಂಕ್​ಗಳಲ್ಲಿ ಸಾಲ ಪಡೆಯಬಹುದು. ಎಚ್​ಡಿಎಫ್​ಸಿ ಬ್ಯಾಂಕ್, ಕರ್ಣಾಟಕ ಬ್ಯಾಂಕ್, ಐಸಿಐಸಿಐ, ಎಕ್ಸಿಸ್, ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ, ಐಡಿಬಿಐ ಬ್ಯಾಂಕ್ ಇದರಲ್ಲಿ ಒಳಗೊಂಡಿವೆ.

ಇದನ್ನೂ ಓದಿ: ಪಿಪಿಎಫ್​ನಿಂದ ಟ್ರಿಪಲ್ ಲಾಭ; ಉಳಿತಾಯ, ದೀರ್ಘಾವಧಿ ಹೂಡಿಕೆ, ತೆರಿಗೆ ಲಾಭ

ವಿದ್ಯಾಲಕ್ಷ್ಮೀ ಶಿಕ್ಷಣ ಸಾಲ ಒದಗಿಸುವ ಬ್ಯಾಂಕುಗಳಿವು

  1. ಬ್ಯಾಂಕ್ ಆಫ್ ಇಂಡಿಯಾ
  2. ಕೆನರಾ ಬ್ಯಾಂಕ್
  3. ಐಡಿಬಿಐ ಬ್ಯಾಂಕ್
  4. ಅಭ್ಯುದಯ ಬ್ಯಾಂಕ್
  5. ಎಕ್ಸಿಸ್ ಬ್ಯಾಂಕ್
  6. ಜಿಪಿ ಪಾರ್ಸಿಕ್ ಬ್ಯಾಂಕ್
  7. ಎಚ್​ಡಿಎಫ್​ಸಿ ಬ್ಯಾಂಕ್
  8. ಐಸಿಐಸಿಐ ಬ್ಯಾಂಕ್
  9. ದೇನಾ ಬ್ಯಾಂಕ್
  10. ದೊಂಬಿವಿಲಿ ನಗರಿ ಸಹಕಾರಿ ಬ್ಯಾಂಕ್
  11. ಕೋಟಕ್ ಮಹೀಂದ್ರ ಬ್ಯಾಂಕ್
  12. ಅಲಹಾಬಾದ್ ಬ್ಯಾಂಕ್
  13. ಕರ್ಣಾಟಕ ಬ್ಯಾಂಕ್
  14. ಪಂಜಾಬ್ ನ್ಯಾಷನಲ್ ಬ್ಯಾಂಕ್

ವಿದ್ಯಾಲಕ್ಷ್ಮೀ ಶಿಕ್ಷಣ ಸಾಲ ಪಡೆಯಲು ಅರ್ಹತೆ ಏನು?

ಅಭ್ಯರ್ಥಿಯು ಪ್ಲಸ್ 2 ಅಥವಾ ದ್ವಿತೀಯ ಪಿಯು ಮುಗಿಸಿರಬೇಕು. ಪದವಿ, ಮಾಸ್ಟರ್ಸ್ ಇತ್ಯಾದಿ ಕೋರ್ಸ್​ಗೆ ಅರ್ಜಿ ಸಲ್ಲಿಸಿರಬೇಕು. ಈ ಯೋಜನೆಗೆ ಅಧಿಕೃತ ವೆಬ್​ಸೈಟ್ ಅಭಿವೃದ್ದಿಪಡಿಸಲಾಗಿದೆ. ಅದರ ವಿಳಾಸ ಇಂತಿದೆ: vidyalakshmi.co.in/Students/

ಇದನ್ನೂ ಓದಿ: Post Office Accident Insurance: 520 ರೂಗೆ 10 ಲಕ್ಷ ರೂ; 12 ರೂಗೆ 2 ಲಕ್ಷ ರೂ ಆಕ್ಸಿಡೆಂಟ್ ಕವರೇಜ್ ಕೊಡುವ ಅಂಚೆ ಕಚೇರಿ ಸ್ಕೀಮ್​ಗಳು

ಈ ಪೋರ್ಟಲ್​ನಲ್ಲಿ ರಿಜಿಸ್ಟರ್ ಮಾಡಿಕೊಂಡು, ಕಾಮನ್ ಎಜುಕೇಶನ್ ಲೋನ್ ಅಪ್ಲಿಕೇಶನ್ (ಸೆಲಾಫ್) ಅನ್ನು ಭರ್ತಿ ಮಾಡಿ ಸಲ್ಲಿಸಬೇಕು.

ಈ ಸಾಲಕ್ಕೆ ಬಡ್ಡಿದರ ಬ್ಯಾಂಕಿಂಗ್ ಬ್ಯಂಕಿಗೆ ವ್ಯತ್ಯಾಸ ಇರುತ್ತದೆ. ಸಾಮಾನ್ಯವಾಗಿ ಪರ್ಸನಲ್ ಲೋನ್​ಗಿಂತ ಕಡಿಮೆ ಬಡ್ಡಿ ಇರುತ್ತದೆ. ಜನಸಮರ್ಥ್ ವೆಬ್​ಸೈಟ್ ಮೂಲಕ ಸಾಲಕ್ಕೆ ಅರ್ಜಿ ಸಲ್ಲಿಸಿದರೆ ಒಂದಷ್ಟು ಡಿಸ್ಕೌಂಟ್ ಸಿಗುತ್ತದೆ. ಆದರೆ, ಪೋಷಕರ ಆದಾಯ ವರ್ಷಕ್ಕೆ ನಾಲ್ಕೂವರೆ ಲಕ್ಷ ರೂಗಿಂತ ಕಡಿಮೆ ಇರಬೇಕು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ