AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಸ್ಟ್ ಆಫೀಸ್​ನ ಈ ಸ್ಕೀಮ್​ನಲ್ಲಿ 25 ವರ್ಷಕ್ಕೆ 1 ಕೋಟಿ ರೂ ಗಳಿಕೆಗೆ ಅವಕಾಶ

Post Office PPF scheme: ಕನಿಷ್ಠ 15 ವರ್ಷ ಹೂಡಿಕೆ ಅವಧಿ ಇರುವ ಪಬ್ಲಿಕ್ ಪ್ರಾವಿಡೆಂಟ್ ಫಂಡ್ ಜನಪ್ರಿಯ ಇನ್ವೆಸ್ಟ್​ಮೆಂಟ್ ಸ್ಕೀಮ್. ಪೋಸ್ಟ್ ಆಫೀಸ್ ಮತ್ತು ಪ್ರಮುಖ ಬ್ಯಾಂಕುಗಳಲ್ಲಿ ಸಿಗುವ ಈ ಸ್ಕೀಮ್​ನಲ್ಲಿ ದೀರ್ಘಾವಧಿ ಹೂಡಿಕೆಗೆ ಅವಕಾಶ ಇದೆ. ವರ್ಷಕ್ಕೆ 1.5 ಲಕ್ಷ ರೂವರೆಗೂ ಹೂಡಿಕೆ ಮಾಡಬಹುದು. 25 ವರ್ಷಕ್ಕೆ ನಿಮಗೆ ಕೋಟಿ ರೂ ಸಿಗುತ್ತದೆ.

ಪೋಸ್ಟ್ ಆಫೀಸ್​ನ ಈ ಸ್ಕೀಮ್​ನಲ್ಲಿ 25 ವರ್ಷಕ್ಕೆ 1 ಕೋಟಿ ರೂ ಗಳಿಕೆಗೆ ಅವಕಾಶ
ಪೋಸ್ಟ್ ಆಫೀಸ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 15, 2025 | 6:38 PM

Share

ಪೋಸ್ಟ್ ಆಫೀಸ್​ನಲ್ಲಿ (Post Office) ಆಫರ್ ಮಾಡಲಾಗುತ್ತಿರುವ ಹಲವು ಸ್ಮಾಲ್ ಸೇವಿಂಗ್ಸ್ ಸ್ಕೀಮ್​ಗಳಲ್ಲಿ (Small Savings Scheme) ಅತ್ಯಂತ ದೀರ್ಘಾವಧಿ ಹೂಡಿಕೆ ಅವಕಾಶ ನೀಡುವುದು ಪಿಪಿಎಫ್ ಅಥವಾ ಪಬ್ಲಿಕ್ ಪ್ರಾವಿಡೆಂಟ್ ಫಂಡ್ (PPF). ಕನಿಷ್ಠ 15 ವರ್ಷ ಲಾಕ್ ಇನ್ ಪೀರಿಯಡ್ ಇರುವ ಪಿಪಿಎಫ್, ಪಕ್ಕಾ ದೀರ್ಘಾವಧಿ ಹೂಡಿಕೆ ಎನಿಸಿದೆ. ಇದಾದ ಬಳಿಕವೂ ಹೂಡಿಕೆಯನ್ನು ಐದೈದು ವರ್ಷ ವಿಸ್ತರಿಸುವ ಅವಕಾಶ ಇದೆ.

ಏನಿದು ಪಿಪಿಎಫ್ ಯೋಜನೆ?

ಪಬ್ಲಿಕ್ ಪ್ರಾವಿಡೆಂಟ್ ಫಂಡ್ ಯೋಜನೆ ಅಡಿ ಭಾರತದ ಯಾವುದೇ ನಾಗರಿಕರು ಅಕೌಂಟ್ ತೆರೆಯಬಹುದು. ಪೋಸ್ಟ್ ಆಫೀಸ್ ಮತ್ತು ರಾಷ್ಟ್ರೀಯ ಬ್ಯಾಂಕುಗಳಲ್ಲಿ ಪಿಪಿಎಫ್ ಅಕೌಂಟ್ ತೆರೆಯಬಹುದು. ಒಂದು ವರ್ಷದಲ್ಲಿ (ಏಪ್ರಿಲ್ 1ರಿಂದ ಮಾರ್ಚ್ 31ರವರೆಗೆ) 500 ರೂನಿಂದ 1,50,000 ರೂವರೆಗೆ ಎಷ್ಟು ಬೇಕಾದರೂ ಹಣವನ್ನು ಪಿಪಿಎಫ್ ಅಕೌಂಟ್​ಗೆ ಹಾಕಬಹುದು.

ಇದನ್ನೂ ಓದಿ: ಫೋನ್​ನಿಂದ ಕ್ಯುಆರ್ ಕೋಡ್ ಸ್ಕ್ಯಾನ್ ಮಾಡಿ ಕ್ಯಾಷ್ ವಿತ್​ಡ್ರಾ ಮಾಡಿ; ಸರ್ಕಾರದಿಂದ ಹೊಸ ಪ್ರಯತ್ನ

ಪ್ರಸಕ್ತ ಈ ಸ್ಕೀಮ್​ನಲ್ಲಿ ವರ್ಷಕ್ಕೆ ಶೇ. 7.1ರಷ್ಟು ಬಡ್ಡಿ ನೀಡಲಾಗುತ್ತಿದೆ. ಪ್ರತೀ ಮೂರು ತಿಂಗಳಿಗೊಮ್ಮೆ ಬಡ್ಡಿ ಪರಿಷ್ಕರಣೆ ಮಾಡಲಾಗುತ್ತದೆ. ಬಡ್ಡಿ ಬಹಳ ಹೆಚ್ಚೇನೂ ಅಲ್ಲವಾದರೂ ಪಿಪಿಎಫ್ ಟ್ಯಾಕ್ಸ್ ಲಾಭ ತಂದುಕೊಡುತ್ತದೆ. ಒಂದು ವರ್ಷದಲ್ಲಿ ನೀವು ಪಿಪಿಎಫ್​ಗೆ ಮಾಡುವ ಹೂಡಿಕೆಗೆ ಟ್ಯಾಕ್ಸ್ ಡಿಡಕ್ಷನ್ ಸಿಗುತ್ತದೆ. ಈ ಕಾರಣಕ್ಕೆ ಬಹಳಷ್ಟು ತೆರಿಗೆ ಪಾವತಿದಾರರಿಗೆ ಪಿಪಿಎಫ್ ನೆಚ್ಚಿನ ಹೂಡಿಕೆ ಸ್ಥಳವಾಗಿದೆ.

ವರ್ಷದಲ್ಲಿ ಹಲವು ಬಾರಿ ಪಿಪಿಎಫ್ ಅಕೌಂಟ್​ಗೆ ಹಣ ಹಾಕಬಹುದು. ಆದರೆ, ವರ್ಷದಲ್ಲಿ ಠೇವಣಿ ಇಡುವ ಒಟ್ಟು ಮೊತ್ತ 1.5 ಲಕ್ಷ ರೂ ಮೀರಬಾರದು. ಒಂದು ತಿಂಗಳಲ್ಲಿ 10,000 ರೂ, ಮತ್ತೊಂದು ತಿಂಗಳಲ್ಲಿ 30,000 ರೂ ಹೀಗೆ ನಿಮ್ಮ ಇಚ್ಛಾನುಸಾರ ಅಕೌಂಟ್​ಗೆ ಹಣ ಜಮೆ ಮಾಡುತ್ತಾ ಹೋಗಬಹುದು.

ಇದನ್ನೂ ಓದಿ: ಪೋಸ್ಟ್ ಆಫೀಸ್: 20 ವರ್ಷಕ್ಕೆ 4 ಪಟ್ಟು ರಿಟರ್ನ್ ಕೊಡಬಲ್ಲ ಟಿಡಿ ಪ್ಲಾನ್

ಒಂದು ವರ್ಷದಲ್ಲಿ ನಿರ್ದಿಷ್ಟ ಮೊತ್ತ ಠೇವಣಿ ಮಾಡಿರುತ್ತೀರಿ. ಮುಂದಿನ ವರ್ಷ ಅಷ್ಟೇ ಮೊತ್ತ ಹಾಕಬೇಕು ಎನ್ನುವ ಕಡ್ಡಾಯವೇನಿಲ್ಲ. ಈ ವರ್ಷ 1.5 ಲಕ್ಷ ರೂ ಹಾಕುತ್ತೀರಿ. ಮುಂದಿನ ವರ್ಷ 1 ಲಕ್ಷ ರೂ ಮಾತ್ರವೇ ಠೇವಣಿ ಇಡಲು ಸಾಧ್ಯವಾಗಬಹುದು.

ಪಿಪಿಎಫ್​ನಿಂದ ಸಿಗುವ ಲಾಭ ಇದು

ಪಿಪಿಎಫ್​ನಲ್ಲಿ ನೀವು ವರ್ಷಕ್ಕೆ ಒಂದೂವರೆ ಲಕ್ಷ ರೂ ಹೂಡಿಕೆ ಮಾಡುತ್ತಾ ಹೋಗುತ್ತೀರಿ ಎಂದಿಟ್ಟುಕೊಳ್ಳೋಣ. 15 ವರ್ಷದಲ್ಲಿ ನೀವು 22,50,000 ರೂ ಹೂಡಿಕೆ ಮಾಡಿರುತ್ತೀರಿ. ಮೆಚ್ಯೂರಿಟಿಯಾದಾಗ ನಿಮ್ಮ ಹೂಡಿಕೆಯು 40 ಲಕ್ಷ ರೂ ದಾಟಿರುತ್ತದೆ.

ಒಂದು ವೇಳೆ ನಿಮ್ಮ ಹೂಡಿಕೆ ಅವಧಿಯನ್ನು 15 ವರ್ಷದಿಂದ 25 ವರ್ಷಕ್ಕೆ ಹೆಚ್ಚಿಸಿದರೆ 37.50 ಲಕ್ಷ ರೂನ ನಿಮ್ಮ ಹೂಡಿಕೆಯ ಮೌಲ್ಯ ಒಂದು ಕೋಟಿ ರೂ ದಾಟಿರುತ್ತದೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ