AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RD Account: ಆರ್​ಡಿ ಉಳಿತಾಯ ಖಾತೆ ತೆರೆಯುವ ಮುನ್ನ ಈ ವಿಷಯಗಳನ್ನು ತಿಳಿದಿರಿ

ಈ ಮಾದರಿಯ ಹೂಡಿಕೆ ಅಥವಾ ಠೇವಣಿ ಯೋಜನೆಯಲ್ಲಿ ಕನಿಷ್ಠ ಮೊತ್ತ ಬ್ಯಾಂಕ್​ನಿಂದ ಬ್ಯಾಂಕ್​ಗೆ ವ್ಯತ್ಯಾಸ ಇರುತ್ತದೆ. ಸಾಮಾನ್ಯವಾಗಿ ಕನಿಷ್ಠ 1,000 ರೂ.ನಿಂದ ಹೂಡಿಕೆ ಮಾಡಬಹುದಾಗಿದೆ. ಆರ್​ಡಿ ಯೋಜನೆಯ ಇತರ ಪ್ರಮುಖ ಲಕ್ಷಣಗಳು ಇಲ್ಲಿವೆ.

RD Account: ಆರ್​ಡಿ ಉಳಿತಾಯ ಖಾತೆ ತೆರೆಯುವ ಮುನ್ನ ಈ ವಿಷಯಗಳನ್ನು ತಿಳಿದಿರಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 11, 2022 | 12:53 PM

Share

ಆರ್​ಡಿ ಎಂದೇ ಪ್ರಸಿದ್ಧವಾಗಿರುವ ರಿಕರಿಂಗ್ ಡೆಪಾಸಿಟ್ (Recurring Deposit) ಸಮಂಜಸ ಗಳಿಕೆಯ ನಿರೀಕ್ಷೆಯೊಂದಿಗೆ ನಿರ್ದಿಷ್ಟ ಅವಧಿಗೆ ಮಾಡುವ ಹೂಡಿಕೆಯಾಗಿದೆ. ಈ ವಿಧಾನದಲ್ಲಿ ಮೆಚ್ಯೂರಿಟಿ ಅವಧಿಯ ವರೆಗೆ ನಿರ್ದಿಷ್ಟ ಮೊತ್ತವನ್ನು ಹೂಡಿಕೆ (investment) ಮಾಡುತ್ತಿದ್ದು, ನಂತರ ಬಡ್ಡಿ ಸಮೇತ ಮೊತ್ತವನ್ನು ಹಿಂಪಡೆಯಬಹುದಾಗಿದೆ. ಆರ್​ಡಿಯು ನಿಯಮಿತವಾಗಿ ಉಳಿತಾಯ ಮಾಡುವಂತೆ ಜನರನ್ನು ಪ್ರೇರೇಪಿಸುತ್ತದೆ. ಈ ಮಾದರಿಯ ಹೂಡಿಕೆ ಅಥವಾ ಠೇವಣಿ ಯೋಜನೆಯಲ್ಲಿ ಕನಿಷ್ಠ ಮೊತ್ತ ಬ್ಯಾಂಕ್​ನಿಂದ ಬ್ಯಾಂಕ್​ಗೆ ವ್ಯತ್ಯಾಸ ಇರುತ್ತದೆ. ಸಾಮಾನ್ಯವಾಗಿ ಕನಿಷ್ಠ 1,000 ರೂ.ನಿಂದ ಹೂಡಿಕೆ ಮಾಡಬಹುದಾಗಿದೆ. ಆರ್​ಡಿ ಯೋಜನೆಯ ಇತರ ಪ್ರಮುಖ ಲಕ್ಷಣಗಳು ಇಲ್ಲಿವೆ.

  • ಕನಿಷ್ಠ ಆರು ತಿಂಗಳುಗಳಿಂದ ಗರಿಷ್ಠ 10 ವರ್ಷಗಳ ವರೆಗೆ ಠೇವಣಿ ಇಡಬಹುದಾಗಿದೆ.
  •  ಸ್ಥಿರ ಠೇವಣಿ (ಎಫ್​ಡಿ) ಮಾದರಿಯಲ್ಲೇ ಆರ್​ಡಿಗೂ ಬಡ್ಡಿ ದರ ನಿಗದಿಪಡಿಸಲಾಗುತ್ತದೆ.
  • ಅವಧಿಪೂರ್ವ ಹಿಂಪಡೆಯುವಿಕೆ ನಿರ್ಬಂಧಿಸಲಾಗಿದೆ. ಕೆಲವೊಂದು ಷರತ್ತುಗಳೊಂದಿಗೆ ಅವಧಿಪೂರ್ವ ಹಿಂಪಡೆಯುವ ಅವಕಾಶಗಳು ಇರುತ್ತವೆ. ಆದರೆ ಮೆಚ್ಯೂರಿಟಿ ವೇಳೆ ದೊರೆಯುವ ಎಲ್ಲ ಪ್ರಯೋಜನಗಳು ಇದರಿಂದ ದೊರೆಯಲಾರವು.

ಆರ್​ಡಿ ಠೇವಣಿ ಹೊಂದಲು ಅರ್ಹತೆಗಳೇನು?

  • ಯಾರು ಬೇಕಾದರೂ ಆರ್​ಡಿ ಖಾತೆ ತೆರೆಯಬಹುದು
  • 10 ವರ್ಷಕ್ಕಿಂತ ಕಡಿಮೆ ವಯಸ್ಸಿನವರೂ ಗುರುತಿನ ದೃಢೀಕರಣ ಒದಗಿಸಿದರೆ ಠೇವಣಿ ಖಾತೆ ತೆರೆಯಬಹುದು.

ಯಾವೆಲ್ಲ ದಾಖಲೆಗಳು ಬೇಕಾಗುತ್ತವೆ?

ಇದನ್ನೂ ಓದಿ
Image
Rs 2000 Currency Notes: ಚಲಾವಣೆಗೆ ಸಿಗುತ್ತಿಲ್ಲ 2,000 ರೂ. ನೋಟು! ಕಾರಣ ಇಲ್ಲಿದೆ ನೋಡಿ
Image
ಎನ್​ಆರ್​ಐಗಳೂ ಆಧಾರ್ ಕಾರ್ಡ್ ಹೊಂದಬಹುದು
Image
ಆರ್ಥಿಕ ಹಿಂಜರಿತದ ವೇಳೆ ಉದ್ಯೋಗ ಉಳಿಸಿಕೊಳ್ಳಲು ಇಲ್ಲಿದೆ ಟಿಪ್ಸ್
Image
ಆನ್​ಲೈನ್ ಹಣಕಾಸು ವಂಚನೆಗಳಿಂದ ರಕ್ಷಣೆಗೆ ಈ ವಿಚಾರಗಳನ್ನು ಗಮನಿಸಿ
  • ಯಾವ ಬ್ಯಾಂಕ್​ನಲ್ಲಿ ಆರ್​ಡಿ ಖಾತೆ ತೆರೆಯಲು ಉದ್ದೇಶಿಸಿದ್ದೀರೋ ಆ ಬ್ಯಾಂಕ್​ನ ಅರ್ಜಿ
  • ಪಾಸ್​ಪೋರ್ಟ್ ಸೈಜ್​ನ ಫೋಟೊ
  • ಗುರುತಿನ ದಾಖಲೆಗಳು ಮತ್ತು ವಿಳಾಸ ದೃಢೀಕರಣ ದಾಖಲೆಗಳು
  • ಬ್ಯಾಂಕ್ ಬಯಸಿದಲಿ ಕೆವೈಸಿ ದಾಖಲೆಗಳನ್ನೂ ನೀಡಬೇಕಾಗುತ್ತದೆ.

ಆನ್​ಲೈನ್​ನಲ್ಲಿ ಆರ್​ಡಿ ಖಾತೆ ತೆರೆಯುವುದು ಹೇಗೆ?

  • ನೆಟ್​ ಬ್ಯಾಂಕಿಂಗ್​ಗೆ ಲಾಗಿನ್ ಆಗಿ
  • ಆರ್​ಡಿ ಖಾತೆ ತೆರೆಯುವುದಕ್ಕೆ ಸಂಬಂಧಿಸಿದ ಆಯ್ಕೆಯನ್ನು ಕ್ಲಿಕ್ ಮಾಡಿ
  • ಅವಧಿ ಮತ್ತು ಕಂತಿನ ಮೊತ್ತದ ವಿವರಗಳನ್ನು ಭರ್ತಿ ಮಾಡಿ
  • ಬಳಿಕ ನಿಮ್ಮ ಉಳಿತಾಯ ಖಾತೆಯನ್ನು ಆರ್​ಡಿ ಖಾತೆ ಜತೆ ಲಿಂಕ್ ಮಾಡುವ ಆಯ್ಕೆಯನ್ನು ಕ್ಲಿಕ್ ಮಾಡಿ

ಆಫ್​​ಲೈನ್​ನಲ್ಲಿ ಆರ್​ಡಿ ಖಾತೆ ತೆರೆಯುವುದು ಹೇಗೆ?

  • ಸಮೀಪದ ಬ್ಯಾಂಕ್ ಶಾಖೆಗೆ ಭೇಟಿ ನೀಡಿ
  • ಆರ್​ಡಿ ಖಾತೆ ತೆರೆಯುವುದಕ್ಕೆ ಸಂಬಂಧಿಸಿದ ಅರ್ಜಿಯನ್ನು ಭರ್ತಿ ಮಾಡಿ
  • ಕಂತಿನ ಹಣವನ್ನು ಪಾವತಿ ಮಾಡಲು ಚೆಕ್ ನೀಡುವ ಮೂಲಕ ದೃಢೀಕರಿಸಿ
  • ಅಗತ್ಯವಿದ್ದಲ್ಲಿ ಕೆವೈಸಿ ವಿವರ, ದಾಖಲೆಗಳನ್ನು ಸಲ್ಲಿಸಿ

ಅವಧಿಪೂರ್ವ ಹಿಂಪಡೆಯಲು ಇದೆಯೇ?

  • ಬ್ಯಾಂಕ್​ಗಳು ಆರ್​​ಡಿಯ ಅವಧಿಪೂರ್ವ ಹಿಂಪಡೆಯುವಿಕೆಗೆ ಬಡ್ಡಿಯ ಶೇಕಡಾ 1.00ರ ವರೆಗೆ ಶುಲ್ಕ ವಿಧಿಸುತ್ತವೆ
  • ಬಡ್ಡಿ ದರ ಬ್ಯಾಂಕ್​ನಿಂದ ಬ್ಯಾಂಕ್​ಗೆ ವ್ಯತ್ಯಾಸ ಇರಬಹುದು
  • ಅವಧಿಗೂ ಮುನ್ನ ಹಿಂಪಡೆಯುವಾಗ ಠೇವಣಿ ಇಡುವ ಸಂದರ್ಭದಲ್ಲಿ ಭರವಸೆ ನೀಡಿದ್ದ ಪ್ರಮಾಣದಲ್ಲಿ ಬಡ್ಡಿ ದೊರೆಯಲಾರದು. ಬಡ್ಡಿ ದರವನ್ನು ಬ್ಯಾಂಕ್​ಗಳು ಶೇಕಡಾ 1ರಿಂದ 2ರಷ್ಟು ಕಡಿತ ಮಾಡುವ ಸಾಧ್ಯತೆ ಇದೆ
  • ಆರ್​ಡಿಗೆ ಕನಿಷ್ಠ ಲಾಕ್​ ಇನ್ ಅವಧಿ ಮೂರು ತಿಂಗಳುಗಳಾಗಿವೆ. ಈ ಅವಧಿಗೂ ಮೊದಲೇ ಹಿಂಪಡೆಯುವುದಾದರೆ ಬಡ್ಡಿ ದೊರೆಯಲಾರದು. ಠೇವಣಿ ಇಟ್ಟ ಮೊತ್ತ ಮಾತ್ರ ವಾಪಸ್ ದೊರೆಯಬಹುದು.

ವೈಯಕ್ತಿಕ ಹಣಕಾಸಿಗೆ ಸಂಬಂಧಿಸಿದ ಇನ್ನಷ್ಟು ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು