Sign In

By signing in or creating an account, you agree with Associated Broadcasting Company's Terms & Conditions and Privacy Policy.

ELSS Mutual Fund: ಇಎಲ್​ಎಸ್​ಎಸ್ ಮ್ಯೂಚುವಲ್ ಫಂಡ್ ಮೂಲಕ ತೆರಿಗೆ ವಿನಾಯಿತಿ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

Tax Saving Funds; ಇಎಲ್​ಎಸ್​ಎಸ್ ಮ್ಯೂಚುವಲ್ ಫಂಡ್ ಎಂದರೇನು? ಅವುಗಳಲ್ಲಿ ಹೂಡಿಕೆ ಮಾಡುವುದು ಹೇಗೆ? ಹೂಡಿಕೆ ಮಾಡುವ ಮೂಲಕ ಎಷ್ಟು ಆದಾಯಕ್ಕೆ ತೆರಿಗೆ ವಿನಾಯಿತಿ ಪಡೆಯಬಹುದು? ತೆರಿಗೆ ವಿನಾಯಿತಿ ಪಡೆಯುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.

ELSS Mutual Fund: ಇಎಲ್​ಎಸ್​ಎಸ್ ಮ್ಯೂಚುವಲ್ ಫಂಡ್ ಮೂಲಕ ತೆರಿಗೆ ವಿನಾಯಿತಿ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Feb 13, 2023 | 10:51 AM

ತೆರಿಗೆ ವಿನಾಯಿತಿ ಪಡೆಯಲು ಹಲವಾರು ಆಯ್ಕೆಗಳಿವೆ. ಅವುಗಳಲ್ಲಿ ಇಎಲ್​ಎಸ್​ಎಸ್ ಮ್ಯೂಚುವಲ್ ಫಂಡ್​​ನಲ್ಲಿ (ELSS Mutual Fund) ಮಾಡುವ ಹೂಡಿಕೆಯೂ ಪ್ರಮುಖವಾದದ್ದಾಗಿದೆ. ಇಎಲ್​ಎಸ್​ಎಸ್ ಇದರ ವಿಸ್ತೃತ ರೂಪ ಈಕ್ವಿಟಿ ಲಿಂಕ್ಡ್ ಸೇವಿಂಗ್ಸ್ ಸ್ಕೀಮ್, ಅಂದರೆ ಷೇರು ಸಂಯೋಜಿತ ಉಳಿತಾಯ ಯೋಜನೆ ಎಂದಾಗಿದೆ. ಈ ಯೋಜನೆಯಲ್ಲಿ ಸ್ವತ್ತು ನಿರ್ವಹಣಾ ಕಂಪನಿಗಳು ತಮ್ಮ ಸ್ವತ್ತನ್ನು ಷೇರುಗಳ ಮೇಲೆ ಹೂಡಿಕೆ ಮಾಡುತ್ತವೆ. ಸ್ವತ್ತು ನಿರ್ವಹಣಾ ಕಂಪನಿಗಳ ಮೂಲಕ ಹೂಡಿಕೆ ಮಾಡಿ ತೆರಿಗೆ ವಿನಾಯಿತಿ ಪಡೆಯಬಹುದಾಗಿದೆ. ಇಎಲ್​ಎಸ್​ಎಸ್ ಮ್ಯೂಚುವಲ್ ಫಂಡ್ ಎಂದರೇನು? ಅವುಗಳಲ್ಲಿ ಹೂಡಿಕೆ ಮಾಡುವುದು ಹೇಗೆ? ಹೂಡಿಕೆ ಮಾಡುವ ಮೂಲಕ ಎಷ್ಟು ಆದಾಯಕ್ಕೆ ತೆರಿಗೆ ವಿನಾಯಿತಿ ಪಡೆಯಬಹುದು? ತೆರಿಗೆ ವಿನಾಯಿತಿ ಪಡೆಯುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.

ಇಎಲ್​ಎಸ್​ಎಸ್ ಮ್ಯೂಚುವಲ್ ಫಂಡ್ ಎಂದರೇನು?

ವ್ಯಕ್ತಿಗಳು ಷೇರುಗಳಲ್ಲಿ ಹೂಡಿಕೆ ಮಾಡುವ ಮೂಲಕ ಉಳಿತಾಯ ಮಾಡಬಹುದಾದ ಮ್ಯೂಚುವಲ್ ಫಂಡ್ ಉಳಿತಾಯ ಯೋಜನೆಯೇ ಇಎಲ್​​ಎಸ್​​ಎಸ್. ಮೇಲೆ ತಿಳಿಸಿದಂತೆ, ಇದರ ವಿಸ್ತೃತ ರೂಪ ಈಕ್ವಿಟಿ ಲಿಂಕ್ಡ್ ಸೇವಿಂಗ್ಸ್ ಸ್ಕೀಮ್. ಅನೇಕ ಫಂಡ್​ ಹೌಸ್​​ಗಳು ಈ ಸ್ಕೀಮ್​ ಅನ್ನು ಒದಗಿಸುತ್ತವೆ. ಐಡಿಎಫ್​ಸಿ ಟ್ಯಾಕ್ಸ್ ಅಡ್ವಾಂಟೇಜ್, ಕೆನರಾ ರೋಬಿಕೋ ಈಕ್ವಿಟಿ ಟ್ಯಾಕ್ಸ್ ಸೇವರ್, ಮಿರಾಯೆ ಅಸೆಟ್ ಟ್ಯಾಕ್ಸ್ ಸೇವರ್ ಫಂಡ್, ಡಿಎಸ್​​ಪಿ ಟ್ಯಾಕ್ಸ್ ಸೇವರ್ ಇಎಲ್​​ಎಸ್​​ಎಸ್ ಮ್ಯೂಚುವಲ್ ಫಂಡ್​ಗಳಿಗೆ ಕೆಲವು ಉದಾಹರಣೆಗಳಾಗಿವೆ.

ಇಎಲ್​​ಎಸ್​​ಎಸ್ ಮ್ಯೂಚುವಲ್ ಫಂಡ್ ಹೂಡಿಕೆಗೆ 3 ವರ್ಷಗಳ ಲಾಕ್ ಇನ್ ಅವಧಿ ಇರುತ್ತದೆ. 3 ವರ್ಷಕ್ಕೂ ಮೊದಲೇ ಹೂಡಿಕೆದಾರರಿಗೆ ತಮ್ಮ ಹಣವನ್ನು ವಾಪಸ್ ಪಡೆಯಲು ಅವಕಾಶ ಇರುವುದಿಲ್ಲ. ಅಂದರೆ, ಯೂನಿಟ್ ಅಲೊಟ್​ಮೆಂಟ್​ ಆದ ನಂತರ ಮಾರಾಟ ಮಾಡಲು 3 ವರ್ಷಗಳಾಗಬೇಕು. ಹೂಡಿಕೆ ಮಾಡಿದ ಹಣಕ್ಕೆ ಅನುಗುಣವಾಗಿ ಯೂನಿಟ್​​ಗಳನ್ನು ಹಂಚಿಕೆ ಮಾಡಲಾಗುತ್ತದೆ.

ಇಎಲ್​ಎಸ್​​ಎಸ್​ ಮೂಲಕ ತೆರಿಗೆ ವಿನಾಯಿತಿ ಪಡೆಯುವುದು ಹೇಗೆ?

ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80ಸಿ ಅಡಿಯಲ್ಲಿ 1.5 ಲಕ್ಷ ರೂ.ವರೆಗಿನ ಆದಾಯಕ್ಕೆ ಇಎಲ್​ಎಸ್​​ಎಸ್​ ಮ್ಯೂಚುವಲ್ ಫಂಡ್ ಹೂಡಿಕೆ ಮೂಲಕ ಆದಾಯ ತೆರಿಗೆ ವಿನಾಯಿತಿ ಪಡೆಯಬಹುದಾಗಿದೆ. ಉದಾಹರಣೆಗೆ; ವ್ಯಕ್ತಿಯೊಬ್ಬರು ಇಎಲ್​ಎಸ್​​ಎಸ್​ ಮ್ಯೂಚುವಲ್ ಫಂಡ್​ನಲ್ಲಿ 50,000 ರೂ. ಹೂಡಿಕೆ ಮಾಡಿದ್ದರೆ, ಒಟ್ಟು ತೆರಿಗೆ ವ್ಯಾಪ್ತಿಗೆ ಬರುವ ಆದಾಯದಿಂದ ಈ ಮೊತ್ತವನ್ನು ಕಳೆಯಲಾಗುತ್ತದೆ. ಇದರಿಂದ ತೆರಿಗೆ ಹೊರೆ ಕಡಿಮೆಯಾಗಲಿದೆ. ಈ ವಿಧಾನದಲ್ಲಿ ಹೂಡಿಕೆ ಮಾಡುವ ಮೂಲಕ ವಾರ್ಷಿಕವಾಗಿ 46,800 ರೂ. ವರೆಗೆ ತೆರಿಗೆ ವಿನಾಯಿತಿ ಪಡೆಯಬಹುದಾಗಿದೆ.

ನೆನಪಿರಲಿ; ಮಾರುಕಟ್ಟೆ ರಿಸ್ಕ್​​ಗಳಿಂದ ಹೊರತಲ್ಲ

ಇಎಲ್​ಎಸ್​​ಎಸ್​ ಮ್ಯೂಚುವಲ್ ಫಂಡ್​ನಲ್ಲಿ ಹೂಡಿಕೆ ಮಾಡುವುದು ಸಂಪೂರ್ಣವಾಗಿ ಮಾರುಕಟ್ಟೆ ರಿಸ್ಕ್​​ಗಳಿಂದ ಮುಕ್ತವಾಗಿರುವುದಿಲ್ಲ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು. 3 ವರ್ಷಗಳ ವರೆಗೆ ಹಿಂಪಡೆಯಲಾಗುವುದಿಲ್ಲವಾದ ಕಾರಣ ಆ ಸಂದರ್ಭದಲ್ಲಿನ ಮಾರುಕಟ್ಟೆ ಏರಿಳಿತಗಳು ಹೂಡಿಕೆ ಮೇಲೆ ಪರಿಣಾಮ ಬೀರಬಹುದು. ಯಾಕೆಂದರೆ ಇದು ಷೇರುಗಳ ಮೇಲೆ ಮಾಡುವ ಹೂಡಿಕೆಯಾಗಿದೆ. ಹಿಂಪಡೆಯುವ ಸಂದರ್ಭದಲ್ಲಿ ಮಾರುಕಟ್ಟೆ ಉತ್ತಮ ಗಳಿಕೆ ದಾಖಲಿಸುತ್ತಿದ್ದರೆ ಹೆಚ್ಚಿನ ಲಾಭವೂ ದೊರೆಯಬಹುದು. ಹಾಗೆಂದು ತೆರಿಗೆ ಉಳಿಸುವ ಸ್ಥಿರ ಠೇವಣಿಗಳಲ್ಲಿ (ಎಫ್​ಡಿ) ಹೂಡಿಕೆ ಮಾಡುವುದಾದರೆ 5 ವರ್ಷಗಳ ಲಾಕ್ ಇನ್ ಅವಧಿ ಇರುತ್ತದೆ ಎಂಬುದು ನೆನಪಿರಲಿ.

ಇಎಲ್​ಎಸ್​​ಎಸ್​ ಮ್ಯೂಚುವಲ್​ ಫಂಡ್​ನಲ್ಲಿ ಹೂಡಿಕೆ ಮಾಡುವುದು ಹೇಗೆ?

ವ್ಯವಸ್ಥಿತ ಹೂಡಿಕೆ ಯೋಜನೆ ಅಥವಾ ಎಸ್​ಐಪಿ (SIP) ವಿಧಾನದಲ್ಲಿ ಹಾಗೂ ಒಂದು ಬಾರಿಯ ಹೂಡಿಕೆ ಅಥವಾ ಲಂಸಮ್ (Lumpsum) ಹೂಡಿಕೆ ಮಾಡಲೂ ಇಎಲ್​ಎಸ್​​ಎಸ್​ ಮ್ಯೂಚುವಲ್​ ಫಂಡ್​ನಲ್ಲಿ ಅವಕಾಶವಿದೆ. ಎಸ್​ಐಪಿಯಲ್ಲಿ ಪ್ರತಿ ತಿಂಗಳು ಹೂಡಿಕೆ ಮಾಡಬಹುದು. ಇದಕ್ಕೆ ಗರಿಷ್ಠ ಮಿತಿಯಿಲ್ಲ. ಕನಿಷ್ಠ ಮಿತಿ ಮ್ಯೂಚುವಲ್​ ಫಂಡ್​​ ಹೌಸ್​​ಗಳಲ್ಲಿ ಭಿನ್ನವಾಗಿರುತ್ತವೆ.

ಇದನ್ನೂ ಓದಿ: SIP Vs Lumpsum: ಲಂಸಮ್ ಅಥವಾ ಎಸ್​ಐಪಿ; 2023ರಲ್ಲಿ ಮ್ಯೂಚುವಲ್ ಫಂಡ್ ಹೂಡಿಕೆಗೆ ಯಾವುದು ಉತ್ತಮ? ತಜ್ಞರ ಸಲಹೆ ಇಲ್ಲಿದೆ

ಲಂಸಮ್ ಹೂಡಿಕೆ ಅಷ್ಟು ಉತ್ತಮವಲ್ಲ. ಇದರಲ್ಲಿ ಮಾರುಕಟ್ಟೆ ವಹಿವಾಟು ಕುಸಿದ ಸಂದರ್ಭದಲ್ಲಿ ನಷ್ಟ ಅನುಭವಿಸುವ ಆತಂಕ ಹೆಚ್ಚಿರುತ್ತದೆ. ಅದನ್ನು ಸರಿದೂಗಿಸಲು 5-7 ವರ್ಷಗಳ ದೀರ್ಘಾವಧಿ ಹೂಡಿಕೆ ಮಾಡಬೇಕಾಗಿ ಬರಬಹುದು ಎಂದು ‘ಕ್ಲಿಯರ್​​​ ಟ್ಯಾಕ್ಸ್’ ಅಭಿಪ್ರಾಯಪಟ್ಟಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!