Sign In

By signing in or creating an account, you agree with Associated Broadcasting Company's Terms & Conditions and Privacy Policy.

SCSS Scheme: ಅಂಚೆ ಕಚೇರಿ ಸಣ್ಣ ಉಳಿತಾಯ ಯೋಜನೆ; ಎಸ್​ಸಿಎಸ್​ಎಸ್​ನಲ್ಲಿ ಹಿರಿಯ ನಾಗರಿಕರ ಠೇವಣಿಗೆ ಸಿಗುತ್ತೆ ಶೇ 8ರ ಬಡ್ಡಿ

ಹಿರಿಯ ನಾಗರಿಕರ ಉಳಿತಾಯ ಯೋಜನೆ ಠೇವಣಿ ಅಥವಾ ಎಸ್​ಸಿಎಸ್​ಎಸ್ ಬಡ್ಡಿ ದರ ಈಗ ಶೇ 8 ಆಗಿದೆ. ಇದು ಬ್ಯಾಂಕ್​ಗಳು ಹಿರಿಯ ನಾಗರಿಕರ ಠೇವಣಿಗೆ ನೀಡುವ ಬಡ್ಡಿಗಿಂತಲೂ 50ರಿಂದ 75 ಮೂಲಾಂಶದಷ್ಟು ಹೆಚ್ಚಾಗಿದೆ.

SCSS Scheme: ಅಂಚೆ ಕಚೇರಿ ಸಣ್ಣ ಉಳಿತಾಯ ಯೋಜನೆ; ಎಸ್​ಸಿಎಸ್​ಎಸ್​ನಲ್ಲಿ ಹಿರಿಯ ನಾಗರಿಕರ ಠೇವಣಿಗೆ ಸಿಗುತ್ತೆ ಶೇ 8ರ ಬಡ್ಡಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on: Jan 09, 2023 | 1:40 PM

ಹೊಸ ವರ್ಷದ ಆರಂಭದಲ್ಲಿ ಕೇಂದ್ರ ಸರ್ಕಾರವು ವಿವಿಧ ಸಣ್ಣ ಉಳಿತಾಯ ಯೋಜನೆಗಳ (Small Savings Scheme) ಬಡ್ಡಿ ದರ ಹೆಚ್ಚಳ (Interest Rate Hike) ಘೋಷಿಸಿತ್ತು. ಇದೀಗ ಪರಿಷ್ಕೃತ ಬಡ್ಡಿ ದರ ಚಾಲ್ತಿಗೆ ಬಂದಿದ್ದು, ಹಿರಿಯ ನಾಗರಿಕರ ಉಳಿತಾಯ ಯೋಜನೆಯಲ್ಲಿ (senior citizen savings scheme) ಹೂಡಿಕೆ ಮಾಡುವ ಮೂಲಕ ಶೇಕಡಾ 8ರ ವರೆಗೆ ಬಡ್ಡಿ ಪಡೆಯಬಹುದಾಗಿದೆ. ಒಂದು ವರ್ಷದ ಟೈಮ್ ಡಿಪಾಸಿಟ್ (time deposit) ಬಡ್ಡಿ ದರವನ್ನು ಶೇ 5.5ರಿಂದ ಶೇ 6.6ಕ್ಕೆ ಹೆಚ್ಚಿಸಲಾಗಿದೆ. ಇದು ಎಸ್​ಬಿಐ ಒಂದು ವರ್ಷದ ಟೈಮ್ ಡಿಪಾಸಿಟ್ ಬಡ್ಡಿಗಿಂತಲೂ (ಶೇ 5.75) ಹೆಚ್ಚಾಗಿದೆ.

ಎರಡು ವರ್ಷ ಅವಧಿಯ ಅಂಚೆ ಕಚೇರಿ ಡಿಪಾಸಿಟ್ ಯೋಜನೆ ಬಡ್ಡಿಯನ್ನು ಶೇ 5.7ರಿಂದ ಶೇ 6.8ಕ್ಕೆ ಹೆಚ್ಚಿಸಲಾಗಿದೆ. ಎಸ್​ಬಿಐನಲ್ಲಿ ಇದು ಶೇ 6.75ರಷ್ಟಿದೆ. ದೀರ್ಘಾವಧಿಗೆ, 5 ವರ್ಷಗಳ ಅಂಚೆ ಕಚೇರಿ ಉಳಿತಾಯ ಯೋಜನೆಯ ಬಡ್ಡಿಯನ್ನು ಶೇ 7ಕ್ಕೆ ಹೆಚ್ಚಿಸಲಾಗಿದೆ. ಎಸ್​​ಬಿಐನಲ್ಲಿ 5ರಿಂದ 10 ವರ್ಷ ಅವಧಿಯ ಠೇವಣಿಗೆ ಶೇ 6.25ರ ಬಡ್ಡಿಯಷ್ಟೇ ಇದೆ.

ಇದನ್ನೂ ಓದಿ: New Year Gift: ಹೊಸ ವರ್ಷಕ್ಕೆ ಗಿಫ್ಟ್; ಅಂಚೆ ಸೇರಿದಂತೆ ಹಲವು ಠೇವಣಿಗಳ ಬಡ್ಡಿ ದರ ಜನವರಿ 1ರಿಂದ ಹೆಚ್ಚಳ

ಹಿರಿಯ ನಾಗರಿಕರ ಉಳಿತಾಯ ಯೋಜನೆ ಠೇವಣಿ ಬಡ್ಡಿ ವಿವರ

ಹಿರಿಯ ನಾಗರಿಕರ ಉಳಿತಾಯ ಯೋಜನೆ ಠೇವಣಿ ಅಥವಾ ಎಸ್​ಸಿಎಸ್​ಎಸ್ ಬಡ್ಡಿ ದರ ಈಗ ಶೇ 8 ಆಗಿದೆ. ಇದು ಬ್ಯಾಂಕ್​ಗಳು ಹಿರಿಯ ನಾಗರಿಕರ ಠೇವಣಿಗೆ ನೀಡುವ ಬಡ್ಡಿಗಿಂತಲೂ 50ರಿಂದ 75 ಮೂಲಾಂಶದಷ್ಟು ಹೆಚ್ಚಾಗಿದೆ. 60 ವರ್ಷ ಮೇಲ್ಪಟ್ಟವರು ಈ ಠೇವಣಿ ಇಡಬಹುದಾಗಿದೆ. 60 ವರ್ಷಕ್ಕಿಂತ ಕಡಿಮೆ ವಯಸ್ಸಿನವರು, 55 ವರ್ಷ ಮೇಲ್ಪಟ್ಟವರಾದರೆ ಸ್ವಯಂ ನಿವೃತ್ತಿ ಯೋಜನೆಯಡಿ ಠೇವಣಿ ಇಡಬಹುದಾಗಿದೆ. ನಿವೃತ್ತಿ ಸೌಲಭ್ಯ ದೊರೆತ ಒಂದು ತಿಂಗಳ ಒಳಗಾಗಿ ಠೇವಣಿ ಇಡದಿದ್ದರೆ ನಂತರ ಅವಕಾಶ ಸಿಗಲಾರದು ಎಂಬುದನ್ನು ಗಮನಿಸಬೇಕು.

ಈ ಠೇವಣಿಗೆ ಐದು ವರ್ಷಗಳ ಲಾಕ್​ ಇನ್ ಅವಧಿ ಇದೆ. ಠೇವಣಿ ಆರಂಭಿಸಿದ 3 ವರ್ಷಗಳ ನಂತರವಷ್ಟೇ ಲಾಕ್ ಇನ್ ಅವಧಿ ವಿಸ್ತರಣೆಗೆ ಮನವಿ ಸಲ್ಲಿಸಲು ಅವಕಾಶವಿದೆ. ಕನಿಷ್ಠ 1,000 ರೂ.ನಿಂದ 15 ಲಕ್ಷ ರೂ.ವರೆಗೆ ಹೂಡಿಕೆ ಮಾಡಬಹುದಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್