Sign In

By signing in or creating an account, you agree with Associated Broadcasting Company's Terms & Conditions and Privacy Policy.

Small Business Idea: ಕೇವಲ 5 ಸಾವಿರ ಹೂಡಿಕೆ ಮಾಡಿ ಭರ್ಜರಿ ಆದಾಯ ಗಳಿಸಿ; ಅಂಚೆ ಇಲಾಖೆ ನೀಡಿದೆ ಅವಕಾಶ

ಕಡಿಮೆ ಹೂಡಿಕೆಯೊಂದಿಗೆ ಭರ್ಜರಿ ಆದಾಯ ಗಳಿಸಬಲ್ಲ ಕಿರು ಉದ್ಯಮ ಸ್ಥಾಪಿಸಲು ಭಾರತೀಯ ಅಂಚೆ ಇಲಾಖೆ ಒಂದು ಅವಕಾಶ ಒದಗಿಸಿದೆ. ಅಂಚೆ ಇಲಾಖೆಯ ಫ್ರಾಂಚೈಸ್​ ಸ್ಕೀಮ್​ನ ಸಂಪೂರ್ಣ ವಿವರ ಇಲ್ಲಿದೆ.

Small Business Idea: ಕೇವಲ 5 ಸಾವಿರ ಹೂಡಿಕೆ ಮಾಡಿ ಭರ್ಜರಿ ಆದಾಯ ಗಳಿಸಿ; ಅಂಚೆ ಇಲಾಖೆ ನೀಡಿದೆ ಅವಕಾಶ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Jan 26, 2023 | 12:04 PM

ಸ್ವ ಉದ್ಯೋಗ (Self Employment) ಮಾಡಬೇಕೆಂಬುದು ಬಹಳಷ್ಟು ಮಂದಿಯ ಕನಸಾಗಿರುತ್ತದೆ. ಆದರೆ ದೊಡ್ಡ ಮೊತ್ತದ ಹೂಡಿಕೆ, ಉದ್ಯೋಗಿಗಳ ನಿರ್ವಹಣೆ, ಖರ್ಚು ಇತ್ಯಾದಿಗಳು ಸಾಮಾನ್ಯರಿಂದ ಕಷ್ಟಸಾಧ್ಯ. ಹೀಗಾಗಿ ಮನದೊಳಗೆ ಆಸೆ ಇದ್ದರೂ ಅನೇಕರೂ ಉದ್ಯಮ (Business) ಆರಂಭಿಸಲು ಹಿಂದೇಟು ಹಾಕುತ್ತಾರೆ. ಆದರೆ, ಕಡಿಮೆ ಹೂಡಿಕೆಯೊಂದಿಗೆ ಭರ್ಜರಿ ಆದಾಯ ಗಳಿಸಬಲ್ಲ ಕಿರು ಉದ್ಯಮ (Small Business) ಸ್ಥಾಪಿಸಲು ಭಾರತೀಯ ಅಂಚೆ ಇಲಾಖೆ ಒಂದು ಅವಕಾಶ ಒದಗಿಸಿದೆ. ಅಂಚೆ ಇಲಾಖೆಯ (Indian Post) ಫ್ರಾಂಚೈಸ್​ ಸ್ಕೀಮ್​ ಮೂಲಕ ಕಡಿಮೆ ಹೂಡಿಕೆಯೊಂದಿಗೆ ಉತ್ತಮ ಆದಾಯ, ಲಾಭ ಗಳಿಸಬಹುದಾಗಿದೆ. ಈ ಯೋಜನೆಗೆ ಕನಿಷ್ಠ 5,000 ರೂ. ಹೂಡಿಕೆ ಮಾಡಬೇಕಾಗುತ್ತದೆ. ಭಾರತೀಯ ಅಂಚೆ ಇಲಾಖೆಯು ಕೇವಲ ಅಂಚೆ ಸೇವೆ ಮಾತ್ರವಲ್ಲದೆ ಅನೇಕ ಸೇವೆಗಳನ್ನು ಒದಗಿಸುತ್ತಿದೆ. ಸಣ್ಣ ಉಳಿತಾಯ ಖಾತೆಗಳು, ಆರ್​ಡಿ, ಆಧಾರ್ ಅಪ್​ಡೇಟ್ ಇತ್ಯಾದಿ ಸೇವೆಗಳು ಅಂಚೆ ಕಚೇರಿಗಳಲ್ಲಿ ದೊರೆಯುತ್ತವೆ. ಆದರೆ ಸದ್ಯ ದೇಶದಲ್ಲಿರುವ ಅಂಚೆ ಕಚೇರಿಗಳ ಸಂಖ್ಯೆ ಕಡಿಮೆ ಇದೆ. ಹೀಗಾಗಿ ಸರ್ಕಾರ ಫ್ರಾಂಚೈಸ್​ಗಳ ಮೂಲಕ ಅಂಚೆ ಕಚೇರಿಗಳ ಸಂಖ್ಯೆಯನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದೆ. ಸರ್ಕಾರದ ಈ ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ ಸಾರ್ವಜನಿಕರೂ ಫ್ರಾಂಚೈಸ್ ತೆರೆಯಬಹುದಾಗಿದೆ. ಆ ಮೂಲಕ ಆದಾಯ ಗಳಿಸಬಹುದಾಗಿದೆ. ತವರು ಗ್ರಾಮದಲ್ಲೇ, ಮನೆಯ ಸಮೀಪವೇ ಫ್ರಾಂಚೈಸ್ ತೆರೆಯುವ ಮೂಲಕ ಊರಿನಲ್ಲೇ ಇದ್ದುಕೊಂಡು ಆದಾಯ ಗಳಿಸಬಹುದಾಗಿದೆ.

ಏನಿದು ಅಂಚೆ ಕಚೇರಿ ಫ್ರಾಂಚೈಸ್ ಯೋಜನೆ?

ಅಂಚೆ ಇಲಾಖೆ ಎರಡು ರೀತಿಯ ಪ್ರಾಂಚೈಸ್​ಗೆ​​ ಅವಕಾಶ ನೀಡುತ್ತದೆ. ಅವುಗಳೆಂದರೆ, ಫ್ರಾಂಚೈಸ್ಡ್ ಔಟ್​ಲೆಟ್ ಮತ್ತು ಫ್ರಾಂಚೈಸೀ ಆಫ್​ ಪೋಸ್ಟಲ್ ಏಜೆಂಟ್ಸ್. ಈ ಪೈಕಿ ಯಾವುದಾದರೂ ಒಂದನ್ನು ಆಯ್ದುಕೊಳ್ಳಬಹುದು. ಔಟ್​ಲೆಟ್ ಫ್ರಾಂಚೈಸ್​​ ಅಡಿಯಲ್ಲಿ ಅಂಚೆ ಕಚೇರಿ ಇಲ್ಲದ ಕಡೆಗಳಲ್ಲಿ ಕಚೇರಿ ತೆರೆಯಬಹುದು. ಪೋಸ್ಟಲ್​ ಏಜೆಂಟ್​ಗಳಾದರೆ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಮನೆ ಮನೆಗೆ ತೆರಳಿ ಸ್ಟೇಷನರಿ ಮತ್ತು ಅಂಚೆ ಸ್ಟಾಂಪ್​ಗಳ ವಿತರಣೆ ಮಾಡಬೇಕಾಗುತ್ತದೆ.

ಅಂಚೆ ಕಚೇರಿ ಫ್ರಾಂಚೈಸ್​ಗೆ ಅರ್ಜಿ ಸಲ್ಲಿಸುವುದು ಹೇಗೆ?

ಇಂಡಿಯಾ ಪೋಸ್ಟ್ ವೆಬ್​ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನಂತರ ಅರ್ಜಿಯನ್ನು ಡೌನ್​ಲೋಡ್ ಮಾಡಿ ಭರ್ತಿ ಮಾಡಿ ಸಲ್ಲಿಸಬೇಕು. ಷರತ್ತುಗಳು ಮತ್ತು ನಿಬಂಧನೆಗಳನ್ನು ಸರಿಯಾಗಿ ಗಮನಿಸಿಕೊಳ್ಳಿ. ಈ ಯೋಜನೆಯಡಿ ಫ್ರಾಂಚೈಸ್​ ತೆರೆಯಲು ಹೆಚ್ಚಿನ ಅರ್ಹತೆಗಳೇನೂ ಬೇಕಾಗಿಲ್ಲ. ಇಲಾಖೆ ಹೇಳಿರುವ ಷರತ್ತುಗಳು ಮತ್ತು ನಿಬಂಧನೆಗಳನ್ನು ಪೂರೈಸಿದರೆ ಸಾಕು. 18 ವರ್ಷ ಮೇಲ್ಪಟ್ಟವರಾಗಿರಬೇಕು. ಫ್ರಾಂಚೈಸ್​ಗೆ ಅರ್ಜಿ ಸಲ್ಲಿಸುವವರ ಕುಟುಂಬದವರು ಯಾರೂ ಅಂಚೆ ಕಚೇರಿಯ ಉದ್ಯೋಗಿ ಆಗಿರಬಾರದು.

ಇದನ್ನೂ ಓದಿ: ಗದಗದಲ್ಲಿ ಅರಳಿದ ಕಲಾಚೇತನ; ಕಾವೆಂಶ್ರೀ ಎಂಬ ಹೋಟೆಲ್ ಉದ್ಯಮಿಯ ಕಲಾಸೇವೆಯ ಯಶೋಗಾಥೆಗೆ ನಮೋ

ಅಂಚೆ ಕಚೇರಿ ಫ್ರಾಂಚೈಸ್​ ತೆರೆಯಲು ಎಷ್ಟು ಖರ್ಚಾಗುತ್ತದೆ?

ಅಂಚೆ ಕಚೇರಿ ಫ್ರಾಂಚೈಸ್ ತೆರೆಯಲು 5,000 ರೂ. ಬಧ್ರತಾ ಠೇವಣಿ ಇಡಬೇಕಾಗುತ್ತದೆ. ಉಳಿದಂತೆ ಸ್ಟೇಷನರಿ ವಸ್ತುಗಳ ಖರೀದಿ ಇತ್ಯಾದಿಗಳಿಗೆ ತುಸು ಖರ್ಚಾಗಬಹುದು. ಫ್ರಾಂಚೈಸ್​ಗಾಗಿ ಕನಿಷ್ಠ 200 ಚದರ ಅಡಿಯ ಕಚೇರಿ ಸ್ಥಳ ಬೇಕಾಗುತ್ತದೆ.

ಅಂಚೆ ಕಚೇರಿ ಫ್ರಾಂಚೈಸ್​ನಿಂದ ಎಷ್ಟು ಆದಾಯ ಗಳಿಸಬಹುದು?

ಅಂಚೆ ಕಚೇರಿ ಫ್ರಾಂಚೈಸ್​ನಿಂದ ನಿಗದಿತ ಆದಾಯ ಎಂಬುದು ಇಲ್ಲವಾದರೂ ತಾವು ನೀಡಿದ ಸೇವೆಗಳಿಗೆ ಅನುಗುಣವಾಗಿ ಕಮಿಷನ್ ದೊರೆಯುತ್ತದೆ. ಹೆಚ್ಚೆಚ್ಚು ಸೇವೆಗಳನ್ನು ನೀಡಿದಷ್ಟೂ ಕಮಿಷನ್ ಹೆಚ್ಚು ದೊರೆಯುತ್ತದೆ. ಅಂಚೆ ಫ್ರಾಂಚೈಸ್​ ಮೂಲಕ ನೀಡುವ ಸೇವೆಗಳಿಗೆ ದೊರೆಯುವ ಕಮಿಷನ್ ದರ ವಿವರ ಹೀಗಿದೆ;

  • ಬುಕಿಂಗ್ ರಿಜಿಸ್ಟರ್ಡ್ ಆರ್ಟಿಕಲ್ಸ್ – 3 ರೂ.
  • ಬುಕಿಂಗ್ ಸ್ಪೀಡ್​ ಪೋಸ್ಟ್ ಆರ್ಟಿಕಲ್ಸ್ – 5 ರೂ.
  • ಮನಿ ಆರ್ಡರ್ ಬುಕಿಂಗ್ (100 – 200 ರೂ.ವರೆಗೆ) – 3.50 ರೂ.
  • ಮನಿ ಆರ್ಡರ್ ಬುಕಿಂಗ್ (200 ರೂ. ಮೇಲ್ಪಟ್ಟ) – 5 ರೂ.
  • ತಿಂಗಳಿಗೆ 1,000 ರೂ.ಗಿಂತ ಹೆಚ್ಚು ಮೊತ್ತದ ಸ್ಪೀಡ್ ಮತ್ತು ರಿಜಿಸ್ಟರ್ಡ್ ಪೋಸ್ಟ್ ಮಾಡಿದರೆ – ಶೇ 20ರಷ್ಟು ಹೆಚ್ಚುವರಿ ಕಮಿಷನ್
  • ಚಿಲ್ಲರೆ ಸೇವೆಗಳಿಗೆ – ಗಳಿಸಿದ ಆದಾಯಕ್ಕೆ ಶೇ 40ರ ಕಮಿಷನ್

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:29 am, Thu, 26 January 23

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ