Sovereign Gold Bond Scheme: ಸಾವರೀನ್ ಗೋಲ್ಡ್ ಬಾಂಡ್ ಸ್ಕೀಮ್, 3ನೇ ಮತ್ತು 4ನೇ ಸರಣಿ ಬಾಂಡ್​ಗಳ ಬಿಡುಗಡೆ ದಿನಾಂಕ ಪ್ರಕಟ

SGB Tranche III Release On December 18-22: ಈ ಹಣಕಾಸು ವರ್ಷದಲ್ಲಿ ಸಾವರೀನ್ ಗೋಲ್ಡ್ ಬಾಂಡ್ ಸ್ಕೀಮ್​ನ ಕೊನೆಯ ಎರಡು ಸರಣಿಗಳು ಡಿಸೆಂಬರ್ 18ರಿಂದ 22, ಹಾಗೂ ಫೆಬ್ರುವರಿ 12ರಿಂದ 16ರವರೆಗೆ ಲಭ್ಯ ಇವೆ. ಕನಿಷ್ಠ 1 ಗ್ರಾಮ್ ಚಿನ್ನದ ಮೇಲೆ ಹೂಡಿಕೆ ಮಾಡಬಹುದು. ಒಬ್ಬ ವ್ಯಕ್ತಿ 4 ಕಿಲೋವರೆಗೂ ಚಿನ್ನಕ್ಕೆ ಹಣ ಹಾಕಬಹುದು. ಸಾವರೀನ್ ಗೋಲ್ಡ್ ಬಾಂಡ್ ಸ್ಕೀಮ್ 8 ವರ್ಷಕ್ಕೆ ಮೆಚ್ಯೂರ್ ಆಗುತ್ತವೆ. ಕೊನೆಯಲ್ಲಿ ಚಿನ್ನದ ಮಾರುಕಟ್ಟೆ ಬೆಲೆಯಷ್ಟು ಹಣ ರಿಟರ್ನ್ ಆಗಿ ಸಿಗುತ್ತದೆ.

Sovereign Gold Bond Scheme: ಸಾವರೀನ್ ಗೋಲ್ಡ್ ಬಾಂಡ್ ಸ್ಕೀಮ್, 3ನೇ ಮತ್ತು 4ನೇ ಸರಣಿ ಬಾಂಡ್​ಗಳ ಬಿಡುಗಡೆ ದಿನಾಂಕ ಪ್ರಕಟ
ಸಾವರೀನ್ ಗೋಲ್ಡ್ ಬಾಂಡ್ ಸ್ಕೀಮ್
Follow us
|

Updated on: Dec 13, 2023 | 3:19 PM

ನವದೆಹಲಿ, ಡಿಸೆಂಬರ್ 13: ಚಿನ್ನದ ಬೆಲೆ ಆಧಾರಿತವಾದ ಹೂಡಿಕೆ ಸ್ಕೀಮ್ ಸಾವರೀನ್ ಗೋಲ್ಡ್ ಬಾಂಡ್​ನ ಕೊನೆಯ ಎರಡು ಸರಣಿ (Sovereign Gold Bond Trance III and IV) ಬಿಡುಗಡೆಯ ದಿನಾಂಕ ಪ್ರಕಟಿಸಲಾಗಿದೆ. 2023-24ರ ಹಣಕಾಸು ವರ್ಷದಲ್ಲಿ ಮೊದಲೆರಡು ಬಾಂಡ್ ಟ್ರಾಂಚ್​ಗಳು ಮುಗಿದಿದ್ದು, ಇನ್ನೆರಡು ಟ್ರಾಂಚ್​ಗಳು ಬಿಡುಗಡೆ ಆಗುತ್ತಿವೆ. ಮೂರನೇ ಟ್ರಾಂಚ್ ಬಾಂಡ್​ಗಳು ಡಿಸೆಂಬರ್ 18ಕ್ಕೆ ಬಿಡುಗಡೆ ಆಗುತ್ತವೆ. ನಾಲ್ಕನೇ ಸರಣಿಯ ಬಾಂಡ್​ಗಳು 2024ರ ಫೆಬ್ರುವರಿ 12ಕ್ಕೆ ಆರಂಭವಾಗುತ್ತವೆ.

ಮೂರನೇ ಸರಣಿಯ ಎಸ್​ಜಿಬಿಗಳು ಡಿಸೆಂಬರ್ 18ರಿಂದ 22ರವರೆಗೆ ಸಾರ್ವಜನಿಕರಿಗೆ ಖರೀದಿಗೆ ಲಭ್ಯ ಇರುತ್ತದೆ. ಡಿಸೆಂಬರ್ 28ಕ್ಕೆ ಬಾಂಡ್ ವಿತರಣೆ ಆಗುತ್ತದೆ.

ಇನ್ನು, ನಾಲ್ಕನೇ ಸರಣಿ ಬಾಂಡ್​ಗಳು 2024ರ ಫೆಬ್ರುವರಿ 12ರಿಂದ 16ರವರೆಗೂ ಪಬ್ಲಿಕ್ ಸಬ್ಸ್​ಕ್ರಿಪ್ಷನ್​ಗೆ ತೆರೆದಿರುತ್ತವೆ. ಫೆಬ್ರುವರಿ 21ಕ್ಕೆ ಬಾಂಡ್ ವಿತರಣೆ ಮಾಡಲಾಗುತ್ತದೆ.

ಇದನ್ನೂ ಓದಿ: ಶೇ. 8ರವರೆಗೂ ಬಡ್ಡಿ; ಈ ಮೂರು ಬ್ಯಾಂಕ್​ಗಳ ಸ್ಪೆಷಲ್ ಠೇವಣಿ ಪ್ಲಾನ್​ಗಳಿಗೆ ಡಿಸೆಂಬರ್ 31 ಡೆಡ್​ಲೈನ್

ಏನಿದು ಸಾವರೀನ್ ಗೋಲ್ಡ್ ಬಾಂಡ್ ಸ್ಕೀಮ್?

ಇದು ಚಿನ್ನದ ಬೆಲೆ ಆಧಾರಿತ ಹೂಡಿಕೆ ಸ್ಕೀಮ್ ಆಗಿದೆ. ಇವತ್ತಿನ ಮಾರುಕಟ್ಟೆಯಲ್ಲಿನ ಚಿನ್ನದ ಬೆಲೆಯಲ್ಲಿ ಹಣ ಹೂಡಿಕೆ ಮಾಡಬಹುದು. 8 ವರ್ಷದ ಬಳಿಕ ಹೂಡಿಕೆ ಮೆಚ್ಯೂರ್ ಆಗುತ್ತದೆ. ಆಗ ಚಿನ್ನದ ಬೆಲೆ ಎಷ್ಟು ಇರುತ್ತದೋ ಅಷ್ಟು ರಿಟರ್ನ್ ಸಿಗುತ್ತದೆ. ಇದರಲ್ಲಿ ಕನಿಷ್ಠ ಹೂಡಿಕೆ 1 ಗ್ರಾಮ್ ಇದ್ದು, ಒಬ್ಬ ವ್ಯಕ್ತಿ 4 ಕಿಲೋ ಚಿನ್ನದವರೆಗೂ ಹೂಡಿಕೆ ಮಾಡಬಹುದು. ಆದರೆ, ಭೌತಿಕ ಚಿನ್ನವನ್ನು ರಿಟರ್ನ್ ಆಗಿ ಕೊಡಲಾಗುವುದಿಲ್ಲ. ಚಿನ್ನದ ಬೆಲೆಯ ಹಣ ಮಾತ್ರ ರಿಟರ್ನ್ ಆಗಿ ಸಿಗುವುದು.

ಸಾವರೀನ್ ಗೋಲ್ಡ್ ಬಾಂಡ್ ಸ್ಕೀಮ್​ನಲ್ಲಿ ಮಾಡಲಾಗುವ ಹೂಡಿಕೆಗೆ ತೆರಿಗೆ ರಿಯಾಯಿತಿ ಪಡೆಯಬಹುದು. ಜೊತೆಗೆ, ಹೂಡಿಕೆ ಮೊತ್ತಕ್ಕೆ ವರ್ಷಕ್ಕೆ ಶೇ. 2.5ರಷ್ಟು ಬಡ್ಡಿ ಕೊಡಲಾಗುತ್ತದೆ. ಈ ಬಡ್ಡಿ ಹಣವನ್ನು ಆರು ತಿಂಗಳಿಗೊಮ್ಮೆ ಸದಸ್ಯನ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತದೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್