AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಕನ್ಯಾ ಸಮೃದ್ಧಿ ಯೋಜನೆ: ಅ. 1ರಿಂದ ಬದಲಾಗಲಿವೆ 2 ನಿಯಮಗಳು, ಗಮನಿಸಿ

Sukanya Samriddhi Yojana rules change from 2024 Oct 1st: ಅಕ್ಟೋಬರ್ 1ರಿಂದ ಕೆಲ ಸಣ್ಣ ಉಳಿತಾಯ ಯೋಜನೆಗಳ ನಿಯಮಗಳಲ್ಲಿ ಸರ್ಕಾರ ತುಸು ಬದಲಾವಣೆ ತಂದಿದೆ. ನ್ಯಾಷನಲ್ ಸೇವಿಂಗ್ಸ್ ಸ್ಕೀಮ್, ಸುಕನ್ಯಾ ಸಮೃದ್ಧಿ ಯೋಜನೆ, ಪಿಪಿಎಫ್ ಯೋಜನೆಗಳ ನಿಯಮದಲ್ಲಿ ಬದಲಾವಣೆ ತರಲಾಗುತ್ತಿದೆ. ಬಾಲಕಿಯರ ಹೆಸರಿನಲ್ಲಿ ಆರಂಭಿಸಲಾಗುವ ಸುಕನ್ಯಾ ಸಮೃದ್ಧಿ ಯೋಜನೆಯ ಎರಡು ನಿಯಮಗಳು ಬದಲಾಗುತ್ತಿದೆ, ಗಮನಿಸಿ.

ಸುಕನ್ಯಾ ಸಮೃದ್ಧಿ ಯೋಜನೆ: ಅ. 1ರಿಂದ ಬದಲಾಗಲಿವೆ 2 ನಿಯಮಗಳು, ಗಮನಿಸಿ
ಸುಕನ್ಯಾ ಸಮೃದ್ಧಿ ಯೋಜನೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 08, 2024 | 11:28 AM

Share

ಹಣಕಾಸು ಸಚಿವಾಲಯವು ಕೆಲ ಸಣ್ಣ ಉಳಿತಾಯ ಯೋಜನೆಗಳ ಕೆಲ ನಿಯಮಗಳಲ್ಲಿ ಸ್ವಲ್ಪ ಬದಲಾವಣೆ ಮಾಡಿದೆ. ಅಕ್ಟೋಬರ್ 1ರಿಂದ ಇವು ಚಾಲನೆಗೆ ಬರಲಿವೆ. ಅಂಚೆ ಕಚೇರಿ ಮೂಲಕ ಮಾಡಿಸಲಾಗಿರುವ ಪಬ್ಲಿಕ್ ಪ್ರಾವಿಡೆಂಟ್ ಫಂಡ್, ಸ್ಮಾಲ್ ಸೇವಿಂಗ್ಸ್ ಸ್ಕೀಮ್, ನ್ಯಾಷನಲ್ ಸ್ಮಾಲ್ ಸೇವಿಂಗ್ಸ್ ಸ್ಕೀಮ್ ಹಾಗೂ ಸುಕನ್ಯಾ ಸಮೃದ್ದಿ ಸ್ಕೀಮ್​ಗಳಲ್ಲಿನ ಕೆಲ ನಿಯಮಗಳಲ್ಲಿ ತಿದ್ದುಪಡಿ ಮಾಡಲಾಗಿದೆ. ಹೊಸ ನಿಯಮಗಳು ಜಾರಿಗೆ ಬರಲಿವೆ. ಸಣ್ಣ ಉಳಿತಾಯ ಯೋಜನೆಗಳನ್ನು ಹೆಚ್ಚು ಕಾನೂನುಬದ್ಧಗೊಳಿಸಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ಸುಕನ್ಯಾ ಸಮೃದ್ಧಿ ಅಕೌಂಟ್​ನಲ್ಲಿ ಏನು ಬದಲಾವಣೆ ಮಾಡಲಾಗಿದೆ ಎನ್ನುವ ವಿವರ ಮುಂದಿದೆ ನೋಡಿ…

ಅ. 1ರಿಂದ ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಬದಲಾಗುವ ನಿಯಮಗಳಿವು

ಬಾಲಕಿಯರ ಹೆಸರಿನಲ್ಲಿ ಅವರ ಅಜ್ಜ ಅಥವಾ ಅಜ್ಜಿ ಪಾಲಕರಾಗಿ (Guardian) ಸುಕನ್ಯಾ ಸಮೃದ್ಧಿ ಖಾತೆ ತೆರೆದಿದ್ದರೆ ಅದು ಸಿಂಧುವಾಗಿರುವುದಿಲ್ಲ. ಬಾಲಕಿಯ ತಂದೆ ಅಥವಾ ತಾಯಿಯ ಹೆಸರಿಗೆ ಖಾತೆಯ ಪಾಲಕತ್ವ ವರ್ಗಾವಣೆ ಆಗುತ್ತದೆ. ಅಥವಾ ಕಾನೂನು ಪ್ರಕಾರ ಯಾರು ಪಾಲಕರಾಗಿರುತ್ತಾರೋ ಅವರಿಗೆ ವರ್ಗಾವಣೆ ಆಗುತ್ತದೆ. ಒಂದು ವೇಳೆ ಬಾಲಕಿಗೆ ಅಜ್ಜ ಅಥವಾ ಅಜ್ಜಿ ಬಿಟ್ಟರೆ ಯಾರೂ ಪಾಲಕರಿಲ್ಲ ಎಂದಲ್ಲಿ ಅವರ ಹೆಸರಿನಲ್ಲೇ ಖಾತೆ ಇರುತ್ತದೆ. ವರ್ಗಾವಣೆ ಆಗುವುದಿಲ್ಲ.

ಇದನ್ನೂ ಓದಿ: ತಪ್ಪದೇ ಗಮನಿಸಿ; ಒಂದಕ್ಕಿಂತ ಹೆಚ್ಚು ಖಾತೆ ಹೊಂದಿರುವುದೂ ಸೇರಿ ಪಿಪಿಎಫ್ ಯೋಜನೆಯ 3 ನಿಯಮಗಳಲ್ಲಿ ಮಾರ್ಪಾಡು; ಅ. 1ರಿಂದ ಜಾರಿ

ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಆಗುವ ಮತ್ತೊಂದು ನಿಯಮ ಬದಲಾವಣೆ ಎರಡಕ್ಕಿಂತ ಹೆಚ್ಚು ಖಾತೆಗಳ ಕುರಿತಾದ್ದು. ಒಂದು ಕುಟುಂಬದಲ್ಲಿ ಎರಡಕ್ಕಿಂತ ಹೆಚ್ಚು ಸುಕನ್ಯಾ ಸಮೃದ್ಧಿ ಖಾತೆ ಇರುವಂತಿಲ್ಲ. ಹಾಗೊಂದು ವೇಳೆ ಎರಡಕ್ಕಿಂತ ಹೆಚ್ಚು ಅಕೌಂಟ್​ಗಳಿದ್ದರೆ ನಿಯಮಿತವಲ್ಲದ ಖಾತೆ ಅಥವಾ ಖಾತೆಗಳನ್ನು ಮುಚ್ಚಲಾಗುತ್ತದೆ.

ಈ ಎರಡು ನಿಯಮ ಬದಲಾವಣೆಗಳು ಅಕ್ಟೋಬರ್ 1ರಿಂದ ಚಾಲನೆಗೆ ಬರುತ್ತವೆ.

ಏನಿದು ಸುಕನ್ಯಾ ಸಮೃದ್ಧಿ ಯೋಜನೆ?

10 ವರ್ಷದೊಳಗಿನ ಹೆಣ್ಮಕ್ಕಳ ಭವಿಷ್ಯಕ್ಕೆಂದು ಪೋಷಕರು ಹೂಡಿಕೆ ಮಾಡಬಹುದಾದ ಸ್ಕೀಮ್ ಇದು. ಹೆಣ್ಮಗುವಿನ ಹೆಸರಿನಲ್ಲಿ ಅಂಚೆ ಕಚೇರಿ ಅಥವಾ ಬ್ಯಾಂಕುಗಳಲ್ಲಿ ಸ್ಕೀಮ್​ನ ಖಾತೆ ತೆರೆಯಬಹುದು.

21 ವರ್ಷಕ್ಕೆ ಈ ಸ್ಕೀಮ್ ಮೆಚ್ಯೂರ್ ಆಗುತ್ತದೆ. ವರ್ಷಕ್ಕೆ ಒಂದೂವರೆ ಲಕ್ಷ ರೂವರೆಗೆ ಠೇವಣಿ ಇಡಬಹುದು. ಒಂದು ಹೆಣ್ಮಗುವಿನ ಹೆಸರಿನಲ್ಲಿ ಒಂದು ಖಾತೆ ಮಾತ್ರವೇ ತೆರೆಯಬಹುದು. ಈ ಸ್ಕೀಮ್​ನಲ್ಲಿನ ಹೂಡಿಕೆಗೆ ಸರ್ಕಾರ ವರ್ಷಕ್ಕೆ ಶೇ. 8.2 ಬಡ್ಡಿ ನೀಡುತ್ತದೆ. ಈ ಹಣಕ್ಕೆ ಆದಾಯ ತೆರಿಗೆ ಡಿಡಕ್ಷನ್ ಅವಕಾಶ ಇದೆ. ಅಲ್ಲದೇ ಇಲ್ಲಿ ಸಿಗುವ ಬಡ್ಡಿ ಲಾಭಕ್ಕೆ ಯಾವ ತೆರಿಗೆಯನ್ನೂ ವಿಧಿಸಲಾಗುವುದಿಲ್ಲ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ