Sign In

By signing in or creating an account, you agree with Associated Broadcasting Company's Terms & Conditions and Privacy Policy.

Savings: ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಹೆಚ್ಚು ಬಡ್ಡಿ, ಜೊತೆಗೆ ಅದರ ವಿವಿಧ ಪ್ರಯೋಜನಗಳೇನು ತಿಳಿಯಿರಿ…

Sukanya Samriddhi Yojana: ಹೆಣ್ಮಕ್ಕಳಿಗೆಂದು ರೂಪಿಸಲಾಗಿರುವ ಸುಕನ್ಯಾ ಸಮೃದ್ಧಿ ಯೋಜನೆಗೆ ಸರ್ಕಾರ ಬಡ್ಡಿದರವನ್ನು ಶೇ. 8ರಿಂದ ಶೇ 8.2ಕ್ಕೆ ಹೆಚ್ಚಿಸಿದೆ. 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯಾವುದೇ ಹೆಣ್ಮಗುವಿನ ಹೆಸರಿನಲ್ಲಿ ಪೋಷಕರು ಈ ಸ್ಕೀಮ್ ಆರಂಭಿಸಬಹುದು. ಹೆಚ್ಚಿನ ಬಡ್ಡಿದರ ಜೊತೆಗೆ ತೆರಿಗೆ ರಿಯಾಯಿತಿ, ತೆರಿಗೆ ವಿನಾಯಿತಿ ಇತ್ಯಾದಿ ಸೌಲಭ್ಯ ಪಡೆಯಬಹುದು.

Savings: ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಹೆಚ್ಚು ಬಡ್ಡಿ, ಜೊತೆಗೆ ಅದರ ವಿವಿಧ ಪ್ರಯೋಜನಗಳೇನು ತಿಳಿಯಿರಿ...
ಸುಕನ್ಯಾ ಸಮೃದ್ಧಿ ಯೋಜನೆ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 31, 2023 | 1:12 PM

ಸುಕನ್ಯಾ ಸಮೃದ್ಧಿ ಯೋಜನೆಗೆ ಸರ್ಕಾರ ಬಡ್ಡಿದರವನ್ನು ಶೇ. 8ರಿಂದ ಶೇ. 8.2ಕ್ಕೆ ಹೆಚ್ಚಿಸಿದೆ. ಬಹುತೇಕ ಒಂಬತ್ತು ವರ್ಷದ ಹಿಂದೆ ಆರಂಭವಾದ ಈ ಸ್ಕೀಮ್ (Sukanya Samriddhi Yojana) ಸಾಕಷ್ಟು ಜನಪ್ರಿಯವಾಗಲು ಹಲವು ಕಾರಣಗಳಿವೆ. ಹೆಣ್ಮಕ್ಕಳ ಓದು, ಮದುವೆಗೆ ಸಹಾಯವಾಗುವ ಉದ್ದೇಶದ ಈ ಸ್ಕೀಮ್​ನಲ್ಲಿ ಹೆಚ್ಚಿನ ಬಡ್ಡಿದರ ಮಾತ್ರವಲ್ಲದೇ ತೆರಿಗೆ ರಿಯಾಯಿತಿ ಇತ್ಯಾದಿ ಹಲವು ಪ್ರಯೋಜನಗಳಿವೆ.

ಏನಿದು ಸುಕನ್ಯಾ ಸಮೃದ್ಧಿ ಯೋಜನೆ?

ಹತ್ತು ವರ್ಷ ವಯಸ್ಸಿನ ಯಾವುದೇ ಹಣ್ಮಗುವಿನ ಹೆಸರಿನಲ್ಲಿ ಈ ಯೋಜನೆ ಆರಂಭಿಸಬಹುದು. 21 ವರ್ಷಕ್ಕೆ ಇದು ಮೆಚ್ಯೂರ್ ಆಗುತ್ತದೆ. ಆದರೆ, 15 ವರ್ಷದವರೆಗೆ ಮಾತ್ರ ಪಾವತಿ ಅವಧಿ ಇರುತ್ತದೆ. 15 ವರ್ಷ ಕಾಲ ಪ್ರತೀ ವರ್ಷ ಎಸ್​ಎಸ್​​ಐ ಖಾತೆಗೆ ಹಣ ಠೇವಣಿ ಇಡಬೇಕು. ಈ ಯೋಜನೆಯ ಕೆಲ ಪ್ರಮುಖ ಅಂಶಗಳನ್ನು ಇಲ್ಲಿ ಪಟ್ಟಿ ಮಾಡಲಾಗಿದೆ.

ಸುಕನ್ಯಾ ಸಮೃದ್ದಿ ಯೋಜನೆ ಖಾತೆ ತೆರೆಯಲು 250 ರೂ ಸಾಕು

ಸುಕನ್ಯಾ ಸಮೃದ್ಧಿ ಯೋಜನೆ ಪಡೆಯಲು ಕನಿಷ್ಠ ಮೊತ್ತ 250 ರೂ ಮಾತ್ರವೇ. ವರ್ಷಕ್ಕೆ 250 ರೂ ಕಟ್ಟಬಹುದು. ಗರಿಷ್ಠ 1.5 ಲಕ್ಷ ರೂವರೆಗೂ ಪಾವತಿಗೆ ಅವಕಾಶ ಇರುತ್ತದೆ.

ಇದನ್ನೂ ಓದಿ: Interest Rates: ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿದರ ಪರಿಷ್ಕರಿಸಿದ ಸರ್ಕಾರ; ಸುಕನ್ಯಾ ಸಮೃದ್ಧಿ, ಪೋಸ್ಟ್ ಆಫೀಸ್​ನ ಠೇವಣಿ ದರ ಹೆಚ್ಚಳ

ಹೆಣ್ಮಗುವಿನ ಶಿಕ್ಷಣ ವೆಚ್ಚಕ್ಕೆ ಹಣ ಹಿಂಪಡೆಯಬಹುದು

ಪಾಲಿಸಿಯನ್ನು ನೀವು ಯಾವಾಗೇ ಆರಂಭಿಸಲಿ, ಹೆಣ್ಮಗುವಿನ ವಯಸ್ಸು 18 ವರ್ಷ ದಾಟಿದಾಗ ಆವರೆಗೆ ಕಟ್ಟಲಾಗಿರುವ ಹಣದಲ್ಲಿ ಶೇ. 50ರಷ್ಟು ಮೊತ್ತವನ್ನು ಹಿಂಪಡೆಯಲು ಅವಕಾಶ ಇದೆ. ಇದು ಹೆಣ್ಮಗುವಿನ ಶಿಕ್ಷಣ ವೆಚ್ಚಕ್ಕೆ ಬಳಕೆ ಆಗಬೇಕು.

ಆದಾಯ ತೆರಿಗೆ ರಿಯಾಯಿತಿ…

ನೀವು ವರ್ಷಕ್ಕೆ ಇಲ್ಲಿ ಇರಿಸಬಹುದಾದ 1.5 ಲಕ್ಷ ರೂ ಹಣಕ್ಕೆ ಇನ್ಕಮ್ ಟ್ಯಾಕ್ಸ್ ಡಿಡಕ್ಷನ್ ಪಡೆಯಲು ಅವಕಾಶ ಇದೆ. ಅಂದರೆ ಅಷ್ಟು ಮೊತ್ತಕ್ಕೆ ತೆರಿಗೆ ವಿನಾಯಿತಿ ಪಡೆಯಬಹುದು.

ಇದನ್ನೂ ಓದಿ: Tips: ನಿವೃತ್ತಿಗೆ ಹಣ ಹೊಂದಿಸಬೇಕೆ? ಎಲ್ಲೆಲ್ಲಿ ಹೂಡಿಕೆ ಮಾಡಬೇಕು, ಈ ಸಲಹೆ ನಿಮಗೆ ಉಪಯುಕ್ತ ಎನಿಸಬಹುದು

ಬಡ್ಡಿ ಆದಾಯಕ್ಕೆ ತೆರಿಗೆ ಇರುವುದಿಲ್ಲ…

ಎಫ್​ಡಿ ಇತ್ಯಾದಿ ಸ್ಕೀಮ್​ಗಳಲ್ಲಿ ಸಿಗುವ ಬಡ್ಡಿ ಹಣಕ್ಕೆ ತೆರಿಗೆ ಅನ್ವಯ ಆಗುತ್ತದೆ. ಆದರೆ, ಸುಕನ್ಯಾ ಸಮೃದ್ದಿ ಯೋಜನೆಯಲ್ಲಿ ನಿಮ್ಮ ಮೊತ್ತಕ್ಕೆ ಸಿಗುವ ಬಡ್ಡಿ ಹಣಕ್ಕೆ ತೆರಿಗೆ ವಿನಾಯಿತಿ ಇರುತ್ತದೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ