AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Best FD Rates: ಮ್ಯೂಚುವಲ್ ಫಂಡ್​ನಂತೆ ಭರ್ಜರಿ ಲಾಭ ಕೊಡುತ್ತೆ ಸೂರ್ಯೋದಯ್ ಬ್ಯಾಂಕ್​ನ ಎಫ್​ಡಿ; ನಿಶ್ಚಿತ ಠೇವಣಿಗೆ ಶೇ. 9.6ರವರೆಗೂ ಬಡ್ಡಿ

Suryoday Small Finance Bank: ಮಹಾರಾಷ್ಟ್ರ ಮೂಲದ ಸೂರ್ಯೋದಯ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ನಿಶ್ಚಿತ ಠೇವಣಿಗಳಿಗೆ ಶೇ. 9.6ರವರೆಗೂ ಬಡ್ಡಿ ಆಫರ್ ಮಾಡುತ್ತಿದೆ. ಭಾರತೀಯ ಬ್ಯಾಂಕುಗಳ ಪೈಕಿ ಅತಿ ಹೆಚ್ಚು ಎಫ್​ಡಿ ದರ ಕೊಡುತ್ತಿದೆ ಈ ಬ್ಯಾಂಕು.

Best FD Rates: ಮ್ಯೂಚುವಲ್ ಫಂಡ್​ನಂತೆ ಭರ್ಜರಿ ಲಾಭ ಕೊಡುತ್ತೆ ಸೂರ್ಯೋದಯ್ ಬ್ಯಾಂಕ್​ನ ಎಫ್​ಡಿ; ನಿಶ್ಚಿತ ಠೇವಣಿಗೆ ಶೇ. 9.6ರವರೆಗೂ ಬಡ್ಡಿ
ಸೂರ್ಯೋದಯ್ ಸ್ಮಾಲ್ ಫೈನಾನ್ಸ್ ಬ್ಯಾಂಕ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 07, 2023 | 3:22 PM

Share

ಬೆಂಗಳೂರು: ಉಳಿತಾಯ ಮಾಡಿದ ಹಣದಿಂದ ಲಾಭ ಪಡೆಯಲು ಜನರು ಈಗಲೂ ಇಚ್ಛಿಸುವ ಮಾರ್ಗ ಎಂದರೆ ಎಫ್​ಡಿ, ಅಥವಾ ನಿಶ್ಚಿತ ಠೇವಣಿ. ಸರ್ಕಾರದ ಉಳಿತಾಯ ಯೋಜನೆಗಳು (Savings Schemes) ವರ್ಷಕ್ಕೆ ಶೇ. 7ರಿಂದ 8ರಷ್ಟು ಮಾತ್ರ ಬಡ್ಡಿ ಕೊಡುತ್ತವೆ. ಕೆಲ ದೊಡ್ಡದೊಡ್ಡ ಬ್ಯಾಂಕುಗಳು (Commercial Banks) ತಮ್ಮಲ್ಲಿನ ನಿಶ್ಚಿತ ಠೇವಣಿಗಳಿಗೆ ಶೇ. 9ರವರೆಗೂ ಬಡ್ಡಿ ಕೊಡುತ್ತವೆ. ಆದರೆ, ಸೂರ್ಯೋದಯ್ ಸ್ಮಾಲ್ ಫೈನಾನ್ಸ್ ಬ್ಯಾಂಕು (Suryoday Small Finance Bank) ಅತಿಹೆಚ್ಚು ಎಫ್​ಡಿ ದರ ಆಫರ್ ಮಾಡಿದೆ. ನಿಶ್ಚಿತ ಠೇವಣಿಗಳಿಗೆ ಈ ಬ್ಯಾಂಕು ವರ್ಷಕ್ಕೆ ಶೇ. 9.6ರವರೆಗೆ ಬಡ್ಡಿ ನೀಡುತ್ತದೆ. ಅಷ್ಟೇ ಅಲ್ಲ 5 ಲಕ್ಷ ರೂಗಿಂತ ಹೆಚ್ಚು ಮೊತ್ತವನ್ನು ಹಾಗೇ ಸುಮ್ಮನೆ ಖಾತೆಯಲ್ಲಿ ಇಟ್ಟರೂ ವರ್ಷಕ್ಕೆ ಶೇ. 7ರಷ್ಟು ಬಡ್ಡಿ ಕೊಡುತ್ತದೆ ಈ ಬ್ಯಾಂಕು. ಹೊಸ ಬಡ್ಡಿ ದರ 2023 ಮೇ 5ರಿಂದ ಜಾರಿಗೆ ಬಂದಿದೆ.

ಸೂರ್ಯೋದಯ್ ಸ್ಮಾಲ್ ಫೈನಾನ್ಸ್ ಬ್ಯಾಂಕ್​ನ ಎಫ್​ಡಿ ದರಗಳ ವಿವರ

ಮಹಾರಾಷ್ಟ್ರ ಮೂಲದ ಸೂರ್ಯೋದಯ್ ಸ್ಮಾಲ್ ಫೈನಾನ್ಸ್ ಬ್ಯಾಂಕ್​ನಲ್ಲಿ 2 ಕೋಟಿ ರೂವರೆಗಿನ ಫಿಕ್ಸೆಡ್ ಡೆಪಾಸಿಟ್​ಗಳಿಗೆ ಭರ್ಜರಿ ಬಡ್ಡಿ ಸಿಗುತ್ತದೆ. ಹಿರಿಯ ನಾಗರಿಕರಿಗೆ ಶೇ. 4.50ರಿಂದ ಶೇ. 9.60 ವರೆಗೂ ಬಡ್ಡಿ ಬರುತ್ತದೆ. ಇತರ ಸಾಮಾನ್ಯರ ಎಫ್​ಡಿಗಳಿಗೆ ಶೇ. 4ರಿಂದ ಶೇ. 9.10ರವರೆಗೂ ಬಡ್ಡಿ ಸಿಗುತ್ತದೆ. 5 ವರ್ಷದ ಠೇವಣಿಗೆ ಗರಿಷ್ಠ ಬಡ್ಡಿ ನೀಡಲಾಗುತ್ತದೆ.

ಇದನ್ನೂ ಓದಿ: EPF Transfer: ಕಂಪನಿ ಬದಲಿಸಿದಾಗ ಇಪಿಎಫ್ ಖಾತೆ ವರ್ಗಾಯಿಸದಿದ್ದರೆ ಏನಾಗುತ್ತದೆ? ಈ ವಿಷಯ ತಿಳಿದಿರಲಿ

ಸೂರ್ಯೋದಯ್ ಸ್ಮಾಲ್ ಫೈನಾನ್ಸ್ ಬ್ಯಾಂಕ್​ನಲ್ಲಿ 2 ಕೋಟಿ ರೂ ಒಳಗಿನ ನಿಶ್ಚಿತ ಠೇವಣಿಗಳಿಗೆ ಇರುವ ಬಡ್ಡಿ ದರಗಳ ವಿವರ:

  • ಸಾಮಾನ್ಯ ಗ್ರಾಹಕರ 1 ವರ್ಷದ ಠೇವಣಿ: ಶೇ. 6.85
  • ಸಾಮಾನ್ಯ ಗ್ರಾಹಕರ 1-2 ವರ್ಷದ ಠೇವಣಿ: ಶೇ. 8.50 ಬಡ್ಡಿ
  • ಸಾಮಾನ್ಯ ಗ್ರಾಹಕರ 999 ದಿನಗಳ ಠೇವಣಿ: ಶೇ. 9ರಷ್ಟು ಬಡ್ಡಿ
  • 5 ವರ್ಷದ ಠೇವಣಿ: ಶೇ. 9.10 ಬಡ್ಡಿ

5 ವರ್ಷ ಮೇಲ್ಪಟ್ಟ ಅವಧಿಯ ಠೇವಣಿಗಳಿಗೆ ಸಿಗುವ ವಾರ್ಷಿಕ ಬಡ್ಡಿ ಶೇ. 8ಕ್ಕಿಂತಲೂ ಕಡಿಮೆ ಇರುತ್ತದೆ. ಇನ್ನು 1 ವರ್ಷಕ್ಕಿಂತ ಕಡಿಮೆ ಅವಧಿಯ ಬಡ್ಡಿಯೂ ಶೇ. 6ಕ್ಕಿಂತ ಕಡಿಮೆ ಇರುತ್ತದೆ.

ಇದನ್ನೂ ಓದಿ: EPFO: ನಿವೃತ್ತಿಯ ನಂತರ ಮಾಸಿಕ ಪಿಂಚಣಿಯಾಗಿ 15,670 ರೂ. ಪಡೆಯುವುದು ಹೇಗೆ?

ಇನ್ನು ಹಿರಿಯ ನಾಗರಿಕರಾದರೆ, ಸಾಮಾನ್ಯ ಗ್ರಾಹಕರಿಗಿಂತ ಅರ್ಧಪ್ರತಿಶತದಷ್ಟು ಹೆಚ್ಚು ಬಡ್ಡಿ ಪಡೆಯಬಹುದು. ಉದಾಹರಣೆಗೆ 5 ವರ್ಷದ ಅವಧಿಯ ಎಫ್​ಡಿಗೆ ಸಾಮಾನ್ಯ ಗ್ರಾಹಕರು ಶೇ. 9.10 ಬಡ್ಡಿ ಪಡೆದರೆ ಹಿರಿಯ ನಾಗರಿಕರು ಶೇ. 9.60 ರಷ್ಟು ಇದ್ದಾರೆ.

ಕರ್ನಾಟಕದ ನಾನಾ ಕಡೆ ಇವೆ ಸೂರ್ಯೋದಯ್ ಸ್ಮಾಲ್ ಫೈನಾನ್ಸ್ ಬ್ಯಾಂಕ್​ನ ಶಾಖೆಗಳು

ಸೂರ್ಯೋದಯ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಮಹಾರಾಷ್ಟ್ರದಲ್ಲಿ ಸ್ಥಾಪನೆಯಾಗಿದ್ದು, ದೇಶದ ಏಳೆಂಟು ರಾಜ್ಯಗಳಲ್ಲಿ ಅಸ್ತಿತ್ವ ಹೊಂದಿದೆ. ಕರ್ನಾಟಕದಲ್ಲಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಸೂರ್ಯೋದಯ್ ಸ್ಮಾಲ್ ಫೈನಾನ್ಸ್ ಬ್ಯಾಂಕ್​ನ ಶಾಖಾ ಕಚೇರಿಗಳಿವೆ. ಮಹಾರಾಷ್ಟ್ರ, ಕರ್ನಾಟಕ, ಗುಜರಾತ್, ತಮಿಳುನಾಡು, ಉತ್ತರಪ್ರದೇಶ, ಮಧ್ಯಪ್ರದೇಶ, ಒಡಿಸಾ ಮೊದಲಾದ ಕೆಲ ರಾಜ್ಯಗಳಲ್ಲಿ ಈ ಕಿರು ಹಣಕಾಸು ಬ್ಯಾಂಕ್​ನ ಶಾಖಾ ಕಚೇರಿಗಳಿವೆ. ಬೆಂಗಳೂರಿನಲ್ಲೂ ಇದರ ಕಚೇರಿಗಳಿವೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ