AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಸೇವಿಂಗ್ಸ್ ಅಕೌಂಟ್ ಮೇಲೆ ಐಟಿ ಕಣ್ಣು? ಈ ಟ್ರಾನ್ಸಾಕ್ಷನ್​ಗಳನ್ನು ಮಾಡುವಾಗ ಹುಷಾರ್

Common transactions in your savings account can be under I-T Dept radar: ನಿಮ್ಮ ಹಣದ ಚಟುವಟಿಕೆಯ ಜಾಡು ಹಿಡಿಯಲು ಐಟಿ ಇಲಾಖೆಯು ಸೇವಿಂಗ್ಸ್ ಅಕೌಂಟ್​ಗಳನ್ನು ಗಮನಿಸುತ್ತದೆ. ಸೇವಿಂಗ್ಸ್ ಅಕೌಂಟ್​ನಲ್ಲಿ ಕ್ಯಾಷ್ ಡೆಪಾಸಿಟ್, ಆಸ್ತಿ ವಹಿವಾಟು ಇತ್ಯಾದಿ ನಾನಾ ರೀತಿಯ ಟ್ರಾನ್ಸಾಕ್ಷನ್​ಗಳನ್ನು ಮಾಡಲಾಗುತ್ತದೆ. ಐಟಿ ಯಾವ್ಯಾವ ಸಂದರ್ಭದಲ್ಲಿ ಹೆಚ್ಚು ಅನುಮಾನ ಹೊಂದಿರುತ್ತದೆ ಎನ್ನುವ ವಿವರ ಇಲ್ಲಿದೆ...

ನಿಮ್ಮ ಸೇವಿಂಗ್ಸ್ ಅಕೌಂಟ್ ಮೇಲೆ ಐಟಿ ಕಣ್ಣು? ಈ ಟ್ರಾನ್ಸಾಕ್ಷನ್​ಗಳನ್ನು ಮಾಡುವಾಗ ಹುಷಾರ್
ಬ್ಯಾಂಕ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 20, 2025 | 8:35 PM

Share

ಆದಾಯ ತೆರಿಗೆ ಇಲಾಖೆಯಿಂದ (Income Tax) ನೋಟೀಸ್ ಅನ್ನು ಕೇವಲ ದೊಡ್ಡ ಶ್ರೀಮಂತರಿಗೆ ಕೊಡೋದಿಲ್ಲ, ಸಾಮಾನ್ಯ ಆದಾಯ ಇರುವ ವ್ಯಕ್ತಿಗಳಿಗೂ ಐಟಿ ನೋಟೀಸ್ ಭಾಗ್ಯ ಇರುತ್ತೆ. ಬಹಳ ಅಸಹಜ ಎನಿಸುವ ಹಣದ ವಹಿವಾಟು ನಡೆದಿದ್ದರೆ, ಅದು ಇಲಾಖೆಯ ಗಮನಕ್ಕೆ ಹೋಗುತ್ತದೆ. ಉದಾಹರಣೆಗೆ, ಒಬ್ಬ ವ್ಯಕ್ತಿಯ ಘೋಷಿತ ಆದಾಯಕ್ಕಿಂತ ಹೆಚ್ಚಿನ ಹಣದ ವಹಿವಾಟು ನಡೆದಿದ್ದರೆ ಐಟಿ ಮೂಗಿಗೆ ಆ ವಾಸನೆ ಬಡಿದೇ ಬಡಿಯುತ್ತದೆ. ತೀರಾ ಹೆಚ್ಚಿನ ವ್ಯತ್ಯಾಸ ಇದ್ದಂತಹ ಸಂದರ್ಭದಲ್ಲಿ ನೋಟೀಸ್ ನೀಡಿ ವಿವರಣೆ ಕೇಳಲಾಗುತ್ತದೆ.

ಹಣದ ವಹಿವಾಟಿಗೆ ಪ್ರಧಾನ ಮೂಲವೇ ಸೇವಿಂಗ್ಸ್ ಅಕೌಂಟ್. ಇಲ್ಲಿ ಎಲೆಕ್ಟ್ರಾನಿಕ್ ರೂಪದಲ್ಲಿ ಕ್ಯಾಷ್ ವಹಿವಾಟು ನಡೆದರೆ ಅದು ಎಲ್ಲಿಂದ ಬಂತು, ಎಲ್ಲಿಂದ ಹೋಯಿತು ಎನ್ನುವ ಜಾಡು ಸಿಕ್ಕಿಹೋಗುತ್ತದೆ. ಕ್ಯಾಷ್ ವಹಿವಾಟು ನಡೆದಾಗ ಅಷ್ಟು ಆದಾಯ ಎಲ್ಲಿಂದ ಬಂತು ಎನ್ನುವುದಕ್ಕೆ ಸಾಕ್ಷ್ಯ ಕೊಡಬೇಕು. ಐಟಿ ಗಮನಿಸಬಹುದಾದ ಕೆಲ ಪ್ರಮುಖ ಸೇವಿಂಗ್ಸ್ ಅಕೌಂಟ್ ಟ್ರಾನ್ಸಾಕ್ಷನ್​ಗಳ ವಿವರ ಕೆಳಕಂಡಂತಿದೆ.

ಇದನ್ನೂ ಓದಿ: ಚಿನ್ನಕ್ಕೆ ಮೇಕಿಂಗ್ ಚಾರ್ಜ್ ಇಲ್ಲ ಅಂತಾರೆ, ಆದರೆ ನಯವಾಗಿ ಬೇರೆ ಚಾರ್ಜಸ್ ಹಾಕ್ತಾರೆ, ಹುಷಾರ್

ವರ್ಷದಲ್ಲಿ ದೊಡ್ಡ ಮೊತ್ತದ ಕ್ಯಾಷ್ ಡೆಪಾಸಿಟ್​ಗಳು

ನಿಮ್ಮ ಎಲ್ಲಾ ಸೇವಿಂಗ್ಸ್ ಅಕೌಂಟ್​ಗಳಲ್ಲಿ ಒಂದು ವರ್ಷದಲ್ಲಿ 10 ಲಕ್ಷ ರೂಗಿಂತ ಹೆಚ್ಚಿನ ಕ್ಯಾಷ್ ಡೆಪಾಸಿಟ್ ಆಗಿದ್ದರೆ, ಬ್ಯಾಂಕುಗಳು ಅದನ್ನು ಆದಾಯ ತೆರಿಗೆ ಇಲಾಖೆಯ ಗಮನಕ್ಕೆ ತರುತ್ತದೆ. ಅಷ್ಟು ಕ್ಯಾಷ್ ಹಣ ಎಲ್ಲಿಂದ ಬಂತು ಎಂದು ಐಟಿ ನೋಟೀಸ್ ಬರಬಹುದು. ಆ ಆದಾ ಮೂಲಕ್ಕೆ ಸಾಕ್ಷ್ಯ ತೋರಿಸಬೇಕಾಗುತ್ತದೆ.

ಕ್ರೆಡಿಟ್ ಕಾರ್ಡ್ ಬಿಲ್ ಪೇಮೆಂಟ್​ಗಳು

ನಿಮ್ಮ ಕ್ರೆಡಿಟ್ ಕಾರ್ಡ್ ಬಳಕೆ ಒಟ್ಟು 10 ಲಕ್ಷ ರೂ ದಾಟಿದರೆ ಬ್ಯಾಂಕುಗಳು ಮತ್ತು ಕ್ರೆಡಿಟ್ ಕಾರ್ಡ್ ಕಂಪನಿಗಳು ಐಟಿ ಗಮನಕ್ಕೆ ತರುತ್ತವೆ. ಹಾಗೆಯೇ, ಒಂದು ಲಕ್ಷ ರೂಗಿಂತ ಹೆಚ್ಚಿನ ಮೊತ್ತದ ಪೇಮೆಂಟ್ ಅನ್ನು ಕ್ಯಾಷ್ ಮೂಲಕ ಮಾಡಿದಾಗಲೂ ಅದು ಐಟಿ ಗಮನಕ್ಕೆ ಹೋಗುತ್ತದೆ.

ಇದನ್ನೂ ಓದಿ: ಇಬ್ಬರು ಗೆಳೆಯರು.. ಅದೇ ವಯಸ್ಸು, ಅದೇ ಸಂಬಳ; ಒಬ್ಬನದ್ದು ಆರಾಮ ಜೀವನ, ಮತ್ತೊಬ್ಬನದ್ದು ಡೆಟ್ ಟ್ರ್ಯಾಪ್; ತಪ್ಪಾಗಿದ್ದು ಎಲ್ಲಿ?

ದೊಡ್ಡ ಮೊತ್ತದ ಕ್ಯಾಷ್ ಟ್ರಾನ್ಸಾಕ್ಷನ್

ಬಹಳ ದೊಡ್ಡ ಮೊತ್ತದ ಕ್ಯಾಷ್ ಟ್ರಾನ್ಸಾಕ್ಷನ್ ನಡೆಸಿದರೆ ಅದು ಐಟಿ ಇಲಾಖೆಗೆ ಅನುಮಾನ ಮೂಡಿಸಬಹುದು. ಹೆಚ್ಚು ಕ್ಯಾಷ್ ವಿತ್ಡ್ರಾ ಮಾಡುವುದು, ಅಥವಾ ಹೆಚ್ಚು ಕ್ಯಾಷ್ ಡೆಪಾಸಿಟ್ ಮಾಡುವುದು ಇವು ರೆಡ್ ಫ್ಲ್ಯಾಗ್ಸ್ ಎಂದು ಪರಿಗಣಿಸಬಹುದು.

ಆಸ್ತಿ ವಹಿವಾಟು

30 ಲಕ್ಷ ರೂಗೂ ಅಧಿಕ ಮೌಲ್ಯದ ಯಾವುದೇ ಚಿರಾಸ್ತಿಯನ್ನು ಖರೀದಿಸಿದಾಗ ಅಥವಾ ಮಾರಿದಾಗ ಉಪನೊಂದಣಿ ಇಲಾಖೆಯಿಂದ ಐಟಿ ಇಲಾಖೆಗೆ ಮಾಹಿತಿ ರವಾನೆಯಾಗುತ್ತದೆ. ಐಟಿ ಇದನ್ನು ಪರಿಶೀಲಿಸಬಹುದು.

ಇದನ್ನೂ ಓದಿ: ನೂರು ಕೋಟಿ ಗಳಿಸುವ ಸಿಂಪಲ್ ಐಡಿಯಾ; 25 ವರ್ಷದ ಯುವಜನರಿಗೆ ಉದ್ಯಮಿ ಕಿವಿಮಾತು

ನಿಷ್ಕ್ರಿಯ ಅಕೌಂಟ್ ದಿಢೀರನೇ ಸಕ್ರಿಯಗೊಂಡರೆ…

ಬಹಳ ದಿನಗಳಿಂದ ನಿಷ್ಕ್ರಿಯಗೊಂಡಿದ್ದ ಬ್ಯಾಂಕ್ ಅಕೌಂಟ್ ಸಕ್ರಿಯಗೊಂಡು, ಬಹಳ ಶೀಘ್ರದಲ್ಲೇ ಹೆಚ್ಚಿನ ವಹಿವಾಟು ನಡೆಸುವುದು ಇತ್ಯಾದಿ ಆದಲ್ಲಿ ಐಟಿಗೆ ಸಂಶಯ ತರಬಹುದು. ನೋಟೀಸ್ ಕೊಟ್ಟು ವಿವರಣೆ ಕೇಳಬಹುದು.

ಹಾಗೆಯೇ, ಅಧಿಕ ಮೊತ್ತದ ಫಾರೀನ್ ಕರೆನ್ಸಿ ಟ್ರಾನ್ಸಾಕ್ಷನ್​ಗಳು ಆಗಿರುವುದು; ಐಟಿಆರ್​ನಲ್ಲಿ ಘೋಷಣೆ ಆಗಿರುವುದಕ್ಕೂ ಬ್ಯಾಂಕ್​ನಿಂದ ಬಡ್ಡಿ ಆದಾಯ ರಿಪೋರ್ಟ್ ಆಗಿರುವುದಕ್ಕೂ ಮಾಹಿತಿಯಲ್ಲಿ ವ್ಯತ್ಯಾಸ ಆಗಿರುವುದು ಇತ್ಯಾದಿ ಸಂದರ್ಭಗಳೂ ಕೂಡ ಐಟಿಯ ಕಣ್ಣು ನೆಡುವಂತೆ ಮಾಡುತ್ತವೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!