AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಉಜ್ಜೀವನ್ ಬ್ಯಾಂಕ್​ನಲ್ಲಿ ಎಫ್​ಡಿಗೆ ಬಡ್ಡಿದರ ಬರೋಬ್ಬರಿ ಶೇ. 9; ಉಳಿತಾಯ ಹಣದ ಹೂಡಿಕೆಗೆ ಒಳ್ಳೆಯ ಪ್ಲಾನ್

Ujjivan Small Finance Bank Fixed Deposit Rates: ಬೆಂಗಳೂರಿನ ಕೋರಮಂಗಲದಲ್ಲಿ ಮುಖ್ಯ ಕಚೇರಿ ಹೊಂದಿರುವ ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ತನ್ನ ಕೆಲ ನಿಶ್ಚಿತ ಠೇವಣಿ ದರಗಳನ್ನು ಪರಿಷ್ಕರಿಸಿದೆ. 15 ತಿಂಗಳ ಎಫ್​ಡಿಗೆ ಶೇ. 8.50ರಷ್ಟು ಬಡ್ಡಿ ಆಫರ್ ಮಾಡಿದೆ. ಹಿರಿಯ ನಾಗರಿಕರಿಗೆ ಶೇ. 9ರಷ್ಟು ಬಡ್ಡಿ ನೀಡಲಾಗುತ್ತದೆ. ಒಂದು ಕೋಟಿ ರೂ ಮೇಲ್ಪಟ್ಟ ಠೇವಣಿ ಇರುವ ವಿಶೇಷ ಪ್ಲಾಟಿನಾ ಎಫ್​ಡಿಗೆ ಶೇ. 9.20ರಷ್ಟು ಬಡ್ಡಿ ಸಿಗುತ್ತದೆ. ದೇಶದ 26 ರಾಜ್ಯಗಳಲ್ಲಿ ಉಪಸ್ಥಿತಿ ಹೊಂದಿರುವ ಉಜ್ಜೀವನ್ ಬ್ಯಾಂಕ್ ಅತಿಹೆಚ್ಚು ಬಡ್ಡಿ ಕೊಡುವ ಬ್ಯಾಂಕುಗಳ ಸಾಲಿಗೆ ಸೇರುತ್ತದೆ.

ಬೆಂಗಳೂರಿನ ಉಜ್ಜೀವನ್ ಬ್ಯಾಂಕ್​ನಲ್ಲಿ ಎಫ್​ಡಿಗೆ ಬಡ್ಡಿದರ ಬರೋಬ್ಬರಿ ಶೇ. 9; ಉಳಿತಾಯ ಹಣದ ಹೂಡಿಕೆಗೆ ಒಳ್ಳೆಯ ಪ್ಲಾನ್
ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 19, 2024 | 11:41 AM

Share

ಬೆಂಗಳೂರು, ಮಾರ್ಚ್ 19: ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕು (Ujjivan small finance bank) ತನ್ನ ವಿವಿಧ ಫಿಕ್ಸೆಡ್ ಡೆಪಾಸಿಟ್ ದರಗಳನ್ನು ಪರಿಷ್ಕರಿಸಿದೆ. ಸಾಮಾನ್ಯ ಗ್ರಾಹಕರ ಎಫ್​ಡಿಗಳಿಗೆ ಶೇ. 8.50ರಷ್ಟು ಬಡ್ಡಿ ಆಫರ್ ಮಾಡಿದೆ. ಹಿರಿಯ ನಾಗರಿಕರಿಗೆ ಶೇ. 9ರಷ್ಟು ಬಡ್ಡಿ ಕೊಡಲಾಗುತ್ತದೆ. ವಿಶೇಷ ಠೇವಣಿಯಾದ ಪ್ಲಾಟಿನಾ ಎಫ್​ಡಿಗೆ (platina fd) ಶೇ. 9.2ರಷ್ಟು ಬಡ್ಡಿ ಸಿಗುತ್ತದೆ. ಯಾವುದೇ ಕಮರ್ಷಿಯಲ್ ಬ್ಯಾಂಕುಗಳಿಗಿಂತ ಹೆಚ್ಚು ಲಾಭ ತಂದುಕೊಡುತ್ತದೆ ಉಜ್ಜೀವನ್ ಬ್ಯಾಂಕ್​ನ ನಿಶ್ಚಿತ ಠೇವಣಿ ಪ್ಲಾನ್​ಗಳು. ನಿಶ್ಚಿತ ಠೇವಣಿಗೆ ಅತಿಹೆಚ್ಚು ಬಡ್ಡಿ ನೀಡುವ ಬ್ಯಾಂಕುಗಳ ಸಾಲಿನಲ್ಲಿ ಉಜ್ಜೀವನ್ ಸೇರುತ್ತದೆ.

ಉಜ್ಜೇವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್​ನ 15 ತಿಂಗಳ ನಿಶ್ಚಿತ ಠೇವಣಿಗೆ ಈ ಭರ್ಜರಿ ಬಡ್ಡಿ ಆಫರ್ ಇದೆ. ಶೇ. 9.2ರಷ್ಟು ಬಡ್ಡಿ ಸಿಗುವ ಪ್ಲಾಟಿನಾ ಎಫ್​ಡಿ ಪ್ಲಾನ್​ನಲ್ಲಿ ಠೇವಣಿ ಒಂದು ಕೋಟಿ ರೂಗಿಂತ ಹೆಚ್ಚಿರಬೇಕು, ಎರಡು ಕೋಟಿ ರೂಗಿಂತ ಕಡಿಮೆ ಇರಬೇಕು. ಹಾಗೆಯೇ, ತೆರಿಗೆ ಲಾಭ ತಂದುಕೊಡುವ ಫಿಕ್ಸೆಡ್ ಡೆಪಾಸಿಟ್​ಗಳೂ ಉಂಟು. ಇವು ಐದು ವರ್ಷದ ಲಾಕ್-ಇನ್ ಅವಧಿ ಇರುತ್ತದೆ. ಅಂದರೆ, ಕನಿಷ್ಠ ಐದು ವರ್ಷವಾದರೂ ಈ ಠೇವಣಿಯಲ್ಲಿ ಹಣ ಇರಿಸಬೇಕು.

ಇದನ್ನೂ ಓದಿ: ಡೆಟ್ ಫಂಡ್ ಎಂದರೇನು? ಎಫ್​ಡಿಗೂ ಅದಕ್ಕೂ ಏನು ವ್ಯತ್ಯಾಸ? ಯಾವುದರಿಂದ ಹೆಚ್ಚು ಲಾಭ? ಇಲ್ಲಿದೆ ಡೀಟೇಲ್ಸ್

ಬೆಂಗಳೂರಿನಲ್ಲಿ ಮುಖ್ಯ ಕಚೇರಿ ಹೊಂದಿರುವ ಈ ಉಜ್ಜೀವನ್ ಬ್ಯಾಂಕ್​ನಲ್ಲಿ ಠೇವಣಿಗಳಿಗೆ ನೀಡಲಾಗುವ ಬಡ್ಡಿ ಹಣವನ್ನು ವಿವಿಧ ಅವಧಿಯಲ್ಲಿ ಪಡೆಯುವ ಆಯ್ಕೆಗಳಿವೆ. ಮಾಸಿಕವಾಗಿಯೋ, ತ್ರೈಮಾಸಿಕವಾಗಿಯೋ ಬಡ್ಡಿ ಸ್ವೀಕರಿಸಬಹುದು. ಅಥವಾ ಎಫ್​ಡಿ ಮೆಚ್ಯೂರ್ ಆದ ಬಳಿಕ ಠೇವಣಿ ಹಣದ ಜೊತೆಗೆ ಒಟ್ಟಿಗೆ ಬಡ್ಡಿಹಣವನ್ನೂ ಸೇರಿಸಿ ಪಡೆಯಬಹುದು.

26 ರಾಜ್ಯಗಳಿಗೆ ವ್ಯಾಪಿಸಿರುವ ಉಜ್ಜೀವನ್ ಬ್ಯಾಂಕ್

ಭಾರತದಲ್ಲಿರುವ ಅತಿದೊಡ್ಡ ಸ್ಮಾಲ್ ಫೈನಾನ್ಸ್ ಬ್ಯಾಂಕುಗಳಲ್ಲಿ ಒಂದಾದ ಉಜ್ಜೀವನ್ ಬ್ಯಾಂಕ್ 2017ರ ಫೆಬ್ರುವರಿಯಲ್ಲಿ ಆರಂಭವಾಗಿದೆ. ದೇಶಾದ್ಯಂತ 26 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇದರ 729 ಶಾಖೆಗಳಿವೆ. 21 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳ ಬಳಗ ಹೊಂದಿದೆ. 82 ಲಕ್ಷ ಗ್ರಾಹಕರು, 29,869 ಕೋಟಿ ರೂ ಠೇವಣಿ ಹೊಂದಿದೆ. ಇನ್ನಷ್ಟು ಠೇವಣಿ ಮೊತ್ತ ಹೆಚ್ಚಿಸುವ ಗುರಿ ಹೊಂದಿರುವ ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್, ಈ ನಿಟ್ಟಿನಲ್ಲಿ ಹೆಚ್ಚಿನ ಠೇವಣಿ ದರ ಪ್ರಕಟಿಸಿದೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ