ಯೂನಿಯನ್ ಬ್ಯಾಂಕ್​ನಲ್ಲಿ ಎಫ್​ಡಿ ದರ ಹೆಚ್ಚಳ; ಫಿಕ್ಸೆಡ್ ಇಟ್ಟರೆ ಶೇ. 8.15ರವರೆಗೆ ಬಡ್ಡಿ

Union Bank of India fixed deposit rates: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇತ್ತೀಚೆಗೆ ತನ್ನ ವಿವಿಧ ಫಿಕ್ಸೆಡ್ ಡೆಪಾಸಿಟ್ ದರಗಳನ್ನು ಪರಿಷ್ಕರಿಸಿದೆ. ಶೇ. 8.15ರವರೆಗೂ ಅದರ ಠೇವಣಿ ದರಗಳಿವೆ. 333 ದಿನಗಳ ಠೇವಣಿಗೆ ಗರಿಷ್ಠ ಬಡ್ಡಿ ಸಿಗುತ್ತದೆ. 80 ವರ್ಷ ಮೇಲ್ಪಟ್ಟ ವಯಸ್ಸಿನ ಹಿರಿಯ ನಾಗರಿಕರಿಗೆ ಹೆಚ್ಚಿನ ಬಡ್ಡಿ ಸಿಗುತ್ತದೆ.

ಯೂನಿಯನ್ ಬ್ಯಾಂಕ್​ನಲ್ಲಿ ಎಫ್​ಡಿ ದರ ಹೆಚ್ಚಳ; ಫಿಕ್ಸೆಡ್ ಇಟ್ಟರೆ ಶೇ. 8.15ರವರೆಗೆ ಬಡ್ಡಿ
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ
Follow us
|

Updated on: Aug 08, 2024 | 6:52 PM

ಬ್ಯಾಂಕುಗಳಿಗೆ ಈಗ ಠೇವಣಿಗಳ ಅವಶ್ಯಕತೆ ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಹೀಗಾಗಿ, ಠೇವಣಿ ದರಗಳನ್ನು ಎಲ್ಲಾ ಬ್ಯಾಂಕುಗಳೂ ಹೆಚ್ಚಿಸುತ್ತಿವೆ. ಹೆಚ್ಚಿನ ಬ್ಯಾಂಕುಗಳು ಈಗ ಶೇ. 8ರವರೆಗೆ ಬಡ್ಡಿದರ ಆಫರ್ ಮಾಡುತ್ತಿವೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇತ್ತೀಚೆಗೆ ವಿವಿಧ ಠೇವಣಿಗಳ ರೇಟ್ ಹೆಚ್ಚಿಸಿದೆ. ಶೇ. 8.15ರವರೆಗೆ ವಾರ್ಷಿಕ ಬಡ್ಡಿ ಕೊಡುತ್ತಿದೆ. ಇದು ಇಪಿಎಫ್​ಗೆ ನೀಡುವ ಬಡ್ಡಿಗೆ ಸಮ. 333 ದಿನಗಳ ಠೇವಣಿಗೆ ಗರಿಷ್ಠ ಬಡ್ಡಿ ಆಫರ್ ಮಾಡುತ್ತಿದೆ ಯುಬಿಐ.

ಯೂನಿಯನ್ ಬ್ಯಾಂಕ್​ನಲ್ಲಿ ಒಂದು ವರ್ಷಕ್ಕಿಂತ ತುಸು ಕಡಿಮೆ ಅವಧಿಯ ಈ 333 ದಿನಗಳ ಫಿಕ್ಸೆಡ್ ಡೆಪಾಸಿಟ್​ಗೆ ಸಾಮಾನ್ಯ ಗ್ರಾಹಕರಿಗೆ ಶೇ. 7.4ರಷ್ಟು ಬಡ್ಡಿ ಆಫರ್ ಮಾಡಲಾಗಿದೆ. 60 ವರ್ಷ ಮೇಲ್ಪಟ್ಟ ಮತ್ತು 80 ವರ್ಷ ಒಳಪಟ್ಟ ವಯಸ್ಸಿನ ಹಿರಿಯ ನಾಗರಿಕರಿಗೆ 50 ಮೂಲಾಂಕಗಳಷ್ಟು ಹೆಚ್ಚು ಬಡ್ಡಿ ಸಿಗುತ್ತದೆ. 80 ವರ್ಷ ಮೇಲ್ಪಟ್ಟ ವಯಸ್ಸಿನ ಸೂಪರ್ ಸೀನಿಯರ್ ಸಿಟಿಜನ್​ಗಳಿಗೆ ಇನ್ನೂ ಹೆಚ್ಚಿನ ಬಡ್ಡಿ ಸಿಗುತ್ತದೆ. ಇವರ 333 ದಿನಗಳ ಡೆಪಾಸಿಟ್​ಗೆ ಶೇ 8.15ರಷ್ಟು ಬಡ್ಡಿಯನ್ನು ಯೂನಿಯನ್ ಬ್ಯಾಂಕ್ ಒದಗಿಸುತ್ತದೆ.

ಇದನ್ನೂ ಓದಿ: ಯುವಜನರಿಗೆಂದು ಎಲ್​ಐಸಿಯಿಂದ ಎರಡು ಹೊಸ ಟರ್ಮ್ ಇನ್ಷೂರೆನ್ಸ್ ಪಾಲಿಸಿ ಬಿಡುಗಡೆ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಇತರ ಅವಧಿಗಳಿಗೆ ಠೇವಣಿ ದರ ಎಷ್ಟಿದೆ ಎಂದು ನೋಡುವುದಾದರೆ 399 ದಿನದ ಡೆಪಾಸಿಟ್​ಗೆ ಶೇ. 7.25ರಿಂದ ಶೇ. 8ರವರೆಗೆ ಬಡ್ಡಿ ಸಿಗುತ್ತದೆ. ಸಾಮಾನ್ಯ ಗ್ರಾಹಕರ 399 ದಿನದ ಠೇವಣಿಗೆ ಶೇ. 7.25ರಷ್ಟು ಬಡ್ಡಿ ಸಿಗುತ್ತದೆ. ಹಿರಿಯ ನಾಗರಿಕರು ಮತ್ತು ಅತಿ ಹಿರಿಯ ನಾಗರಿಕರಿಗೆ ಕ್ರಮವಾಗಿ ಶೇ. 7.75 ಮತ್ತು ಶೇ. 8 ಬಡ್ಡಿ ಸಿಗುತ್ತದೆ.

ಸಾಮಾನ್ಯ ಗ್ರಾಹಕರ 3 ವರ್ಷದ ಫಿಕ್ಸೆಡ್ ಡೆಪಾಸಿಟ್​ಗೆ ಯೂನಿಯನ್ ಬ್ಯಾಂಕ್ ಶೇ. 6.7 ಬಡ್ಡಿ ಆಫರ್ ಮಾಡುತ್ತದೆ. 3ರಿಂದ 10 ವರ್ಷದ ಅವಧಿಯ ಠೇವಣಿಗಳಿಗೆ ಶೇ. 6.5ರಷ್ಟು ಮಾತ್ರವೇ ಬಡ್ಡಿ ಸಿಗುತ್ತದೆ.

ಇದನ್ನೂ ಓದಿ: ಚಿನ್ನ ಖರೀದಿಸಬೇಕೆನ್ನುವವರಿಗೆ ಗೋಲ್ಡ್ ಇಟಿಎಫ್ ಉತ್ತಮ ಆಯ್ಕೆ; ಇಲ್ಲಿವೆ ಕಾರಣಗಳು…

ಈ ಮೇಲಿನವು ಸೇರಿದಂತೆ ವಿವಿಧ ಠೇವಣಿ ದರಗಳನ್ನು ಯುಬಿಐ ಪರಿಷ್ಕರಣೆ ನಡೆಸಿದೆ. ಆಗಸ್ಟ್ 2ರಿಂದ ಈ ನೂತನ ದರಗಳು ಜಾರಿಗೆ ಬಂದಿವೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು