AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಿಮೆ ಸಂಬಳ ಇದ್ದರೆ, ಉದ್ಯೋಗ ಕಳೆದುಕೊಂಡರೆ ಸಿಬಿಲ್ ಸ್ಕೋರ್ ಕಡಿಮೆ ಆಗುತ್ತಾ? ಇಲ್ಲಿದೆ ವಾಸ್ತವಿಕ ಅಂಶಗಳು

Credit score real facts: ಕ್ರೆಡಿಟ್ ಸ್ಕೋರ್ ಬಗ್ಗೆ ಕೆಲವರಿಗೆ ಒಂದಷ್ಟು ಗೊಂದಲಗಳಿವೆ. ಸ್ಕೋರ್ ಮೇಲೆ ಪ್ರಭಾವ ಬೀರುವ ಮತ್ತು ಪ್ರಭಾವ ಬೀರದ ವಿಚಾರಗಳಿವೆ. ಸಂಬಳ ಕಡಿಮೆ ಇದ್ದರೆ ಕ್ರೆಡಿಟ್ ಸ್ಕೋರ್ ಹೆಚ್ಚಾಗುವುದಿಲ್ಲ ಎನ್ನುವ ಭಾವನೆ ಇದೆ. ಹಾಗೆಯೆ ಕೆಲಸ ಹೋದರೆ ಅಥವಾ ಆದಾಯ ನಿಂತರೆ ಕ್ರೆಡಿಟ್ ಸ್ಕೋರ್ ಕಡಿಮೆ ಆಗುತ್ತದೆ ಎಂದು ಹೇಳಲಾಗುತ್ತದೆ. ಇವೆರಡೂ ಅಭಿಪ್ರಾಯ ಅಥವಾ ಭಾವನೆ ತಪ್ಪು. ನಾವು ತೆಗೆದುಕೊಳ್ಳುವ ಸಾಲವನ್ನು ಹೇಗೆ ನಿರ್ವಹಿಸುತ್ತೇವೆ, ಕ್ರೆಡಿಟ್ ಕಾರ್ಡ್ ಬಿಲ್​ಗಳನ್ನು ಹೇಗೆ ಕಟ್ಟುತ್ತೇವೆ ಇತ್ಯಾದಿ ಹಣಕಾಸು ಶಿಸ್ತು ನಮ್ಮ ಕ್ರೆಡಿಟ್ ಸ್ಕೋರ್ ಅನ್ನು ಪ್ರಭಾವಿಸುತ್ತವೆ.

ಕಡಿಮೆ ಸಂಬಳ ಇದ್ದರೆ, ಉದ್ಯೋಗ ಕಳೆದುಕೊಂಡರೆ ಸಿಬಿಲ್ ಸ್ಕೋರ್ ಕಡಿಮೆ ಆಗುತ್ತಾ? ಇಲ್ಲಿದೆ ವಾಸ್ತವಿಕ ಅಂಶಗಳು
ಕ್ರೆಡಿಟ್ ಸ್ಕೋರ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 07, 2024 | 8:54 AM

ಕ್ರೆಡಿಟ್ ಸ್ಕೋರ್ ಎಂಬುದು ಒಬ್ಬ ವ್ಯಕ್ತಿಯ ಸಾಲ ನಿರ್ವಹಣಾ ಸಾಮರ್ಥ್ಯದ ಪ್ರತೀಕವಾಗಿದೆ. ಸಿಬಿಲ್ ಇತ್ಯಾದಿ ನಾಲ್ಕೈದು ಸಂಸ್ಥೆಗಳು ಕ್ರೆಡಿಟ್ ಸ್ಕೋರ್ (credit score) ನೀಡುತ್ತವೆ. ಈ ಕ್ರೆಡಿಟ್ ಸ್ಕೋರ್ ಯಾರದೇ ಹಣಕಾಸು ಜೀವನದಲ್ಲಿ ಬಹಳ ಮಹತ್ವದ್ದಾಗಿರುತ್ತದೆ. 300ರಿಂದ 900ರವರೆಗೆ ಅಂಕಗಳು ಕ್ರೆಡಿಟ್ ಸ್ಕೋರ್​ನಲ್ಲಿ ಇರುತ್ತದೆ. 300 ಕನಿಷ್ಠ ಅಂಕವಾದರೆ, 900 ಗರಿಷ್ಠ ಅಂಕ. 650ಕ್ಕಿಂತಲೂ ಹೆಚ್ಚು ಅಂಕಗಳಿದ್ದರೆ ಅದು ಉತ್ತಮ ಕ್ರೆಡಿಟ್ ಸ್ಕೋರ್. ಬ್ಯಾಂಕುಗಳು ನಮಗೆ ಸಾಲ ನೀಡಲು, ಕ್ರೆಡಿಟ್ ಕಾರ್ಡ್ ನೀಡಲು ಈ ಸ್ಕೋರ್ ಮಾನದಂಡವಾಗಿರುತ್ತದೆ. 750ಕ್ಕಿಂತಲೂ ಹೆಚ್ಚು ಕ್ರೆಡಿಟ್ ಸ್ಕೋರ್ ಇದ್ದರೆ ಸಾಲ ಸುಲಭವಾಗಿ ಸಿಗುತ್ತದೆ. ಬಡ್ಡಿದರವೂ ಕಡಿಮೆ ಇರುತ್ತದೆ. ನಾವು ಸಾಲವನ್ನು ಶಿಸ್ತುಬದ್ಧವಾಗಿ ಮರುಪಾವತಿ ಮಾಡದೇ ಹೋದರೆ, ಅಥವಾ ಕ್ರೆಡಿಟ್ ಕಾರ್ಡ್ ಬಿಲ್​​ಗಳನ್ನು ಸರಿಯಾದ ದಿನದೊಳಗೆ ಕಟ್ಟದೇ ಹೋದರೆ ಕ್ರೆಡಿಟ್ ಸ್ಕೋರ್ ಕಡಿಮೆ ಆಗುತ್ತದೆ. ಇದೇ ವೇಳೆ, ನಾವು ಉದ್ಯೋಗ ಕಳೆದುಕೊಂಡರೆ, ಅಥವಾ ಸಂಬಳ ಕಡಿಮೆ ಇದ್ದರೆ ಸ್ಕೋರ್ ಕಡಿಮೆ ಆಗುತ್ತದೆ ಎಂಬುದು ಹಲವರ ಶಂಕೆ. ತಜ್ಞರ ಪ್ರಕಾರ ಕ್ರೆಡಿಟ್ ಸ್ಕೋರ್​ಗೂ ಸಂಬಳಕ್ಕೂ, ಉದ್ಯೋಗಕ್ಕೂ ಸಂಬಂಧ ಇರುವುದಿಲ್ಲ.

ಸಂಬಳ ಅಲ್ಲ, ಹಣಕಾಸು ಶಿಸ್ತು ಮುಖ್ಯ

ನಿಮ್ಮ ಸಂಬಳ 15,000 ರೂ ಇರಲಿ, ಅಥವಾ ಅದಕ್ಕಿಂತಲೂ ಕಡಿಮೆ ಇರಲಿ ಕ್ರೆಡಿಟ್ ಏಜೆನ್ಸಿಗಳಿಗೆ ಅದು ಮುಖ್ಯ ಆಗುವುದಿಲ್ಲ. ನೀವು ತೆಗೆದುಕೊಂಡಿದ್ದ ಸಾಲದ ಕಂತುಗಳನ್ನು ನಿಯಮಿತವಾಗಿ ಕಟ್ಟಿಕೊಂಡು ಹೋಗಿದ್ದೀರಾ ಎಂಬದು ಮುಖ್ಯ. ಕ್ರೆಡಿಟ್ ಕಾರ್ಡ್ ಬಿಲ್ ಅನ್ನೂ ನಿಗದಿತ ದಿನದೊಳಗೆ ಕಟ್ಟಿದ್ದರೆ ಕ್ರೆಡಿಟ್ ಸ್ಕೋರ್ ಉತ್ತಮಗೊಳ್ಳುತ್ತದೆ.

ನೀವು ಒಂದು ಲಕ್ಷ ರೂ ಸಂಬಳ ಪಡೆಯುತ್ತಿದ್ದರೂ ಸಾಲ ನಿರ್ವಹಣೆಯಲ್ಲಿ ಶಿಸ್ತು ಇಲ್ಲದಿದ್ದರೆ ನಿಮ್ಮ ಕ್ರೆಡಿಟ್ ಸ್ಕೋರ್ ಅಧಃಪತನಗೊಳ್ಳುತ್ತದೆ.

ಇದನ್ನೂ ಓದಿ: ಕೆನರಾ ಬ್ಯಾಂಕ್​ನಿಂದ ಆರೋಗ್ಯ ಸಾಲ, ಮಹಿಳಾ ಉಳಿತಾಯ ಖಾತೆ ಮತ್ತಿತರ ಹೊಸ ಯೋಜನೆಗಳು

ಉದ್ಯೋಗ, ನಿರುದ್ಯೋಗ ಕ್ರೆಡಿಟ್ ಸ್ಕೋರ್ ಮೇಲೆ ಪರಿಣಾಮ ಇಲ್ಲ

ನೀವ ನಿಯಮಿತ ಸಂಬಳ ತರುವ ಉದ್ಯೋಗದಲ್ಲೇ ಇರಲಿ, ಅಥವಾ ಸ್ವಂತ ಉದ್ಯೋಗ ಮಾಡುತ್ತಿರಲಿ, ಅಂಗಡಿ ಮುಂಗಟ್ಟು ನಡೆಸುತ್ತಿರಲಿ, ಅಥವಾ ಕೆಲಸ ಕಳೆದುಕೊಂಡು ಮನೆಯಲ್ಲೇ ಇರಲಿ, ಇವ್ಯಾವ ಅಂಶಗಳೂ ನಿಮ್ಮ ಕ್ರೆಡಿಟ್ ಸ್ಕೋರ್ ಮೆಲೆ ಪರಿಣಾಮ ಬೀರುವುದಿಲ್ಲ.

ಹಾಗೆಯೇ, ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣ ಇಟ್ಟಿದ್ದೀರಾ, ಎಷ್ಟು ಮೊತ್ತದ ಹಣವನ್ನು ಹೂಡಿಕೆ ಮಾಡಿದ್ದೀರಾ, ಎಷ್ಟು ಮೊತ್ತದ ಇನ್ಷೂರೆನ್ಸ್ ಪಾಲಿಸಿ ಮಾಡಿಸಿದ್ದೀರಾ ಈ ಅಂಶಗಳೂ ಕೂಡ ಕ್ರೆಡಟ್ ಸ್ಕೋರ್ ಅನ್ನು ಪ್ರಭಾವಿಸುವುದಿಲ್ಲ. ನೀವು ನಿಯಮಿತವಾಗಿ ಕಟ್ಟುವ ನೀರಿನ ಬಿಲ್, ವಿದ್ಯುತ್ ಬಿಲ್ ಇತ್ಯಾದಿ ಕೂಡ ಸ್ಕೋರ್ ಮೇಲೆ ಪರಿಣಾಮ ಬೀರುವುದಿಲ್ಲ.

ಇದನ್ನೂ ಓದಿ: ಹೂಡಿಕೆಯಲ್ಲಿ ಬುದ್ಧಿವಂತ ರಾಹುಲ್ ಗಾಂಧಿ; ಎಲ್ಲೆಲ್ಲಿ ಅವರ ಇನ್ವೆಸ್ಟ್​ಮೆಂಟ್ ಇದೆ ನೋಡಿ

ಆದರೆ, ಬ್ಯಾಂಕುಗಳಲ್ಲಿ ಸಾಲ ಪಡೆಯುವಾಗ ನಿಮ್ಮ ಕ್ರೆಡಿಟ್ ಸ್ಕೋರ್ ಜೊತೆಗೆ ನಿಮ್ಮ ಸೇವಿಂಗ್ಸ್, ನಿಮ್ಮ ಸಂಬಳ ಇತ್ಯಾದಿ ಅಂಶಗಳನ್ನು ಬ್ಯಾಂಕುಗಳು ಗಮನಿಸುವ ಸಾಧ್ಯತೆ ಇರುತ್ತದೆ. ಅದು ಬಿಟ್ಟರೆ ಕ್ರೆಡಿಟ್ ಸ್ಕೋರ್ ಮೇಲೆ ಈ ಮೇಲಿನ ಅಂಶಗಳ ಪ್ರಭಾವ ಇರುವುದಿಲ್ಲ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?