AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price on October 06: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಅಕ್ಟೋಬರ್ 06ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ನಿನ್ನೆಗಿಂತ ಮತ್ತೊಮ್ಮೆ ಕಡಿಮೆಯಾಗಿದೆ. ಶುಕ್ರವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಡಬ್ಲ್ಯುಟಿಐ ಕಚ್ಚಾ ತೈಲವನ್ನು ಪ್ರತಿ ಬ್ಯಾರೆಲ್‌ಗೆ 82.82 ಡಾಲರ್‌ಗೆ ಮಾರಾಟ ಮಾಡಲಾಗಿತ್ತು. ಅದೇ ಸಮಯದಲ್ಲಿ, ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್​ಗೆ 84.48 ಡಾಲರ್​ಗೆ ಇಳಿದಿದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಜೂನ್ 2017 ರ ಮೊದಲು, ಪ್ರತಿ 15 ದಿನಗಳಿಗೊಮ್ಮೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿತ್ತು.

Petrol Price on October 06: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಅಕ್ಟೋಬರ್ 06ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ
ಪೆಟ್ರೋಲ್Image Credit source: Digit Insurance
ನಯನಾ ರಾಜೀವ್
|

Updated on: Oct 06, 2023 | 7:03 AM

Share

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ನಿನ್ನೆಗಿಂತ ಮತ್ತೊಮ್ಮೆ ಕಡಿಮೆಯಾಗಿದೆ. ಶುಕ್ರವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಡಬ್ಲ್ಯುಟಿಐ ಕಚ್ಚಾ ತೈಲವನ್ನು ಪ್ರತಿ ಬ್ಯಾರೆಲ್‌ಗೆ 82.82 ಡಾಲರ್‌ಗೆ ಮಾರಾಟ ಮಾಡಲಾಗಿತ್ತು. ಅದೇ ಸಮಯದಲ್ಲಿ, ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್​ಗೆ 84.48 ಡಾಲರ್​ಗೆ ಇಳಿದಿದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಜೂನ್ 2017 ರ ಮೊದಲು, ಪ್ರತಿ 15 ದಿನಗಳಿಗೊಮ್ಮೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿತ್ತು. ಅಕ್ಟೋಬರ್ 06ರಂದು ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ತಿಳಿಯಿರಿ.

ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಬೆಲೆಯಲ್ಲಿ 57 ಪೈಸೆ ಇಳಿಕೆಯಾಗಿದೆ. ಇಲ್ಲಿ ಡೀಸೆಲ್ ಬೆಲೆ 55 ಪೈಸೆ ಇಳಿಕೆಯಾಗಿದೆ. ಪಶ್ಚಿಮ ಬಂಗಾಳದಲ್ಲಿ ಪೆಟ್ರೋಲ್ 48 ಪೈಸೆ ಮತ್ತು ಡೀಸೆಲ್ 45 ಪೈಸೆ ಅಗ್ಗವಾಗಿದೆ. ಉತ್ತರ ಪ್ರದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ 27 ಪೈಸೆ ಇಳಿಕೆಯಾಗಿದೆ. ಅದೇ ಸಮಯದಲ್ಲಿ, ಮಧ್ಯಪ್ರದೇಶ, ಒಡಿಶಾ, ರಾಜಸ್ಥಾನ ಮತ್ತು ತೆಲಂಗಾಣದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸ್ವಲ್ಪ ಹೆಚ್ಚಳವಾಗಿದೆ.

ಮಹಾನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ – ದೆಹಲಿಯಲ್ಲಿ ಪೆಟ್ರೋಲ್ 96.72 ರೂ ಮತ್ತು ಡೀಸೆಲ್ ಲೀಟರ್‌ಗೆ 89.62 ರೂ – ಮುಂಬೈನಲ್ಲಿ ಪೆಟ್ರೋಲ್ 106.31 ರೂ ಮತ್ತು ಡೀಸೆಲ್ 94.27 ರೂ. – ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 94.34 ರೂ. -ಬೆಂಗಳೂರು ಪೆಟ್ರೋಲ್ 101.94 ರೂ. ಡೀಸೆಲ್ 87.89ರೂ ಇದೆ

ಮತ್ತಷ್ಟು ಓದಿ: Petrol Price on October 05: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಅಕ್ಟೋಬರ್ 05ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಈ ನಗರಗಳಲ್ಲಿ ಬೆಲೆಗಳು ಎಷ್ಟು ಬದಲಾಗಿವೆ – ನೋಯ್ಡಾದಲ್ಲಿ ಪೆಟ್ರೋಲ್ 96.59 ರೂ ಮತ್ತು ಡೀಸೆಲ್ ಲೀಟರ್‌ಗೆ 89.76 ರೂ ಆಗಿದೆ. – ಗಾಜಿಯಾಬಾದ್‌ನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 96.44 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 89.62 ರೂ ಆಗಿದೆ. – ಲಕ್ನೋದಲ್ಲಿ, ಪೆಟ್ರೋಲ್ ಲೀಟರ್‌ಗೆ 96.57 ರೂ ಮತ್ತು ಡೀಸೆಲ್ ರೂ 89.76 ಆಗಿದೆ. ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 108.98 ರೂ ಮತ್ತು ಡೀಸೆಲ್ 94.51 ರೂ ಆಗಿದೆ. – ಪೋರ್ಟ್ ಬ್ಲೇರ್‌ನಲ್ಲಿ ಪೆಟ್ರೋಲ್ ಲೀಟರ್‌ಗೆ 84.10 ರೂ ಮತ್ತು ಡೀಸೆಲ್ 79.74 ರೂ ಆಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಹೊಸ ದರಗಳು ಬಿಡುಗಡೆಯಾಗುತ್ತವೆ. ಪ್ರತಿದಿನ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಬದಲಾವಣೆ ಮತ್ತು ಹೊಸ ದರಗಳು ಬಿಡುಗಡೆಯಾಗುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆಯು ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಈ ಕಾರಣದಿಂದಲೇ ನಾವು ಪೆಟ್ರೋಲ್, ಡೀಸೆಲ್ ಅನ್ನು ದುಬಾರಿ ಬೆಲೆಗೆ ಖರೀದಿಸಬೇಕಾಗಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಇಂದಿನ ಇತ್ತೀಚಿನ ಬೆಲೆಯನ್ನು ನೀವು ಹೀಗೆ ತಿಳಿಯಬಹುದು ಪೆಟ್ರೋಲ್ ಮತ್ತು ಡೀಸೆಲ್ ದೈನಂದಿನ ದರವನ್ನು SMS ಮೂಲಕವೂ ತಿಳಿಯಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು 9224992249 ಸಂಖ್ಯೆಗೆ ಟೈಪ್ ಮಾಡುವ ಮೂಲಕ ಮಾಹಿತಿಯನ್ನು ಪಡೆಯಬಹುದು ಮತ್ತು BPCL ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು ಬರೆಯುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಅದೇ ಸಮಯದಲ್ಲಿ, HPCL ಗ್ರಾಹಕರು HPPrice ಮತ್ತು ಅವರ ನಗರ ಕೋಡ್ ಅನ್ನು ಟೈಪ್ ಮಾಡುವ ಮೂಲಕ ಮತ್ತು ಅದನ್ನು 9222201122 ಸಂಖ್ಯೆಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿದುಕೊಳ್ಳಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು