Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಪೆಟ್ರೋಲ್​ ಬೆಲೆ ದೆಹಲಿಯಲ್ಲಿ ಮಾತ್ರ ಬದಲಾವಣೆ; ಬೆಂಗಳೂರಿನಲ್ಲಿ ಎಷ್ಟಿದೆ ಪೆಟ್ರೋಲ್​-ಡೀಸೆಲ್​ ಇಂದಿನ ದರ?

Fuel Rate Today: ಬೆಂಗಳೂರಿನಲ್ಲಿ ಕೂಡ ಪೆಟ್ರೋಲ್​-ಡೀಸೆಲ್​​ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.  ಪ್ರತಿ ಲೀಟರ್​ ಪೆಟ್ರೋಲ್​ ಬೆಲೆ 100.58 ರೂಪಾಯಿ ಇದ್ದು, ಡೀಸೆಲ್​ ದರ ಪ್ರತಿ ಲೀಟರ್​ಗೆ 85.01 ರೂಪಾಯಿ ಇದೆ. ಇದು ಕಳೆದ ಒಂದು ತಿಂಗಳಿಂದಲೂ ಹಾಗೇ ಇದೆ.

Petrol Price Today: ಪೆಟ್ರೋಲ್​ ಬೆಲೆ ದೆಹಲಿಯಲ್ಲಿ ಮಾತ್ರ ಬದಲಾವಣೆ; ಬೆಂಗಳೂರಿನಲ್ಲಿ ಎಷ್ಟಿದೆ ಪೆಟ್ರೋಲ್​-ಡೀಸೆಲ್​ ಇಂದಿನ ದರ?
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Dec 02, 2021 | 8:11 AM

ದೇಶಾದ್ಯಂತ ಪೆಟ್ರೋಲ್​-ಡೀಸೆಲ್​ ಬೆಲೆಗಳಲ್ಲಿ ಇಂದು ಕೂಡ ಯಾವುದೇ ಬದಲಾವಣೆ ಆಗಿಲ್ಲ. ದೆಹಲಿಯನ್ನು ಹೊರತುಪಡಿಸಿ ಉಳಿದೆಲ್ಲ ಮಹಾನಗರಗಳಲ್ಲೂ ಬೆಲೆ ಸ್ಥಿರವಾಗಿಯೇ ಇದೆ. ಕಳೆದ ಒಂದು ತಿಂಗಳಿಂದ ಇಂಧನಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗದೆ ಇರುವುದು ವಿಶೇಷವಾಗಿದೆ. ನಿನ್ನೆ ದೆಹಲಿ ಸರ್ಕಾರ ಪೆಟ್ರೋಲ್​ ಮೇಲಿನ ಮೌಲ್ಯವರ್ಧಿತ ತೆರಿಗೆ (ವ್ಯಾಟ್​) ಕಡಿತಗೊಳಿಸಿದೆ. ಹೀಗಾಗಿ ಅಲ್ಲಿನ ಪೆಟ್ರೋಲ್​ ಬೆಲೆ ಇಳಿಕೆಯಾಗಿದ್ದು ಬಿಟ್ಟರೆ, ಉಳಿದಂತೆ ಇನ್ಯಾವುದೇ ಪ್ರದೇಶದಲ್ಲಿ ಬದಲಾವಣೆಯಿಲ್ಲ. ದೆಹಲಿ ಸರ್ಕಾರ ನಿನ್ನೆ ಪೆಟ್ರೋಲ್​ ಮೇಲಿನ ವ್ಯಾಟ್​​ನ್ನು ಶೇ.30ರಿಂದ ಶೇ.19.4ಕ್ಕೆ ಇಳಿಸಿದೆ.  ಈ ಮೂಲಕ ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 8 ರೂಪಾಯಿ ಕಡಿತಗೊಂಡಿದೆ.  ಅಲ್ಲಿಗೆ ದೆಹಲಿಯಲ್ಲಿ 103 ರೂ.ಇದ್ದ ಪೆಟ್ರೋಲ್​ ಬೆಲೆ 95 ರೂ.ಗೆ ಇಳಿಕೆಯಾಗಿದೆ.

ಕಳೆದ ಒಂದು ತಿಂಗಳ ಹಿಂದೆ ಪ್ರತಿನಿತ್ಯವೆಂಬಂತೆ ಪೆಟ್ರೋಲ್​-ಡೀಸೆಲ್​ ಬೆಲೆ ಏರಿಕೆಯಾಗುತ್ತಿತ್ತು. ಆದರೆ ದೀಪಾವಳಿಗೂ ಮೊದಲು ಕೇಂದ್ರ ಸರ್ಕಾರ ಈ ಇಂಧನಗಳ ಮೇಲಿನ ಅಬಕಾರಿ ಸುಂಕ ಕಡಿಮೆ ಮಾಡುವ ಮೂಲಕ ಗ್ರಾಹಕರಿಗೆ ಗುಡ್​ನ್ಯೂಸ್ ಕೊಟ್ಟಿತ್ತು. ಅದಾದ ಬಳಿಕ ಬಿಜೆಪಿ ಸರ್ಕಾರ ಇರುವ ಉಳಿದ ರಾಜ್ಯಗಳೂ ಕೂಡ ಪೆಟ್ರೋಲ್​ ಮೇಲಿನ ವ್ಯಾಟ್​ ಕಡಿತಗೊಳಿಸಿದವು. ಹೀಗಾಗಿ ಸದ್ಯ ಪೆಟ್ರೋಲ್​ ಬೆಲೆಯಲ್ಲಿ ಸದ್ಯಕ್ಕಂತೂ ಯಾವುದೇ ಬದಲಾವಣೆ ಆಗುತ್ತಿಲ್ಲ.

ಬೆಂಗಳೂರಲ್ಲಿ ಏನಿದೆ ಬೆಲೆ? ಬೆಂಗಳೂರಿನಲ್ಲಿ ಕೂಡ ಪೆಟ್ರೋಲ್​-ಡೀಸೆಲ್​​ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.  ಪ್ರತಿ ಲೀಟರ್​ ಪೆಟ್ರೋಲ್​ ಬೆಲೆ 100.58 ರೂಪಾಯಿ ಇದ್ದು, ಡೀಸೆಲ್​ ದರ ಪ್ರತಿ ಲೀಟರ್​ಗೆ 85.01 ರೂಪಾಯಿ ಇದೆ. ಇದು ಕಳೆದ ಒಂದು ತಿಂಗಳಿಂದಲೂ ಹಾಗೇ ಇದೆ. ದರದಲ್ಲಿ ಬದಲಾವಣೆಯಾಗಿಲ್ಲ. ಆದರೂ ಪೆಟ್ರೋಲ್​ ಬೆಲೆ 100 ರೂ.ಇದ್ದಿದ್ದು ವಾಹನ ಸವಾರರಿಗೆ ಹೊರೆಯೇ ಆಗಿದೆ. ಇನ್ನು ಮಂಗಳೂರಿನಲ್ಲಿ ಪೆಟ್ರೋಲ್​ ಬೆಲೆ 99.76 ರೂ, ಡೀಸೆಲ್​ ಬೆಲೆ 84.24 ರೂ. ಆಗಿದೆ. ಅಂತೆಯೇ ಮೈಸೂರಿನಲ್ಲಿ ಪೆಟ್ರೋಲ್​  100.08 ರೂ. ಮತ್ತು ಡೀಸೆಲ್​ 84.56 ರೂ.ಗೆ ಮಾರಾಟವಾಗುತ್ತಿದೆ.

ಇನ್ನುಳಿದಂತೆ ದೆಹಲಿಯಲ್ಲಿ ಲೀಟರ್ ಪೆಟ್ರೋಲ್​ ಬೆಲೆ 103.97 ರೂ. ಇದ್ದು, ಡೀಸೆಲ್​ ದರ 86.67 ರೂ.ಆಗಿದೆ. (ಡೀಸೆಲ್​ ಮೇಲಿನ ವ್ಯಾಟ್​ ಕಡಿಮೆ ಮಾಡಿಲ್ಲ). ಹಾಗೇ ಉಳಿದ ಪ್ರಮುಖ ಮಹಾನಗರಗಳಾದ ಮುಂಬೈನಲ್ಲಿ  ಪೆಟ್ರೋಲ್​ ದರ 109.98 ರೂ. ಮತ್ತು ಡೀಸೆಲ್​ 94.14 ರೂ. ಆಗಿದೆ. ಚೆನ್ನೈನಲ್ಲಿ ಪೆಟ್ರೋಲ್​ 101.40 ರೂ., ಡೀಸೆಲ್​ 91.43 ರೂ., ಕೋಲ್ಕತ್ತದಲ್ಲಿ ಪೆಟ್ರೋಲ್​  104.67 ರೂ ಮತ್ತು ಡೀಸೆಲ್​ 89.79 ರೂ.ಇದೆ. ಒಟ್ಟಾರೆ ಯಾವ ಮಹಾನಗರಗಳಲ್ಲೂ ಇಂಧನ ದರ ಬದಲಾವಣೆಯಾಗಿಲ್ಲ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Masik Shivratri: ಕಷ್ಟ ದೂರ ಮಾಡಿ ಸಂತೋಷ ತರುವ ಮಾಸಿಕ ಶಿವರಾತ್ರಿ ವ್ರತ ಆಚರಿಸುವುದು ಹೇಗೆ? ಮಹತ್ವ, ಪೂಜಾ ವಿಧಾನ ಏನು

Published On - 8:09 am, Thu, 2 December 21

ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ