AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price on November 28: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಇಂಧನ ಬೆಲೆ ಸ್ಥಿರ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ನವೆಂಬರ್ 28, ಗುರುವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ 73 ಡಾಲರ್ ದಾಟಿದೆ. ಬ್ರೆಂಟ್ ಕಚ್ಚಾ ತೈಲವು ಇಂದು ಪ್ರತಿ ಬ್ಯಾರೆಲ್‌ಗೆ 73.25 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ, ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 69.19 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

Petrol Diesel Price on November 28: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಇಂಧನ ಬೆಲೆ ಸ್ಥಿರ
ಪೆಟ್ರೋಲ್ Image Credit source: HT Auto
ನಯನಾ ರಾಜೀವ್
|

Updated on: Nov 28, 2024 | 7:09 AM

Share

ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ 73 ಡಾಲರ್ ದಾಟಿದೆ. ಬ್ರೆಂಟ್ ಕಚ್ಚಾ ತೈಲವು ಇಂದು ಪ್ರತಿ ಬ್ಯಾರೆಲ್‌ಗೆ 73.25 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ, ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 69.19 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.77 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.90 ರೂ. ಇದೆ.

ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.67 ರೂ. ಆದರೆ, ಮುಂಬೈನಲ್ಲಿ ಡೀಸೆಲ್ ಬೆಲೆ 89.97 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 91.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.49 ರೂ. ಇದೆ. ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯನ್ನು ಆಧರಿಸಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ.

ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ತೈಲ ಕಂಪನಿಗಳು ಪ್ರತಿದಿನ ಬೆಳಿಗ್ಗೆ 6 ವಿವಿಧ ನಗರಗಳ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮಾಹಿತಿಯನ್ನು ನವೀಕರಿಸುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲೆ ಪ್ರಭಾವ ಬೀರುವಲ್ಲಿ ಕಚ್ಚಾ ತೈಲ ಬೆಲೆಗಳು ಪ್ರಮುಖ ಪಾತ್ರವಹಿಸುತ್ತವೆ. ಕಚ್ಚಾ ತೈಲವು ಪೆಟ್ರೋಲ್ ಮತ್ತು ಡೀಸೆಲ್‌ನ ಮುಖ್ಯ ಕಚ್ಚಾ ವಸ್ತುವಾಗಿದೆ. ಅದರ ಬೆಲೆಯಲ್ಲಿ ಹೆಚ್ಚಳ ಅಥವಾ ಇಳಿಕೆಯಿಂದಾಗಿ ಇಂಧನದ ಬೆಲೆಯೂ ಬದಲಾಗುತ್ತದೆ.

ಮತ್ತಷ್ಟು ಓದಿ: Petrol Diesel Price on November 26: ಆಂಧ್ರ, ಅಸ್ಸಾಂನಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ

ಭಾರತವು ಕಚ್ಚಾ ತೈಲದ ದೊಡ್ಡ ಆಮದುದಾರನಾಗಿರುವುದರಿಂದ ರೂಪಾಯಿ ಮತ್ತು ಡಾಲರ್ ಮೌಲ್ಯದಲ್ಲಿನ ಬದಲಾವಣೆಗಳು ಪರಿಣಾಮ ಬೀರುತ್ತವೆ. ಕೇಂದ್ರ ಸರ್ಕಾರದೊಂದಿಗೆ, ರಾಜ್ಯ ಸರ್ಕಾರವೂ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತೆರಿಗೆಯನ್ನು ವಿಧಿಸುತ್ತದೆ, ಇದರಿಂದಾಗಿ ಪ್ರತಿ ರಾಜ್ಯದಲ್ಲಿ ಬೆಲೆಗಳು ವಿಭಿನ್ನವಾಗಿವೆ. ಬೆಂಗಳೂರಿನಲ್ಲಿ ಪೆಟ್ರೋಲ್ 102.86 ರೂ. ಡೀಸೆಲ್ 88.94 ರೂ. ಇದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಚಂಡೀಗಢ: ಪೆಟ್ರೋಲ್ ಬೆಲೆ: ಲೀಟರ್‌ಗೆ 94.30 ರೂ, ಡೀಸೆಲ್ ಬೆಲೆ: 82.45 ರೂ.

ಇಂದೋರ್: ಪೆಟ್ರೋಲ್ ಬೆಲೆ : ಪ್ರತಿ ಲೀಟರ್‌ಗೆ ರೂ 106.57, ಡೀಸೆಲ್ ಬೆಲೆ: ಪ್ರತಿ ಲೀಟರ್‌ಗೆ ರೂ 91.97

ಮುಂಬೈ: ಪೆಟ್ರೋಲ್ ಬೆಲೆ: ಲೀಟರ್‌ಗೆ 103.44 ರೂ, ಡೀಸೆಲ್ ಬೆಲೆ: ಲೀಟರ್‌ಗೆ 89.97 ರೂ.

ನವದೆಹಲಿ: ಪೆಟ್ರೋಲ್ ಬೆಲೆ: ಲೀಟರ್‌ಗೆ 94.77 ರೂ, ಡೀಸೆಲ್ ಬೆಲೆ: ಲೀಟರ್‌ಗೆ 87.67 ರೂ.

ಲಕ್ನೋ: ಪೆಟ್ರೋಲ್ ಬೆಲೆ: ಲೀಟರ್‌ಗೆ 94.61 ರೂ, ಡೀಸೆಲ್ ಬೆಲೆ: ಲೀಟರ್‌ಗೆ 87.72 ರೂ.

ರಾಂಚಿ: ಪೆಟ್ರೋಲ್ ಬೆಲೆ: ಲೀಟರ್‌ಗೆ 98.38 ರೂ, ಡೀಸೆಲ್ ಬೆಲೆ: 93.14 ರೂ.

ಗಾಜಿಯಾಬಾದ್: ಪೆಟ್ರೋಲ್ ಬೆಲೆ: ರೂ 94.45 ಲೀಟರ್, ಡೀಸೆಲ್ ಬೆಲೆ: ರೂ 87.52 ಪ್ರತಿ ಲೀಟರ್

ಭೋಪಾಲ್: ಪೆಟ್ರೋಲ್ ಬೆಲೆ: ಪ್ರತಿ ಲೀಟರ್‌ಗೆ ರೂ 106.17, ಡೀಸೆಲ್ ಬೆಲೆ: ಪ್ರತಿ ಲೀಟರ್‌ಗೆ ರೂ 91.73

ಚೆನ್ನೈ: ಪೆಟ್ರೋಲ್ ಬೆಲೆ: ಲೀಟರ್‌ಗೆ 100.90 ರೂ, ಡೀಸೆಲ್ ಬೆಲೆ: ಲೀಟರ್‌ಗೆ 92.49 ರೂ.

ಕೋಲ್ಕತ್ತಾ: ಪೆಟ್ರೋಲ್ ಬೆಲೆ: ಲೀಟರ್‌ಗೆ 104.95 ರೂ, ಡೀಸೆಲ್ ಬೆಲೆ: ಲೀಟರ್‌ಗೆ 91.76 ರೂ.

ಫರಿದಾಬಾದ್: ಪೆಟ್ರೋಲ್ ಬೆಲೆ: ಲೀಟರ್‌ಗೆ 95.56 ರೂ, ಡೀಸೆಲ್ ಬೆಲೆ: ಲೀಟರ್‌ಗೆ 88.40 ರೂ.

ಜೈಪುರ: ಪೆಟ್ರೋಲ್ ಬೆಲೆ: ಲೀಟರ್‌ಗೆ 104.72 ರೂ, ಡೀಸೆಲ್ ಬೆಲೆ: 90.21 ರೂ. ಇದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸದ್ಯ ವಯನಾಡಲ್ಲಿ ಹೇಗಿದೆ ಸ್ಥಿತಿ?
ಸದ್ಯ ವಯನಾಡಲ್ಲಿ ಹೇಗಿದೆ ಸ್ಥಿತಿ?
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?