AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಬದಲಾವಣೆಗಳಿಲ್ಲ; ವಿವಿಧ ನಗರಗಳಲ್ಲಿ ದರ ಎಷ್ಟಿದೆ?

Petrol diesel Price Today: ನಿನ್ನೆ ಮಂಗಳವಾರ ಲೀಟರ್​ ಪೆಟ್ರೋಲ್​ ದರದಲ್ಲಿ 26 ಪೈಸೆ ಹಾಗೂ ಲೀಟರ್​ ಡೀಸೆಲ್​ ದರದಲ್ಲಿ 23 ಪೈಸೆ ಏರಿಕೆ ಮಾಡಲಾಯಿತು. ಆ ಬಳಿಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ಬೆಲೆ 94.49 ರೂ. ಆಗಿದ್ದರೆ, ಲೀಟರ್​ ಡೀಸೆಲ್​ ದರ 85.38 ರೂಪಾಯಿಗೆ ಏರಿಕೆಯಾಗಿದೆ.

Petrol Price Today: ಇಂದು ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಬದಲಾವಣೆಗಳಿಲ್ಲ; ವಿವಿಧ ನಗರಗಳಲ್ಲಿ ದರ ಎಷ್ಟಿದೆ?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 02, 2021 | 10:01 AM

Share

ದೆಹಲಿ: ಇಂದು (ಜೂನ್ 2) ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಗಳಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಜೂನ್​ ತಿಂಗಳ ಪ್ರಾರಂಭದಿಂದಲೇ ಇಂಧನ ದರ ಏರಿಕೆ ಕಾಣಲು ಪ್ರಾರಂಭಿಸಿದೆ. ಆದರೆ ತಿಂಗಳ ಎರಡನೇ ದಿನದಂದು ತೈಲ ದರದಲ್ಲಿ ಹೆಚ್ಚಳವಾಗಿಲ್ಲ. ಏರುತ್ತಲೇ ಇರುವ ಇಂಧನ ದರದಿಂದಾಗಿ ಕೆಲವು ನಗರಗಳಲ್ಲಿ ಲೀಟರ್​ ಪೆಟ್ರೋಲ್​ ದರ ಶತಕ ಬಾರಿಸಿ ಮುನ್ನುಗ್ಗಿದೆ. ಇನ್ನು ಕೆಲವು ನಗರಗಳು ಶತಕದ ಗಡಿಯಲ್ಲಿವೆ. ಇದೇ ರೀತಿ ಮುಂದುವರೆದರೆ ಉಳಿದ ನಗರಗಳೂ ಸಹ ಶತಕ ಬಾರಿಸುವಲ್ಲಿ ಯಾವುದೇ ಸಂಶಯವಿಲ್ಲ. ಹಾಗಾದರೆ ಯಾವ ಯಾವ ನಗರಗಳಲ್ಲಿ ಪೆಟ್ರೋಲ್​ ಮತ್ತು ಡೀಸೆಲ್​ ದರ ಎಷ್ಟಿದೆ ಎಂಬುದನ್ನು ಪರಿಶೀಲಿಸಿ.

ನಿನ್ನೆ ಮಂಗಳವಾರ ಲೀಟರ್​ ಪೆಟ್ರೋಲ್​ ದರದಲ್ಲಿ 26 ಪೈಸೆ ಹಾಗೂ ಲೀಟರ್​ ಡೀಸೆಲ್​ ದರದಲ್ಲಿ 23 ಪೈಸೆ ಏರಿಕೆ ಮಾಡಲಾಯಿತು. ಆ ಬಳಿಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ಬೆಲೆ 94.49 ರೂ. ಆಗಿದ್ದರೆ, ಲೀಟರ್​ ಡೀಸೆಲ್​ ದರ 85.38 ರೂಪಾಯಿಗೆ ಏರಿಕೆಯಾಗಿದೆ.

ವಿವಿಧ ನಗರಗಳಲ್ಲಿ ಪೆಟ್ರೋಲ್ ದರ ವಾಣಿಜ್ಯ ನಗರಿ ಮುಂಬೈನಲ್ಲಿ ಈಗಾಗಲೇ ಶತಕ ಬಾರಿಸಿ, ಶತಕದ ಗಡಿ ದಾಟಿ ಮುನ್ನುಗ್ಗಿದೆ. ಲೀಟರ್​ ಪೆಟ್ರೊಲ್​ ದರ 100.72 ರೂಪಾಯಿಗೆ ಹೆಚ್ಚಳವಾಗಿದೆ. ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ಗೆ 95.99 ರೂ. ನಿಗದಿ ಮಾಡಲಾಗಿದೆ.

ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 94.50 ರೂ. ದಾಖಲಾಗಿದೆ. ಇನ್ನು, ಬೆಂಗಳೂರು ನಗರದಲ್ಲಿ ಲೀಟರ್​ ಪೆಟ್ರೋಲ್​ ದರವನ್ನು ರೂಪಾಯಿಗೆ ಏರಿಕೆ ಮಾಡಲಾಗಿದೆ. ಕಳೆದ ಮೇ ತಿಂಗಳ 4ನೇ ತಾರೀಕಿನಿಂದ ತಿಂಗಳ ಕೊನೆಯವರೆಗೆ ಒಟ್ಟು 16 ಬಾರಿ ಇಂಧನ ದರವನ್ನು ಏರಿಕೆ ಮಾಡಲಾಗಿತ್ತು. ಇದೀಗ ಜೂನ್​ ತಿಂಗಳ ಮೊದಲನೇ ದಿನವೇ ಇಂಧನ ದರ ಏರಿಕೆ ಕಂಡಿತು. ಇಂದು ಬುಧವಾರ ತಿಂಗಳ ಎರಡನೇ ದಿನದಂದು ತೈಲ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ.

ವಿವಿಧ ನಗರಗಳಲ್ಲಿ ಡೀಸೆಲ್​ ದರ ದೆಹಲಿಯಲ್ಲಿ ಲೀಟರ್​ ಡೀಸೆಲ್​ ಬೆಲೆ 85.38 ರೂ. ಆಗಿದೆ. ಅದೇರೀತಿ ಮುಂಬೈ ನಗರದಲ್ಲಿ 92.69 ರೂ. ನಿಗದಿ ಮಾಡಲಾಗಿದೆ. ಚೆನ್ನೈನಲ್ಲಿ 95.99 ರೂಪಾಯಿ ಇದ್ದರೆ, ಕೋಲ್ಕತ್ತಾದಲ್ಲಿ 88.23 ರೂ. ದಾಖಲಿಸಲಾಗಿದೆ. ಇನ್ನು ಬೆಂಗಳೂರು ನಗರದಲ್ಲಿ ಲೀಟರ್ ಡೀಸೆಲ್​ ದರ ರೂಪಾಯಿಗೆ ಏರಿಕೆಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 8:56 am, Wed, 2 June 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್