AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ದೇಶದಲ್ಲಿ ಪೆಟ್ರೋಲ್​ಗೆ ಅತ್ಯಂತ ಕಡಿಮೆ ಬೆಲೆ ಇರುವುದು ಎಲ್ಲಿ ಗೊತ್ತಾ?: ಇಂದಿನ ಪೆಟ್ರೋಲ್​-ಡೀಸೆಲ್​ ದರ ಹೀಗಿದೆ

ಸದ್ಯ ರಾಷ್ಟ್ರದಲ್ಲಿ ಸುಮಾರು 27ಕ್ಕೂ ಹೆಚ್ಚು ನಗರಗಳಲ್ಲಿ ಪೆಟ್ರೋಲ್​ ದರ 100 ರೂಪಾಯಿ ಮೇಲಿದೆ. ರಾಜ್ಯದಿಂದ ರಾಜ್ಯಕ್ಕೆ, ನಗರದಿಂದ ನಗರಕ್ಕೆ ಪೆಟ್ರೋಲ್​-ಡೀಸೆಲ್​ ಬೆಲೆ ಬೇರೆಯದ್ದೇ ಆಗಿರುತ್ತದೆ.

Petrol Price Today: ದೇಶದಲ್ಲಿ ಪೆಟ್ರೋಲ್​ಗೆ ಅತ್ಯಂತ ಕಡಿಮೆ ಬೆಲೆ ಇರುವುದು ಎಲ್ಲಿ ಗೊತ್ತಾ?: ಇಂದಿನ ಪೆಟ್ರೋಲ್​-ಡೀಸೆಲ್​ ದರ ಹೀಗಿದೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 11, 2021 | 8:03 AM

Share

Petrol Diesel Price Today | ಕಳೆದ ನವೆಂಬರ್​ 4ರಂದು ಅಂದರೆ ದೀಪಾವಳಿ ಮುನ್ನಾದಿನ ಕೇಂದ್ರ ಸರ್ಕಾರ ಪೆಟ್ರೋಲ್​-ಡೀಸೆಲ್​​ ಮೇಲಿನ ಅಬಕಾರಿ ಸುಂಕ ಕಡಿಮೆ ಮಾಡಿದೆ. ಅಂದಿನಿಂದಲೂ ಭಾರತದ ತೈಲ ಕಂಪನಿಗಳು ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇಂದು (ಡಿ.5) ಕೂಡ ಪೆಟ್ರೋಲ್​-ಡೀಸೆಲ್​ ಬೆಲೆ ಸ್ಥಿರವಾಗಿದ್ದು, ಯಾವುದೇ ಪ್ರಮುಖ ನಗರಗಳಲ್ಲೂ ಬೆಲೆಯಲ್ಲಿ ಬದಲಾವಣೆಯಾಗಿಲ್ಲ. ಅಂದಹಾಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮೊನ್ನೆಯೇ ಕಚ್ಚಾತೈಲದ ಬೆಲೆ ಇಳಿಕೆಯಾಗಿದ್ದು, ದೇಶದಲ್ಲೂ ಪೆಟ್ರೋಲ್​-ಡೀಸೆಲ್​ ಬೆಲೆ ಇನ್ನಷ್ಟು ಕಡಿಮೆಯಾಗಬಹುದು ಎಂಬ ನಿರೀಕ್ಷೆ ಇದೆ. ಆದರೆ ಸದ್ಯಕ್ಕಂತೂ ಯಾವುದೇ ಚೇಂಜ್​ ಮಾಡಿಲ್ಲ.

ಕೇಂದ್ರ ಸರ್ಕಾರ ಅಬಕಾರಿ ಸುಂಕ ಕಡಿಮೆ ಮಾಡಿದ ಮೇಲೆ, ಬಿಜೆಪಿ ಸರ್ಕಾರವಿರುವ ಎಲ್ಲ ರಾಜ್ಯಗಳೂ ಕೂಡ ತಮ್ಮ ರಾಜ್ಯದಲ್ಲಿ ಪೆಟ್ರೋಲ್​-ಡೀಸೆಲ್​ ಮೇಲಿನ ವ್ಯಾಟ್​ ಕಡಿತಗೊಳಿಸಿದ್ದವು. ಹಾಗೇ ಕೆಲವೇ ದಿನಗಳ ಹಿಂದ ದೆಹಲಿಯ ಆಪ್​ ಸರ್ಕಾರ ಕೂಡ ಪೆಟ್ರೋಲ್​ ಮೇಲಿನ ವ್ಯಾಟ್​ (VAT-ಮೌಲ್ಯವರ್ಧಿತ ತೆರಿಗೆ)ನ್ನು ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಹಾಗಾಗಿ ಅಲ್ಲಿ ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 8 ರೂ.ಕಡಿಮೆಯಾಗಿದೆ. ಆದರೆ ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ರಾಜಸ್ಥಾನದಲ್ಲಿ ಸಿಕ್ಕಾಪಟೆ ದುಬಾರಿ ಸದ್ಯ ರಾಷ್ಟ್ರದಲ್ಲಿ ಸುಮಾರು 27ಕ್ಕೂ ಹೆಚ್ಚು ನಗರಗಳಲ್ಲಿ ಪೆಟ್ರೋಲ್​ ದರ 100 ರೂಪಾಯಿ ಮೇಲಿದೆ. ರಾಜ್ಯದಿಂದ ರಾಜ್ಯಕ್ಕೆ, ನಗರದಿಂದ ನಗರಕ್ಕೆ ಪೆಟ್ರೋಲ್​-ಡೀಸೆಲ್​ ಬೆಲೆ ಬೇರೆಯದ್ದೇ ಆಗಿರುತ್ತದೆ. ಅದು ಆಯಾ ರಾಜ್ಯಗಳ ವ್ಯಾಟ್ (VAT) ಮೇಲೆ ಅವಲಂಬಿತವಾಗಿರುತ್ತದೆ.  ಈ VAT ಆಧಾರದ ಮೇಲೆ ಹೇಳುವುದಾದರೆ ಸದ್ಯ ರಾಜಸ್ಥಾನಲ್ಲಿ ಅತ್ಯಂತ ಹೆಚ್ಚು ವ್ಯಾಟ್​ ಇದೆ. ಇಲ್ಲಿನ ಶ್ರೀ ಗಂಗಾನಗರದಲ್ಲಿ ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 112 ರೂಪಾಯಿ ಇದ್ದು ಇದೇ ಹೈಯೆಸ್ಟ್ ಎನ್ನಿಸಿಕೊಂಡಿದೆ. ಇಲ್ಲಿ ಡೀಸೆಲ್​ ಬೆಲೆಯೇ 95. 26 ರೂ.ಇದೆ. ಇನ್ನು ನಮ್ಮ ದೇಶದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ಅತ್ಯಂತ ಕಡಿಮೆ ಇರುವ ಪ್ರದೇಶವೆಂದರೆ ಅಂಡಮಾನ್​-ನಿಕೋಬಾರ್​ನ ರಾಜಧಾನಿ ಪೋರ್ಟ್​ಬ್ಲೇರ್​​. ಇಲ್ಲಿ ಪೆಟ್ರೋಲ್​ ಬೆಲೆ ಪ್ರತಿಲೀಟರ್​ಗೆ 82.96 ರೂ. ಮತ್ತು ಡೀಸೆಲ್​ ದರ   77.13  ರೂಪಾಯಿ ಇದೆ.

ಎಷ್ಟಿದೆ ಮಹಾನಗರಗಳಲ್ಲಿ ಇಂದು ಇಂಧನ ದರ? ಭಾರತದ ಯಾವುದೇ ನಗರಗಳಲ್ಲೂ ಇಂದು ತೈಲಬೆಲೆಯಲ್ಲಿ ಬದಲಾವಣೆಯಾಗಿಲ್ಲ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್​ ಬೆಲೆ 100.58 ರೂ. ಮತ್ತು ಡೀಸೆಲ್​ ಬೆಲೆ 85.01 ರೂ. ಇದ್ದರೆ, ಮೈಸೂರಿನಲ್ಲಿ ಪೆಟ್ರೋಲ್​ ದರ 100.08 ರೂ., ಡೀಸೆಲ್​ ದರ 84.56 ರೂ. ಆಗಿದೆ. ಹಾಗೇ ಮಂಗಳೂರಿನಲ್ಲಿ ಪೆಟ್ರೋಲ್​ 99.76 ರೂ. ಮತ್ತು ಡೀಸೆಲ್​ 84.24 ರೂ.ಗೆ ಮಾರಾಟವಾಗುತ್ತಿದೆ. ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಡೀಸೆಲ್​ ಬೆಲೆ ಪ್ರತಿ ಲೀಟರ್​ಗೆ 86.67 ರೂ. ಇದ್ದರೆ, ಪೆಟ್ರೋಲ್​ ದರ 95.41 ರೂ.ಆಗಿದೆ. ಮುಂಬೈ ಮಹಾನಗರಿಯಲ್ಲೂ ಸಹ ಯಾವುದೇ ಬದಲಾವಣೆಯಾಗಿಲ್ಲ. ಇಲ್ಲಿ ಪೆಟ್ರೋಲ್​ ದರ 109.98 ರೂ. ಮತ್ತು ಡೀಸೆಲ್​ ದರ 94.14 ರೂ. ಆಗಿದೆ. ಹಾಗೇ, ಚೆನ್ನೈನಲ್ಲಿ ಪೆಟ್ರೋಲ್​ ದರ 101.40 ರೂ. ಇದೆ.  ಡೀಸೆಲ್​ ದರ 91.43 ರೂ. ಆಗಿದೆ.

ಇದನ್ನೂ ಓದಿ: 

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Published On - 10:12 am, Sun, 5 December 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ