AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price on December 28: ಹೆಚ್ಚುತ್ತಲೇ ಇದೆ ಕಚ್ಚಾ ತೈಲದ ಬೆಲೆ; ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ

Fuel Price Today: ದೆಹಲಿ-ಮುಂಬೈ ಸೇರಿದಂತೆ ದೇಶದ 4 ಮಹಾನಗರಗಳಲ್ಲಿ ಇಂದಿಗೂ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

Petrol Price on December 28: ಹೆಚ್ಚುತ್ತಲೇ ಇದೆ ಕಚ್ಚಾ ತೈಲದ ಬೆಲೆ; ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ
ಪೆಟ್ರೋಲ್ ಬೆಲೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 28, 2022 | 8:27 AM

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ ಕಚ್ಚಾ ತೈಲದ ಬೆಲೆ ಮತ್ತೆ ಏರಿಕೆಯಾಗಿದ್ದು, ಪ್ರತಿ ಬ್ಯಾರೆಲ್ ದರ 84 ಡಾಲರ್ ದಾಟಿದೆ. ಇಂದು (ಬುಧವಾರ) ಬೆಳಿಗ್ಗೆ ಸರ್ಕಾರಿ ತೈಲ ಕಂಪನಿಗಳು ಹೊರಡಿಸಿದ ಪೆಟ್ರೋಲ್ (Petrol Price) ಮತ್ತು ಡೀಸೆಲ್ (Diesel Price Today) ಚಿಲ್ಲರೆ ಬೆಲೆಯಲ್ಲಿ ಕೊಂಚ ಬದಲಾವಣೆಯಾಗಿದೆ. ಇಂದು ಉತ್ತರ ಪ್ರದೇಶ ಮತ್ತು ಬಿಹಾರದ ಹಲವು ನಗರಗಳಲ್ಲಿ ತೈಲದ ದರಗಳು (Fuel Price) ಬದಲಾಗಿವೆ. ಆದರೆ, ದೆಹಲಿ-ಮುಂಬೈ ಸೇರಿದಂತೆ ದೇಶದ 4 ಮಹಾನಗರಗಳಲ್ಲಿ ಇಂದಿಗೂ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಸರ್ಕಾರಿ ತೈಲ ಕಂಪನಿಗಳ ಪ್ರಕಾರ, ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಪೆಟ್ರೋಲ್ ಲೀಟರ್‌ಗೆ 64 ಪೈಸೆಗಳಷ್ಟು ಅಗ್ಗವಾಗಿದ್ದು, 107.48 ರೂ.ಗೆ ತಲುಪಿದೆ. ಆದರೆ ಡೀಸೆಲ್ ಲೀಟರ್‌ಗೆ 13 ಪೈಸೆ ಏರಿಕೆಯಾಗಿ 95.54 ರೂ.ಗೆ ತಲುಪಿದೆ. ಉತ್ತರ ಪ್ರದೇಶದ ಗೌತಮ್ ಬುದ್ಧ ನಗರದಲ್ಲಿ (ನೋಯ್ಡಾ-ಗ್ರೇಟರ್ ನೋಯ್ಡಾ) ಜಿಲ್ಲೆಯಲ್ಲಿ ಇಂದು ಪೆಟ್ರೋಲ್ ಬೆಲೆ 34 ಪೈಸೆಗಳಷ್ಟು ಹೆಚ್ಚಾಗಿ, 96.92 ರೂ.ಗಳಿಗೆ ತಲುಪಿದೆ. ಆದರೆ ಡೀಸೆಲ್ 33 ಪೈಸೆ ದುಬಾರಿಯಾಗಿ ಲೀಟರ್‌ಗೆ 90.08 ರೂ.ಗಳಿಗೆ ಮಾರಾಟವಾಗುತ್ತಿದೆ. ಗಾಜಿಯಾಬಾದ್‌ನಲ್ಲಿ ಇಂದು ಪೆಟ್ರೋಲ್ ಲೀಟರ್‌ಗೆ 32 ಪೈಸೆ ಇಳಿಕೆಯಾಗಿ 96.26 ರೂ.ಗೆ ತಲುಪಿದ್ದರೆ, ಡೀಸೆಲ್ ಲೀಟರ್‌ಗೆ 30 ಪೈಸೆ ಇಳಿಕೆಯಾಗಿ 89.45 ರೂ.ಗೆ ತಲುಪಿದೆ. ಕಚ್ಚಾ ತೈಲದ ಬೆಲೆ ಕಳೆದ 24 ಗಂಟೆಗಳಲ್ಲಿ ಮತ್ತೆ ಏರಿಕೆ ಕಾಣುತ್ತಿವೆ. ಬ್ರೆಂಟ್ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 84.33 ಡಾಲರ್‌ಗೆ ಏರಿದೆ. WTIಯ ಬೆಲೆ ಪ್ರತಿ ಬ್ಯಾರೆಲ್​ಗೆ 79.76 ಡಾಲರ್​ಗೆ ಇಳಿದಿದೆ.

ಇದನ್ನೂ ಓದಿ: Petrol Price on December 27: ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬದಲಾವಣೆಯಾಗುತ್ತಿದೆ. ಹೊಸ ದರಗಳು ಬೆಳಗ್ಗೆ 6 ಗಂಟೆಯಿಂದಲೇ ಅನ್ವಯವಾಗಲಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆ ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಇದೇ ಕಾರಣಕ್ಕೆ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಏರಿಕೆ ಕಾಣುತ್ತಿದೆ.

ದೆಹಲಿ, ಮುಂಬೈ ಚೆನ್ನೈ ಮತ್ತು ಕೋಲ್ಕತಾದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೀಗಿವೆ:

ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.65 ಮತ್ತು ಡೀಸೆಲ್ 89.82 ರೂ

ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 106.31 ರೂ. ಮತ್ತು ಡೀಸೆಲ್ ಬೆಲೆ 94.27 ರೂ.

ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 102.63 ರೂ. ಮತ್ತು ಡೀಸೆಲ್ ಬೆಲೆ 94.24 ರೂ.

ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ರೂ. 106.03 ಮತ್ತು ಡೀಸೆಲ್ ಬೆಲೆ 92.76 ರೂ. ಆಗಿದೆ.

ನೋಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.92 ರೂ ಮತ್ತು ಡೀಸೆಲ್ 90.08 ರೂ ಆಗಿದೆ.

ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.57 ರೂ ಮತ್ತು ಡೀಸೆಲ್ 89.76 ರೂ ಆಗಿದೆ.

ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.48 ರೂ ಮತ್ತು ಡೀಸೆಲ್ 94.26 ರೂ. ಆಗಿದೆ.

ಇದನ್ನೂ ಓದಿ: Petrol Price on December 26: ಕಚ್ಚಾ ತೈಲದ ಬೆಲೆ ದುಬಾರಿ; ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ

ನೀವು ಎಸ್‌ಎಂಎಸ್ ಮೂಲಕ ಪೆಟ್ರೋಲ್ ಡೀಸೆಲ್‌ನ ದೈನಂದಿನ ದರವನ್ನು ಸಹ ತಿಳಿಯಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಮತ್ತು BPCL ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು 9223112222 ಗೆ ಟೈಪ್ ಮಾಡುವ ಮೂಲಕ 9224992249 ಗೆ SMS ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಆದರೆ, HPCL ಗ್ರಾಹಕರು HPPrice ಮತ್ತು ಅವರ ಸಿಟಿ ಕೋಡ್ ಅನ್ನು 9222201122 ಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿದುಕೊಳ್ಳಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ