AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price on January 18: ಲೀಟರ್​ಗೆ 113 ರೂ. ದಾಟಿದ ಪೆಟ್ರೋಲ್ ಬೆಲೆ; ನಿಮ್ಮ ನಗರದ ಡೀಸೆಲ್ ಬೆಲೆ ಹೀಗಿದೆ

Fuel Price Today: ಕಚ್ಚಾ ತೈಲದ ಬೆಲೆಗಳು ಕಳೆದ 24 ಗಂಟೆಗಳಲ್ಲಿ ಏರಿಕೆ ಕಂಡಿವೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪೆಟ್ರೋಲ್ ದರವು ಲೀಟರ್‌ಗೆ 113 ರೂ. ದಾಟಿದೆ.

Petrol Price on January 18: ಲೀಟರ್​ಗೆ 113 ರೂ. ದಾಟಿದ ಪೆಟ್ರೋಲ್ ಬೆಲೆ; ನಿಮ್ಮ ನಗರದ ಡೀಸೆಲ್ ಬೆಲೆ ಹೀಗಿದೆ
ಪೆಟ್ರೋಲ್ ಮತ್ತು ಡೀಸೆಲ್ ದರ
TV9 Web
| Edited By: |

Updated on: Jan 18, 2023 | 8:11 AM

Share

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಗಳು (Fuel Price) ಮತ್ತೆ ಏರಿಕೆಯನ್ನು ಕಂಡಿದ್ದು, ಕಳೆದ 24 ಗಂಟೆಗಳಲ್ಲಿ ಪ್ರತಿ ಬ್ಯಾರೆಲ್‌ಗೆ ಸುಮಾರು 2 ಡಾಲರ್ ಜಿಗಿತ ಕಂಡುಬಂದಿದೆ. ಇದರಿಂದಾಗಿ ಬ್ರೆಂಟ್ ಕಚ್ಚಾ ತೈಲದ ಬೆಲೆ 86 ಡಾಲರ್ ದಾಟಿದೆ. ಇಂದು (ಬುಧವಾರ) ಬೆಳಿಗ್ಗೆ ಸರ್ಕಾರಿ ತೈಲ ಕಂಪನಿಗಳು ಹೊರಡಿಸಿದ ಪೆಟ್ರೋಲ್ (Petrol Price) ಮತ್ತು ಡೀಸೆಲ್‌ನ (Diesel Price) ಇತ್ತೀಚಿನ ದರಗಳಲ್ಲಿಯೂ ಹೆಚ್ಚಳ ಕಂಡುಬಂದಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪೆಟ್ರೋಲ್ ದರವು ಲೀಟರ್‌ಗೆ 113 ರೂ. ದಾಟಿದೆ. ಆದರೆ, ಇಂದಿಗೂ ದೆಹಲಿ-ಮುಂಬೈ ಸೇರಿದಂತೆ ದೇಶದ ನಾಲ್ಕೂ ಮಹಾನಗರಗಳಲ್ಲಿ ಇಂಧನದ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಸರ್ಕಾರಿ ತೈಲದ ಕಂಪನಿಗಳ ಪ್ರಕಾರ, ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಮಂಗಳವಾರ ಪೆಟ್ರೋಲ್ ಬೆಲೆ 88 ಪೈಸೆಗಳಷ್ಟು ಹೆಚ್ಚಾಗಿದ್ದು, ಲೀಟರ್‌ಗೆ 108.12 ರೂ.ಗಳಿಗೆ ತಲುಪಿದೆ. ಆದರೆ ಡೀಸೆಲ್ ಲೀಟರ್‌ಗೆ 82 ಪೈಸೆಗಳಷ್ಟು ಏರಿಕೆಯಾಗಿ 94.86 ರೂ.ಗಳಿಗೆ ತಲುಪಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಇಂದು ಪೆಟ್ರೋಲ್ ಬೆಲೆ ಲೀಟರ್‌ಗೆ 9 ಪೈಸೆಯಷ್ಟು ಏರಿಕೆಯಾಗಿ 113.20 ರೂ.ಗೆ ಮಾರಾಟವಾಗುತ್ತಿದೆ. ಡೀಸೆಲ್ ಬೆಲೆ 8 ಪೈಸೆಯಷ್ಟು ಏರಿಕೆಯಾಗಿದ್ದು, ಲೀಟರ್‌ಗೆ 97.98 ರೂ.ಗೆ ತಲುಪಿದೆ.

ಇದನ್ನೂ ಓದಿ: Petrol Price on January 4: ಕಚ್ಚಾ ತೈಲದ ಬೆಲೆ 3 ಡಾಲರ್ ಕುಸಿತ; ಭಾರತದಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ

ಕಚ್ಚಾ ತೈಲದ ಬೆಲೆಗಳು ಕಳೆದ 24 ಗಂಟೆಗಳಲ್ಲಿ ಏರಿಕೆ ಕಂಡಿವೆ. ಬ್ರೆಂಟ್ ಕಚ್ಚಾ ತೈಲದ ಬೆಲೆ ಇಂದು ಸುಮಾರು 2 ಡಾಲರ್ ಏರಿಕೆಯಾಗಿದ್ದು, ಪ್ರತಿ ಬ್ಯಾರೆಲ್‌ಗೆ 86.41 ಡಾಲರ್​ಗೆ ತಲುಪಿದೆ. WTI ಬೆಲೆಯು ಪ್ರತಿ ಬ್ಯಾರೆಲ್‌ಗೆ 80.73 ಡಾಲರ್​ಗೆ ಏರಿದೆ.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ:

ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.65 ರೂ. ಮತ್ತು ಡೀಸೆಲ್ ಬೆಲೆ 89.82 ರೂ. ಆಗಿದೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 106.31 ರೂ. ಮತ್ತು ಡೀಸೆಲ್ ಬೆಲೆ 94.27 ರೂ. ಆಗಿದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 102.63 ರೂ. ಮತ್ತು ಡೀಸೆಲ್ 94.24 ರೂ. ಆಗಿದೆ. ಕೊಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 106.03 ರೂ. ಮತ್ತು ಡೀಸೆಲ್ ಬೆಲೆ 92.76 ರೂ. ಆಗಿದೆ. ನೊಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.65 ರೂ. ಮತ್ತು ಡೀಸೆಲ್ ಬೆಲೆ 89.82 ರೂ. ಆಗಿದೆ. ಘಾಜಿಯಾಬಾದ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.58 ರೂ. ಮತ್ತು ಡೀಸೆಲ್ ಬೆಲೆ 89.75 ರೂ. ಆಗಿದೆ. ಪಾಟ್ನಾದಲ್ಲಿ ಪೆಟ್ರೋಲ್ ಲೀಟರ್‌ಗೆ 108.12 ರೂ. ಮತ್ತು ಡೀಸೆಲ್ 94.86 ರೂ. ಆಗಿದೆ. ಗಂಗಾನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 113.20 ರೂ. ಮತ್ತು ಡೀಸೆಲ್ ಬೆಲೆ 97.98 ರೂ. ಆಗಿದೆ.

ಇದನ್ನೂ ಓದಿ: Petrol Price on December 30: ಕಚ್ಚಾ ತೈಲದ ನಿರಂತರ ಕುಸಿತ; ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬದಲಾವಣೆಯಾಗುತ್ತದೆ. ಹೊಸ ದರಗಳು ಬೆಳಗ್ಗೆ 6 ಗಂಟೆಯಿಂದಲೇ ಅನ್ವಯವಾಗಲಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆ ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಇದೇ ಕಾರಣಕ್ಕೆ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಏರಿಕೆ ಕಾಣುತ್ತಿದೆ.

ನೀವು ಎಸ್‌ಎಂಎಸ್ ಮೂಲಕ ಪೆಟ್ರೋಲ್ ಡೀಸೆಲ್‌ನ ದೈನಂದಿನ ದರವನ್ನು ಸಹ ತಿಳಿಯಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಮತ್ತು BPCL ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು 9223112222ಗೆ ಟೈಪ್ ಮಾಡುವ ಮೂಲಕ 9224992249ಗೆ SMS ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. HPCL ಗ್ರಾಹಕರು HPPrice ಮತ್ತು ಅವರ ಸಿಟಿ ಕೋಡ್ ಅನ್ನು 9222201122ಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿದುಕೊಳ್ಳಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ