Petrol Price on January 5: 80 ಡಾಲರ್​​ಗಿಂತ ಕುಸಿತ ಕಂಡ ಕಚ್ಚಾ ತೈಲದ ಬೆಲೆ; ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ

Fuel Price Today: ದೆಹಲಿ-ಮುಂಬೈ ಸೇರಿದಂತೆ ದೇಶದ ನಾಲ್ಕೂ ಮಹಾನಗರಗಳಲ್ಲಿ ಇಂದಿಗೂ ತೈಲದ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

Petrol Price on January 5: 80 ಡಾಲರ್​​ಗಿಂತ ಕುಸಿತ ಕಂಡ ಕಚ್ಚಾ ತೈಲದ ಬೆಲೆ; ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ
ಪೆಟ್ರೋಲ್ ಬೆಲೆ
Follow us
| Updated By: ಸುಷ್ಮಾ ಚಕ್ರೆ

Updated on: Jan 05, 2023 | 7:44 AM

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಸತತ ಎರಡನೇ ದಿನವೂ ಭಾರೀ ಕುಸಿತ ಕಂಡುಬಂದಿದ್ದು, ಬ್ರೆಂಟ್ ಕಚ್ಚಾ ತೈಲವು 80 ಡಾಲರ್​ಗಿಂತ ಕಡಿಮೆಯಾಗಿದೆ. ಇಂದು (ಗುರುವಾರ) ಬೆಳಿಗ್ಗೆ ಸರ್ಕಾರಿ ತೈಲ ಕಂಪನಿಗಳು ಹೊರಡಿಸಿದ ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ. ಇಂದು ಉತ್ತರ ಪ್ರದೇಶದ ಅನೇಕ ನಗರಗಳಲ್ಲಿ ಪೆಟ್ರೋಲ್ (Petrol Price) ಮತ್ತು ಡೀಸೆಲ್ ಬೆಲೆಗಳು (Diesel Price Today) ಕಡಿಮೆಯಾಗಿದೆ. ಆದರೆ, ದೆಹಲಿ-ಮುಂಬೈ ಸೇರಿದಂತೆ ದೇಶದ ನಾಲ್ಕೂ ಮಹಾನಗರಗಳಲ್ಲಿ ಇಂದಿಗೂ ತೈಲ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಸರ್ಕಾರಿ ತೈಲ ಕಂಪನಿಗಳ ಪ್ರಕಾರ, ಇಂದು ಗೌತಮ್ ಬುದ್ಧ ನಗರದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 41 ಪೈಸೆಗಳಷ್ಟು ಅಗ್ಗವಾಗಿದ್ದು, 96.59 ರೂ.ಗೆ ತಲುಪಿದೆ. ಆದರೆ, ಡೀಸೆಲ್ ಬೆಲೆ ಲೀಟರ್‌ಗೆ 38 ಪೈಸೆ ಇಳಿದು 89.76 ರೂ.ಗೆ ತಲುಪಿದೆ. ಗಾಜಿಯಾಬಾದ್​ನಲ್ಲೂ ಪೆಟ್ರೋಲ್ ಬೆಲೆ 32 ಪೈಸೆ ಇಳಿಕೆಯಾಗಿ 96.26 ರೂ.ಗೆ ಮತ್ತು ಡೀಸೆಲ್ 30 ಪೈಸೆ ಇಳಿಕೆಯಾಗಿ 89.45 ರೂ.ಗೆ ತಲುಪಿದೆ. ಲಕ್ನೋದಲ್ಲಿ ಪೆಟ್ರೋಲ್ ಬೆಲೆ 24 ಪೈಸೆ ಏರಿಕೆಯಾಗಿ 96.68 ರೂ.ಗೆ ತಲುಪಿದ್ದರೆ, ಡೀಸೆಲ್ ಬೆಲೆ ಲೀಟರ್‌ಗೆ 23 ಪೈಸೆ ಏರಿಕೆಯಾಗಿ 89.87 ರೂ.ಗೆ ತಲುಪಿದೆ. ಪಾಟ್ನಾದಲ್ಲಿ ಇಂದು ಪೆಟ್ರೋಲ್ ಲೀಟರ್‌ಗೆ 35 ಪೈಸೆ ಏರಿಕೆಯಾಗಿ 107.59 ರೂ.ಗೆ ತಲುಪಿದ್ದರೆ, ಡೀಸೆಲ್ ಲೀಟರ್‌ಗೆ 32 ಪೈಸೆ ಏರಿಕೆಯಾಗಿ 96.36 ರೂ.ಗೆ ತಲುಪಿದೆ.

ಇದನ್ನೂ ಓದಿ: Petrol Price on January 2: 86 ಡಾಲರ್ ದಾಟಿದ ಕಚ್ಚಾ ತೈಲದ ಬೆಲೆ; ಹಲವು ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ದುಬಾರಿ

ಭಾರತದ 4 ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೀಗಿವೆ:

ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.65 ರೂ. ಮತ್ತು ಡೀಸೆಲ್ 89.82 ರೂ. ಆಗಿದೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 106.31 ರೂ. ಮತ್ತು ಡೀಸೆಲ್ 94.27 ರೂ. ಆಗಿದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 102.63 ರೂ. ಮತ್ತು ಡೀಸೆಲ್ 94.24 ರೂ. ಆಗಿದೆ. ಕೊಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 106.03 ರೂ. ಮತ್ತು ಡೀಸೆಲ್ ಬೆಲೆ 92.76 ರೂ. ಆಗಿದೆ. ನೊಯ್ಡಾದಲ್ಲಿ ಪ್ರತಿ ಲೀಟರ್​​ ಪೆಟ್ರೋಲ್ ಬೆಲೆ 96.65 ರೂ. ಮತ್ತು ಡೀಸೆಲ್ ಬೆಲೆ 89.82 ರೂ. ಆಗಿದೆ. ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.44 ರೂ. ಮತ್ತು ಡೀಸೆಲ್ ಬೆಲೆ 89.64 ರೂ. ಆಗಿದೆ. ಗುರುಗ್ರಾಮದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.85 ರೂ. ಮತ್ತು ಡೀಸೆಲ್ ಬೆಲೆ 89.76 ರೂ. ಆಗಿದೆ.

ಪ್ರತಿದಿನ ಬೆಳಿಗ್ಗೆ ಇಂಧನದ ಬೆಲೆಗಳು ಬದಲಾಗುತ್ತವೆ. ವಿದೇಶಿ ವಿನಿಮಯ ದರಗಳ ಜೊತೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ಬೆಲೆಯನ್ನು ಅವಲಂಬಿಸಿ ಪ್ರತಿದಿನ ಬದಲಾಗುತ್ತವೆ. ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿದ ನಂತರ ದರಗಳನ್ನು ನಿರ್ಧರಿಸುತ್ತವೆ.

ಕೇಂದ್ರೀಯ ಅಬಕಾರಿ ಮತ್ತು ರಾಜ್ಯ ತೆರಿಗೆಗಳು ಪೆಟ್ರೋಲ್ ಬೆಲೆಯಲ್ಲಿ ಶೇ.60 ರಷ್ಟಿದ್ದರೆ, ಡೀಸೆಲ್ ಬೆಲೆ ಶೇ.54 ರಷ್ಟಿದೆ. ಪ್ರತಿ ಲೀಟರ್ ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕ 32.90 ರೂ., ಡೀಸೆಲ್ ಮೇಲೆ 31.80 ರೂ. ಇದೆ. ಪೆಟ್ರೋಲ್-ಡೀಸೆಲ್ ಬೆಲೆಗಳು ಸಾಮಾನ್ಯವಾಗಿ ಪ್ರತಿದಿನ ಬದಲಾಗುತ್ತವೆ. ಈ ಬೆಲೆಗಳನ್ನು ಅಂತಾರಾಷ್ಟ್ರೀಯ ಕಚ್ಚಾ ಬೆಲೆಗಳು ಮತ್ತು ವಿದೇಶಿ ವಿನಿಮಯ ದರಗಳ ಮಾನದಂಡದ ಆಧಾರದ ಮೇಲೆ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: Petrol Price on January 4: ಕಚ್ಚಾ ತೈಲದ ಬೆಲೆ 3 ಡಾಲರ್ ಕುಸಿತ; ಭಾರತದಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ನವೀಕರಿಸಲಾಗುತ್ತದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನವೀಕರಿಸುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ ಅದರ ಬೆಲೆ ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಇದೇ ಕಾರಣಕ್ಕೆ ಜನಸಾಮಾನ್ಯರಿಗೆ ಪೆಟ್ರೋಲ್, ಡೀಸೆಲ್ ಬೆಲೆ ದುಬಾರಿಯಾಗಿದೆ.

ನೀವು ಎಸ್‌ಎಂಎಸ್ ಮೂಲಕ ಪೆಟ್ರೋಲ್ ಡೀಸೆಲ್‌ನ ದೈನಂದಿನ ದರವನ್ನು ಸಹ ತಿಳಿಯಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಮತ್ತು BPCL ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು 9223112222 ಗೆ ಟೈಪ್ ಮಾಡುವ ಮೂಲಕ 9224992249 ಗೆ SMS ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಆದರೆ, HPCL ಗ್ರಾಹಕರು HPPrice ಮತ್ತು ಅವರ ಸಿಟಿ ಕೋಡ್ ಅನ್ನು 9222201122 ಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿದುಕೊಳ್ಳಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ