Petrol Price on January 5: 80 ಡಾಲರ್​​ಗಿಂತ ಕುಸಿತ ಕಂಡ ಕಚ್ಚಾ ತೈಲದ ಬೆಲೆ; ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ

Fuel Price Today: ದೆಹಲಿ-ಮುಂಬೈ ಸೇರಿದಂತೆ ದೇಶದ ನಾಲ್ಕೂ ಮಹಾನಗರಗಳಲ್ಲಿ ಇಂದಿಗೂ ತೈಲದ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

Petrol Price on January 5: 80 ಡಾಲರ್​​ಗಿಂತ ಕುಸಿತ ಕಂಡ ಕಚ್ಚಾ ತೈಲದ ಬೆಲೆ; ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ
ಪೆಟ್ರೋಲ್ ಬೆಲೆ
Follow us
| Edited By: Sushma Chakre

Updated on: Jan 05, 2023 | 7:44 AM

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಸತತ ಎರಡನೇ ದಿನವೂ ಭಾರೀ ಕುಸಿತ ಕಂಡುಬಂದಿದ್ದು, ಬ್ರೆಂಟ್ ಕಚ್ಚಾ ತೈಲವು 80 ಡಾಲರ್​ಗಿಂತ ಕಡಿಮೆಯಾಗಿದೆ. ಇಂದು (ಗುರುವಾರ) ಬೆಳಿಗ್ಗೆ ಸರ್ಕಾರಿ ತೈಲ ಕಂಪನಿಗಳು ಹೊರಡಿಸಿದ ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ. ಇಂದು ಉತ್ತರ ಪ್ರದೇಶದ ಅನೇಕ ನಗರಗಳಲ್ಲಿ ಪೆಟ್ರೋಲ್ (Petrol Price) ಮತ್ತು ಡೀಸೆಲ್ ಬೆಲೆಗಳು (Diesel Price Today) ಕಡಿಮೆಯಾಗಿದೆ. ಆದರೆ, ದೆಹಲಿ-ಮುಂಬೈ ಸೇರಿದಂತೆ ದೇಶದ ನಾಲ್ಕೂ ಮಹಾನಗರಗಳಲ್ಲಿ ಇಂದಿಗೂ ತೈಲ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಸರ್ಕಾರಿ ತೈಲ ಕಂಪನಿಗಳ ಪ್ರಕಾರ, ಇಂದು ಗೌತಮ್ ಬುದ್ಧ ನಗರದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 41 ಪೈಸೆಗಳಷ್ಟು ಅಗ್ಗವಾಗಿದ್ದು, 96.59 ರೂ.ಗೆ ತಲುಪಿದೆ. ಆದರೆ, ಡೀಸೆಲ್ ಬೆಲೆ ಲೀಟರ್‌ಗೆ 38 ಪೈಸೆ ಇಳಿದು 89.76 ರೂ.ಗೆ ತಲುಪಿದೆ. ಗಾಜಿಯಾಬಾದ್​ನಲ್ಲೂ ಪೆಟ್ರೋಲ್ ಬೆಲೆ 32 ಪೈಸೆ ಇಳಿಕೆಯಾಗಿ 96.26 ರೂ.ಗೆ ಮತ್ತು ಡೀಸೆಲ್ 30 ಪೈಸೆ ಇಳಿಕೆಯಾಗಿ 89.45 ರೂ.ಗೆ ತಲುಪಿದೆ. ಲಕ್ನೋದಲ್ಲಿ ಪೆಟ್ರೋಲ್ ಬೆಲೆ 24 ಪೈಸೆ ಏರಿಕೆಯಾಗಿ 96.68 ರೂ.ಗೆ ತಲುಪಿದ್ದರೆ, ಡೀಸೆಲ್ ಬೆಲೆ ಲೀಟರ್‌ಗೆ 23 ಪೈಸೆ ಏರಿಕೆಯಾಗಿ 89.87 ರೂ.ಗೆ ತಲುಪಿದೆ. ಪಾಟ್ನಾದಲ್ಲಿ ಇಂದು ಪೆಟ್ರೋಲ್ ಲೀಟರ್‌ಗೆ 35 ಪೈಸೆ ಏರಿಕೆಯಾಗಿ 107.59 ರೂ.ಗೆ ತಲುಪಿದ್ದರೆ, ಡೀಸೆಲ್ ಲೀಟರ್‌ಗೆ 32 ಪೈಸೆ ಏರಿಕೆಯಾಗಿ 96.36 ರೂ.ಗೆ ತಲುಪಿದೆ.

ಇದನ್ನೂ ಓದಿ: Petrol Price on January 2: 86 ಡಾಲರ್ ದಾಟಿದ ಕಚ್ಚಾ ತೈಲದ ಬೆಲೆ; ಹಲವು ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ದುಬಾರಿ

ಭಾರತದ 4 ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೀಗಿವೆ:

ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.65 ರೂ. ಮತ್ತು ಡೀಸೆಲ್ 89.82 ರೂ. ಆಗಿದೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 106.31 ರೂ. ಮತ್ತು ಡೀಸೆಲ್ 94.27 ರೂ. ಆಗಿದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 102.63 ರೂ. ಮತ್ತು ಡೀಸೆಲ್ 94.24 ರೂ. ಆಗಿದೆ. ಕೊಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 106.03 ರೂ. ಮತ್ತು ಡೀಸೆಲ್ ಬೆಲೆ 92.76 ರೂ. ಆಗಿದೆ. ನೊಯ್ಡಾದಲ್ಲಿ ಪ್ರತಿ ಲೀಟರ್​​ ಪೆಟ್ರೋಲ್ ಬೆಲೆ 96.65 ರೂ. ಮತ್ತು ಡೀಸೆಲ್ ಬೆಲೆ 89.82 ರೂ. ಆಗಿದೆ. ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.44 ರೂ. ಮತ್ತು ಡೀಸೆಲ್ ಬೆಲೆ 89.64 ರೂ. ಆಗಿದೆ. ಗುರುಗ್ರಾಮದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.85 ರೂ. ಮತ್ತು ಡೀಸೆಲ್ ಬೆಲೆ 89.76 ರೂ. ಆಗಿದೆ.

ಪ್ರತಿದಿನ ಬೆಳಿಗ್ಗೆ ಇಂಧನದ ಬೆಲೆಗಳು ಬದಲಾಗುತ್ತವೆ. ವಿದೇಶಿ ವಿನಿಮಯ ದರಗಳ ಜೊತೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ಬೆಲೆಯನ್ನು ಅವಲಂಬಿಸಿ ಪ್ರತಿದಿನ ಬದಲಾಗುತ್ತವೆ. ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿದ ನಂತರ ದರಗಳನ್ನು ನಿರ್ಧರಿಸುತ್ತವೆ.

ಕೇಂದ್ರೀಯ ಅಬಕಾರಿ ಮತ್ತು ರಾಜ್ಯ ತೆರಿಗೆಗಳು ಪೆಟ್ರೋಲ್ ಬೆಲೆಯಲ್ಲಿ ಶೇ.60 ರಷ್ಟಿದ್ದರೆ, ಡೀಸೆಲ್ ಬೆಲೆ ಶೇ.54 ರಷ್ಟಿದೆ. ಪ್ರತಿ ಲೀಟರ್ ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕ 32.90 ರೂ., ಡೀಸೆಲ್ ಮೇಲೆ 31.80 ರೂ. ಇದೆ. ಪೆಟ್ರೋಲ್-ಡೀಸೆಲ್ ಬೆಲೆಗಳು ಸಾಮಾನ್ಯವಾಗಿ ಪ್ರತಿದಿನ ಬದಲಾಗುತ್ತವೆ. ಈ ಬೆಲೆಗಳನ್ನು ಅಂತಾರಾಷ್ಟ್ರೀಯ ಕಚ್ಚಾ ಬೆಲೆಗಳು ಮತ್ತು ವಿದೇಶಿ ವಿನಿಮಯ ದರಗಳ ಮಾನದಂಡದ ಆಧಾರದ ಮೇಲೆ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: Petrol Price on January 4: ಕಚ್ಚಾ ತೈಲದ ಬೆಲೆ 3 ಡಾಲರ್ ಕುಸಿತ; ಭಾರತದಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ನವೀಕರಿಸಲಾಗುತ್ತದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನವೀಕರಿಸುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ ಅದರ ಬೆಲೆ ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಇದೇ ಕಾರಣಕ್ಕೆ ಜನಸಾಮಾನ್ಯರಿಗೆ ಪೆಟ್ರೋಲ್, ಡೀಸೆಲ್ ಬೆಲೆ ದುಬಾರಿಯಾಗಿದೆ.

ನೀವು ಎಸ್‌ಎಂಎಸ್ ಮೂಲಕ ಪೆಟ್ರೋಲ್ ಡೀಸೆಲ್‌ನ ದೈನಂದಿನ ದರವನ್ನು ಸಹ ತಿಳಿಯಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಮತ್ತು BPCL ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು 9223112222 ಗೆ ಟೈಪ್ ಮಾಡುವ ಮೂಲಕ 9224992249 ಗೆ SMS ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಆದರೆ, HPCL ಗ್ರಾಹಕರು HPPrice ಮತ್ತು ಅವರ ಸಿಟಿ ಕೋಡ್ ಅನ್ನು 9222201122 ಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿದುಕೊಳ್ಳಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಹೆದ್ದಾರಿಯಲ್ಲಿ ಕಾಡಾನೆ ಹಿಂಡು: ಶೃಂಗೇರಿ ತೆರಳುವ ವಾಹನ ಸವಾರರಿಗೆ ಎಚ್ಚರಿಕೆ
ಹೆದ್ದಾರಿಯಲ್ಲಿ ಕಾಡಾನೆ ಹಿಂಡು: ಶೃಂಗೇರಿ ತೆರಳುವ ವಾಹನ ಸವಾರರಿಗೆ ಎಚ್ಚರಿಕೆ
ಬಾಗಲಕೋಟೆ: ಬರಿಗೈಯಿಂದ ಕುದಿಯುವ ಹುಗ್ಗಿ ತೆಗೆದ ಸ್ವಾಮೀಜಿ
ಬಾಗಲಕೋಟೆ: ಬರಿಗೈಯಿಂದ ಕುದಿಯುವ ಹುಗ್ಗಿ ತೆಗೆದ ಸ್ವಾಮೀಜಿ
ಮಂಗಳವಾರದ ಬೆಂಗಳೂರು ಬಂದ್ ಗೆ ಪ್ರಾಯಶಃ ಹೋಟೆಲ್ ಮಾಲೀಕರ ಬೆಂಬಲವಿಲ್ಲ
ಮಂಗಳವಾರದ ಬೆಂಗಳೂರು ಬಂದ್ ಗೆ ಪ್ರಾಯಶಃ ಹೋಟೆಲ್ ಮಾಲೀಕರ ಬೆಂಬಲವಿಲ್ಲ
13 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗ್ತಿದ್ದ ಗೋದಾಮು ಅರ್ಧಕ್ಕೆ ನಿಂತಿದೆ!
13 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗ್ತಿದ್ದ ಗೋದಾಮು ಅರ್ಧಕ್ಕೆ ನಿಂತಿದೆ!
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ