AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol- Diesel Price Hike: ಒಂದೂವರೆ ವರ್ಷದಲ್ಲಿ ಪೆಟ್ರೋಲ್ ಲೀಟರ್​ಗೆ 36 ರೂ., ಡೀಸೆಲ್ 26.58 ರೂ., ಏರಿಕೆ

2020ರ ಮೇ ತಿಂಗಳಿಂದ ಈಚೆಗೆ ಪೆಟ್ರೋಲ್ ಲೀಟರ್​ಗೆ 36 ರೂಪಾಯಿ, ಡೀಸೆಲ್ ರೂ. 26.58 ಹೆಚ್ಚಳ ಆಗಿದ್ದು, ಭಾರತದ ಬಹುತೇಕ ರಾಜ್ಯಗಳಲ್ಲಿ ಡೀಸೆಲ್ 100 ರುಪಾಯಿ ದಾಟಿದೆ.

Petrol- Diesel Price Hike: ಒಂದೂವರೆ ವರ್ಷದಲ್ಲಿ ಪೆಟ್ರೋಲ್ ಲೀಟರ್​ಗೆ 36 ರೂ., ಡೀಸೆಲ್ 26.58 ರೂ., ಏರಿಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 23, 2021 | 8:58 PM

Share

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸತತ ನಾಲ್ಕನೇ ದಿನವಾದ ಶನಿವಾರದಂದು ಲೀಟರ್‌ಗೆ 35 ಪೈಸೆಗಳಷ್ಟು ಏರಿಕೆಯಾಗಿದ್ದು, 18 ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ ಪೆಟ್ರೋಲ್‌ನ ಮೇಲಿನ ದರ ಲೀಟರ್‌ಗೆ 36 ರೂಪಾಯಿ ಮತ್ತು ಡೀಸೆಲ್‌ನ ಮೇಲೆ 26.58 ರೂಪಾಯಿ ಏರಿಕೆ ಆಗಿದೆ. ಎಲ್ಲ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಈಗ ಲೀಟರ್‌ಗೆ 100 ರೂಪಾಯಿಗಿಂತ ಹೆಚ್ಚಿದೆ. ಆದರೆ ಡೀಸೆಲ್ ಹನ್ನೆರಡಕ್ಕೂ ಹೆಚ್ಚು ರಾಜ್ಯಗಳಲ್ಲಿ ನೂರು ರೂಪಾಯಿಯ ಗಡಿಯನ್ನು ದಾಟಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಈಗ ಲೀಟರ್‌ಗೆ 107.24 ರೂಪಾಯಿ ಮತ್ತು ಡೀಸೆಲ್ ಬೆಲೆ 95.97 ರೂಪಾಯಿ ಆಗಿದೆ. ಮಧ್ಯಪ್ರದೇಶದ ಗಡಿಯ ಜಿಲ್ಲೆಯಾದ ಅನುಪ್ಪುರದಲ್ಲಿ ಪೆಟ್ರೋಲ್ ದರ ಲೀಟರ್​ಗೆ ರೂ. 119 ಮತ್ತು ಡೀಸೆಲ್ ಲೀಟರ್​ಗೆ 108 ರೂಪಾಯಿ ಆಗಿದೆ.

ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢದೊಂದಿಗೆ ತನ್ನ ಗಡಿಯನ್ನು ಹಂಚಿಕೊಂಡಿರುವ ಮಧ್ಯಪ್ರದೇಶದ ಬಾಲಾಘಾಟ್ ಜಿಲ್ಲೆಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ ಕ್ರಮವಾಗಿ 118.25 ರೂಪಾಯಿ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 107.46 ರೂಪಾಯಿಗೆ ತಲುಪಿದೆ. ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಇದು ಸ್ವಲ್ಪ ಕಡಿಮೆಯಾಗಿ, ಲೀಟರ್​ಗೆ ಕ್ರಮವಾಗಿ 115.90 ರೂಪಾಯಿ ಮತ್ತು 105.27 ರೂಪಾಯಿ ಮುಟ್ಟಿದೆ. ಅಬಕಾರಿ ಸುಂಕವನ್ನು ದಾಖಲೆ ಮಟ್ಟಕ್ಕೆ ಏರಿಸಲು ಸರ್ಕಾರ ನಿರ್ಧರಿಸಿದ ದಿನ ಮೇ 5, 2020ರಿಂದ ಈಚೆಗೆ ಒಟ್ಟು ಬೆಲೆ ಏರಿಕೆಯು ಇಲ್ಲಿಯವರೆಗೆ ಪ್ರತಿ ಲೀಟರ್ ಪೆಟ್ರೋಲ್‌ಗೆ ರೂ. 35.98 ಮತ್ತು ಡೀಸೆಲ್‌ಗೆ ರೂ. 26.58 ಹೆಚ್ಚಳವಾಗಿದೆ.

ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಬೆಲೆ ಏರಿಕೆಯ ಬಗ್ಗೆ ಸರ್ಕಾರವನ್ನು ಟೀಕಿಸಿವೆ ಮತ್ತು ತೆರಿಗೆಗಳನ್ನು ಕಡಿತಗೊಳಿಸಬೇಕೆಂದು ಒತ್ತಾಯಿಸಿವೆ. ಆದರೆ ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಬಡವರಿಗೆ ಲಸಿಕೆಗಳು ಹಂಚಲು ಮತ್ತು ಯೋಜನೆಗಳಿಗೆ ಸುಂಕದ ಹಣವನ್ನು ನೀಡಲಾಗುತ್ತವೆ ಎಂದು ಸರ್ಕಾರ ಹೇಳಿದೆ. ಇಂಧನ ಬೆಲೆಗಳ ಹೆಚ್ಚಳವು ಹಣದುಬ್ಬರದ ಮೇಲೆ ಕಳವಳವನ್ನು ಉಂಟುಮಾಡಿದೆ. ಏಕೆಂದರೆ ಡೀಸೆಲ್ ಕೃಷಿ ಸರಕುಗಳನ್ನು ಒಳಗೊಂಡಂತೆ ಸರಕುಗಳನ್ನು ಸಾಗಿಸಲು ಬಳಸುವ ಮುಖ್ಯ ಇಂಧನವಾಗಿದೆ.

ಇದನ್ನೂ ಓದಿ: ಲೀಟರ್ ಪೆಟ್ರೋಲ್ ಬೆಲೆ ರೂ.112 ಆಗಿದ್ದೇ ಅಚ್ಛೇ ದಿನಗಳಾ ಎಂದು ಪ್ರಧಾನಿ ಮೋದಿಯವರನ್ನು ಪ್ರಶ್ನಿಸಿದ ಸಿದ್ದರಾಮಯ್ಯ!

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ