AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol and Diesel Rate Today: ಬೆಂಗಳೂರು ಹಾಗೂ ವಿವಿಧ ನಗರಗಳ ಪೆಟ್ರೋಲ್, ಡೀಸೆಲ್ ದರವನ್ನು ಇಲ್ಲಿ ಪರಿಶೀಲಿಸಿ

Petrol Diesel Price Today, 21-01-2022: ರಾಜ್ಯದಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಸಮಯವನ್ನು ಹೊರತುಪಡಿಸಿ ಬೇರೆ ಎಲ್ಲಾ ಸಮಯದಲ್ಲೂ ಓಡಾಡಲು ಸರ್ಕಾರ ಅನುಮತಿ ನೀಡಿದೆ. ಹೀಗಾಗಿ ವಾಹನ ಸವಾರರಿಗೆ ಪ್ರತಿದಿನ ಇಂಧನ ದರ (Fuel Price) ಎಷ್ಟಿದೆ ಎಂಬ ಕುತೂಹಲ ಇದ್ದೇ ಇರುತ್ತದೆ.

Petrol and Diesel Rate Today: ಬೆಂಗಳೂರು ಹಾಗೂ ವಿವಿಧ ನಗರಗಳ ಪೆಟ್ರೋಲ್, ಡೀಸೆಲ್ ದರವನ್ನು ಇಲ್ಲಿ ಪರಿಶೀಲಿಸಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 21, 2022 | 8:10 AM

Share

Petrol Diesel Price Today|ದೆಹಲಿ: ಕೊರೊನಾ ಮೊದಲ ಅಲೆ ಹಾಗೂ ಎರಡನೇ ಅಲೆಯ ಭೀತಿ ಜನರಲ್ಲಿ ಈಗ ಕಾಣಿಸುತ್ತಿಲ್ಲ. ಭಾರತದ ವಿವಿಧ ರಾಜ್ಯಗಳಲ್ಲಿ ಹಾಗೂ ಕರ್ನಾಟಕದಲ್ಲಿ ಕೂಡ ಕೊರೊನಾ (Coronavirus) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೂ ಜನರು ಹೊರಗೆ ಓಡಾಡುವುದನ್ನು ಕಡಿಮೆ ಮಾಡಿಲ್ಲ. ಈ ಮಧ್ಯೆ ರಾಜ್ಯದಲ್ಲಿ ಜಾರಿಯಾಗಿರುವ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಸಮಯವನ್ನು ಹೊರತುಪಡಿಸಿ ಬೇರೆ ಎಲ್ಲಾ ಸಮಯದಲ್ಲೂ ಓಡಾಡಲು ಸರ್ಕಾರ ಅನುಮತಿ ನೀಡಿದೆ. ಹೀಗಾಗಿ ವಾಹನ ಸವಾರರಿಗೆ ಪ್ರತಿದಿನ ಇಂಧನ ದರ (Fuel Price) ಎಷ್ಟಿದೆ ಎಂಬ ಕುತೂಹಲ ಇದ್ದೇ ಇರುತ್ತದೆ. ಇಂದಿನ ಪೆಟ್ರೋಲ್ ಬೆಲೆ (Petrol Price) ಮತ್ತು ಡೀಸೆಲ್ ದರವನ್ನು (Diesel Price) ಇಲ್ಲಿ ತಿಳಿಸಲಾಗಿದೆ. ಭಾರತದ ತೈಲ ಕಂಪನಿಗಳು ಇಂದು (ಜನವರಿ 21, ಶುಕ್ರವಾರ) ಬೆಳಗ್ಗೆ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡಿದ್ದು,ಇಂದು ಕೂಡ ಇಂಧನಗಳ ದರದಲ್ಲಿ(Fuel Price) ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಎರಡೂವರೆ ತಿಂಗಳುಗಳಿಂದಲೂ ತೈಲಗಳ ಬೆಲೆ ಸ್ಥಿರವಾಗಿಯೇ ಇದೆ. 

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ                                                                                                              ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್