AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಬೆಂಗಳೂರು, ಚೆನ್ನೈ, ದೆಹಲಿ ಸೇರಿ ವಿವಿಧ ನಗರಗಳ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ

Diesel Price Today: 52 ದಿನಗಳ ಹಿಂದೆ (ಮೇ 21) ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಸರ್ಕಾರ ಕಡಿತಗೊಳಿಸಿತ್ತು. ಇದಾದ ನಂತರ ತೈಲ ಬೆಲೆಯಲ್ಲಿ ಭಾರೀ ಕುಸಿತ ಕಂಡಿತ್ತು.

Petrol Price Today: ಬೆಂಗಳೂರು, ಚೆನ್ನೈ, ದೆಹಲಿ ಸೇರಿ ವಿವಿಧ ನಗರಗಳ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ
ಸಂಗ್ರಹ ಚಿತ್ರImage Credit source: Zee News
TV9 Web
| Edited By: |

Updated on: Jul 12, 2022 | 8:53 AM

Share

Fuel Price Today: ಪೆಟ್ರೋಲ್ (Petrol Price) ಮತ್ತು ಡೀಸೆಲ್ ಬೆಲೆಯಲ್ಲಿ (Diesel Price) ಏರಿಳಿತವಾಗುತ್ತಲೇ ಇರುತ್ತದೆ. ಸತತ 52ನೇ ದಿನವೂ ಪೆಟ್ರೋಲ್-ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆರ್ಥಿಕ ಹಿಂಜರಿತದ ನಡುವೆಯೂ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದೆ. ಕಚ್ಚಾತೈಲದ ಬೆಲೆ ಇಳಿಕೆಯಾಗಿದ್ದರೂ, ಪೆಟ್ರೋಲ್ ಮತ್ತು ಡೀಸೆಲ್ ಹಳೆಯ ಮಟ್ಟದಲ್ಲಿಯೇ ಇದೆ. ಇತ್ತೀಚೆಗಷ್ಟೇ ತೈಲ ಕಂಪನಿಗಳು ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿದ್ದವು.

ಇಂಧನ ಬೆಲೆಯಲ್ಲಿ ನಿರಂತರ ಏರಿಕೆಯ ನಂತರ ಕಳೆದ ಕೆಲವು ದಿನಗಳಿಂದ ಜನರಿಗೆ ಸ್ವಲ್ಪ ನಿರಾಳವಾಗಿದೆ. ಸುಮಾರು 2 ತಿಂಗಳಿನಿಂದ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. 52 ದಿನಗಳ ಹಿಂದೆ (ಮೇ 21) ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಸರ್ಕಾರ ಕಡಿತಗೊಳಿಸಿತ್ತು. ಇದಾದ ನಂತರ ತೈಲ ಬೆಲೆಯಲ್ಲಿ ಭಾರೀ ಕುಸಿತ ಕಂಡಿತ್ತು. ಈ ಹಿಂದೆ ಏಪ್ರಿಲ್ 6ರಂದು ಕೊನೆಯ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಲಾಗಿತ್ತು.

ನಾಲ್ಕು ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೀಗಿವೆ. ದೆಹಲಿ ಪೆಟ್ರೋಲ್ ಬೆಲೆ 96.72 ರೂ. ಮತ್ತು ಡೀಸೆಲ್ ಲೀಟರ್‌ಗೆ 89.62 ರೂ. ಆಗಿದೆ. ಮುಂಬೈ ಪೆಟ್ರೋಲ್ ಬೆಲೆ 109.27 ರೂ. ಮತ್ತು ಡೀಸೆಲ್ ಲೀಟರ್‌ಗೆ 95.84 ರೂ. ಆಗಿದೆ. ಚೆನ್ನೈ ಪೆಟ್ರೋಲ್ ಬೆಲೆ 102.63 ರೂ. ಮತ್ತು ಡೀಸೆಲ್ ಲೀಟರ್‌ಗೆ 94.24 ರೂ. ಆಗಿದೆ. ಕೊಲ್ಕತ್ತಾ ಪೆಟ್ರೋಲ್ ಬೆಲೆ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 92.76 ರೂ. ಆಗಿದೆ.

ಇದನ್ನೂ ಓದಿ: Petrol Price Today: ಬೆಂಗಳೂರು, ಮುಂಬೈ ಸೇರಿದಂತೆ ದೇಶದ ವಿವಿಧೆಡೆ ಇಂದಿನ ಪೆಟ್ರೋಲ್ ಬೆಲೆ ಹೀಗಿದೆ

ನೊಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.79 ರೂ. ಮತ್ತು ಡೀಸೆಲ್ 89.96 ರೂ ಆಗಿದೆ. ಆಗಿದೆ. ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.57 ರೂ ಮತ್ತು ಡೀಸೆಲ್ 89.76 ರೂ ಆಗಿದೆ. ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.24 ರೂ ಮತ್ತು ಡೀಸೆಲ್ 94.04 ರೂ ಆಗಿದೆ. ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸ್ಥಿರವಾಗಿವೆ. ಮೇ 21ರಂದು ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂ. ಮತ್ತು ಡೀಸೆಲ್ ಮೇಲೆ 6 ರೂ. ಕಡಿತಗೊಳಿಸಿದಾಗಿನಿಂದ 2 ತಿಂಗಳಿನಿಂದ ಬೆಲೆಗಳು ಬದಲಾಗದೆ ಯಥಾಸ್ಥಿತಿಯಲ್ಲಿ ಉಳಿದಿವೆ.

ಮುಂಬೈನಲ್ಲಿ ಪೆಟ್ರೋಲ್ 111.35 ರೂ. ಮತ್ತು ಡೀಸೆಲ್ 97.28 ರೂ. ಆಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಚೆನ್ನೈನಲ್ಲಿ ರೂ.102.63 ಮತ್ತು ರೂ.94.24 ಆಗಿದ್ದರೆ, ಕೋಲ್ಕತ್ತಾದಲ್ಲಿ ಪೆಟ್ರೋಲ್ ರೂ.106.03 ಮತ್ತು ಡೀಸೆಲ್ ರೂ.92.76 ಆಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 101.94 ರೂ. ಆಗಿದೆ. ಡೀಸೆಲ್ ಬೆಲೆ 87.89 ರೂ. ಆಗಿದೆ.

ಇದನ್ನೂ ಓದಿ: Petrol Price Today: ಬೆಂಗಳೂರು, ದೆಹಲಿ, ಮುಂಬೈನಲ್ಲಿ ಇಂದಿನ ಪೆಟ್ರೋಲ್ ಬೆಲೆ ಹೀಗಿದೆ

ತೈಲ ಮಾರುಕಟ್ಟೆ ಕಂಪನಿಗಳು ದೇಶದಲ್ಲಿ ಗ್ರಾಹಕರಿಗೆ ಅಬಕಾರಿ ಸುಂಕ ಕಡಿತವನ್ನು ವರ್ಗಾಯಿಸಿದರೂ ಸಹ ಪೆಟ್ರೋಲ್ ಮೇಲೆ 13.08 ರೂ ಮತ್ತು ಡೀಸೆಲ್ ಮೇಲೆ 24.09 ರೂ. ನಷ್ಟವನ್ನು ಅನುಭವಿಸುತ್ತಿವೆ. ಭಾರತವು ತನ್ನ ಶೇ. 80ರಷ್ಟು ಇಂಧನ ಅಗತ್ಯವನ್ನು ಆಮದಿನ ಮೂಲಕ ಪೂರೈಸುತ್ತದೆ. ಅತ್ತ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿಯೂ ಕಚ್ಚಾ ತೈಲದ ಬೆಲೆ ಮೊದಲಿನ ಸ್ಥಿತಿಗೆ ಇಳಿಯುತ್ತಿಲ್ಲ, ಹಾಗಾಗಿ, ಬೆಲೆ ಏರಿಳಿತಗಳ ಈ ಕಣ್ಣಾಮುಚ್ಚಾಲೆ ಆಟ ನಡೆಯುತ್ತಲೇ ಇದೆ.

ತೈಲ ಬೆಲೆ ಇಳಿಕೆಯಾಗುವ ಸಾಧ್ಯತೆ: ಒಂದೂವರೆ ತಿಂಗಳಿಗೂ ಹೆಚ್ಚು ಕಾಲ ಪೆಟ್ರೋಲ್-ಡೀಸೆಲ್ ಬೆಲೆ ಒಂದೇ ಕಡೆ ಸ್ಥಿರವಾಗಿದೆ. ಇವುಗಳಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಅಬಕಾರಿ ಸುಂಕವನ್ನು ಸರ್ಕಾರವು ಮೇ 21ರಂದು ಕಡಿತಗೊಳಿಸಿದೆ. ಅನೇಕ ಮಾಧ್ಯಮ ವರದಿಗಳ ಪ್ರಕಾರ ಶೀಘ್ರದಲ್ಲೇ ತೈಲದ ಬೆಲೆಗಳು ಕಡಿಮೆಯಾಗುವ ನಿರೀಕ್ಷೆಯಿದೆ.

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ