AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ವೈಮಾನಿಕ ಇಂಧನದ ತೆರಿಗೆ ಇಳಿಸಿದ ಸರ್ಕಾರ, ದೇಶದ ವಿವಿಧೆಡೆ ಪೆಟ್ರೋಲ್-ಡೀಸೆಲ್ ಬೆಲೆ ಹೀಗಿದೆ

ಚಿಲ್ಲರೆ ಮಾರಾಟಗಾರರ ಬಳಿ ಪೆಟ್ರೋಲಿಯಂ ಉತ್ಪನ್ನಗಳ ಧಾರಣೆ ಇನ್ನೂ ಕಡಿಮೆಯಾಗಿಲ್ಲ.

Petrol Price Today: ವೈಮಾನಿಕ ಇಂಧನದ ತೆರಿಗೆ ಇಳಿಸಿದ ಸರ್ಕಾರ, ದೇಶದ ವಿವಿಧೆಡೆ ಪೆಟ್ರೋಲ್-ಡೀಸೆಲ್ ಬೆಲೆ ಹೀಗಿದೆ
ಸಂಗ್ರಹ ಚಿತ್ರImage Credit source: Zee News
TV9 Web
| Edited By: |

Updated on:Jul 23, 2022 | 8:13 AM

Share

Fuel Price Today: ಉಕ್ರೇನ್ ಮೇಲಿನ ರಷ್ಯಾ ದಾಳಿಯ ನಂತರ ಜಾಗತಿಕ ಮಾರುಕಟ್ಟೆಯಲ್ಲಿ ಸತತ ಏರಿಕೆ ಕಂಡಿದ್ದ ಕಚ್ಚಾತೈಲ ದರವು ಇದೀಗ ಇಳಿಕೆಯ ಲಕ್ಷಣಗಳನ್ನು ತೋರಿಸುತ್ತಿದೆ. ಕೇಂದ್ರ ಸರ್ಕಾರವು ಕಳೆದ ಬುಧವಾರ (ಜುಲೈ 20) ಆಮದು ಮಾಡಿಕೊಳ್ಳುವ ಒಂದು ಲೀಟರ್ ಪೆಟ್ರೋಲ್ ಮೇಲಿನ ತೆರಿಗೆಯನ್ನು ₹ 6ರಷ್ಟು ಕಡಿಮೆ ಮಾಡಿತ್ತು. ವೈಮಾನಿಕ ಕ್ಷೇತ್ರದಲ್ಲಿ ಬಳಸುವ ಇಂಧನದ ತೆರಿಗೆಯನ್ನೂ ₹ 2 ಕಡಿಮೆ ಮಾಡಿತ್ತು. ಡೀಸೆಲ್ ಮೇಲಿನ ತೆರಿಗೆಯಲ್ಲಿಯೂ ₹ 2ರ ವಿನಾಯ್ತಿ ಸಿಗುವ ಸಾಧ್ಯತೆಗಳ ಬಗ್ಗೆ ಸಚಿವಾಲಯ ಇಣುಕುನೋಟ ನೀಡಿತ್ತು. ಭಾರತದಲ್ಲಿಯೇ ಉತ್ಪಾದನೆಯಾಗುವ ಕಚ್ಚಾತೈಲದ ಮೇಲಿನ ತೆರಿಗೆಯನ್ನು ಬ್ಯಾರೆಲ್​ಗೆ ₹ 23,250ರಿಂದ ₹ 17,000ಕ್ಕೆ ಇಳಿಸಿತ್ತು. ಚಿಲ್ಲರೆ ಮಾರಾಟಗಾರರ ಬಳಿ ಪೆಟ್ರೋಲಿಯಂ ಉತ್ಪನ್ನಗಳ ಧಾರಣೆ ಇನ್ನೂ ಕಡಿಮೆಯಾಗಿಲ್ಲ.

ಕಳೆದ ವಾರವಷ್ಟೇ ಮಹಾರಾಷ್ಟ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿಕ (VAT) ತೆರಿಗೆಯನ್ನು ಕ್ರಮವಾಗಿ ₹ 5 ಮತ್ತು ₹ 3ರಷ್ಟು ಕಡಿಮೆ ಮಾಡಿತ್ತು. ಈ ಬೆಳವಣಿಗೆ ಹೊರತುಪಡಿಸಿದರೆ ಕಳೆದ ಎರಡು ತಿಂಗಳುಗಳಿಂದ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಧಾರಣೆಯಲ್ಲಿ ವ್ಯತ್ಯಯವಾಗಿಲ್ಲ. ಎರಡು ತಿಂಗಳ ಹಿಂದೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪೆಟ್ರೋಲ್ ಮೇಲೆ ₹ 8 ಮತ್ತು ಡೀಸೆಲ್ ಮೇಲೆ ₹ 6ರ ಅಬಕಾರಿ ಸುಂಕ ವಿನಾಯ್ತಿ ಘೋಷಿಸಿದ್ದರು.

ಪ್ರಸ್ತುತ ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್ ₹ 101.94, ಡೀಸೆಲ್ ₹ 87.89ಕ್ಕೆ ಮಾರಾಟವಾಗುತ್ತಿದೆ. ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ₹ 96.72, ಡೀಸೆಲ್ ₹ 89.62ಕ್ಕೆ ಮಾರಾಟವಾಗುತ್ತಿದೆ. ಉಳಿದಂತೆ ಮುಂಬೈನಲ್ಲಿ ₹ 106.31 (ಪೆಟ್ರೋಲ್), ₹ 94.27 (ಡೀಸೆಲ್ ದರವಿದೆ). ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 102.63 ರೂ. ಮತ್ತು ಡೀಸೆಲ್ ಲೀಟರ್‌ಗೆ 94.24 ರೂ. ಆಗಿದೆ. ಕೊಲ್ಕತ್ತಾ ಪೆಟ್ರೋಲ್ ಬೆಲೆ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 92.76 ರೂ. ಆಗಿದೆ.

ತೈಲ ಮಾರುಕಟ್ಟೆ ಕಂಪನಿಗಳು ದೇಶದಲ್ಲಿ ಗ್ರಾಹಕರಿಗೆ ಅಬಕಾರಿ ಸುಂಕ ಕಡಿತವನ್ನು ವರ್ಗಾಯಿಸಿದರೂ ಸಹ ಪೆಟ್ರೋಲ್ ಮೇಲೆ 13.08 ರೂ ಮತ್ತು ಡೀಸೆಲ್ ಮೇಲೆ 24.09 ರೂ. ನಷ್ಟವನ್ನು ಅನುಭವಿಸುತ್ತಿವೆ. ಭಾರತವು ತನ್ನ ಶೇ. 80ರಷ್ಟು ಇಂಧನ ಅಗತ್ಯವನ್ನು ಆಮದಿನ ಮೂಲಕ ಪೂರೈಸುತ್ತದೆ. ಅತ್ತ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿಯೂ ಕಚ್ಚಾ ತೈಲದ ಬೆಲೆ ಮೊದಲಿನ ಸ್ಥಿತಿಗೆ ಇಳಿಯುತ್ತಿಲ್ಲ, ಹಾಗಾಗಿ, ಬೆಲೆ ಏರಿಳಿತಗಳ ಈ ಕಣ್ಣಾಮುಚ್ಚಾಲೆ ಆಟ ನಡೆಯುತ್ತಲೇ ಇದೆ. 2 ತಿಂಗಳಿಗೂ ಹೆಚ್ಚು ಕಾಲ ಪೆಟ್ರೋಲ್-ಡೀಸೆಲ್ ಬೆಲೆ ಒಂದೇ ಕಡೆ ಸ್ಥಿರವಾಗಿದೆ. ಇವುಗಳಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಅಬಕಾರಿ ಸುಂಕವನ್ನು ಸರ್ಕಾರವು ಮೇ 21ರಂದು ಕಡಿತಗೊಳಿಸಿದೆ. ಅನೇಕ ಮಾಧ್ಯಮ ವರದಿಗಳ ಪ್ರಕಾರ ಶೀಘ್ರದಲ್ಲೇ ತೈಲದ ಬೆಲೆಗಳು ಕಡಿಮೆಯಾಗುವ ನಿರೀಕ್ಷೆಯಿದೆ.

ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಧಾರಣೆ

ದೆಹಲಿ ಪೆಟ್ರೋಲ್ ರೂ 96.72 ಮತ್ತು ಡೀಸೆಲ್ ರೂ 89.62 ಪ್ರತಿ ಲೀಟರ್ – ಮುಂಬೈ ಪೆಟ್ರೋಲ್ ರೂ 106.31 ಮತ್ತು ಡೀಸೆಲ್ ರೂ 9427 ಪ್ರತಿ ಲೀಟರ್ – ಚೆನ್ನೈ ಪೆಟ್ರೋಲ್ ರೂ 102.63 ಮತ್ತು ಡೀಸೆಲ್ ರೂ 94.24 ಪ್ರತಿ ಲೀಟರ್ – ಕೋಲ್ಕತ್ತಾ ಪೆಟ್ರೋಲ್ ರೂ 106.03 ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ ರೂ 92.76 – ನೋಯ್ಡಾದಲ್ಲಿ ಪೆಟ್ರೋಲ್ 96.57 ರೂ ಮತ್ತು ಡೀಸೆಲ್ ಲೀಟರ್‌ಗೆ 89.96 ರೂ – ಲಕ್ನೋದಲ್ಲಿ ಪೆಟ್ರೋಲ್ ರೂ 96.57 ಮತ್ತು ಡೀಸೆಲ್ ಲೀಟರ್‌ಗೆ ರೂ 89.76 – ಜೈಪುರದಲ್ಲಿ ಪೆಟ್ರೋಲ್ 108.48 ರೂ ಮತ್ತು ಡೀಸೆಲ್ ಲೀಟರ್‌ಗೆ 93.72 ರೂ – ತಿರುವನಂತಪುರದಲ್ಲಿ ಪೆಟ್ರೋಲ್ ರೂ 107.71 ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ ರೂ 96.52 – ಪೋರ್ಟ್ ಬ್ಲೇರ್‌ನಲ್ಲಿ ಪೆಟ್ರೋಲ್ ರೂ 84.10 ಮತ್ತು ಡೀಸೆಲ್ ಲೀಟರ್‌ಗೆ 79.74 ರೂ – ಪಾಟ್ನಾದಲ್ಲಿ ಪೆಟ್ರೋಲ್ ರೂ 107.24 ಮತ್ತು ಡೀಸೆಲ್ ಲೀಟರ್‌ಗೆ 94.04 ರೂ. – ಗುರುಗ್ರಾಮ್‌ನಲ್ಲಿ ಪ್ರತಿ ಲೀಟರ್‌ಗೆ 97.18 ಮತ್ತು ಡೀಸೆಲ್ 90.05 ರೂ – ಬೆಂಗಳೂರಿನಲ್ಲಿ ಪೆಟ್ರೋಲ್ 101.94 ರೂ ಮತ್ತು ಡೀಸೆಲ್ ಲೀಟರ್‌ಗೆ 87.89 ರೂ. – ಭುವನೇಶ್ವರದಲ್ಲಿ ಪೆಟ್ರೋಲ್ ರೂ 103.19 ಮತ್ತು ಡೀಸೆಲ್ ಲೀಟರ್‌ಗೆ ರೂ 94.76 – ಚಂಡೀಗಢದಲ್ಲಿ ಪೆಟ್ರೋಲ್ 96.20 ರೂ. ಮತ್ತು ಡೀಸೆಲ್ ಲೀಟರ್‌ಗೆ 84.26 ರೂ – ಹೈದರಾಬಾದ್‌ನಲ್ಲಿ ಪೆಟ್ರೋಲ್ 109.66 ರೂ ಮತ್ತು ಡೀಸೆಲ್ ಲೀಟರ್‌ಗೆ 97.82 ರೂ. ಆಗಿದೆ.

Published On - 8:13 am, Sat, 23 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ