AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಬೆಂಗಳೂರು, ಮುಂಬೈ ಸೇರಿ ವಿವಿಧೆಡೆ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

ಮೇ 21ರಂದು ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂ. ಮತ್ತು ಡೀಸೆಲ್ ಮೇಲೆ 6 ರೂ. ಕಡಿತಗೊಳಿಸಿದಾಗಿನಿಂದ ಒಂದು ತಿಂಗಳಿನಿಂದ ಬೆಲೆಗಳು ಬದಲಾಗದೆ ಉಳಿದಿವೆ.

Petrol Price Today: ಬೆಂಗಳೂರು, ಮುಂಬೈ ಸೇರಿ ವಿವಿಧೆಡೆ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?
ಪೆಟ್ರೋಲ್ ಬೆಲೆ (ಪ್ರಾತಿನಿಧಿಕ ಚಿತ್ರ)Image Credit source: Money Control
TV9 Web
| Edited By: |

Updated on: Jul 01, 2022 | 8:11 AM

Share

Fuel Price Today: ಪೆಟ್ರೋಲ್ (Petrol Rate) ಮತ್ತು ಡೀಸೆಲ್ ಬೆಲೆ (Diesel Price) ಕಳೆದ ನಾಲ್ಕೈದು ತಿಂಗಳಿನಿಂದ ಗಗನಕ್ಕೇರಿದೆ. ಆದರೆ, ಕಳೆದೊಂದು ತಿಂಗಳಿನಿಂದ ಈ ಬೆಲೆಯಲ್ಲಿ ಹೆಚ್ಚು ಬದಲಾವಣೆಯಾಗಿಲ್ಲ. ಇಂಧನ ಚಿಲ್ಲರೆ ವ್ಯಾಪಾರಿಗಳು ಹೊರಡಿಸಿದ ಬೆಲೆ ಅಧಿಸೂಚನೆಯ ಪ್ರಕಾರ, ಇಂದು (ಜುಲೈ 1) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸ್ಥಿರವಾಗಿವೆ. ಮೇ 21ರಂದು ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂ. ಮತ್ತು ಡೀಸೆಲ್ ಮೇಲೆ 6 ರೂ. ಕಡಿತಗೊಳಿಸಿದಾಗಿನಿಂದ ಒಂದು ತಿಂಗಳಿನಿಂದ ಬೆಲೆಗಳು ಬದಲಾಗದೆ ಯಥಾಸ್ಥಿತಿಯಲ್ಲಿ ಉಳಿದಿವೆ.

ಸುಂಕ ಕಡಿತದಿಂದ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 1 ಲೀಟರ್‌ಗೆ 9.5 ರೂ. ಮತ್ತು ಡೀಸೆಲ್‌ಗೆ 7 ರೂ. ಕಡಿಮೆಯಾಗಿದೆ. ಈ ಮೂಲಕ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 96.72 ರೂ. ಮತ್ತು ಡೀಸೆಲ್ ಬೆಲೆ 89.62 ರೂ. ಆಗಿದೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 111.35 ರೂ ಮತ್ತು ಡೀಸೆಲ್ 97.28 ರೂ.ಗೆ ಮಾರಾಟವಾಗುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಚೆನ್ನೈನಲ್ಲಿ ಲೀಟರ್‌ಗೆ 102.63 ಮತ್ತು 94.24 ಆಗಿದ್ದರೆ, ಕೊಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 92.76 ರೂ. ಆಗಿದೆ.

ಇದನ್ನೂ ಓದಿ: Petrol Price Today: ತಿಂಗಳಿನಿಂದ ಬದಲಾಗಿಲ್ಲ ಪೆಟ್ರೋಲ್, ಡೀಸೆಲ್ ಬೆಲೆ; ದೇಶದ ವಿವಿಧ ನಗರಗಳಲ್ಲಿ ಇಷ್ಟಿದೆ ನೋಡಿ ದರ

ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ಬೆಲೆ 101.94 ರೂ., ಡೀಸೆಲ್ ಬೆಲೆ 87.89 ರೂ. ಆಗಿದೆ. ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್‌ ಮೇಲೆ ಪ್ರತಿ ಲೀಟರ್‌ಗೆ 13.08 ರೂ ಮತ್ತು ಡೀಸೆಲ್‌ ಮೇಲೆ 24.09 ರೂ. ನಷ್ಟವನ್ನು ಅನುಭವಿಸುತ್ತಿವೆ.

ಎಲ್ಲಾ 4 ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅತ್ಯಧಿಕವಾಗಿದೆ. ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಕಾರಣದಿಂದಾಗಿ ರಾಜ್ಯಗಳಾದ್ಯಂತ ದರಗಳು ಬದಲಾಗುತ್ತವೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂನಂತಹ ಸರ್ಕಾರಿ ಚಾಲಿತ ತೈಲ ಸಂಸ್ಕರಣಾಗಾರಗಳು ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿನ ಕಚ್ಚಾ ತೈಲ ಬೆಲೆಗಳು ಮತ್ತು ರೂಪಾಯಿ-ಡಾಲರ್ ವಿನಿಮಯ ದರಗಳನ್ನು ಗಣನೆಗೆ ತೆಗೆದುಕೊಂಡು ಪ್ರತಿದಿನ ಇಂಧನ ದರಗಳನ್ನು ಪರಿಷ್ಕರಿಸುತ್ತವೆ.

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್