AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಬೆಂಗಳೂರು, ಮುಂಬೈ ಸೇರಿ ವಿವಿಧೆಡೆ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

ಮೇ 21ರಂದು ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂ. ಮತ್ತು ಡೀಸೆಲ್ ಮೇಲೆ 6 ರೂ. ಕಡಿತಗೊಳಿಸಿದಾಗಿನಿಂದ ಒಂದು ತಿಂಗಳಿನಿಂದ ಬೆಲೆಗಳು ಬದಲಾಗದೆ ಉಳಿದಿವೆ.

Petrol Price Today: ಬೆಂಗಳೂರು, ಮುಂಬೈ ಸೇರಿ ವಿವಿಧೆಡೆ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?
ಪೆಟ್ರೋಲ್ ಬೆಲೆ (ಪ್ರಾತಿನಿಧಿಕ ಚಿತ್ರ)Image Credit source: Money Control
TV9 Web
| Edited By: |

Updated on: Jul 01, 2022 | 8:11 AM

Share

Fuel Price Today: ಪೆಟ್ರೋಲ್ (Petrol Rate) ಮತ್ತು ಡೀಸೆಲ್ ಬೆಲೆ (Diesel Price) ಕಳೆದ ನಾಲ್ಕೈದು ತಿಂಗಳಿನಿಂದ ಗಗನಕ್ಕೇರಿದೆ. ಆದರೆ, ಕಳೆದೊಂದು ತಿಂಗಳಿನಿಂದ ಈ ಬೆಲೆಯಲ್ಲಿ ಹೆಚ್ಚು ಬದಲಾವಣೆಯಾಗಿಲ್ಲ. ಇಂಧನ ಚಿಲ್ಲರೆ ವ್ಯಾಪಾರಿಗಳು ಹೊರಡಿಸಿದ ಬೆಲೆ ಅಧಿಸೂಚನೆಯ ಪ್ರಕಾರ, ಇಂದು (ಜುಲೈ 1) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸ್ಥಿರವಾಗಿವೆ. ಮೇ 21ರಂದು ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂ. ಮತ್ತು ಡೀಸೆಲ್ ಮೇಲೆ 6 ರೂ. ಕಡಿತಗೊಳಿಸಿದಾಗಿನಿಂದ ಒಂದು ತಿಂಗಳಿನಿಂದ ಬೆಲೆಗಳು ಬದಲಾಗದೆ ಯಥಾಸ್ಥಿತಿಯಲ್ಲಿ ಉಳಿದಿವೆ.

ಸುಂಕ ಕಡಿತದಿಂದ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 1 ಲೀಟರ್‌ಗೆ 9.5 ರೂ. ಮತ್ತು ಡೀಸೆಲ್‌ಗೆ 7 ರೂ. ಕಡಿಮೆಯಾಗಿದೆ. ಈ ಮೂಲಕ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 96.72 ರೂ. ಮತ್ತು ಡೀಸೆಲ್ ಬೆಲೆ 89.62 ರೂ. ಆಗಿದೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 111.35 ರೂ ಮತ್ತು ಡೀಸೆಲ್ 97.28 ರೂ.ಗೆ ಮಾರಾಟವಾಗುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಚೆನ್ನೈನಲ್ಲಿ ಲೀಟರ್‌ಗೆ 102.63 ಮತ್ತು 94.24 ಆಗಿದ್ದರೆ, ಕೊಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 92.76 ರೂ. ಆಗಿದೆ.

ಇದನ್ನೂ ಓದಿ: Petrol Price Today: ತಿಂಗಳಿನಿಂದ ಬದಲಾಗಿಲ್ಲ ಪೆಟ್ರೋಲ್, ಡೀಸೆಲ್ ಬೆಲೆ; ದೇಶದ ವಿವಿಧ ನಗರಗಳಲ್ಲಿ ಇಷ್ಟಿದೆ ನೋಡಿ ದರ

ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ಬೆಲೆ 101.94 ರೂ., ಡೀಸೆಲ್ ಬೆಲೆ 87.89 ರೂ. ಆಗಿದೆ. ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್‌ ಮೇಲೆ ಪ್ರತಿ ಲೀಟರ್‌ಗೆ 13.08 ರೂ ಮತ್ತು ಡೀಸೆಲ್‌ ಮೇಲೆ 24.09 ರೂ. ನಷ್ಟವನ್ನು ಅನುಭವಿಸುತ್ತಿವೆ.

ಎಲ್ಲಾ 4 ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅತ್ಯಧಿಕವಾಗಿದೆ. ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಕಾರಣದಿಂದಾಗಿ ರಾಜ್ಯಗಳಾದ್ಯಂತ ದರಗಳು ಬದಲಾಗುತ್ತವೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂನಂತಹ ಸರ್ಕಾರಿ ಚಾಲಿತ ತೈಲ ಸಂಸ್ಕರಣಾಗಾರಗಳು ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿನ ಕಚ್ಚಾ ತೈಲ ಬೆಲೆಗಳು ಮತ್ತು ರೂಪಾಯಿ-ಡಾಲರ್ ವಿನಿಮಯ ದರಗಳನ್ನು ಗಣನೆಗೆ ತೆಗೆದುಕೊಂಡು ಪ್ರತಿದಿನ ಇಂಧನ ದರಗಳನ್ನು ಪರಿಷ್ಕರಿಸುತ್ತವೆ.

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?