AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಇಳಿಕೆಯಿಲ್ಲ! ಸತತ 11 ದಿನಗಳಿಂದ ಇಂಧನ ದರ ಸ್ಥಿರ

Petrol Rate Today: ಇಂಧನ ದರ ಏರಿಕೆ ಕಂಡಿಲ್ಲ ಎಂಬುದು ಸಮಾಧಾನದ ವಿಷಯವಾದರೆ, ಇಳಿಕೆಯ ಹಾದಿ ಹಿಡಿಯುವುದು ಯಾವಾಗ ಎಂಬುದು ಗ್ರಾಹಕರ ಪ್ರಶ್ನೆ.

Petrol Price Today: ಇಂದು ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಇಳಿಕೆಯಿಲ್ಲ! ಸತತ 11 ದಿನಗಳಿಂದ ಇಂಧನ ದರ ಸ್ಥಿರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 28, 2021 | 8:26 AM

Share

Petrol Diesel Rate Today | ದೆಹಲಿ: ಸತತವಾಗಿ ಹನ್ನೊಂದನೇ ದಿನವೂ ಸಹ ಪೆಟ್ರೋಲ್(Petrol Price), ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ಇಂದು (ಜುಲೈ 28, ಬುಧವಾರ) ಇಂಧನ ದರದಲ್ಲಿ(Fuel Price) ಯಾವುದೇ ಬದಲಾವಣೆಗಳಿಲ್ಲ. ಜುಲೈ ತಿಂಗಳಲ್ಲಿ ಎರಡು ಬಾರಿ ಡೀಸೆಲ್ ದರ(Diesel Price) ಇಳಿಕೆ ಕಂಡಿದ್ದರಿಂದ ಇನ್ನೇನು ದಿನ ಕಳೆದಂತೆ ಇಂಧನ ದರ ಇಳಿಕೆ ಕಾಣಬಹುದು ಎಂಬ ನಿರೀಕ್ಷೆಯಲ್ಲಿ ವಾಹನ ಸವಾರರಿದ್ದರು. ಆದರೆ ಇಂಧನ ದರ ಏರಿಕೆ ಕಂಡಿಲ್ಲ ಎಂಬುದು ಸಮಾಧಾನದ ವಿಷಯವಾದರೆ, ಇಳಿಕೆಯ ಹಾದಿ ಹಿಡಿಯುವುದು ಯಾವಾಗ ಎಂಬುದು ಗ್ರಾಹಕರ ಪ್ರಶ್ನೆ.

ಮೇ ತಿಂಗಳಿನಿಂದ ಇಂಧನ ದರ ಹೆಚ್ಚುತ್ತಲೇ ಇದೆ. 42 ದಿನಗಳಲ್ಲಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 11.32 ರೂಪಾಯಿ ಏರಿಕೆ ಮಾಡಲಾಗಿದೆ. 19 ರಾಜ್ಯಗಳಲ್ಲಿ ಈಗಾಗಲೇ ಪೆಟ್ರೋಲ್ ಬೆಲೆ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ. ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಒಡಿಶಾ, ಜಮ್ಮು ಮತ್ತು ಕಾಶ್ಮೀರ, ಲಡಾಕ್ ಈ ಪಟ್ಟಿಯಲ್ಲಿ ಸೇರಿವೆ.

ಮುಂಬೈ, ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿಯೂ ಸಹ ಲೀಟರ್ ಪೆಟ್ರೋಲ್ ದರ ಶತಕ ಬಾರಿಸಿ ಮುನ್ನುಗ್ಗುತ್ತಿದೆ. ಈ ಎಲ್ಲಾ ಪ್ರಮುಖ ಮಹಾ ನಗರಗಳಲ್ಲಿ ಹನ್ನೊಂದು ದಿನಗಳ ಕಾಲ ಇಣಧನ ದರದಲ್ಲಿ ಹೆಚ್ಚಳ ಕಂಡು ಬಂದಿಲ್ಲ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 101.84 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.87 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.49 ರೂ. ಹಾಗೂ ಲೀಟರ್ ಡೀಸೆಲ್ ದರ 94.39 ರೂ. ಇದೆ.

ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 102.08 ರೂ. ಹಾಗೂ ಲೀಟರ್ ಡೀಸೆಲ್ ದರ 93.02 ರೂಪಾಯಿ ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್​ಗೆ 107.83 ರೂ. ಹಾಗೂ ಲೀಟರ್ ಡೀಸೆಲ್​ಗೆ 97.45 ರೂಪಾಯಿ ಇದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 105.25 ರೂ. ಹಾಗೂ ಲೀಟರ್ ಡೀಸೆಲ್ ದರ 95.26 ರೂ. ಇದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 110.20 ರೂ. ಹಾಗೂ ಲೀಟರ್ ಡೀಸೆಲ್ ದರ 98. 67 ರೂಪಾಯಿ ಇದೆ. ಅದೇ ರೀತಿ ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.92 ರೂ. ಹಾಗೂ ಲೀಟರ್ ಡೀಸೆಲ್ ದರ 90.26 ರೂಪಾಯಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 8:25 am, Wed, 28 July 21

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು