AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಏಪ್ರಿಲ್ 13ನೇ ತಾರೀಕು ವಿವಿಧ ನಗರಗಳಲ್ಲಿ ಪೆಟ್ರೋಲ್​, ಡೀಸೆಲ್ ದರ!

Petrol Diesel Price Today: ವಿವಿಧ ನಗರಗಳಲ್ಲಿ ಪೆಟ್ರೋಲ್​, ಡೀಸೆಲ್​ ದರ ಎಷ್ಟಿದೆ ಎಂಬುದರ ವಿವರ ಇಲ್ಲಿದೆ. ಸತತ 14 ದಿನದಿಂದ ಇಂಧನ ದರ ಸ್ಥಿರತೆಯನ್ನು ಕಾಪಾಡಿಕೊಂಡು ಬಂದಿದೆ.

Petrol Price Today: ಏಪ್ರಿಲ್ 13ನೇ ತಾರೀಕು ವಿವಿಧ ನಗರಗಳಲ್ಲಿ ಪೆಟ್ರೋಲ್​, ಡೀಸೆಲ್ ದರ!
ಸಾಂದರ್ಭಿಕ ಚಿತ್ರ
shruti hegde
|

Updated on: Apr 13, 2021 | 7:51 AM

Share

ಬೆಂಗಳೂರು: ದೇಶದ ತೈಲ ಮಾರುಕಟ್ಟೆ ಕಂಪನಿಗಳು ಇಂದು ಮಂಗಳವಾರ ಇಂಧನ ದರವನ್ನು ಬದಲಾಯಿಸಿಲ್ಲ. ಸತತವಾಗಿ 14ನೇ ದಿನವೂ ಪೆಟ್ರೋಲ್, ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಹಾಗಾಗಿ ದೆಹಲಿಯಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 90 ರೂಪಾಯಿ 56 ಪೈಸೆ ಇದೆ. ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 80 ರೂಪಾಯಿ 87 ಪೈಸೆ ಇದೆ.

ಅಂತೆಯೇ ವಿವಿಧ ನಗರಗಳಲ್ಲಿ ಪೆಟ್ರೋಲ್​, ಡೀಸೆಲ್​ ದರ ಹೇಗಿದೆ ಎಂಬುದನ್ನು ಗಮನಿಸಿದಾಗ ಮುಂಬೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 96 ರೂಪಾಯಿ 98 ಪೈಸೆ ಇದೆ ಹಾಗೂ ಪ್ರತಿ ಲೀಟರ್​ ಡೀಸೆಲ್ ದರ 87 ರೂಪಾಯಿ 96 ಪೈಸೆ ಇದೆ. ಚೆನ್ನೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 92 ರೂಪಾಯಿ 58 ಪೈಸೆ ಇದೆ. ಹಾಗೂ ಪ್ರತಿ ಲೀಟರ್​ ಡೀಸೆಲ್​ 85 ರೂಪಾಯಿ 88 ಪೈಸೆಗೆ ಮಾರಾಟವಾಗುತ್ತಿದೆ.

ಕೋಲ್ಕತ್ತಾದಲ್ಲಿ ಇಂಧನ ದರವನ್ನು ಪರಿಶೀಲಿಸಿದಾಗ ಪ್ರತಿ ಲೀಟರ್​ ಪೆಟ್ರೋಲ್​ ದರ 90 ರೂಪಾಯಿ 77 ಪೈಸೆ ಇದೆ. ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 85 ರೂಪಾಯಿ 75 ಪೈಸೆ ಇದೆ. ಇನ್ನು ನೋಯ್ಡಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 88 ರೂಪಾಯಿ 91 ಪೈಸೆ ಇದೆ. ಹಾಗೆಯೇ ಪ್ರತಿ ಲೀಟರ್​ ಡೀಸೆಲ್​ ದರ 81 ರೂಪಾಯಿ 33 ಪೈಸೆ ಇದೆ.

ವಿದೇಶಿ ಮಿನಿಮಯ ದರದ ಜೊತೆಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯನ್ನು ಆಧರಿಸಿ ಪೆಟ್ರೋಲ್​, ಡೀಸೆಲ್​ ದರವನ್ನು ನಿಗದಿ ಮಾಡಲಾಗುತ್ತದೆ. ಕಳೆದ ಮಾರ್ಚ್​ ತಿಂಗಳಿನಲ್ಲಿ ಮೂರು ಬಾರಿ ಪೆಟ್ರೋಲ್​, ಡೀಸೆಲ್ ದರ ಏರಿಕೆಯಾಗಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ಪೆಟ್ರೋಲ್ ದರವನ್ನು 16 ಬಾರಿ ಹೆಚ್ಚಿಸಲಾಗಿದೆ. ಜೊತೆಗೆ ಕಳೆದ ಜನವರಿ ತಿಂಗಳಿನಲ್ಲಿ ಇಂಧನ ದರವನ್ನು 10 ಬಾರಿ ಹೆಚ್ಚಿಸಲಾಗಿತ್ತು. ಒಟ್ಟು ಇಲ್ಲಿಯವರೆಗೆ ಪೆಟ್ರೋಲ್​, ಡೀಸೆಲ್​ ದರವನ್ನು 26 ದಿನ ಹೆಚ್ಚಿಸಲಾಗಿದೆ.

ಇಂದು ಬೆಂಗಳೂರಿನಲ್ಲಿ ಪ್ರತಿ ಲೀಟರ್​ ಡೀಸೆಲ್​ ದರ 85.75 ರೂಪಾಯಿ ಇದೆ. ಹೈದರಾಬಾದ್​ನಲ್ಲಿ ಪೆಟ್ರೋಲ್​, ಡೀಸೆಲ್​ ದರ ಗಮನಿಸಿದರೆ ಪ್ರತಿ ಲೀಟರ್​ ಪೆಟ್ರೋಲ್​ ದರ 94.16 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 88.20 ರೂಪಾಯಿ ಇದೆ.

ವಿವಿಧ ನಗರದ ಪೆಟ್ರೋಲ್​ ದರ ಎಷ್ಟಿದೆ ಎಂಬ ಕುತೂಹಲವಿದ್ದರೆ ದರದ ಮಾಹಿತಿ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ

https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ

https://tv9kannada.com/business/diesel-price-today.html

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ