AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಪ್ರಮುಖ ನಗರಗಳಲ್ಲಿ ಲೀಟರ್​ ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ ಗೊತ್ತಾ?

Petrol Rate Today, 03-12-2021: ಡಿಸೆಂಬರ್ 1 ರಂದು ದೆಹಲಿ ಸರ್ಕಾರ ಪೆಟ್ರೋಲ್ ಮೇಲಿನ ವ್ಯಾಟ್ ದರವನ್ನು ಶೇಕಡಾ 30 ರಿಂದ 19.4 ಕ್ಕೆ ಇಳಿಕೆ ಮಾಡಿದೆ. ಆ ಪ್ರಕಾರ ದೆಹಲಿಯಲ್ಲಿ ಇಂದು ಪೆಟ್ರೋಲ್ ದರ 95.41 ರೂಪಾಯಿಯಾಗಿದ್ದು, ಡೀಸೆಲೆ ಬೆಲೆ 86.67 ರೂಪಾಯಿ ನಿಗದಿಯಾಗಿದೆ.

Petrol Price Today: ಇಂದು ಪ್ರಮುಖ ನಗರಗಳಲ್ಲಿ ಲೀಟರ್​ ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ ಗೊತ್ತಾ?
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on:Dec 03, 2021 | 8:12 AM

Petrol Diesel Price Today | ದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 70 ಡಾಲರ್‌ಗಿಂತ ಹೆಚ್ಚು ಕಡಿಮೆಯಾಗಿದೆ. ಕಚ್ಚಾ ತೈಲದ ಬೆಲೆ ಇಳಿಕೆಯಿಂದಾಗಿ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆಯಾಗಬಹುದು ಎಂಬ ನಿರೀಕ್ಷೆ ಇದೆ. ಇಂದು ಶುಕ್ರವಾರ (ಡಿಸೆಂಬರ್ 3) ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಬಿಡುಗಡೆ ಮಾಡಿದೆ. ಆ ಪ್ರಕಾರ ಇಂಧನ ಬೆಲೆಯಲ್ಲಿ(Fuel Price) ಯಾವುದೇ ಬದಲಾವಣೆಗಳಿಲ್ಲ. ಡಿಸೆಂಬರ್ 1 ರಂದು ದೆಹಲಿ ಸರ್ಕಾರ ಪೆಟ್ರೋಲ್ ಮೇಲಿನ ವ್ಯಾಟ್ ದರವನ್ನು ಶೇಕಡಾ 30 ರಿಂದ 19.4 ಕ್ಕೆ ಇಳಿಕೆ ಮಾಡಿದೆ. ಆ ಪ್ರಕಾರ ದೆಹಲಿಯಲ್ಲಿ ಇಂದು ಪೆಟ್ರೋಲ್ ದರ (Petrol Price) 95.41 ರೂಪಾಯಿಯಾಗಿದ್ದು, ಡೀಸೆಲೆ ಬೆಲೆ (Diesel Price) 86.67 ರೂಪಾಯಿ ನಿಗದಿಯಾಗಿದೆ.

ದೆಹಲಿಯ ಪಕ್ಕದಲ್ಲಿರುವ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 95.29 ರೂಪಾಯಿ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 86.80 ರೂಪಾಯಿ ನಿಗದಿಯಾಗಿದೆ. ಎನ್‌ಸಿಆರ್‌ನಲ್ಲಿರುವ ಗುರುಗ್ರಾಮ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆಯಾಗಿದೆ. ಗುರುಗ್ರಾಮ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 95.90 ರೂಪಾಯಿ ಮತ್ತು ಡೀಸೆಲ್ ಲೀಟರ್‌ಗೆ 87.11 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಇಂದು ಪ್ರತಿ ಲೀಟರ್ ಪೆಟ್ರೋಲ್ ಬೆಲೆ 109.98 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 94.14 ರೂಪಾಯಿ ನಿಗದಿಯಾಗಿದೆ. ಚೆನ್ನೈನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 101.40 ರೂಪಾಯಿ ಮತ್ತು ಒಂದು ಲೀಟರ್ ಡೀಸೆಲ್ ಬೆಲೆ 91.43 ರೂಪಾಯಿ ನಿಗದಿಯಾಗಿದೆ. ಕೋಲ್ಕತ್ತಾದಲ್ಲಿ ಇಂದು ಪೆಟ್ರೋಲ್ ಲೀಟರ್‌ಗೆ 104.67 ರೂಪಾಯಿ ಮತ್ತು ಡೀಸೆಲ್ ಲೀಟರ್‌ಗೆ 89.79 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ಬೆಲೆ 100.58 ರೂಪಾಯಿ ಹಾಗೂ ಡೀಸೆಲ್​ ಬೆಲೆ ಲೀಟರ್​ಗೆ 85.1 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Published On - 8:09 am, Fri, 3 December 21

ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ