Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Rate: ಕಚ್ಚಾ ತೈಲ ಬೆಲೆಯಲ್ಲಿ ಮುಂದುವರಿದ ಏರಿಳಿತ; ನಿಮ್ಮೂರಿನಲ್ಲಿ ಇಂಧನದ ಬೆಲೆ ಎಷ್ಟಿದೆ ಪರಿಶೀಲಿಸಿ

Petrol Diesel Price Today, 27-12-2021: ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.  ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ.

Petrol Rate: ಕಚ್ಚಾ ತೈಲ ಬೆಲೆಯಲ್ಲಿ ಮುಂದುವರಿದ ಏರಿಳಿತ; ನಿಮ್ಮೂರಿನಲ್ಲಿ ಇಂಧನದ ಬೆಲೆ ಎಷ್ಟಿದೆ ಪರಿಶೀಲಿಸಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: preethi shettigar

Updated on: Dec 27, 2021 | 7:55 AM

Petrol Diesel Price Today | ಇಂದು (ಡಿಸೆಂಬರ್​ 27) ಕೂಡ ಪೆಟ್ರೋಲ್​-ಡೀಸೆಲ್​ ಬೆಲೆ (Diesel Price) ಸ್ಥಿರವಾಗಿದ್ದು, ಯಾವುದೇ ಪ್ರಮುಖ ನಗರಗಳಲ್ಲೂ ಬೆಲೆಯಲ್ಲಿ ಬದಲಾವಣೆಯಾಗಿಲ್ಲ. ಆದರೆ ಅಂತರಾಷ್ಟೀಯ ಮಾರುಕಟ್ಟೆಯಲ್ಲಿ ಇಂದು ಕಚ್ಚಾ ತೈಲದ ಬೆಲೆ ಇಳಿಕೆಯ ಹಾದಿ ಹಿಡಿದಿದೆ. ಕಳೆದ ನವೆಂಬರ್​ 4ರಂದು  ಕೇಂದ್ರ ಸರ್ಕಾರ ಪೆಟ್ರೋಲ್ (Petrol Price)​, ಡೀಸೆಲ್​​ ಮೇಲಿನ ಅಬಕಾರಿ ಸುಂಕ ಕಡಿಮೆ ಮಾಡಿದೆ. ಅಂದಿನಿಂದಲೂ ಭಾರತದ ತೈಲ ಕಂಪನಿಗಳು ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ಕೆಲವೇ ದಿನಗಳ ಹಿಂದೆ ದೆಹಲಿಯ ಆಪ್​ ಸರ್ಕಾರ ಪೆಟ್ರೋಲ್​ ಮೇಲಿನ ವ್ಯಾಟ್​ (VAT-ಮೌಲ್ಯವರ್ಧಿತ ತೆರಿಗೆ)ನ್ನು ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಹಾಗಾಗಿ ಅಲ್ಲಿ ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 8 ರೂ.ಕಡಿಮೆಯಾಗಿದೆ. ಆದರೆ ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 95.41 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.  ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

ಕಾರಿನಿಂದ ಗುದ್ದಿ ಕೊಲ್ಲಲು ಯತ್ನ: ಬಚಾವಾದ ಬಗ್ಗೆ ಮುರಳಿ ಪ್ರಸಾದ್ ಮಾತು
ಕಾರಿನಿಂದ ಗುದ್ದಿ ಕೊಲ್ಲಲು ಯತ್ನ: ಬಚಾವಾದ ಬಗ್ಗೆ ಮುರಳಿ ಪ್ರಸಾದ್ ಮಾತು
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?